ಕ್ರೀಡಾ ಕೋಟಾದಿಂದ ಕಬಡ್ಡಿ, ಚೆಸ್‌ಗೆ ಕೊಕ್‌


Team Udayavani, Jun 5, 2018, 6:00 AM IST

c-29.jpg

ಬೆಂಗಳೂರು: ವೃತ್ತಿ ಶಿಕ್ಷಣ ಕೋರ್ಸ್‌ಗಳ ಪ್ರವೇಶಾತಿ ಪ್ರಕ್ರಿಯೆ ಆರಂಭವಾಗುವ ಹೊತ್ತಲ್ಲೇ ರಾಜ್ಯದ ಕ್ರೀಡಾಪಟುಗಳಿಗೆ ಸಿಡಿಲಾಘಾತದ ಸುದ್ದಿ ಹೊರಬಿದ್ದಿದೆ. ಭಾರತಕ್ಕೆ ಅಂತಾರಾಷ್ಟ್ರೀಯ ಮಾನ್ಯತೆ ತಂದುಕೊಟ್ಟಿರುವ ಚೆಸ್‌, ಗ್ರಾಮೀಣ ಭಾಗದ ಬೇರು ಹೊಂದಿರುವ, ಇತ್ತೀಚಿನ ವರ್ಷಗಳಲ್ಲಿ ಭಾರತೀಯರಲ್ಲಿ ಹುಚ್ಚೆಬ್ಬಿಸಿರುವ ಕಬಡ್ಡಿ, ಖೋ-ಖೋ ಸಹಿತ 20 ಕ್ರೀಡೆಗಳಿಗೆ ಸಿಇಟಿಯ ಕ್ರೀಡಾ ಕೋಟದಿಂದ ಕೊಕ್‌ ನೀಡಲಾಗಿದೆ.

ಅಧಿಕೃತವಾಗಿ ಒಟ್ಟಾರೆ 52 ಕ್ರೀಡೆಗಳಿದ್ದು, ಕೇಂದ್ರ ಸರಕಾರ ಈ ಎಲ್ಲ ಕ್ರೀಡೆಗಳಿಗೆ ಮಾನ್ಯತೆ ನೀಡಿದೆ. ಆದರೆ ಒಲಿಂಪಿಕ್ಸ್‌ ಮಾನ್ಯತೆ ಹೊಂದಿರುವ 32 ಕ್ರೀಡೆಗಳಿಗಷ್ಟೇ ಈ ವರ್ಷದಿಂದ ಸಿಇಟಿಯಲ್ಲಿ ಕ್ರೀಡಾ ಕೋಟಾ ನೀಡಲಾಗುತ್ತದೆ ಎಂದು ಕ್ರೀಡಾ ಇಲಾಖೆ ಸುತ್ತೋಲೆ ಹೊರಡಿಸಿದೆ. ಮೇ 22ರ ಈ ಸುತ್ತೋಲೆಯ ಪ್ರತಿ ಉದಯವಾಣಿಗೆ ಲಭ್ಯವಾಗಿದೆ.

ವಿಷಯ ಮುಚ್ಚಿಟ್ಟಿತೇ ಕ್ರೀಡಾ ಇಲಾಖೆ?: ಸಿಇಟಿ ಪ್ರವೇಶ ಪರೀಕ್ಷೆಯಲ್ಲಿ ಕುಳಿತು ಹೆಚ್ಚು ಅಂಕ ತೆಗೆದುಕೊಂಡು ಕ್ರೀಡಾ ಮೀಸಲಾತಿ ಪಡೆಯಬೇಕು ಎನ್ನುವುದು ಅನೇಕ ಕ್ರೀಡಾಪಟುಗಳ ಕನಸಾಗಿರುತ್ತದೆ. ಪ್ರತಿ ವರ್ಷವೂ ಭಾರತ ಸರಕಾರದಿಂದ ಮಾನ್ಯತೆ ಹೊಂದಿರುವ ರಾಜ್ಯದ ವಿವಿಧ ಸಂಸ್ಥೆಗಳಲ್ಲಿನ ಕ್ರೀಡಾಪಟುಗಳಿಗೆ ಮೀಸಲಾತಿ ಸಿಗುತ್ತಿತ್ತು. ಆದರೆ ಈ ಬಾರಿ ತಮ್ಮ ಕ್ರೀಡೆಗಳ ಕೋಟಾವೇ ರದ್ದಾಗಿದೆ ಅನ್ನುವ ಸುದ್ದಿ ಕ್ರೀಡಾ ಸಂಸ್ಥೆಗಳಲ್ಲಿ ಬಿರುಗಾಳಿಯನ್ನೇ ಎಬ್ಬಿಸಿದೆ. ವಿಪರ್ಯಾಸ ಎಂದರೆ, ಪರಿಷ್ಕೃತ ಕ್ರೀಡಾ ಮೀಸಲಾತಿ ಪಟ್ಟಿಯನ್ನು ಕ್ರೀಡಾ ಇಲಾಖೆ ಬಹಿರಂಗವಾಗಿ ಇನ್ನೂ ಪ್ರಕಟಿಸಿಲ್ಲ. ಆದರೆ ಕೋಟಾ ತಿದ್ದುಪಡಿಗೆ ಸರಕಾರ ಅನುಮೋದನೆ ನೀಡಿದೆ ಎಂಬುದನ್ನು ಕ್ರೀಡಾ ಇಲಾಖೆಯ ಅಪರ ಮಖ್ಯ ಕಾರ್ಯದರ್ಶಿಗಳು ಕ್ರೀಡಾ ಇಲಾಖೆಯ ಆಯುಕ್ತರಿಗೆ ಮೇ 22ರಂದು ಬರೆದ ಪತ್ರದಲ್ಲಿ ಸ್ಪಷ್ಟವಾಗಿ ಉಲ್ಲೇಖೀಸಿದ್ದಾರೆ.

ಗ್ರಾಮೀಣ ಕ್ರೀಡಾಪಟುಗಳ ವಿರುದ್ಧ ಬ್ರಹ್ಮಾಸ್ತ್ರ?: ಕಬಡ್ಡಿ ಗ್ರಾಮೀಣ ಕ್ರೀಡಾಕೂಟ. ಏಷ್ಯಾಡ್‌ನ‌ಲ್ಲೂ ಕಬಡ್ಡಿ ಇದೆ.  ಅದನ್ನು ಒಲಿಂಪಿಕ್ಸ್‌ಗೆ ಸೇರಿಸುವ ಪ್ರಯತ್ನ ನಡೆಯುತಿದೆಯಾದರೂ ಅದಕ್ಕೆ ಇನ್ನೂ ಮಾನ್ಯತೆ ಸಿಕ್ಕಿಲ್ಲ. ಆದರೆ ಪ್ರೊಕಬಡ್ಡಿಯಿಂದಾಗಿ ಅದಕ್ಕೆ ಭಾರೀ ಜನಪ್ರಿಯತೆ ಸಿಕ್ಕಿದ್ದು ಯುವಕರು ಹೆಚ್ಚಾಗಿ ಕಬಡ್ಡಿಯತ್ತ ಆಕರ್ಷಿತರಾಗುತ್ತಿದ್ದಾರೆ. ಇಂತಹ ಕಬಡ್ಡಿ ಸೇರಿದಂತೆ ಖೋ-ಖೋ, ನೆಟ್‌ಬಾಲ್‌ನಂತಹ ಗ್ರಾಮೀಣ ಕ್ರೀಡಾ ಕೂಟಗಳ ಮೇಲೆ ಸರಕಾರದ ಈ ನಿರ್ಧಾರ ಗಂಭೀರ ಪರಿಣಾಮ ಬೀರುತ್ತದೆ.

ಸಂಪರ್ಕಕ್ಕೆ ಸಿಗದ ಕ್ರೀಡಾ ಇಲಾಖೆ
ಈ ಸಂಬಂಧ ಕ್ರೀಡಾ ಇಲಾಖೆ ಉಪನಿರ್ದೇಶಕ ಸತೀಶ್‌ ಅವರನ್ನು ಉದಯವಾಣಿ ದೂರವಾಣಿ ಮೂಲಕ ಸಂಪರ್ಕಿಸಿದಾಗ ಅವರು ಕರೆ ಸ್ವೀಕರಿಸಲಿಲ್ಲ. ಇಲಾಖೆಯ ಇತರೆ ಸಿಬಂದಿಯನ್ನು ದೂರವಾಣಿ ಮೂಲಕ ತಲುಪುವ ಪ್ರಯತ್ನ ನಡೆಸಲಾಯಿತಾದರೂ ಅವರ್ಯಾರಿಂದಲೂ ಸಕರಾತ್ಮಕ ಪ್ರತಿಕ್ರಿಯೆ ಸಿಗಲಿಲ್ಲ.

ಯಾವ್ಯಾವ ಕ್ರೀಡೆಗಳಿಗೆ ಕೊಕ್‌?
ಚೆಸ್‌, ಕಬಡ್ಡಿ, ನೆಟ್‌ಬಾಲ್‌, ಖೋ-ಖೋ, ಟೆನ್ನಿಕಾಯ್‌r, ಅಟ್ಯಾ ಪಟ್ಯಾ, ದೇಹದಾಡ್ಯì, ವೂಷು ಸಹಿತ 20 ಕ್ರೀಡೆಗಳಲ್ಲಿ ಪಾಲ್ಗೊಳ್ಳುತ್ತಿರುವ ರಾಜ್ಯದ ಕ್ರೀಡಾಪಟುಗಳಿಗೆ ಈಗ ಸಂಕಷ್ಟ ಎದುರಾಗಿದೆ. ಸಿಇಟಿಯಡಿಯ ವೃತ್ತಿಪರ ಶಿಕ್ಷಣ ಕೋರ್ಸ್‌ಗಳ ಕ್ರೀಡಾ ಕೋಟಾದಲ್ಲಿ 250 ಸೀಟುಗಳಿವೆ. ಈ ಹಿಂದಿನ ವರ್ಷಗಳಲ್ಲಿ  ಈ ಸೀಟುಗಳು ಭರ್ತಿಯಾಗಿರಲಿಲ್ಲ. ಈಗ 20 ಕ್ರೀಡೆಗಳಿಗೇ ಕೊಕ್‌ ನೀಡಿರುವ ಕಾರಣದಿಂದ ಈ ಕೋಟಾವೂ ಭರ್ತಿಯಾಗುವುದಿಲ್ಲ, ಪ್ರತಿಭಾವಂತರಿಗೆ ಅವಕಾಶವೂ ಸಿಗದಂತಾಗಲಿದೆ. ಕ್ರೀಡಾ ಇಲಾಖೆಯು ಕ್ರೀಡಾತಜ್ಞರು ಅಥವಾ ಹಿರಿಯ ಕ್ರೀಡಾಪಟುಗಳಿಂದ ಸಲಹೆಯನ್ನೂ ಕೇಳದೆ ಏಕಾಏಕಿಯಾಗಿ ಈ ನಿರ್ಧಾರ ತೆಗೆದುಕೊಂಡಿದೆ ಎಂದು ಹಿರಿಯ ಕ್ರೀಡಾಪಟುವೊಬ್ಬರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಹೇಮಂತ್‌ ಸಂಪಾಜೆ

ಟಾಪ್ ನ್ಯೂಸ್

Hubballi: ಮೂವರು ನಕಲಿ ಸಿಐಡಿ ಅಧಿಕಾರಿಗಳ ಬಂಧನ… ಮೊಬೈಲ್, ಬೈಕ್ ವಶ

Hubballi: ಮೂವರು ನಕಲಿ ಸಿಐಡಿ ಅಧಿಕಾರಿಗಳ ಬಂಧನ… ಮೊಬೈಲ್, ಬೈಕ್ ವಶ

ತಾಳಿಭಾಗ್ಯ ಯೋಜನೆ ತಂದ ಕಾಂಗ್ರೆಸ್ ಕಿತ್ತುಕೊಳ್ಳುವ ಕೆಲಸ ಎಂದೂ ಮಾಡಲ್ಲ: H.K. Patil

ತಾಳಿಭಾಗ್ಯ ಯೋಜನೆ ತಂದ ‘ಕಾಂಗ್ರೆಸ್’ ಕಿತ್ತುಕೊಳ್ಳುವ ಕೆಲಸ ಎಂದೂ ಮಾಡಲ್ಲ: H.K. Patil

Mumbai Airport: ನ್ಯೂಡಲ್ಸ್‌ ಪ್ಯಾಕೇಟ್‌ ನೊಳಗೆ ಕೋಟ್ಯಂತರ ಮೌಲ್ಯದ ವಜ್ರ ಕಳ್ಳಸಾಗಣೆ!

Mumbai Airport: ನ್ಯೂಡಲ್ಸ್‌ ಪ್ಯಾಕೇಟ್‌ ನೊಳಗೆ ಕೋಟ್ಯಂತರ ಮೌಲ್ಯದ ವಜ್ರ ಕಳ್ಳಸಾಗಣೆ!

ʼದುರ್ಗಿʼಯಾಗಿ ಚಂದನವನಕ್ಕೆ ಕಾಲಿಟ್ಟ ಕಾಲಿವುಡ್‌ ಬೆಡಗಿ: ಡಾಲಿ ಜೊತೆ ರೊಮ್ಯಾನ್ಸ್

ʼದುರ್ಗಿʼಯಾಗಿ ಚಂದನವನಕ್ಕೆ ಕಾಲಿಟ್ಟ ಕಾಲಿವುಡ್‌ ಬೆಡಗಿ: ಡಾಲಿ ಜೊತೆ ರೊಮ್ಯಾನ್ಸ್

ಮಗಳ ಪ್ರಕರಣ ದಿಕ್ಕು ತಪ್ಪುತ್ತಿದೆ ಎಂದಿದ್ದ ನೇಹಾಳ ತಂದೆ ರಾಜ್ಯ ಸರಕಾರದ ಕ್ಷಮೆ ಕೇಳಿದ್ದೇಕೆ?

ಮಗಳ ಪ್ರಕರಣ ದಿಕ್ಕು ತಪ್ಪುತ್ತಿದೆ ಎಂದಿದ್ದ ನೇಹಾಳ ತಂದೆ ರಾಜ್ಯ ಸರಕಾರದ ಕ್ಷಮೆ ಕೇಳಿದ್ದೇಕೆ?

16

ನೀತಿ ಸಂಹಿತೆ ನಡುವೆಯೂ ರಾಜ್ಯಕ್ಕೆ ನೆರವು ಎನ್ನುವ ಬಿಜೆಪಿಗೆ ನಾಚಿಕೆ ಇಲ್ಲವೇ? – ಖಂಡ್ರೆ

1-gadaga

Gadaga: ಸೈಕ್ಲಿಸ್ಟ್ ಪವಿತ್ರಾ ಕುರ್ತಕೋಟಿ ಸೈಕ್ಲಿಂಗ್ ರಾಷ್ಟ್ರೀಯ ತರಬೇತಿ ಶಿಬಿರಕ್ಕೆ ಆಯ್ಕೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-wewqwewq

IPL; ಲಕ್ನೋ ಸೂಪರ್‌ ಜೈಂಟ್ಸ್‌ ಎದುರಾಳಿ:ಚೆನ್ನೈಗೆ ಇದು ಸೇಡಿನ ಪಂದ್ಯ

1-ewewewq

IPL; ಆಸ್ಟ್ರೇಲಿಯನ್‌ ಆಲ್‌ರೌಂಡರ್‌ ಮಾರ್ಷ್‌ ಔಟ್‌

Kohli IPL 2024

IPL ನಾಯಕರಿಗೆ ದಂಡ, ಕೊಹ್ಲಿಗೂ ದಂಡ ; 29 ಸಲ 200 ರನ್‌ ನೀಡಿದ ಆರ್‌ಸಿಬಿ!

1-eewqewqe

IPL; ಮುಂಬೈ ಎದುರು ರಾಜಸ್ಥಾನ್ ಯಶಸ್ವಿ ಗೆಲುವಿನ ಓಟ: ಜೈಸ್ವಾಲ್ ಅಮೋಘ ಶತಕ

IPL 2024; ಏಳು ಪಂದ್ಯ ಸೋತರೂ ಇನ್ನೂ ಆರ್ ಸಿಬಿಗೆ ಇದೆ ಪ್ಲೇ ಆಫ್ ಅವಕಾಶ: ಇಲ್ಲಿದೆ ವಿವರ

IPL 2024; ಏಳು ಪಂದ್ಯ ಸೋತರೂ ಇನ್ನೂ ಆರ್ ಸಿಬಿಗೆ ಇದೆ ಪ್ಲೇ ಆಫ್ ಅವಕಾಶ: ಇಲ್ಲಿದೆ ವಿವರ

MUST WATCH

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

ಹೊಸ ಸೇರ್ಪಡೆ

Belagavi Lok sabha: ಧರ್ಮಯುದ್ಧಕ್ಕಿಂತ ಮೊದಲೇ ದಿಂಗಾಲೇಶ್ವರ ಶ್ರೀ ಶಸ್ತ್ರತ್ಯಾಗ!

Belagavi Lok sabha: ಧರ್ಮಯುದ್ಧಕ್ಕಿಂತ ಮೊದಲೇ ದಿಂಗಾಲೇಶ್ವರ ಶ್ರೀ ಶಸ್ತ್ರತ್ಯಾಗ!

Hubballi: ಮೂವರು ನಕಲಿ ಸಿಐಡಿ ಅಧಿಕಾರಿಗಳ ಬಂಧನ… ಮೊಬೈಲ್, ಬೈಕ್ ವಶ

Hubballi: ಮೂವರು ನಕಲಿ ಸಿಐಡಿ ಅಧಿಕಾರಿಗಳ ಬಂಧನ… ಮೊಬೈಲ್, ಬೈಕ್ ವಶ

ತಾಳಿಭಾಗ್ಯ ಯೋಜನೆ ತಂದ ಕಾಂಗ್ರೆಸ್ ಕಿತ್ತುಕೊಳ್ಳುವ ಕೆಲಸ ಎಂದೂ ಮಾಡಲ್ಲ: H.K. Patil

ತಾಳಿಭಾಗ್ಯ ಯೋಜನೆ ತಂದ ‘ಕಾಂಗ್ರೆಸ್’ ಕಿತ್ತುಕೊಳ್ಳುವ ಕೆಲಸ ಎಂದೂ ಮಾಡಲ್ಲ: H.K. Patil

Mumbai Airport: ನ್ಯೂಡಲ್ಸ್‌ ಪ್ಯಾಕೇಟ್‌ ನೊಳಗೆ ಕೋಟ್ಯಂತರ ಮೌಲ್ಯದ ವಜ್ರ ಕಳ್ಳಸಾಗಣೆ!

Mumbai Airport: ನ್ಯೂಡಲ್ಸ್‌ ಪ್ಯಾಕೇಟ್‌ ನೊಳಗೆ ಕೋಟ್ಯಂತರ ಮೌಲ್ಯದ ವಜ್ರ ಕಳ್ಳಸಾಗಣೆ!

ʼದುರ್ಗಿʼಯಾಗಿ ಚಂದನವನಕ್ಕೆ ಕಾಲಿಟ್ಟ ಕಾಲಿವುಡ್‌ ಬೆಡಗಿ: ಡಾಲಿ ಜೊತೆ ರೊಮ್ಯಾನ್ಸ್

ʼದುರ್ಗಿʼಯಾಗಿ ಚಂದನವನಕ್ಕೆ ಕಾಲಿಟ್ಟ ಕಾಲಿವುಡ್‌ ಬೆಡಗಿ: ಡಾಲಿ ಜೊತೆ ರೊಮ್ಯಾನ್ಸ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.