ಅಫ್ಘಾನ್‌ ತಂಡದಲ್ಲಿ ರಶೀದ್‌ ಖಾನ್‌, ಮುಜೀಬ್‌


Team Udayavani, May 30, 2018, 6:00 AM IST

v-14.jpg

ಬೆಂಗಳೂರು: ಭಾರತ ವಿರುದ್ಧ ಜೂನ್‌ 14ರಿಂದ ಬೆಂಗಳೂರಿನಲ್ಲಿ ನಡೆಯಲಿರುವ ಐತಿಹಾಸಿಕ ಏಕೈಕ ಟೆಸ್ಟ್‌ಗೆ 15 ಸದಸ್ಯರ ಬಲಿಷ್ಠ ಅಫ್ಘಾನಿಸ್ಥಾನ ತಂಡವನ್ನು ಪ್ರಕಟಿಸಲಾಗಿದೆ. ವಿಶ್ವಖ್ಯಾತಿಯ ಟಿ20 ಬೌಲರ್‌ ರಶೀದ್‌ ಖಾನ್‌ ಸಹಿತ ನಾಲ್ವರು ಸ್ಪಿನ್‌ ದಾಳಿಯ ನೇತೃತ್ವ ವಹಿಸಲಿದ್ದಾರೆ.

ಐಪಿಎಲ್‌ನಲ್ಲಿ ಅಮೋಘ ನಿರ್ವಹಣೆ ನೀಡಿದ್ದ ರಶೀದ್‌ ಮತ್ತು ಯುವ ಕ್ರಿಕೆಟಿಗ ಮುಜೀಬ್‌ ಉರ್‌ ರೆಹಮಾನ್‌ ಅವರಲ್ಲದೇ ಚೈನಾಮನ್‌ ಝಾಹಿರ್‌ ಖಾನ್‌ ಮತ್ತು ಎಡಗೈ ಆಮಿರ್‌ ಹಾಟಕ್‌ ಅವರು ಅಸರ್‌ ಸ್ಟಾನಿಜಾಯ್‌ ನಾಯಕತ್ವದ ತಂಡದಲ್ಲಿದ್ದಾರೆ. 

ರಶೀದ್‌ ಮತ್ತು ಮುಜೀಬ್‌ ಟಿ20 ಕ್ರಿಕೆಟ್‌ನಲ್ಲಿ ಅಮೋಘ ನಿರ್ವಹಣೆ ನೀಡಿ ವಿಶ್ವದ ಗಮನ ಸೆಳೆದಿದ್ದಾರೆ. ಐಪಿಎಲ್‌ನಲ್ಲಿ ಹೈದರಾಬಾದ್‌ ತಂಡದ ಪರ ಆಡಿದ್ದ ರಶೀದ್‌ ಶ್ರೇಷ್ಠ ಬೌಲಿಂಗ್‌ ನಿರ್ವಹಣೆ ನೀಡಿದ್ದರಿಂದ ತಂಡ ಫೈನಲ್‌ ಹಂತಕ್ಕೇರಲು ಯಶಸ್ವಿಯಾಗಿತ್ತು. ಆದರೆ ಟೆಸ್ಟ್‌ ಮಾದರಿಯ ಕ್ರಿಕೆಟ್‌ನಲ್ಲಿ ಅವರು ಹೇಗೆ ದಾಳಿ ಸಂಘಟಿಸುತ್ತಾರೆ ಎಂಬುದನ್ನು ನೋಡಬೇಕಾಗಿದೆ. ರಶೀದ್‌ ಇಷ್ಟರವರೆಗೆ ನಾಲ್ಕು ಪ್ರಥಮ ದರ್ಜೆ ಪಂದ್ಯಗಳನ್ನಾಡಿದ್ದರೆ 17ರ ಹರೆಯದ ಮುಜೀಬ್‌ ಟೆಸ್ಟ್‌ನಲ್ಲಿ ಇನ್ನು ಆಡಬೇಕಾಗಿದೆ.

ಗಾಯದಿಂದಾಗಿ ಅಫ್ಘಾನಿಸ್ಥಾನವು ತನ್ನ ಅನುಭವಿ ಬೌಲರೊಬ್ಬರನ್ನು ಕಳೆದುಕೊಂಡಿದೆ. ದೌಲತ್‌ ಜದ್ರಾನ್‌ ಅವರ ಅನುಪಸ್ಥಿತಿಯಲ್ಲಿ ಯಾಮಿನ್‌ ಅಹ್ಮದ್‌ಜಾಯ್‌ ವಫಾದರ್‌ ಮತ್ತು ಸಯ್ಯದ್‌ ಅಹ್ಮದ್‌ ಶಿರ್ಜಾದ್‌ ವೇಗದ ದಾಳಿಯ ನೇತೃತ್ವ ವಹಿಸಲಿದ್ದಾರೆ. 

ರಶೀದ್‌ ಮೇಲೆ ಎಲ್ಲರ ಕಣ್ಣು
ನಿಸ್ಸಂದೇಹವಾಗಿ ಎಲ್ಲರ ಕಣ್ಣು ರಶೀದ್‌ ಖಾನ್‌ ಅವರ ನಿರ್ವಹಣೆಯ ಮೇಲೆ ಇರಲಿದೆ. ಟ್ವೆಂಟಿ20ಲ್ಲಿ ಅವರು ನಿಜವಾಗಿಯೂ ಉತ್ತಮ ನಿರ್ವಹಣೆ ನೀಡುತ್ತಿದ್ದಾರೆ. ಸನ್‌ರೈಸರ್ ಪರ ಅವರು ಅತ್ಯದ್ಭುತ ಪ್ರದರ್ಶನಗೈದಿದ್ದಾರೆ. ಅವರೊಬ್ಬ ಉತ್ತಮ ಗುಣಮಟ್ಟದ ಬೌಲರ್‌ ಆಗಿದ್ದಾರೆ. ಅದನ್ನು ಎಲ್ಲರೂ ಒಪ್ಪಿಕೊಂಡಿದ್ದಾರೆ ಮತ್ತು ಗೌರವ ಕೊಡುತ್ತಾರೆ. ಹಾಗಾಗಿ ಅಫ್ಘಾನಿಸ್ಥಾನವನ್ನು ಹಗುರವಾಗಿ ಕಾಣಲು ಸಾಧ್ಯವಿಲ್ಲ ಎಂದು ಭಾರತ ತಂಡದ ಪ್ರಭಾರ ನಾಯಕ ಅಜಿಂಕ್ಯ ರಹಾನೆ ಹೇಳಿದ್ದಾರೆ.

ಟೆಸ್ಟ್‌ಗೆ ಅರ್ಹತೆ ದೊಡ್ಡ ವಿಷಯ
ಅಫ್ಘಾನಿಸ್ಥಾನ ಕ್ರಿಕೆಟ್‌ ಪಾಲಿಗೆ ಟೆಸ್ಟ್‌ಗೆ ಅರ್ಹತೆ ಗಳಿಸುವುದೇ ದೊಡ್ಡ ವಿಷಯ. ಇದು ಕ್ರಿಕೆಟ್‌ಗೆ ಒಳ್ಳೆಯದೇ ಆಗಿದೆ. ನಾವು ಯಾವುದೇ ತಂಡವನ್ನು ಹಗುರವಾಗಿ ಕಾಣುವುದಿಲ್ಲ. ಪ್ರತಿಯೊಂದು ತಂಡದ ವಿರುದ್ಧವೂ ತೀವ್ರ ಹೋರಾಟದಿಂದ ಆಡುತ್ತೇವೆ ಎಂದು ರಹಾನೆ ತಿಳಿಸಿದರು. 

ಅಫ್ಘಾನಿಸ್ಥಾನ ತಂಡ
ಅಸYರ್‌ ಸ್ಟಾನಿಜಾಯ್‌, ಮೊಹಮ್ಮದ್‌ ಶಹಜಾದ್‌, ಜಾವೆದ್‌ ಅಹ್ಮದಿ, ರಹಮತ್‌ ಶಾ, ಇಶಾನುಲ್ಲ ಜನತ್‌, ನಾಸಿರ್‌ ಜಮಾಲ್‌, ಹಷು¾ತುಲ್ಲಾ ಶಾಹಿದಿ, ಅಫಾÕರ್‌ ಜಜಾಯ್‌, ಮೊಹಮ್ಮದ್‌ ನಬಿ, ರಶೀದ್‌ ಖಾನ್‌, ಜಾಹಿರ್‌ ಖಾನ್‌, ಆಮಿರ್‌ ಹಂಝ ಹಾಟಕ್‌, ಸಯ್ಯದ್‌ ಅಹ್ಮದ್‌ ಶಿರ್ಜಾದ್‌, ಯಾಮಿನ್‌ ಅಹ್ಮದ್‌ಜಾಯ್‌, ಮುಜೀಬ್‌ ಉರ್‌ ರೆಹಮಾನ್‌.

ಟಾಪ್ ನ್ಯೂಸ್

kejriwal-2

Kejriwal ಕುರಿತು ಅಮೆರಿಕದ ಹೇಳಿಕೆ ಸ್ವೀಕಾರಾರ್ಹವಲ್ಲ ಎಂದ ಭಾರತದ ವಿದೇಶಾಂಗ ಇಲಾಖೆ

1—eewqewq

World’s largest ಅನಕೊಂಡ ಅನಾ ಜೂಲಿಯಾ ಸಾವು; ಆಗಿದ್ದೇನು?

Politics: ಅಮಿತ್‌ ಶಾ ಓರ್ವ ಗೂಂಡಾ, ರೌಡಿ: ಯತೀಂದ್ರ 

Politics: ಅಮಿತ್‌ ಶಾ ಓರ್ವ ಗೂಂಡಾ, ರೌಡಿ: ಯತೀಂದ್ರ 

1-asdasdad

Pralhad Joshi ವಿರುದ್ದ ಸಿಡಿದೆದ್ದ ದಿಂಗಾಲೇಶ್ವರ ಶ್ರಿಗಳಿಗೆ ವೀರಶೈವ ಮಹಾಸಭಾ ಬೆಂಬಲ

NIA (2)

Rameshwaram Cafe case: ಎನ್‌ಐಎಯಿಂದ ಸಹ ಸಂಚುಕೋರನ ಬಂಧನ

1-qqwewqe

Congress ಹಾಸನ, ಮಂಡ್ಯದಲ್ಲೂ ಗೆಲ್ಲಲಿದೆ : ಸಚಿವ ಎಂ.ಬಿ.ಪಾಟೀಲ್

1-eewqe

BJP MP ಜಿಗಜಿಣಗಿ ಮಾಡಿದ ಅಪಮಾನವನ್ನು ಸಮಾಜದ ಮನೆ ಮನೆಗೆ ತಿಳಿಸುತ್ತೇವೆ: ರಾಠೋಡ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Delhi: ದುಬಾರಿ ಮರ್ಸಿಡೆಸ್‌ ಕಾರಿನಲ್ಲಿ ಡ್ರಗ್ಸ್‌ ಸಾಗಾಟ-ರಾಷ್ಟ್ರಮಟ್ಟದ ಕುಸ್ತಿಪಟು ಬಂಧನ!

Delhi: ದುಬಾರಿ ಮರ್ಸಿಡೆಸ್‌ ಕಾರಿನಲ್ಲಿ ಡ್ರಗ್ಸ್‌ ಸಾಗಾಟ-ರಾಷ್ಟ್ರಮಟ್ಟದ ಕುಸ್ತಿಪಟು ಬಂಧನ!

Virat Kohli Fan: ಕೊಹ್ಲಿ ಕಾಲಿಗೆರಗಿದ ಅಭಿಮಾನಿಗೆ ಭದ್ರತಾ ಸಿಬಂದಿಯಿಂದ ಹಲ್ಲೆ?

Virat Kohli Fan: ಕೊಹ್ಲಿ ಕಾಲಿಗೆರಗಿದ ಅಭಿಮಾನಿಗೆ ಭದ್ರತಾ ಸಿಬಂದಿಯಿಂದ ಹಲ್ಲೆ?

MS Dhoni Catch: 42ರ ಧೋನಿಯ ಡೈವಿಂಗ್‌ ಕ್ಯಾಚ್‌!

MS Dhoni Catch: 42ರ ಧೋನಿಯ ಡೈವಿಂಗ್‌ ಕ್ಯಾಚ್‌!

Ipl: ಪಂತ್‌ ಪಡೆಗೆ ರಾಜಸ್ಥಾನ್‌ ರಾಯಲ್ಸ್‌ ಚಾಲೆಂಜ್‌

Ipl: ಪಂತ್‌ ಪಡೆಗೆ ರಾಜಸ್ಥಾನ್‌ ರಾಯಲ್ಸ್‌ ಚಾಲೆಂಜ್‌

IPL 2024: ಧೋನಿ ಸೂಚನೆಯಂತೆ ಆಡಿದೆ: ರಿಝ್ವಿ

IPL 2024: ಧೋನಿ ಸೂಚನೆಯಂತೆ ಆಡಿದೆ: ರಿಝ್ವಿ

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

kejriwal-2

Kejriwal ಕುರಿತು ಅಮೆರಿಕದ ಹೇಳಿಕೆ ಸ್ವೀಕಾರಾರ್ಹವಲ್ಲ ಎಂದ ಭಾರತದ ವಿದೇಶಾಂಗ ಇಲಾಖೆ

Dinesh Gundu Rao: ಕ್ಷಯ ರೋಗ ನಿಯಂತ್ರಣ ಔಷಧ ಪೂರೈಕೆಗೆ ಕೇಂದ್ರಕ್ಕೆ ಮನವಿ; ದಿನೇಶ್‌

Dinesh Gundu Rao: ಕ್ಷಯ ರೋಗ ನಿಯಂತ್ರಣ ಔಷಧ ಪೂರೈಕೆಗೆ ಕೇಂದ್ರಕ್ಕೆ ಮನವಿ; ದಿನೇಶ್‌

Lok Sabha elections: ಸಂಸದ ಬಸವರಾಜುಗೆ “ಗೋ ಬ್ಯಾಕ್‌’ ಎಂದ ಬಿಜೆಪಿಗರು!

Lok Sabha elections: ಸಂಸದ ಬಸವರಾಜುಗೆ “ಗೋ ಬ್ಯಾಕ್‌’ ಎಂದ ಬಿಜೆಪಿಗರು!

Narayan Gowda: ಹೆಚ್ಚಿನ ಮತಗಳಿಂದ ಎಚ್‌ಡಿಕೆ ಗೆಲ್ಲಿಸುತ್ತೇವೆ: ನಾರಾಯಣ ಗೌಡ

Narayan Gowda: ಹೆಚ್ಚಿನ ಮತಗಳಿಂದ ಎಚ್‌ಡಿಕೆ ಗೆಲ್ಲಿಸುತ್ತೇವೆ: ನಾರಾಯಣ ಗೌಡ

1-qweqwew

Mangaluru;ಮನೆಯಲ್ಲೇ ಅಕ್ರಮ ಕಸಾಯಿಖಾನೆ:ಗೋಮಾಂಸ ಸಹಿತ ಮೂವರ ಬಂಧನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.