ಈ ಮಕ್ಕಳಿಗೆ ಹೋಲಿಸಿದರೆ ನನ್ನ ದುಃಖ ಏನೂ ಅಲ್ಲ: ಗಂಭೀರ್
Team Udayavani, Apr 29, 2018, 6:30 AM IST
ಹೊಸದಿಲ್ಲಿ: ಟ್ವೀಟರ್ನಲ್ಲಿ ಭಾವುಕ ಟ್ವೀಟೊಂದನ್ನು ಮಾಡಿರುವ ಗೌತಮ್ ಗಂಭೀರ್ ಅದರಲ್ಲಿ ಪರೋಕ್ಷವಾಗಿ ತನ್ನ ನೋವಿನ ಆಳವನ್ನು ಬಿಚ್ಚಿಟ್ಟಿದ್ದಾರೆ. ಇತ್ತೀಚೆಗೆ ಗಂಭೀರ್ ಸಿಆರ್ಪಿಎಫ್ ಯೋಧರ ಮಕ್ಕಳೊಂದಿಗೆ ಮಾತುಕತೆ ನಡೆಸಿದ್ದರು. ನಕ್ಸಲರ ದಾಳಿಯಲ್ಲಿ ಮೃತರಾದ ಯೋಧರ ಆ ಮಕ್ಕಳನ್ನು ನೋಡಿದಾಗ ನನ್ನ ದುಃಖ ಅದಕ್ಕಿಂತ ಬಹಳ ಕಡಿಮೆ ಎನಿಸಿತು ಎಂದು ಗಂಭೀರ್ ಹೇಳಿಕೊಂಡಿದ್ದಾರೆ. ಇದು ಟ್ವೀಟರ್ನಲ್ಲಿ ಬಹಳ ಸದ್ದು ಮಾಡುತ್ತಿದೆ.
ಹಿಂದಿನ 6 ಐಪಿಎಲ್ ಆವೃತ್ತಿಯಲ್ಲಿ ಕೋಲ್ಕತಾ ತಂಡವನ್ನು ಮುನ್ನಡೆಸಿದ್ದ ಗಂಭೀರ್ ಅದರಲ್ಲಿ 2 ಬಾರಿ ತಂಡ ಟ್ರೋಫಿ ಎತ್ತಿ ಹಿಡಿಯಲು ಕಾರಣವಾಗಿದ್ದರು. ಆದರೆ ಈ ಬಾರಿ ಡೆಲ್ಲಿ ತಂಡಕ್ಕೆ ಆಯ್ಕೆಯಾಗಿದ್ದ ಅವರು ನಾಯಕತ್ವವನ್ನು ವಹಿಸಿದ್ದರು. ಅವರ ನೇತೃತ್ವದಲ್ಲಿ 6 ಪಂದ್ಯವಾಡಿ 5ರಲ್ಲಿ ಡೆಲ್ಲಿ ಸೋತು ಹೋಗಿತ್ತು. ಪರಿಣಾಮ ಅವರು ನಾಯಕತ್ವ ಬಿಡುವುದರ ಜತೆಗೆ, ತಂಡದಿಂದಲೂ ಹೊರಗುಳಿದರು.
ಸ್ವತಃ ಗಂಭೀರ್ ಕೂಡ ಫಾರ್ಮ್ ಕುಸಿತ ಅನುಭವಿಸಿ ಬಹಳ ನೋವಿನಲ್ಲಿದ್ದಾರೆ. ಇದೇ ಹಿನ್ನೆಲೆಯಲ್ಲಿ ಟ್ವೀಟ್ ಮಾಡಿದ ಗಂಭೀರ್, ಆ ಮಕ್ಕಳ ಕಣ್ಣಿನಲ್ಲಿ ನೀರಿತ್ತು, ಅವರ ಹೃದಯದಲ್ಲಿ ದುಃಖ ತುಂಬಿಕೊಂಡಿತ್ತು. ಅವರೊಂದಿಗೆ ಮಾತನಾಡಿದಾಗ ನನ್ನ ದುಃಖ ಅದಕ್ಕಿಂತ ಬಹಳ ಕಡಿಮೆ ಎನಿಸಿತು ಎಂದು ಹೇಳಿಕೊಂಡಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
IPL 2024: ಗೆಲುವಿನ ವಿಶ್ವಾಸದಲ್ಲಿ ಕೆಕೆಆರ್
Team India: ಟಿ20 ವಿಶ್ವಕಪ್ ತಂಡ ರಾಹುಲ್ಗೆ ಚಾನ್ಸ್, ಹಾರ್ದಿಕ್ ಪಾಂಡ್ಯಗೆ ಕೊಕ್?
Chess: ವಿಶ್ವ ಚೆಸ್ ಚಾಂಪಿಯನ್ಶಿಪ್: ಆತಿಥ್ಯ ಹಕ್ಕಿಗಾಗಿ ಭಾರತ ಬಿಡ್
Archery World Cup: ಆರ್ಚರಿ ವಿಶ್ವಕಪ್ ರಿಕರ್ವ್ ವಿಭಾಗದಲ್ಲೂ ಭಾರತ ಫೈನಲ್ಗೆ
IPL; ಸನ್ರೈಸರ್ಸ್ ಹೈದರಾಬಾದ್ ವಿರುದ್ಧ ಜಯದ ನಗು ಬೀರಿದ ಆರ್ ಸಿಬಿ
MUST WATCH
ಹೊಸ ಸೇರ್ಪಡೆ
Minority ತುಷ್ಟೀಕರಣದಿಂದ ನೇಹಾಳ ಹತ್ಯೆಯಾಗಿದೆ :ಜಗದೀಶ್ ಶೆಟ್ಟರ್
Davanagere; ಪ್ರಧಾನಿ ಮೋದಿ ರ್ಯಾಲಿಗೆ ಅನುಮತಿ ನೀಡಬಾರದು:ಕಾಂಗ್ರೆಸ್ ಮನವಿ
2nd PUC: ಮರುಮೌಲ್ಯಮಾಪನದಲ್ಲಿ ರಾಜ್ಯಕ್ಕೆ ಆರನೇ ರ್ಯಾಂಕ್ ಪಡೆದ ತೀರ್ಥಹಳ್ಳಿಯ ಸುಚಿಂತ್
Belthangady: ಬಾಂಜಾರು ಮಲೆಯಲ್ಲಿ ದಾಖಲೆ ಶೇ.100 ಮತದಾನ
Vijaypura:ರಾಹುಲ್ ಗಾಂಧಿ ನಿರ್ಗಮಿಸುವಾಗ ವೇದಿಕೆಗೆ ಬಂದ ಸಿದ್ದರಾಮಯ್ಯ