ಧೋನಿ ಒನ್‌ಡೇ ನಿವೃತ್ತಿ ವದಂತಿ ತಳ್ಳಿ ಹಾಕಿದ ಕೋಚ್‌ ರವಿ ಶಾಸ್ತ್ರೀ


Team Udayavani, Jul 19, 2018, 11:47 AM IST

dhoni-700.jpg

ಲಂಡನ್‌ : ಭಾರತ ಕ್ರಿಕೆಟ್‌ ತಂಡದ ಮಾಜಿ ನಾಯಕ ಮಹೇಂದ್ರ ಸಿಂಗ್‌ ಧೋನಿ ಅವರು ಕ್ರಿಕೆಟಿಗೆ ವಿದಾಯ ಹೇಳುವ ಪ್ರಶ್ನೆಯೇ ಇಲ್ಲ; ಅವರು ಈಗಲೂ ತಂಡದ ಪ್ರಮುಖ ಹಾಗೂ ಭರವಸೆಯ ಭಾಗವಾಗಿದ್ದಾರೆ ಎಂದು ಕೋಚ್‌ ರವಿ ಶಾಸ್ತ್ರೀ ಹೇಳಿದ್ದಾರೆ. ಅಂತೆಯೇ ಧೋನಿ ಒನ್‌ ಡೇ ಕ್ರಿಕೆಟ್‌ ನಿವೃತ್ತಿಯ ವದಂತಿ, ಊಹಾಪೋಹಗಳನ್ನು ಅವರು ತಳ್ಳಿ ಹಾಕಿದ್ದಾರೆ. 

ಧೋನಿ ಅವರು ಪ್ರಕೃತ ಒನ್‌ ಡೇ ಪಂದ್ಯಗಳಲ್ಲಿ ಸಲೀಸಾಗಿ ರನ್‌ ಮಾಡುತ್ತಿಲ್ಲ; ರನ್‌ಗಾಗಿ ತಿಣುಕಾಡುತ್ತಿದ್ದಾರೆ ಎಂಬ ಆರೋಪ ಇದೆ. ಲೀಡ್ಸ್‌ ನ ಹೆಡಿಂಗ್‌ಲೇ ಯಲ್ಲಿ ಇಂಗ್ಲಂಡ್‌ ಎದುರಿನ ಮೂರನೇ ಏಕದಿನ ಪಂದ್ಯವನ್ನು ಭಾರತ ಸೋತಾಗ, ಅಂಗಣದಲ್ಲಿದ್ದ ಧೋನಿ ಅವರು ಅಂಪಾಯರ್‌ ರಿಂದ ಆಟದ ಚೆಂಡನ್ನು ಪಡೆದುಕೊಂಡದ್ದು  “ಕ್ರಿಕೆಟಿಗೆ ಧೋನಿ ವಿದಾಯ ಹೇಳಲಿದ್ದಾರೆ’ ಎನ್ನುವುದರ ಸೂಚನೆ ಎಂದು ಹಲವರು ಭಾವಿಸಿದ್ದರು. 

ಈ ಹಿನ್ನೆಲೆಯಲ್ಲಿ ರವಿ ಶಾಸ್ತ್ರೀ ಅವರು “ಧೋನಿ  ಕ್ರಿಕೆಟ್‌ನಿಂದ ನಿವೃತ್ತರಾಗುವ ಪ್ರಶ್ನೆಯೇ ಇಲ್ಲ; ಅವರು ಭಾರತ ತಂಡಕ್ಕೆ ಬಹುವಾಗಿ ಬೇಕಾದವರಾಗಿದ್ದಾರೆ’ ಎಂದು ಸ್ಪಷ್ಟ ಪಡಿಸಿದರು. 

“ಧೋನಿ ಅವರು ಆಟದ ಚೆಂಡನ್ನು ಅಂಪಾಯರ್‌ ಅವರಿಂದ ಪಡೆದುಕೊಂಡದ್ದು ಅದನ್ನು ಭರತ್‌ ಅರುಣ್‌ ಅವರಿಗೆ ತೋರಿಸುವುದಕ್ಕಾಗಿ. ಧೋನಿ ಅವರಿಗೆ ಆಟದ ಚೆಂಡು ಹೇಗೆ ತನ್ನ ರೂಪ ಮತ್ತು ಗುಣವನ್ನು ಎಷ್ಟು ಬೇಗನೆ ಕಳೆದುಕೊಳ್ಳುತ್ತಿದೆ ಎಂಬುದನ್ನು ತಿಳಿಯುವ ಕುತೂಹಲವಿತ್ತು. ಇದಕ್ಕೆ ಹೊರತಾಗಿ ಬೇರೇನೂ ಕಾರಣವಿಲ್ಲ. ಹಾಗೆಯೇ ಅವರು ಕ್ರಿಕೆಟಿಗೆ ವಿದಾಯ ಹೇಳುವ ಪ್ರಶ್ನೆಯೇ ಇಲ್ಲ  ಎಂದು ಶಾಸ್ತ್ರೀ ಹೇಳಿದರು. 

ಇಂಗ್ಲಂಡ್‌ ಜಯಿಸಿದ್ದ 2ನೇ ಒನ್‌ ಡೇ ಪಂದ್ಯದಲ್ಲಿ ಧೋನಿ 59 ಎಸೆತಗಳನ್ನು ಎದುರಿಸಿ ಕಷ್ಟಪಟ್ಟು 37 ರನ್‌ ತೆಗೆದಿದ್ದರು. ಮೂರನೇ ಪಂದ್ಯದಲ್ಲಿ ಕೂಡ ಧೋನಿ 66 ಎಸೆತ ಎದುರಿಸಿ ಕಷ್ಟದಿಂದ 42 ರನ್‌ ತೆಗೆದಿದ್ದರು. 

ಧೋನಿ ಅವರ ನಿಧಾನಗತಿಯ ಬ್ಯಾಟಿಂಗ್‌ ಬಗ್ಗೆ ಬರೆದಿರುವ ಸುನೀಲ್‌ ಗಾವಸ್ಕರ್‌, ತಾನು 1975ರ‌ ಜೂನ್‌ 7ರಂದು ಲಾರ್ಡ್ಸ್‌ನಲ್ಲಿ ನಡೆದಿದ್ದ ಪ್ರುಡೆನ್‌ಶಿಯಲ್‌ ವಿಶ್ವ ಕಪ್‌ ಕೂಟದಲ್ಲಿ ಇಂಗ್ಲಂಡ್‌ ಎದುರಿನ ಮೊದಲ ಪಂದ್ಯದಲ್ಲಿ  174 ಎಸೆತ ಎದುರಿಸಿ ತೆಗೆದಿದ್ದ 36 ರನ್‌ ಗಳ ಆಟವನ್ನು ಸ್ಮರಿಸಿಕೊಂಡರು. 

ಟಾಪ್ ನ್ಯೂಸ್

ಸಿನಿಮಾದಲ್ಲಿ ಖ್ಯಾತಿ, ಭಾರತೀಯರ ಪ್ರೀತಿಗಳಿಸಿದರೂ ಈ ಸೆಲೆಬ್ರಿಟಿಗಳು ಮತದಾನ ಮಾಡುವ ಹಾಗಿಲ್ಲ

ಸಿನಿಮಾದಲ್ಲಿ ಖ್ಯಾತಿ, ಭಾರತೀಯರ ಪ್ರೀತಿಗಳಿಸಿದರೂ ಈ ಸೆಲೆಬ್ರಿಟಿಗಳು ಮತದಾನ ಹಕ್ಕು ಹೊಂದಿಲ್ಲ

1-qwqwewqe

IPL ಅಕ್ರಮ ಪ್ರಸಾರ ಕೇಸ್; ನಟಿ ತಮನ್ನಾಗೆ ಸಂಕಷ್ಟ: ಸೈಬರ್ ಸೆಲ್ ನೋಟಿಸ್

1-wqqwewqe

BJP; ಖೂಬಾ ಮತ್ತೊಮ್ಮೆ ಸಚಿವರಾಗ್ತಾರೆ : ಔರಾದ್ ನಲ್ಲಿ ಯಡಿಯೂರಪ್ಪ ಘೋಷಣೆ

Kollywood: ಅಜಿತ್‌ ಹುಟ್ಟುಹಬ್ಬಕ್ಕೆ ಸೂಪರ್‌ ಹಿಟ್ ʼಬಿಲ್ಲಾʼ ರೀ ರಿಲೀಸ್; ಫ್ಯಾನ್ಸ್‌ ಖುಷ್

Kollywood: ಅಜಿತ್‌ ಹುಟ್ಟುಹಬ್ಬಕ್ಕೆ ಸೂಪರ್‌ ಹಿಟ್ ʼಬಿಲ್ಲಾʼ ರೀ ರಿಲೀಸ್; ಫ್ಯಾನ್ಸ್‌ ಖುಷ್

Malicious Calls; ಜ್ಞಾನವ್ಯಾಪಿ ಮಸೀದಿ ಸರ್ವೆ ತೀರ್ಪು ನೀಡಿದ್ದ ಜಡ್ಜ್ ಗೆ ಬೆದರಿಕೆ ಕರೆ

Malicious Calls; ಜ್ಞಾನವ್ಯಾಪಿ ಮಸೀದಿ ಸರ್ವೆ ತೀರ್ಪು ನೀಡಿದ್ದ ಜಡ್ಜ್ ಗೆ ಬೆದರಿಕೆ ಕರೆ

19-uv-fusion

Vote: ಬನ್ನಿ ಉತ್ತಮ ನಾಯಕನನ್ನು ಆಯ್ಕೆ ಮಾಡೋಣ

ಜ.26ರಂದು 2ನೇ ಹಂತದ ಚುನಾವಣೆ;ರಾಹುಲ್‌, ತರೂರ್‌, ಹೇಮಾ ಮಾಲಿನಿ ಹಲವು ಘಟಾನುಘಟಿಗಳು ಕಣದಲ್ಲಿ

ಜ.26ರಂದು 2ನೇ ಹಂತದ ಚುನಾವಣೆ;ರಾಹುಲ್‌, ತರೂರ್‌, ಹೇಮಾ ಮಾಲಿನಿ ಹಲವು ಘಟಾನುಘಟಿಗಳು ಕಣದಲ್ಲಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-qwqwewqe

IPL ಅಕ್ರಮ ಪ್ರಸಾರ ಕೇಸ್; ನಟಿ ತಮನ್ನಾಗೆ ಸಂಕಷ್ಟ: ಸೈಬರ್ ಸೆಲ್ ನೋಟಿಸ್

Anil Kumble Reveals His IPL Bid 2008

IPL: ಆರ್ ಸಿಬಿ ತಂಡಕ್ಕಾಗಿ ಮಲ್ಯ ಅಂದು…..: ವಿಶೇಷ ಘಟನೆ ನೆನೆದ ಅನಿಲ್ ಕುಂಬ್ಳೆ

Ipl: ಡೆಲ್ಲಿ ಗೆಲುವಿಗೆ ಪಂತ್‌, ಪಟೇಲ್‌ ನೆರವು

Ipl: ಡೆಲ್ಲಿ ಗೆಲುವಿಗೆ ಪಂತ್‌, ಪಟೇಲ್‌ ನೆರವು

IPL: ಮತ್ತೂಂದು ದೊಡ್ಡ ಮೊತ್ತಕ್ಕೆ ಎಸ್‌ಆರ್‌ಎಚ್‌ ಸ್ಕೆಚ್‌

IPL: ಮತ್ತೂಂದು ದೊಡ್ಡ ಮೊತ್ತಕ್ಕೆ ಎಸ್‌ಆರ್‌ಎಚ್‌ ಸ್ಕೆಚ್‌

1-asdasdas

IPL; ಸ್ಟಾಯಿನಿಸ್‌ ಏಟಿಗೆ ತವರಲ್ಲೆ ಚಾಂಪಿಯನ್‌ ಚೆನ್ನೈ ಠುಸ್‌!

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

ಸಿನಿಮಾದಲ್ಲಿ ಖ್ಯಾತಿ, ಭಾರತೀಯರ ಪ್ರೀತಿಗಳಿಸಿದರೂ ಈ ಸೆಲೆಬ್ರಿಟಿಗಳು ಮತದಾನ ಮಾಡುವ ಹಾಗಿಲ್ಲ

ಸಿನಿಮಾದಲ್ಲಿ ಖ್ಯಾತಿ, ಭಾರತೀಯರ ಪ್ರೀತಿಗಳಿಸಿದರೂ ಈ ಸೆಲೆಬ್ರಿಟಿಗಳು ಮತದಾನ ಹಕ್ಕು ಹೊಂದಿಲ್ಲ

ಕೊಡಪಾಡಿ: ಮೃತ ವ್ಯಕ್ತಿಯ ಹೆಸರಲ್ಲಿ ನಕಲಿ ಸಹಿ ಬಳಸಿ ಪವರ್‌ ಆಫ್‌ ಅಟಾರ್ನಿ, ದೂರು ದಾಖಲು

ಕೊಡಪಾಡಿ: ಮೃತ ವ್ಯಕ್ತಿಯ ಹೆಸರಲ್ಲಿ ನಕಲಿ ಸಹಿ ಬಳಸಿ ಪವರ್‌ ಆಫ್‌ ಅಟಾರ್ನಿ, ದೂರು ದಾಖಲು

1-qwqwewqe

IPL ಅಕ್ರಮ ಪ್ರಸಾರ ಕೇಸ್; ನಟಿ ತಮನ್ನಾಗೆ ಸಂಕಷ್ಟ: ಸೈಬರ್ ಸೆಲ್ ನೋಟಿಸ್

1-wqqwewqe

BJP; ಖೂಬಾ ಮತ್ತೊಮ್ಮೆ ಸಚಿವರಾಗ್ತಾರೆ : ಔರಾದ್ ನಲ್ಲಿ ಯಡಿಯೂರಪ್ಪ ಘೋಷಣೆ

ಬಾಗಲಕೋಟೆ: ಯಾರೇ ಪಕ್ಷ ಬಿಟ್ಟರೂ ಏನೂ ಆಗಲ್ಲ- ಸಿದ್ದು ಸವದಿ

ಬಾಗಲಕೋಟೆ: ಯಾರೇ ಪಕ್ಷ ಬಿಟ್ಟರೂ ಏನೂ ಆಗಲ್ಲ- ಸಿದ್ದು ಸವದಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.