ವಿಶ್ವ  ಬ್ಯಾಡ್ಮಿಂಟನ್‌ ಪಂದ್ಯಾವಳಿ: ಸಿಂಧು ಸೆಮಿಗೆ; ಪದಕ ಖಾತ್ರಿ


Team Udayavani, Aug 4, 2018, 6:00 AM IST

c-16.jpg

ನಾಂಜಿಂಗ್‌ (ಚೀನ): ವಿಶ್ವ ಬ್ಯಾಡ್ಮಿಂಟನ್‌ ಚಾಂಪಿಯನ್‌ಶಿಪ್‌ನಲ್ಲಿ ಭಾರತದ ತಾರಾ ಆಟಗಾರ್ತಿ ಪಿ.ವಿ. ಸಿಂಧು ಪದಕವೊಂದನ್ನು ಖಚಿತಪಡಿಸಿದ್ದಾರೆ. ಭಾರತದ ಪಾಲಿಗೆ ಸೋಲಿನ ದಿನವಾಗಿದ್ದ ಶುಕ್ರವಾರದ ಕೊನೆಯಲ್ಲಿ ಈ ಕಂಟಕವನ್ನು ನಿವಾರಿಸಿದ ಸಿಂಧು ವನಿತಾ ಸಿಂಗಲ್ಸ್‌ ಸೆಮಿಫೈನಲ್‌ಗೆ ಲಗ್ಗೆ ಇರಿಸಿದ್ದಾರೆ. ಇದರಿಂದ ಕನಿಷ್ಠ ಕಂಚಿನ ಪದಕವೊಂದು ಈ ಆಟಗಾರ್ತಿಯ ಕೊರಳನ್ನು ಅಲಂಕರಿಸಲಿದೆ.

ಶುಕ್ರವಾರದ ಪಂದ್ಯಗಳಲ್ಲಿ ಸೈನಾ ನೆಹ್ವಾಲ್‌, ಅಶ್ವಿ‌ನಿ ಪೊನ್ನಪ್ಪ-ಸಾತ್ವಿಕ್‌ ಸಾಯಿರಾಜ್‌ ರಾಂಕಿರೆಡ್ಡಿ, ಬಿ. ಸಾಯಿ ಪ್ರಣೀತ್‌… ಇವರೆಲ್ಲ ಸೋತು ಭಾರತದ ಪಾಳೆಯದಲ್ಲಿ ಹತಾಶ ವಾತಾವರಣ ನಿರ್ಮಿಸಿದ್ದರು. ಈ ಸಂದರ್ಭದಲ್ಲಿ ಆಶಾಕಿರಣವಾಗಿ ಮೂಡಿಬಂದ ಸಿಂಧು ಜಪಾನಿನ ನಜೋಮಿ ಒಕುಹರಾ ವಿರುದ್ಧ ದಿಟ್ಟ ಪ್ರದರ್ಶನ ನೀಡಿ 21-17, 21-19 ಅಂತರದ ರೋಮಾಂಚಕ ಗೆಲುವನ್ನು ಒಲಿಸಿಕೊಂಡರು. ಎರಡೂ ಗೇಮ್‌ಗಳಲ್ಲಿ ಆರಂಭಿಕ ಹಿನ್ನಡೆ ಕಂಡರೂ ಎದೆಗುಂದದೆ ಆಡಿ ಸೆಮಿಫೈನಲ್‌ಗೆ ಮುನ್ನುಗ್ಗುವಲ್ಲಿ ಯಶಸ್ವಿಯಾದರು.

ಪಿ.ವಿ. ಸಿಂಧು ಈವರೆಗೆ 2013, 2014ರಲ್ಲಿ ಕಂಚಿನ ಪದಕ, 2017ರಲ್ಲಿ ಬೆಳ್ಳಿ ಪದಕ ಗೆದ್ದು ವಿಶ್ವ ಬ್ಯಾಡ್ಮಿಂಟನ್‌ ಕೂಟದಲ್ಲಿ ಭಾರತದ ಪ್ರತಿಷ್ಠೆಯನ್ನು ಹೆಚ್ಚಿಸಿದ್ದಾರೆ. ಶನಿವಾರದ ಸೆಮಿಫೈನಲ್‌ನಲ್ಲಿ ಅವರು ಜಪಾನಿನ ಅಕಾನೆ ಯಮಾಗುಚಿ ವಿರುದ್ಧ ಆಡಲಿದ್ದಾರೆ.

ಸೈನಾ, ಅಶ್ವಿ‌ನಿ-ಸಾತ್ವಿಕ್‌ ನಿರ್ಗಮನ
ಶುಕ್ರವಾರ ಬೆಳಗ್ಗೆ ನಡೆದ ಕ್ವಾರ್ಟರ್‌ ಫೈನಲ್‌ ಪಂದ್ಯದಲ್ಲಿ ಸೈನಾ ನೆಹ್ವಾಲ್‌ 2 ಬಾರಿಯ ಚಾಂಪಿಯನ್‌ ಕ್ಯಾರೋಲಿನಾ ಮರಿನ್‌ಗೆ ಶರಣಾಗಿ ಹೊರಬಿದ್ದರು. ರಿಯೋ ಒಲಿಂಪಿಕ್‌ ಚಾಂಪಿಯನ್‌ ಕೂಟ ಆಗಿರುವ ಸ್ಪೇನಿನ ಮರಿನ್‌ 21-6, 21-11 ಅಂತರದಿಂದ ಸೈನಾಗೆ ಸೋಲುಣಿಸಿದರು. 

ಮಿಶ್ರ ಡಬಲ್ಸ್‌ನಲ್ಲಿ ಅಶ್ವಿ‌ನ್‌ ಪೊನ್ನಪ್ಪ-ಸಾತ್ವಿಕ್‌ಸಾಯಿರಾಜ್‌ ರಾಂಕಿರೆಡ್ಡಿ ಆಟ ಕೂಡ ಕ್ವಾರ್ಟರ್‌ ಫೈನಲ್‌ನಲ್ಲೇ ಕೊನೆಗೊಂಡಿತು. ಚೀನೀ ಜೋಡಿಯಾದ ಜೆಂಗ್‌ ಸಿವೀ-ಹ್ವಾಂಗ್‌ ಯಾಕಿಯೋಂಗ್‌ 21-17, 21-10 ನೇರ ಗೇಮ್‌ಗಳಲ್ಲಿ ಭಾರತೀ‌ಯರನ್ನು ಹಿಮ್ಮೆಟ್ಟಿಸಿತು. 

 ಸಾಯಿ ಪ್ರಣಿತ್‌ಗೆ ಸೋಲು
ಶುಕ್ರವಾರ ರಾತ್ರಿ ನಡೆದ ಪುರುಷರ ಸಿಂಗಲ್ಸ್‌ ಕ್ವಾರ್ಟರ್‌ ಫೈನಲ್‌ನಲ್ಲಿ ಬಿ. ಸಾಯಿ ಪ್ರಣೀತ್‌ ಕೂಡ ಸೋಲನುಭವಿಸಿದರು. ಜಪಾನಿನ ಕೆಂಟೊ ಮೊಮೊಟ ವಿರುದ್ಧ ನಡೆದ ಪಂದ್ಯವನ್ನು ಪ್ರಣೀತ್‌ 21-21, 21-21ರಿಂದ ಕಳೆದುಕೊಂಡರು.

ಟಾಪ್ ನ್ಯೂಸ್

1-24-saturday

Daily Horoscope: ಉದ್ಯೋಗ ಸ್ಥಾನದಲ್ಲಿ ನೆಮ್ಮದಿಯ ವಾತಾವರಣ, ಅಕಸ್ಮಾತ್‌ ಧನಪ್ರಾಪ್ತಿ

Heavy Rain; ದುಬಾೖ ಪ್ರಯಾಣ ಬೇಡ: ಸಲಹೆ

Heavy Rain; ದುಬಾೖ ಪ್ರಯಾಣ ಬೇಡ: ಸಲಹೆ

ಇಂದು ಚಿಕ್ಕಬಳ್ಳಾಪುರ, ಬೆಂಗಳೂರಲ್ಲಿ ಮೋದಿ ಗರ್ಜನೆ: ಒಂದೂವರೆ ಲಕ್ಷ ಜನ ಸೇರುವ ನಿರೀಕ್ಷೆ

ಇಂದು ಚಿಕ್ಕಬಳ್ಳಾಪುರ, ಬೆಂಗಳೂರಲ್ಲಿ ಮೋದಿ ಗರ್ಜನೆ: ಒಂದೂವರೆ ಲಕ್ಷ ಜನ ಸೇರುವ ನಿರೀಕ್ಷೆ

voter

Vote ಮಾಡದಿದ್ದರೆ ಬ್ಯಾಂಕ್‌ ಖಾತೆಯಿಂದ 350 ರೂ. ಕಡಿತ?

gold

Gold 10 ಗ್ರಾಂ ಬೆಲೆ 74,100 ರೂ.: ಇದು ನೂತನ ದಾಖಲೆ

1-aqweq

Delhi ತವರಿಗೆ ಮರಳಿದ ಖುಷಿಯಲ್ಲಿ: ಕೋಟ್ಲಾದಲ್ಲಿ ಹೈದರಾಬಾದ್‌ ವಿರುದ್ಧ ಮುಖಾಮುಖಿ

ರಾಜ್ಯ 2ನೇ ಹಂತ: 337 ಮಂದಿ ಕಣಕ್ಕೆ: ನಾಮಪತ್ರ ಸಲ್ಲಿಕೆ ಮುಕ್ತಾಯ, ಇಂದು ಪರಿಶೀಲನೆ

ರಾಜ್ಯ 2ನೇ ಹಂತ: 337 ಮಂದಿ ಕಣಕ್ಕೆ: ನಾಮಪತ್ರ ಸಲ್ಲಿಕೆ ಮುಕ್ತಾಯ, ಇಂದು ಪರಿಶೀಲನೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

gold

Gold 10 ಗ್ರಾಂ ಬೆಲೆ 74,100 ರೂ.: ಇದು ನೂತನ ದಾಖಲೆ

1-RCB

RCB ; ರವಿವಾರ ಕೆಕೆಆರ್‌ ವಿರುದ್ಧ ಈಡನ್‌ನಲ್ಲಿ ಗೋ ಗ್ರೀನ್‌ ಗೇಮ್‌

1-ewqe

Olympics ಅರ್ಹತೆ ತಪ್ಪುವ ಭೀತಿಯಲ್ಲಿ ದೀಪಕ್‌, ಸುಜೀತ್‌

1-wqewqewq

Doping: ಶಾಲು ಚೌಧರಿ ದೋಷಮುಕ್ತ

1-aaaaaawwq

Bumrah ಎಸೆತಕ್ಕೆ ಸ್ವೀಪ್‌ ಶಾಟ್‌: ಅಶುತೋಷ್‌ ಶರ್ಮ ಫುಲ್‌ ಖುಷ್‌

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

1-24-saturday

Daily Horoscope: ಉದ್ಯೋಗ ಸ್ಥಾನದಲ್ಲಿ ನೆಮ್ಮದಿಯ ವಾತಾವರಣ, ಅಕಸ್ಮಾತ್‌ ಧನಪ್ರಾಪ್ತಿ

Heavy Rain; ದುಬಾೖ ಪ್ರಯಾಣ ಬೇಡ: ಸಲಹೆ

Heavy Rain; ದುಬಾೖ ಪ್ರಯಾಣ ಬೇಡ: ಸಲಹೆ

1-qweqwqe

Ban in Singapore; ಎವರೆಸ್ಟ್‌ ಮಸಾಲಾದಲ್ಲಿ ಕ್ರಿಮಿನಾಶಕ ಅಂಶ?

ಇಂದು ಚಿಕ್ಕಬಳ್ಳಾಪುರ, ಬೆಂಗಳೂರಲ್ಲಿ ಮೋದಿ ಗರ್ಜನೆ: ಒಂದೂವರೆ ಲಕ್ಷ ಜನ ಸೇರುವ ನಿರೀಕ್ಷೆ

ಇಂದು ಚಿಕ್ಕಬಳ್ಳಾಪುರ, ಬೆಂಗಳೂರಲ್ಲಿ ಮೋದಿ ಗರ್ಜನೆ: ಒಂದೂವರೆ ಲಕ್ಷ ಜನ ಸೇರುವ ನಿರೀಕ್ಷೆ

voter

Vote ಮಾಡದಿದ್ದರೆ ಬ್ಯಾಂಕ್‌ ಖಾತೆಯಿಂದ 350 ರೂ. ಕಡಿತ?

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.