ವಿಶ್ವ  ಬ್ಯಾಡ್ಮಿಂಟನ್‌ ಪಂದ್ಯಾವಳಿ: ಸಿಂಧು ಸೆಮಿಗೆ; ಪದಕ ಖಾತ್ರಿ


Team Udayavani, Aug 4, 2018, 6:00 AM IST

c-16.jpg

ನಾಂಜಿಂಗ್‌ (ಚೀನ): ವಿಶ್ವ ಬ್ಯಾಡ್ಮಿಂಟನ್‌ ಚಾಂಪಿಯನ್‌ಶಿಪ್‌ನಲ್ಲಿ ಭಾರತದ ತಾರಾ ಆಟಗಾರ್ತಿ ಪಿ.ವಿ. ಸಿಂಧು ಪದಕವೊಂದನ್ನು ಖಚಿತಪಡಿಸಿದ್ದಾರೆ. ಭಾರತದ ಪಾಲಿಗೆ ಸೋಲಿನ ದಿನವಾಗಿದ್ದ ಶುಕ್ರವಾರದ ಕೊನೆಯಲ್ಲಿ ಈ ಕಂಟಕವನ್ನು ನಿವಾರಿಸಿದ ಸಿಂಧು ವನಿತಾ ಸಿಂಗಲ್ಸ್‌ ಸೆಮಿಫೈನಲ್‌ಗೆ ಲಗ್ಗೆ ಇರಿಸಿದ್ದಾರೆ. ಇದರಿಂದ ಕನಿಷ್ಠ ಕಂಚಿನ ಪದಕವೊಂದು ಈ ಆಟಗಾರ್ತಿಯ ಕೊರಳನ್ನು ಅಲಂಕರಿಸಲಿದೆ.

ಶುಕ್ರವಾರದ ಪಂದ್ಯಗಳಲ್ಲಿ ಸೈನಾ ನೆಹ್ವಾಲ್‌, ಅಶ್ವಿ‌ನಿ ಪೊನ್ನಪ್ಪ-ಸಾತ್ವಿಕ್‌ ಸಾಯಿರಾಜ್‌ ರಾಂಕಿರೆಡ್ಡಿ, ಬಿ. ಸಾಯಿ ಪ್ರಣೀತ್‌… ಇವರೆಲ್ಲ ಸೋತು ಭಾರತದ ಪಾಳೆಯದಲ್ಲಿ ಹತಾಶ ವಾತಾವರಣ ನಿರ್ಮಿಸಿದ್ದರು. ಈ ಸಂದರ್ಭದಲ್ಲಿ ಆಶಾಕಿರಣವಾಗಿ ಮೂಡಿಬಂದ ಸಿಂಧು ಜಪಾನಿನ ನಜೋಮಿ ಒಕುಹರಾ ವಿರುದ್ಧ ದಿಟ್ಟ ಪ್ರದರ್ಶನ ನೀಡಿ 21-17, 21-19 ಅಂತರದ ರೋಮಾಂಚಕ ಗೆಲುವನ್ನು ಒಲಿಸಿಕೊಂಡರು. ಎರಡೂ ಗೇಮ್‌ಗಳಲ್ಲಿ ಆರಂಭಿಕ ಹಿನ್ನಡೆ ಕಂಡರೂ ಎದೆಗುಂದದೆ ಆಡಿ ಸೆಮಿಫೈನಲ್‌ಗೆ ಮುನ್ನುಗ್ಗುವಲ್ಲಿ ಯಶಸ್ವಿಯಾದರು.

ಪಿ.ವಿ. ಸಿಂಧು ಈವರೆಗೆ 2013, 2014ರಲ್ಲಿ ಕಂಚಿನ ಪದಕ, 2017ರಲ್ಲಿ ಬೆಳ್ಳಿ ಪದಕ ಗೆದ್ದು ವಿಶ್ವ ಬ್ಯಾಡ್ಮಿಂಟನ್‌ ಕೂಟದಲ್ಲಿ ಭಾರತದ ಪ್ರತಿಷ್ಠೆಯನ್ನು ಹೆಚ್ಚಿಸಿದ್ದಾರೆ. ಶನಿವಾರದ ಸೆಮಿಫೈನಲ್‌ನಲ್ಲಿ ಅವರು ಜಪಾನಿನ ಅಕಾನೆ ಯಮಾಗುಚಿ ವಿರುದ್ಧ ಆಡಲಿದ್ದಾರೆ.

ಸೈನಾ, ಅಶ್ವಿ‌ನಿ-ಸಾತ್ವಿಕ್‌ ನಿರ್ಗಮನ
ಶುಕ್ರವಾರ ಬೆಳಗ್ಗೆ ನಡೆದ ಕ್ವಾರ್ಟರ್‌ ಫೈನಲ್‌ ಪಂದ್ಯದಲ್ಲಿ ಸೈನಾ ನೆಹ್ವಾಲ್‌ 2 ಬಾರಿಯ ಚಾಂಪಿಯನ್‌ ಕ್ಯಾರೋಲಿನಾ ಮರಿನ್‌ಗೆ ಶರಣಾಗಿ ಹೊರಬಿದ್ದರು. ರಿಯೋ ಒಲಿಂಪಿಕ್‌ ಚಾಂಪಿಯನ್‌ ಕೂಟ ಆಗಿರುವ ಸ್ಪೇನಿನ ಮರಿನ್‌ 21-6, 21-11 ಅಂತರದಿಂದ ಸೈನಾಗೆ ಸೋಲುಣಿಸಿದರು. 

ಮಿಶ್ರ ಡಬಲ್ಸ್‌ನಲ್ಲಿ ಅಶ್ವಿ‌ನ್‌ ಪೊನ್ನಪ್ಪ-ಸಾತ್ವಿಕ್‌ಸಾಯಿರಾಜ್‌ ರಾಂಕಿರೆಡ್ಡಿ ಆಟ ಕೂಡ ಕ್ವಾರ್ಟರ್‌ ಫೈನಲ್‌ನಲ್ಲೇ ಕೊನೆಗೊಂಡಿತು. ಚೀನೀ ಜೋಡಿಯಾದ ಜೆಂಗ್‌ ಸಿವೀ-ಹ್ವಾಂಗ್‌ ಯಾಕಿಯೋಂಗ್‌ 21-17, 21-10 ನೇರ ಗೇಮ್‌ಗಳಲ್ಲಿ ಭಾರತೀ‌ಯರನ್ನು ಹಿಮ್ಮೆಟ್ಟಿಸಿತು. 

 ಸಾಯಿ ಪ್ರಣಿತ್‌ಗೆ ಸೋಲು
ಶುಕ್ರವಾರ ರಾತ್ರಿ ನಡೆದ ಪುರುಷರ ಸಿಂಗಲ್ಸ್‌ ಕ್ವಾರ್ಟರ್‌ ಫೈನಲ್‌ನಲ್ಲಿ ಬಿ. ಸಾಯಿ ಪ್ರಣೀತ್‌ ಕೂಡ ಸೋಲನುಭವಿಸಿದರು. ಜಪಾನಿನ ಕೆಂಟೊ ಮೊಮೊಟ ವಿರುದ್ಧ ನಡೆದ ಪಂದ್ಯವನ್ನು ಪ್ರಣೀತ್‌ 21-21, 21-21ರಿಂದ ಕಳೆದುಕೊಂಡರು.

ಟಾಪ್ ನ್ಯೂಸ್

ಮುರುಘಾ ಶ್ರೀ ಜಾಮೀನು ರದ್ದು: ವಾರದಲ್ಲಿ ಶರಣಾಗಲು ತಾಕೀತು

ಮುರುಘಾ ಶ್ರೀ ಜಾಮೀನು ರದ್ದು: ವಾರದಲ್ಲಿ ಶರಣಾಗಲು ತಾಕೀತು

ನಾನು ಸಿಎಂ ಆಗಬೇಕು ಎಂಬ ನಿಮ್ಮಾಸೆ ಈಡೇರಲಿದೆ: ಡಿಕೆಶಿ

ನಾನು ಸಿಎಂ ಆಗಬೇಕು ಎಂಬ ನಿಮ್ಮಾಸೆ ಈಡೇರಲಿದೆ: ಡಿಕೆಶಿ

Apologize for the size of the wrong ad: Supreme to Ramdev

Patanjali; ತಪ್ಪು ಜಾಹೀರಾತಿನ ಗಾತ್ರದಲ್ಲೇ ಕ್ಷಮೆ ಕೇಳಿ: ರಾಮದೇವ್‌ ಗೆ ಸುಪ್ರೀಂ

Lok Sabha Election ; ಪ್ರಚಾರ ಜೋರು, ಚರ್ಚಾ ವಿಷಯ ಮೂರು!

Lok Sabha Election ; ಪ್ರಚಾರ ಜೋರು, ಚರ್ಚಾ ವಿಷಯ ಮೂರು!

Lok Sabha Election; Vigorous fight of new faces in Dakshina Kannada

Lok Sabha Election; ದಕ್ಷಿಣ ಕನ್ನಡದಲ್ಲಿ ಹೊಸ ಮುಖಗಳ ಹುರುಪಿನ ಸೆಣಸಾಟ

Defense Expenditure: India to rank fourth in the world by 2023

Defense Expenditure: 2023ರಲ್ಲಿ ವಿಶ್ವದಲ್ಲೇ ಭಾರತಕ್ಕೆ ನಾಲ್ಕನೇ ಸ್ಥಾನ

Editorial: ಹಿರಿಯ ನಾಗರಿಕರಿಗೂ ಆರೋಗ್ಯ ವಿಮೆ: ದಿಟ್ಟ ನಿರ್ಧಾರ

Editorial: ಹಿರಿಯ ನಾಗರಿಕರಿಗೂ ಆರೋಗ್ಯ ವಿಮೆ: ದಿಟ್ಟ ನಿರ್ಧಾರ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Rajastan Royals; ಪ್ಲೇ ಆಫ್ ಮೊದಲ ಗುರಿ: ಸಂಜು ಸ್ಯಾಮ್ಸನ್‌

Rajastan Royals; ಪ್ಲೇ ಆಫ್ ಮೊದಲ ಗುರಿ: ಸಂಜು ಸ್ಯಾಮ್ಸನ್‌

IPL 2024; ಫಿಟ್‌ ಆಗಿದ್ದೇ ನಿನ್ನೆ: ಸಂದೀಪ್‌ ಶರ್ಮ

Northamptonshire: ಕೌಂಟಿ ಕ್ರಿಕೆಟ್‌ನಲ್ಲಿ ಕರುಣ್‌ ನಾಯರ್‌ ದ್ವಿಶತಕ

Northamptonshire: ಕೌಂಟಿ ಕ್ರಿಕೆಟ್‌ನಲ್ಲಿ ಕರುಣ್‌ ನಾಯರ್‌ ದ್ವಿಶತಕ

Pakistan cricket team military training wasted

PCB; ಪಾಕ್‌ ಕ್ರಿಕೆಟ್‌ ತಂಡದ ಸೇನಾ ತರಬೇತಿ ವ್ಯರ್ಥ: ಹಾಸ್ಯ

Shotgun

Shotgun ಶೂಟಿಂಗ್‌ ಅರ್ಹತಾ ಸುತ್ತಿನಲ್ಲಿ ಕರಣ್‌: ವಿವಾದ

MUST WATCH

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

ಹೊಸ ಸೇರ್ಪಡೆ

ಮುರುಘಾ ಶ್ರೀ ಜಾಮೀನು ರದ್ದು: ವಾರದಲ್ಲಿ ಶರಣಾಗಲು ತಾಕೀತು

ಮುರುಘಾ ಶ್ರೀ ಜಾಮೀನು ರದ್ದು: ವಾರದಲ್ಲಿ ಶರಣಾಗಲು ತಾಕೀತು

ನಾನು ಸಿಎಂ ಆಗಬೇಕು ಎಂಬ ನಿಮ್ಮಾಸೆ ಈಡೇರಲಿದೆ: ಡಿಕೆಶಿ

ನಾನು ಸಿಎಂ ಆಗಬೇಕು ಎಂಬ ನಿಮ್ಮಾಸೆ ಈಡೇರಲಿದೆ: ಡಿಕೆಶಿ

Apologize for the size of the wrong ad: Supreme to Ramdev

Patanjali; ತಪ್ಪು ಜಾಹೀರಾತಿನ ಗಾತ್ರದಲ್ಲೇ ಕ್ಷಮೆ ಕೇಳಿ: ರಾಮದೇವ್‌ ಗೆ ಸುಪ್ರೀಂ

Lok Sabha Election ; ಪ್ರಚಾರ ಜೋರು, ಚರ್ಚಾ ವಿಷಯ ಮೂರು!

Lok Sabha Election ; ಪ್ರಚಾರ ಜೋರು, ಚರ್ಚಾ ವಿಷಯ ಮೂರು!

Lok Sabha Election; Vigorous fight of new faces in Dakshina Kannada

Lok Sabha Election; ದಕ್ಷಿಣ ಕನ್ನಡದಲ್ಲಿ ಹೊಸ ಮುಖಗಳ ಹುರುಪಿನ ಸೆಣಸಾಟ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.