ಅಫ್ಘಾನ್‌ ಟೆಸ್ಟ್‌: ಕೊಹ್ಲಿ ಬದಲಿಗೆ ನಾಯರ್‌


Team Udayavani, May 9, 2018, 6:00 AM IST

9.jpg

ಬೆಂಗಳೂರು: ವಿರಾಟ್‌ ಕೊಹ್ಲಿ ಕೌಂಟಿಯಲ್ಲಿ ಆಡುವ ಕಾರಣ ಕರ್ನಾಟಕದ ಕರುಣ್‌ ನಾಯರ್‌ ಅವರು ಅಫ್ಘಾನಿಸ್ಥಾನ ವಿರುದ್ಧದ ಏಕೈಕ ಟೆಸ್ಟ್‌ ಪಂದ್ಯಕ್ಕೆ 15 ಸದಸ್ಯರ ಬಲಿಷ್ಠ ಭಾರತೀಯ ತಂಡದಲ್ಲಿ ಸ್ಥಾನ ಪಡೆದಿದ್ದಾರೆ. ಈ ತಂಡದಿಂದ ಹಿರಿಯ ಆಟಗಾರ ರೋಹಿತ್‌ ಶರ್ಮ ಅವರನ್ನು ಕೈಬಿಡಲಾಗಿದೆ. 

ಕೊಹ್ಲಿ ಅವರ ಅನುಪಸ್ಥಿತಿಯಲ್ಲಿ ಅಜಿಂಕ್ಯ ರಹಾನೆ ಭಾರತ ತಂಡವನ್ನು ಮುನ್ನಡೆಸಲಿದ್ದಾರೆ. ಆಯ್ಕೆ ಸಮಿತಿಯ ಸಭೆಯಲ್ಲಿ ದೀರ್ಘ‌ ಚರ್ಚೆ ನಡೆಸಿದ ಬಳಿಕ ಎಂಎಸ್‌ಕೆ ಪ್ರಸಾದ್‌ ತಂಡವನ್ನು ಪ್ರಕಟಿಸಿದರು. ಇದೇ ವೇಳೆ ಅಯರ್‌ಲ್ಯಾಂಡ್‌ ಮತ್ತು ಇಂಗ್ಲೆಂಡ್‌ ವಿರುದ್ಧದ ಸರಣಿಗೂ ತಂಡಗಳನ್ನು ಪ್ರಕಟಿಸಲಾಗಿದೆ. 

ಅಜಿಂಕ್ಯ ರಹಾನೆ ಅವರನ್ನು ಏಕ ದಿನ ಸರಣಿಯಿಂದ ಕೈಬಿಡಲಾಗಿದೆ. ಅವರು ದಕ್ಷಿಣ ಆಫ್ರಿಕಾ ಪ್ರವಾಸದ ವೇಳೆ 50 ಓವರ್‌ಗಳ ಏಕದಿನ ತಂಡದಲ್ಲಿ ಸ್ಥಾನ ಪಡೆದಿದ್ದರು. ರಾಯುಡು, ರಾಹುಲ್‌ ಪ್ರಮುಖರು ಅಂಬಾಟಿ ರಾಯುಡು ಮತು ಕೆಎಲ್‌ ರಾಹುಲ್‌ ಇಂಗ್ಲೆಂಡ್‌ ಪ್ರವಾಸಕ್ಕೆ ಭಾರತೀಯ ತಂಡಕ್ಕೆ ಮರಳಿದವರಲ್ಲಿ ಪ್ರಮುಖರಾಗಿದ್ದಾರೆ. ಐಪಿಎಲ್‌ನಲ್ಲಿ ಸ್ಥಿರ ನಿರ್ವಹಣೆ ನೀಡುತ್ತಿರುವ ಯುವ ವೇಗಿ ಸಿದ್ಧಾರ್ಥ್ ಕೌಲ್‌ ಅವರನ್ನು ಅಯರ್‌ಲ್ಯಾಂಡ್‌ ಮತ್ತು ಇಂಗ್ಲೆಂಡ್‌ ವಿರುದ್ಧದ ಟಿ20 ಸರಣಿಗೆ ಆಯ್ಕೆ ಮಾಡಲಾಗಿದೆ. ಸೆಹವಾಗ್‌ ಬಳಿಕ ಟೆಸ್ಟ್‌ನಲ್ಲಿ ತ್ರಿಶತಕ ಸಿಡಿಸಿದ ಆಟಗಾರ ಎಂದೆನಿಸಿಕೊಂಡರುವ ಕರುಣ್‌ ನಾಯರ್‌ ಅವರ ಆಗಮನ ಆಯ್ಕೆಯ ಪ್ರಮುಖ ಅಂಶಗಳಲ್ಲಿ ಒಂದಾಗಿದೆ. ಅವರು 14 ತಿಂಗಳ ಬಳಿಕ ತಂಡಕ್ಕೆ ಮರಳಿದ್ದಾರೆ. ಜೂನ್‌ 14ರಿಂದ ನಡೆಯುವ ಅಫ್ಘಾನ್‌ ವಿರುದ್ಧದ ಏಕೈಕ ಪಂದ್ಯದಲ್ಲಿ ಅವರು ಆಡುವ ಸಾಧ್ಯತೆಯಿದೆ.

ಕೊಹ್ಲಿ ನಾಯಕ
ಅಯರ್‌ಲ್ಯಾಂಡ್‌ ವಿರುದ್ಧದ 2 ಪಂದ್ಯಗಳ ಟಿ20 ಸರಣಿಗೆ ಕೊಹ್ಲಿ ಅವರನ್ನು ನಾಯಕರನ್ನಾಗಿ ಹೆಸ ರಿಸಲಾಗಿದೆ. ಕೊಹ್ಲಿ ಜೂನ್‌ ತಿಂಗಳು ಪೂರ್ತಿ ತಮ್ಮ ಕೌಂಟಿ ಪರ ಆಡಲಿದ್ದಾರೆ ಎಂದು ಸರ್ರೆ ಅಧಿಕೃತವಾಗಿ ಪ್ರಕಟಿಸಿದೆ. ಅಯರ್‌ಲ್ಯಾಂಡ್‌ ವಿರುದ್ಧದ 2 ಪಂದ್ಯಗಳು ಅನುಕ್ರಮವಾಗಿ ಜೂನ್‌ 27 ಮತ್ತು 29ರಂದು ನಡೆಯಲಿದೆ. ಯಾರ್ಕ್‌ ಶೈರ್‌ ವಿರುದ್ಧದ ಸರ್ರೆಯ ಕೌಂಟಿ  ಪಂದ್ಯ ಜೂನ್‌ 25ರಿಂದ 28ರ ವರೆಗೆ ನಡೆಯಲಿದೆ.

ಕೊಹ್ಲಿ ಅವರನ್ನು ಹೊರತುಪಡಿಸಿ ಉಳಿದೆಲ್ಲ ಟೆಸ್ಟ್‌ ಪರಿಣತರು ಅಫ್ಘಾನ್‌ ವಿರುದ್ಧದ ಟೆಸ್ಟ್‌ನಲ್ಲಿ ಆಡಲಿದ್ದಾರೆ. ಕೊಹ್ಲಿ ಒಂದು ಪ್ರಮುಖ ಉದ್ದೇಶಕ್ಕಾಗಿ ಹೋಗುತ್ತಿದ್ದಾರೆ ಮತ್ತು ಇಂಗ್ಲೆಂಡ್‌ ವಿರುದ್ಧದ ಟೆಸ್ಟ್‌ ಸರಣಿಗಾಗಿ ಉತ್ತಮ ರೀತಿಯಲ್ಲಿ ಸಿದ್ಧತೆ ಮಾಡಿಕೊಳ್ಳಲಿ ದ್ದಾರೆ. ಅವರು ಅಲ್ಲಿಗೆ ಹೋಗಿ ಉತ್ತಮ ನಿರ್ವಹಣೆ ನೀಡುವುದು ಒಳ್ಳೆಯದು. ಈ ಮೂಲಕ ಸರಣಿ ಗೆಲ್ಲಲು ನಮಗೆ ಒಳ್ಳೆಯ ಅವಕಾಶ ಲಭಿಸಲಿದೆ ಎಂದು ಆಯ್ಕೆ ಸಮಿತಿಯ ಚೇರ್ಮನ್‌ ಪ್ರಸಾದ್‌ ತಿಳಿಸಿದರು.

ಅಫ್ಘಾನ್‌ ಟೆಸ್ಟ್‌ಗೆ ಭಾರತ ತಂಡ
ಅಜಿಂಕ್ಯ ರಹಾನೆ (ನಾಯಕ), ಮುರಳಿ ವಿಜಯ್‌, ಕೆಎಲ್‌ ರಾಹುಲ್‌, ಚೇತೇಶ್ವರ ಪೂಜಾರ, ಕರುಣ್‌ ನಾಯರ್‌, ವೃದ್ಧಿಮಾನ್‌ ಸಾಹಾ, ಆರ್‌. ಅಶ್ವಿ‌ನ್‌, ರವೀಂದ್ರ ಜಡೇಜ, ಕುಲದೀಪ್‌ ಯಾದವ್‌, ಉಮೇಶ್‌ ಯಾದವ್‌, ಮೊಹಮ್ಮದ್‌ ಶಮಿ, ಹಾರ್ದಿಕ್‌ ಪಾಂಡ್ಯ, ಇಶಾಂತ್‌ ಶರ್ಮ, ಶಾದೂìಲ್‌ ಠಾಕುರ್‌.

ಅಯರ್‌ಲ್ಯಾಂಡ್‌ ವಿರುದ್ಧದ ಟಿ20 ಸರಣಿಗೆ ಭಾರತ ತಂಡ
ವಿರಾಟ್‌ ಕೊಹ್ಲಿ  (ನಾಯಕ), ಶಿಖರ್‌ ಧವನ್‌, ರೋಹಿತ್‌ ಶರ್ಮ, ಕೆಎಲ್‌ ರಾಹುಲ್‌, ಸುರೇಶ್‌ ರೈನಾ, ಮನೀಷ್‌ ಪಾಂಡೆ, ಎಂಎಸ್‌ ಧೋನಿ, ದಿನೇಶ್‌ ಕಾರ್ತಿಕ್‌, ಯುಜುವೇಂದ್ರ ಚಹಲ್‌, ಕುಲದೀಪ್‌ ಯಾದವ್‌, ವಾಷಿಂಗ್ಟನ್‌ ಸುಂದರ್‌, ಭುವನೇಶ್ವರ್‌ ಕುಮಾರ್‌, ಜಸ್‌ಪ್ರೀತ್‌ ಬುಮ್ರಾ, ಹಾರ್ದಿಕ್‌ ಪಾಂಡ್ಯ, ಸಿದ್ಧಾರ್ಥ್ ಕೌಲ್‌, ಉಮೇಶ್‌ ಯಾದವ್‌

ಇಂಗ್ಲೆಂಡ್‌ ವಿರುದ್ಧದ ಟಿ20 ಸರಣಿಗೆ ಭಾರತ ತಂಡ
ವಿರಾಟ್‌ ಕೊಹ್ಲಿ  (ನಾಯಕ), ಶಿಖರ್‌ ಧವನ್‌, ರೋಹಿತ್‌ ಶರ್ಮ, ಕೆಎಲ್‌ ರಾಹುಲ್‌, ಸುರೇಶ್‌ ರೈನಾ, ಮನೀಷ್‌ ಪಾಂಡೆ, ಎಂಎಸ್‌ ಧೋನಿ, ದಿನೇಶ್‌ ಕಾರ್ತಿಕ್‌, ಯುಜುವೇಂದ್ರ ಚಹಲ್‌, ಕುಲದೀಪ್‌ ಯಾದವ್‌, ವಾಷಿಂಗ್ಟನ್‌ ಸುಂದರ್‌, ಭುವನೇಶ್ವರ್‌ ಕುಮಾರ್‌, ಜಸ್‌ಪ್ರೀತ್‌ ಬುಮ್ರಾ, ಹಾರ್ದಿಕ್‌ ಪಾಂಡ್ಯ, ಸಿದ್ಧಾರ್ಥ್ ಕೌಲ್‌, ಉಮೇಶ್‌ ಯಾದವ್‌

ಇಂಗ್ಲೆಂಡ್‌ ವಿರುದ್ಧದ ಏಕದಿನ ಸರಣಿಗೆ ಭಾರತ ತಂಡ
ವಿರಾಟ್‌ ಕೊಹ್ಲಿ  (ನಾಯಕ), ಶಿಖರ್‌ ಧವನ್‌, ರೋಹಿತ್‌ ಶರ್ಮ, ಕೆಎಲ್‌ ರಾಹುಲ್‌, ಶ್ರೇಯಸ್‌ ಅಯ್ಯರ್‌, ಅಂಬಾಟಿ ರಾಯುಡು ಎಂಎಸ್‌ ಧೋನಿ, ದಿನೇಶ್‌ ಕಾರ್ತಿಕ್‌, ಯುಜುವೇಂದ್ರ ಚಹಲ್‌, ಕುಲದೀಪ್‌ ಯಾದವ್‌, ವಾಷಿಂಗ್ಟನ್‌ ಸುಂದರ್‌, ಭುವನೇಶ್ವರ್‌ ಕುಮಾರ್‌, ಜಸ್‌ಪ್ರೀತ್‌ ಬುಮ್ರಾ, ಹಾರ್ದಿಕ್‌ ಪಾಂಡ್ಯ, ಸಿದ್ಧಾರ್ಥ್ ಕೌಲ್‌, ಉಮೇಶ್‌ ಯಾದವ್‌.
 

ಟಾಪ್ ನ್ಯೂಸ್

15-udupi

Lok Sabha Election-2024; ಕಾಪು ವಿಧಾನಸಭಾ ಕ್ಷೇತ್ರದಲ್ಲಿ ಅಂತಿಮ ಹಂತದ ಸಿದ್ಧತೆ ಪೂರ್ಣ

Delhi Police: ಮಾರುತಿ ಸ್ವಿಫ್ಟ್‌ ಕಾರಿನಲ್ಲಿ 30ಕ್ಕೂ ಅಧಿಕ ಕುರಿ, ಮೇಕೆ ಸಾಗಾಟ!

Delhi Police: ಮಾರುತಿ ಸ್ವಿಫ್ಟ್‌ ಕಾರಿನಲ್ಲಿ 30ಕ್ಕೂ ಅಧಿಕ ಕುರಿ, ಮೇಕೆ ಸಾಗಾಟ!

BJP 2025ರಲ್ಲಿ ಹಿಂದುಳಿದ ಸಮುದಾಯಗಳ ಮೀಸಲಾತಿ ತೆಗೆದು ಹಾಕಲಿದೆ: ರೇವಂತ್ ರೆಡ್ಡಿ

BJP 2025ರಲ್ಲಿ ಹಿಂದುಳಿದ ಸಮುದಾಯಗಳ ಮೀಸಲಾತಿ ತೆಗೆದು ಹಾಕಲಿದೆ: ರೇವಂತ್ ರೆಡ್ಡಿ

Patna: ಹೋಟೆಲ್ ನಲ್ಲಿ ಭಾರಿ ಅಗ್ನಿ ಅವಘಡ, 6 ಮಂದಿ ಸಜೀವ ದಹನ, ಹಲವರಿಗೆ ಗಾಯ

Patna: ಹೋಟೆಲ್ ನಲ್ಲಿ ಭಾರಿ ಅಗ್ನಿ ಅವಘಡ, 6 ಮಂದಿ ಸಜೀವ ದಹನ, ಹಲವರಿಗೆ ಗಾಯ

ರಾಜ್ಯದಲ್ಲಿ 20ಕ್ಕಿಂತ ಹೆಚ್ಚು ಕ್ಷೇತ್ರ ಗೆಲ್ಲುತ್ತೇವೆ: ರಣದೀಪ್ ಸುರ್ಜೇವಾಲಾ

Loksabha; ರಾಜ್ಯದಲ್ಲಿ 20ಕ್ಕಿಂತ ಹೆಚ್ಚು ಕ್ಷೇತ್ರ ಗೆಲ್ಲುತ್ತೇವೆ: ರಣದೀಪ್ ಸುರ್ಜೇವಾಲಾ

ನೀತಿ ಸಂಹಿತೆ ಉಲ್ಲಂಘನೆ: ಏಪ್ರಿಲ್ 29ರೊಳಗೆ ಉತ್ತರ ನೀಡಲು ಮೋದಿ, ರಾಹುಲ್‌ಗೆ ಸೂಚನೆ

ನೀತಿ ಸಂಹಿತೆ ಉಲ್ಲಂಘನೆ: ಏಪ್ರಿಲ್ 29ರೊಳಗೆ ಉತ್ತರ ನೀಡಲು ಮೋದಿ, ರಾಹುಲ್‌ಗೆ ಸೂಚನೆ

Anil Kumble Reveals His IPL Bid 2008

IPL: ಆರ್ ಸಿಬಿ ತಂಡಕ್ಕಾಗಿ ಮಲ್ಯ ಅಂದು…..: ವಿಶೇಷ ಘಟನೆ ನೆನೆದ ಅನಿಲ್ ಕುಂಬ್ಳೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Anil Kumble Reveals His IPL Bid 2008

IPL: ಆರ್ ಸಿಬಿ ತಂಡಕ್ಕಾಗಿ ಮಲ್ಯ ಅಂದು…..: ವಿಶೇಷ ಘಟನೆ ನೆನೆದ ಅನಿಲ್ ಕುಂಬ್ಳೆ

Ipl: ಡೆಲ್ಲಿ ಗೆಲುವಿಗೆ ಪಂತ್‌, ಪಟೇಲ್‌ ನೆರವು

Ipl: ಡೆಲ್ಲಿ ಗೆಲುವಿಗೆ ಪಂತ್‌, ಪಟೇಲ್‌ ನೆರವು

IPL: ಮತ್ತೂಂದು ದೊಡ್ಡ ಮೊತ್ತಕ್ಕೆ ಎಸ್‌ಆರ್‌ಎಚ್‌ ಸ್ಕೆಚ್‌

IPL: ಮತ್ತೂಂದು ದೊಡ್ಡ ಮೊತ್ತಕ್ಕೆ ಎಸ್‌ಆರ್‌ಎಚ್‌ ಸ್ಕೆಚ್‌

1-asdasdas

IPL; ಸ್ಟಾಯಿನಿಸ್‌ ಏಟಿಗೆ ತವರಲ್ಲೆ ಚಾಂಪಿಯನ್‌ ಚೆನ್ನೈ ಠುಸ್‌!

DCvsGT; ಪಂತ್‌ ನಾಯಕತ್ವಕ್ಕೆ ಅಗ್ನಿಪರೀಕ್ಷೆ:  ತವರಿನ “ಕೋಟ್ಲಾ’ದಲ್ಲಿ ಗುಜರಾತ್‌ ಎದುರಾಳಿ

DCvsGT; ಪಂತ್‌ ನಾಯಕತ್ವಕ್ಕೆ ಅಗ್ನಿಪರೀಕ್ಷೆ:  ತವರಿನ “ಕೋಟ್ಲಾ’ದಲ್ಲಿ ಗುಜರಾತ್‌ ಎದುರಾಳಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

16-adu-jeevitham

Movie Review: ಆಡು ಜೀವಿದಂ

15-udupi

Lok Sabha Election-2024; ಕಾಪು ವಿಧಾನಸಭಾ ಕ್ಷೇತ್ರದಲ್ಲಿ ಅಂತಿಮ ಹಂತದ ಸಿದ್ಧತೆ ಪೂರ್ಣ

Delhi Police: ಮಾರುತಿ ಸ್ವಿಫ್ಟ್‌ ಕಾರಿನಲ್ಲಿ 30ಕ್ಕೂ ಅಧಿಕ ಕುರಿ, ಮೇಕೆ ಸಾಗಾಟ!

Delhi Police: ಮಾರುತಿ ಸ್ವಿಫ್ಟ್‌ ಕಾರಿನಲ್ಲಿ 30ಕ್ಕೂ ಅಧಿಕ ಕುರಿ, ಮೇಕೆ ಸಾಗಾಟ!

BJP 2025ರಲ್ಲಿ ಹಿಂದುಳಿದ ಸಮುದಾಯಗಳ ಮೀಸಲಾತಿ ತೆಗೆದು ಹಾಕಲಿದೆ: ರೇವಂತ್ ರೆಡ್ಡಿ

BJP 2025ರಲ್ಲಿ ಹಿಂದುಳಿದ ಸಮುದಾಯಗಳ ಮೀಸಲಾತಿ ತೆಗೆದು ಹಾಕಲಿದೆ: ರೇವಂತ್ ರೆಡ್ಡಿ

We Are The Bad Boys song from Vidyarthi Vidyarthiniyare

Kannada Cinema; ಬ್ಯಾಡ್‌ ಬಾಯ್ಸ್ ಬಂದ್ರು..! ವಿದ್ಯಾರ್ಥಿ ವಿದ್ಯಾರ್ಥಿನಿಯರ ಹಾಡಿದು…

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.