2 ದಿನದಲ್ಲಿ ಮುಗಿದ ಟೆಸ್ಟ್‌: ಅಫ್ಘಾನಿಸ್ಥಾನಕ್ಕೆ ಇನ್ನಿಂಗ್ಸ್‌ ಸೋಲು


Team Udayavani, Jun 16, 2018, 6:00 AM IST

2.jpg

ಬೆಂಗಳೂರು: ಮೊದಲ ಟೆಸ್ಟ್‌ ಪಂದ್ಯದ ಖುಷಿಯಲ್ಲಿದ್ದ ಅಫ್ಘಾನಿಸ್ಥಾನಕ್ಕೆ ಮರ್ಮಾಘಾತವಾಗಿದೆ. ಆತಿಥೇಯ ಭಾರತದ ಬೌಲಿಂಗ್‌ ದಾಳಿಗೆ ತತ್ತರಿಸಿದ ಅಫ್ಘಾನ್‌ ಪಡೆ ಎರಡೇ ದಿನದಲ್ಲಿ ಇನ್ನಿಂಗ್ಸ್‌ ಹಾಗೂ 262 ರನ್‌ ಅಂತರದ ಭಾರೀ ಸೋಲಿಗೆ ತುತ್ತಾಗಿದೆ. 

ಶುಕ್ರವಾರ “ಎಂ. ಚಿನ್ನಸ್ವಾಮಿ ಸ್ಟೇಡಿಯಂ’ನಲ್ಲಿ ಸಂಭವಿಸಿದ್ದೊಂದು ನಾಟಕೀಯ ಕುಸಿತ. ಒಂದೇ ದಿನದಲ್ಲಿ 24 ವಿಕೆಟ್‌ಗಳ ಪತನ! 6 ವಿಕೆಟಿಗೆ 347 ರನ್‌ ಗಳಿಸಿದ್ದ ಭಾರತ ದ್ವಿತೀಯ ದಿನದಾಟ ಮುಂದುವರಿಸಿ 474ರ ತನಕ ಸಾಗಿತು. ಜವಾಬಿತ್ತ ಅಫ್ಘಾನಿಸ್ಥಾನ 109 ರನ್ನಿಗೆ ಆಲೌಟ್‌ ಆಯಿತು. ಫಾಲೋಆನ್‌ಗೆ ಸಿಲುಕಿದ ಬಳಿಕವೂ ಪ್ರವಾಸಿಗರ ಬ್ಯಾಟಿಂಗ್‌ ಕುಸಿತ ನಿಲ್ಲಲಿಲ್ಲ; 103 ರನ್ನಿಗೆ ದ್ವಿತೀಯ ಇನ್ನಿಂಗ್ಸ್‌ ಮುಗಿಯಿತು! ಇದರೊಂದಿಗೆ ಭಾರತ ತನ್ನ ಕ್ರಿಕೆಟ್‌ ಇತಿಹಾಸದಲ್ಲಿ ಮೊದಲ ಬಾರಿಗೆ ಎರಡೇ ದಿನದಲ್ಲಿ ಟೆಸ್ಟ್‌ ಪಂದ್ಯವನ್ನು ಗೆದ್ದ ಹೆಗ್ಗಳಿಕೆಗೆ ಪಾತ್ರವಾಯಿತು.

ಅಫ್ಘಾನಿಸ್ಥಾನ ಮೊದಲ ಇನ್ನಿಂಗ್ಸ್‌ನಲ್ಲಿ 27.5 ಓವರ್‌ ಎದುರಿಸಿದರೆ, ದ್ವಿತೀಯ ಸರದಿ ಯಲ್ಲಿ 38.4 ಓವರ್‌ಗಳನ್ನಷ್ಟೇ ನಿಭಾಯಿಸಿತು. ಮೊದಲ ಇನ್ನಿಂಗ್ಸ್‌ನಲ್ಲಿ 24 ರನ್‌ ಮಾಡಿದ ಮೊಹಮ್ಮದ್‌ ನಬಿ, ದ್ವಿತೀಯ ಇನ್ನಿಂಗ್ಸ್‌ ನಲ್ಲಿ 36 ರನ್‌ ಮಾಡಿದ ಹಶ್ಮತುಲ್ಲ ಶಾಹಿದಿ ಅವರದೇ ಸರ್ವಾಧಿಕ ಗಳಿಕೆ. 

ಭಾರತದ ಮಿಂಚಿನ ದಾಳಿ
ಸೀಮಿತ ಓವರ್‌ಗಳ ಪಂದ್ಯಗಳಲ್ಲಿ ಅಮೋಘ ಸಾಧನೆಯೊಂದಿಗೆ ಗುರುತಿಸಿ ಕೊಂಡಿದ್ದ ಅಫ್ಘಾನಿಸ್ಥಾನ ಟೆಸ್ಟ್‌ನಲ್ಲಿ ಇಷ್ಟೊಂದು ಕಳಪೆ ಪ್ರದರ್ಶನ ನೀಡೀತೆಂಬ ನಿರೀಕ್ಷೆ ಇರಲಿಲ್ಲ. ಪ್ರವಾಸಿ ಪಡೆ ಭಾರತದ ಮಿಂಚಿನ ಬೌಲಿಂಗ್‌ ದಾಳಿಗೆ ಸಿಲುಕಿ ತತ್ತರಿಸಿತು; ನಿಂತು ಆಡುವುದನ್ನು ತಾನಿನ್ನೂ ಕಲಿತಿಲ್ಲ ಎಂಬುದನ್ನು ತೋರ್ಪಡಿಸಿತು.

ಮೊದಲ ಇನ್ನಿಂಗ್ಸ್‌ನಲ್ಲಿ ಅಶ್ವಿ‌ನ್‌ 4, ಜಡೇಜ ಮತ್ತು ಇಶಾಂತ್‌ ತಲಾ 2 ವಿಕೆಟ್‌ ಉರುಳಿಸಿದರು. ಎರಡನೇ ಸರದಿಯಲ್ಲಿ ಜಡೇಜ 4, ಉಮೇಶ್‌ ಯಾದವ್‌ 3, ಇಶಾಂತ್‌ 2 ವಿಕೆಟ್‌ ಹಾರಿಸಿದರು. ಮೊದಲ ದಿನದಾಟದಲ್ಲಿ ಲಂಚ್‌ ಒಳಗೆ ಶತಕ ಸಿಡಿಸಿದ ಶಿಖರ್‌ ಧವನ್‌ ಪಂದ್ಯಶ್ರೇಷ್ಠ ಗೌರವಕ್ಕೆ ಪಾತ್ರರಾದರು.

ಸಂಕ್ಷಿಪ್ತ ಸ್ಕೋರ್‌: ಭಾರತ-474 (ಧವನ್‌ 107, ವಿಜಯ್‌ 105, ಪಾಂಡ್ಯ 71, ರಾಹುಲ್‌ 54, ಅಹ್ಮದ್‌ಜಾಯ್‌ 51ಕ್ಕೆ 3, ವಫಾದಾರ್‌ 100ಕ್ಕೆ 2, ರಶೀದ್‌ ಖಾನ್‌ 154ಕ್ಕೆ 2). ಅಫ್ಘಾನಿಸ್ಥಾನ-109 (ನಬಿ 24, ಮಜೀಬ್‌ 15, ಅಶ್ವಿ‌ನ್‌ 27ಕ್ಕೆ 4, ಜಡೇಜ 18ಕ್ಕೆ 2, ಇಶಾಂತ್‌ 28ಕ್ಕೆ 2) ಮತ್ತು 103 (ಶಾಹಿದಿ 36, ಸ್ತಾನಿಕ್‌ಜಾಯ್‌ 25, ಜಡೇಜ 17ಕ್ಕೆ 4, ಯಾದವ್‌ 26ಕ್ಕೆ 3, ಇಶಾಂತ್‌ 17ಕ್ಕೆ 2). 

ಪಂದ್ಯಶ್ರೇಷ್ಠ: ಶಿಖರ್‌ ಧವನ್‌

ಟಾಪ್ ನ್ಯೂಸ್

Heavy Rain: ಹಿಮಾಚಲದಲ್ಲಿ ಭಾರೀ ಮಳೆ… 112 ರಸ್ತೆಗಳು ಬಂದ್‌

Heavy Rain: ಹಿಮಾಚಲದಲ್ಲಿ ಭಾರೀ ಮಳೆ… 112 ರಸ್ತೆಗಳು ಬಂದ್‌

Dharawad: ಮದ್ಯದ ಶೋಧಕ್ಕೆ ಹೋದ ಅಧಿಕಾರಿಗಳಿಗೆ ಸಿಕ್ಕಿದ್ದು ಕಂತೆ ಕಂತೆ ಹಣ

Dharawad: ಮದ್ಯದ ಶೋಧಕ್ಕೆ ಹೋದ ಅಧಿಕಾರಿಗಳಿಗೆ ಸಿಕ್ಕಿದ್ದು ಕಂತೆ ಕಂತೆ ಕೋಟಿಗಟ್ಟಲೆ ಹಣ

ಇನ್ನು ಹಣಕೊಟ್ಟರೆ ಮಾತ್ರ ಟ್ವಿಟರ್‌ನಲ್ಲಿ ಪೋಸ್ಟ್‌, ಲೈಕ್‌ ರಿಪ್ಲೈ ಗೆ ಅವಕಾಶ

ಇನ್ನು ಹಣಕೊಟ್ಟರೆ ಮಾತ್ರ ಟ್ವಿಟರ್‌ನಲ್ಲಿ ಪೋಸ್ಟ್‌, ಲೈಕ್‌ ರಿಪ್ಲೈ ಗೆ ಅವಕಾಶ

Bantwal: ಮೂರ್ಛೆ ರೋಗದಿಂದ ಬಳಲುತ್ತಿದ್ದ ಮಹಿಳೆ ನದಿಗೆ ಹಾರಿ ಆತ್ಮಹತ್ಯೆ

Bantwal: ಮೂರ್ಛೆ ರೋಗದಿಂದ ಬಳಲುತ್ತಿದ್ದ ಮಹಿಳೆ ನದಿಗೆ ಹಾರಿ ಆತ್ಮಹತ್ಯೆ

2018ರಲ್ಲಿ ನಡೆದ ಬಾಲ್ಯ ವಿವಾಹ ಪ್ರಕರಣ: 7 ಜನರಿಗೆ ಕಠಿಣ ಶಿಕ್ಷೆ ವಿಧಿಸಿದ ನ್ಯಾಯಾಲಯ

2018ರಲ್ಲಿ ನಡೆದ ಬಾಲ್ಯ ವಿವಾಹ ಪ್ರಕರಣ: 7 ಜನರಿಗೆ ಕಠಿಣ ಶಿಕ್ಷೆ ವಿಧಿಸಿದ ನ್ಯಾಯಾಲಯ

UPSC Result: ವಿಜಯಪುರದ ವಿಜೇತಾಗೆ ಯುಪಿಎಸ್‍ಸಿಯಲ್ಲಿ 100ನೇ ರ್‍ಯಾಂಕ್

UPSC Result: ವಿಜಯಪುರದ ವಿಜೇತಾಗೆ ಯುಪಿಎಸ್‍ಸಿಯಲ್ಲಿ 100ನೇ ರ್‍ಯಾಂಕ್

17=

Mangaluru: ಬೈಕ್‌ಗೆ ಕಾರು ಢಿಕ್ಕಿ: ವಿದ್ಯಾರ್ಥಿ ಸಾವು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

BCCI instructions to share photos of the IPL match day ground!

IPL 2024 ಪಂದ್ಯ ದಿನ ಮೈದಾನದ ಫೋಟೋ ಹಂಚದಂತೆ ಬಿಸಿಸಿಐ ಸೂಚನೆ!

ಮಣಿಪಾಲ್ ಆಸ್ಪತ್ರೆಯ ವಿಶೇಷ ಆಯೋಜನೆ: RCBvsSRH ಪಂದ್ಯ ವೀಕ್ಷಿಸಿದ ಕ್ಯಾನ್ಸರ್‌ ಪೀಡಿತರು

ಮಣಿಪಾಲ್ ಆಸ್ಪತ್ರೆಯ ವಿಶೇಷ ಆಯೋಜನೆ: RCBvsSRH ಪಂದ್ಯ ವೀಕ್ಷಿಸಿದ ಕ್ಯಾನ್ಸರ್‌ ಪೀಡಿತರು

IPL 2024; ಮುಂಬೈ ಪಂದ್ಯದ ಟಾಸ್ ಕಳ್ಳಾಟ ಬಿಚ್ಚಿಟ್ಟ ಆರ್ ಸಿಬಿ ನಾಯಕ ಫಾಫ್| Video

IPL 2024; ಮುಂಬೈ ಪಂದ್ಯದ ಟಾಸ್ ಕಳ್ಳಾಟ ಬಿಚ್ಚಿಟ್ಟ ಆರ್ ಸಿಬಿ ನಾಯಕ ಫಾಫ್| Video

RCBsvSRH; ಚಿನ್ನಸ್ವಾಮಿಯಲ್ಲಿ ರೆಕಾರ್ಡ್ಸ್ ಸುರಿಮಳೆ; ದಾಖಲೆಗಳ ವಿವರ ಇಲ್ಲಿದೆ

RCBsvSRH; ಚಿನ್ನಸ್ವಾಮಿಯಲ್ಲಿ ರೆಕಾರ್ಡ್ಸ್ ಸುರಿಮಳೆ; ದಾಖಲೆಗಳ ವಿವರ ಇಲ್ಲಿದೆ

‘Please sell the RCB team to someone else’; Tennis star appeal

IPL 2024; ‘ದಯವಿಟ್ಟು ಆರ್ ಸಿಬಿ ತಂಡವನ್ನು ಬೇರೆಯವರಿಗೆ ಮಾರಿ ಬಿಡಿ’; ಟೆನ್ನಿಸ್ ತಾರೆ ಮನವಿ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

Heavy Rain: ಹಿಮಾಚಲದಲ್ಲಿ ಭಾರೀ ಮಳೆ… 112 ರಸ್ತೆಗಳು ಬಂದ್‌

Heavy Rain: ಹಿಮಾಚಲದಲ್ಲಿ ಭಾರೀ ಮಳೆ… 112 ರಸ್ತೆಗಳು ಬಂದ್‌

Dharawad: ಮದ್ಯದ ಶೋಧಕ್ಕೆ ಹೋದ ಅಧಿಕಾರಿಗಳಿಗೆ ಸಿಕ್ಕಿದ್ದು ಕಂತೆ ಕಂತೆ ಹಣ

Dharawad: ಮದ್ಯದ ಶೋಧಕ್ಕೆ ಹೋದ ಅಧಿಕಾರಿಗಳಿಗೆ ಸಿಕ್ಕಿದ್ದು ಕಂತೆ ಕಂತೆ ಕೋಟಿಗಟ್ಟಲೆ ಹಣ

ಇನ್ನು ಹಣಕೊಟ್ಟರೆ ಮಾತ್ರ ಟ್ವಿಟರ್‌ನಲ್ಲಿ ಪೋಸ್ಟ್‌, ಲೈಕ್‌ ರಿಪ್ಲೈ ಗೆ ಅವಕಾಶ

ಇನ್ನು ಹಣಕೊಟ್ಟರೆ ಮಾತ್ರ ಟ್ವಿಟರ್‌ನಲ್ಲಿ ಪೋಸ್ಟ್‌, ಲೈಕ್‌ ರಿಪ್ಲೈ ಗೆ ಅವಕಾಶ

Bantwal: ಮೂರ್ಛೆ ರೋಗದಿಂದ ಬಳಲುತ್ತಿದ್ದ ಮಹಿಳೆ ನದಿಗೆ ಹಾರಿ ಆತ್ಮಹತ್ಯೆ

Bantwal: ಮೂರ್ಛೆ ರೋಗದಿಂದ ಬಳಲುತ್ತಿದ್ದ ಮಹಿಳೆ ನದಿಗೆ ಹಾರಿ ಆತ್ಮಹತ್ಯೆ

2018ರಲ್ಲಿ ನಡೆದ ಬಾಲ್ಯ ವಿವಾಹ ಪ್ರಕರಣ: 7 ಜನರಿಗೆ ಕಠಿಣ ಶಿಕ್ಷೆ ವಿಧಿಸಿದ ನ್ಯಾಯಾಲಯ

2018ರಲ್ಲಿ ನಡೆದ ಬಾಲ್ಯ ವಿವಾಹ ಪ್ರಕರಣ: 7 ಜನರಿಗೆ ಕಠಿಣ ಶಿಕ್ಷೆ ವಿಧಿಸಿದ ನ್ಯಾಯಾಲಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.