ಸ್ವರ್ಣದಿಂದ ದೂರವಾದ ಸಿಂಧು


Team Udayavani, Aug 6, 2018, 6:00 AM IST

pv-sindhu-2.jpg

ನಾಂಜಿಂಗ್‌ (ಚೀನ): ಪಿ.ವಿ. ಸಿಂಧು ಅವರ ವಿಶ್ವ ಬ್ಯಾಡ್ಮಿಂಟನ್‌ ಅಭಿಯಾನ ಮತ್ತೂಮ್ಮೆ ನಿರಾಸೆಯೊಂದಿಗೆ ಕೊನೆಗೊಂಡಿದೆ. ಸತತ ಎರಡನೇ ವರ್ಷವೂ ಭಾರತದ ತಾರಾ ಆಟಗಾರ್ತಿಗೆ ಚಿನ್ನದ ಪದಕ ಕೈಕೊಟ್ಟಿದೆ; ಬೆಳ್ಳಿ ಪದಕವೇ ಕೊರಳನ್ನು ಅಲಂಕರಿಸಿದೆ.

ರವಿವಾರ ನಡೆದ ವನಿತಾ ಸಿಂಗಲ್ಸ್‌ ಫೈನಲ್‌ನಲ್ಲಿ ಸಿಂಧು ಸ್ಪೇನಿನ ಕ್ಯಾರೊಲಿನಾ ಮರಿನ್‌ ಅವರ ಆಕ್ರಮಣಕಾರಿ ಆಟಕ್ಕೆ ತತ್ತರಿಸಿದರು. ಮೊದಲ ಗೇಮ್‌ ವೇಳೆ ಸಿಂಧು ಸಮಬಲದ ಸ್ಪರ್ಧೆಯೊಡ್ಡಿದರೂ ದ್ವಿತೀಯ ಗೇಮ್‌ನಲ್ಲಿ ಸ್ಪೇನ್‌ ಆಟ ಗಾರ್ತಿಯ ಅಬ್ಬರಕ್ಕೆ ಯಾವ ರೀತಿಯಲ್ಲೂ ಸಾಟಿಯಾಗಲಿಲ್ಲ. 

ಅಂತಿಮವಾಗಿ ಮರಿನ್‌ 21-19, 21-10 ಅಂತರದಿಂದ ಜಯಭೇರಿ ಮೊಳಗಿಸಿದರು. ಸಿಂಧು ಜತೆಗೆ ಭಾರತೀಯ ಕ್ರೀಡಾಪ್ರಿಯರ ಬಂಗಾರದ ಕನಸು ಕೂಡ ಕೊಚ್ಚಿಹೋಯಿತು.ಕಳೆದ ವರ್ಷ ಗ್ಲಾಸೊYದಲ್ಲಿ ನಡೆದ ವಿಶ್ವ ಬ್ಯಾಡ್ಮಿಂಟನ್‌ ಚಾಂಪಿಯನ್‌ಶಿಪ್‌ ಪ್ರಶಸ್ತಿ ಸಮರದಲ್ಲೂ ಸಿಂಧು ಎಡವಿದ್ದರು. ಅಂದು ಜಪಾನಿನ ನೊಜೊಮಿ ಒಕುಹರಾ ಭಾರತೀಯಳ ಓಟಕ್ಕೆ ಬ್ರೇಕ್‌ ಹಾಕಿದ್ದರು. ಈ ಬಾರಿ ಒಕುಹರಾ ಅವರನ್ನು ಕ್ವಾರ್ಟರ್‌ ಫೈನಲ್‌ನಲ್ಲಿ ಕೆಡವಿ ಸೇಡು ತೀರಿಸಿಕೊಂಡರೂ “ಬೆಳ್ಳಿ ಗಡಿ’ ದಾಟಿ ಮುಂದಡಿ ಇಡಲು ಸಿಂಧುಗೆ ಸಾಧ್ಯವಾಗಲಿಲ್ಲ.

ರಿಯೋದಲ್ಲಿ ಮಣಿಸಿದ್ದ ಮರಿನ್‌
ಸಿಂಧು ಅವರನ್ನೇ ಮಣಿಸಿ ರಿಯೋ ಒಲಿಂಪಿಕ್‌ ಚಾಂಪಿಯನ್‌ ಆಗಿರುವ ಕ್ಯಾರೊಲಿನಾ ಮರಿನ್‌ ನಿಧಾನವಾಗಿಯೇ ಆಟ ಆರಂಭಿಸಿದ್ದರು. ಹಂತ ಹಂತವಾಗಿ  ಪಂದ್ಯದ ಮೇಲೆ ಹಿಡಿತ ಸಾಧಿಸುತ್ತ ಹೋದರು. ಒಮ್ಮೆ ಮುಂದಡಿ ಇರಿಸಿದ ಬಳಿಕ ಮತ್ತೆ ಹಿಂತಿರುಗಿ ನೋಡಲಿಲ್ಲ. 

ಮೊದಲ ಗೇಮ್‌ ವೇಳೆ ಸಿಂಧು 14-9 ಅಂತರದ ಮುನ್ನಡೆಯಲ್ಲಿದ್ದು, ಭರವಸೆ ಮೂಡಿಸಿದ್ದರು. ಈ ಹಂತದಲ್ಲಿ ಅಂಕಗಳನ್ನು ಬಾಚಿಕೊಳ್ಳತೊಡಗಿದ ಮರಿನ್‌, 15-15ರ ಸಮಬಲ ಸಾಧಿಸುವಲ್ಲಿ ಯಶಸ್ವಿಯಾದರು. ಬಳಿಕ 17-17, 18-18ರಲ್ಲೂ ಜತೆ ಜತೆಯಾಗಿಯೇ ಕಾಣಿಸಿಕೊಂಡರು. ಅದ್ಭುತ ಕ್ರಾಸ್‌-ಕೋರ್ಟ್‌ ಶಾಟ್‌ ಮೂಲಕ 19-18ರ ಮುನ್ನಡೆ ಒಲಿಸಿಕೊಂಡರು. ಅನಂತರ ಸಿಂಧುಗೆ ಅಂಕ ಮರೀಚಿಕೆಯೇ ಆಗುಳಿಯಿತು.

ದ್ವಿತೀಯ ಗೇಮ್‌ ನೀರಸ
ದ್ವಿತೀಯ ಗೇಮ್‌ನಲ್ಲಿ ಮರಿನ್‌ ಅತ್ಯಂತ ಆಕ್ರಮಣಕಾರಿಯಾಗಿ ಗೋಚ ರಿಸಿ ಇಡೀ ಅಂಕಣವನ್ನು ಆಕ್ರಮಿಸಿ ಕೊಂಡರು. ಸ್ಪೇನ್‌ ಆಟಗಾರ್ತಿಯ ಭರ್ಜರಿ ಹೊಡೆತಗಳಿಗೆ ಸಿಂಧು ಕಕ್ಕಾಬಿಕ್ಕಿ ಯಾದರು. ಮರಿನ್‌ ಒಂದೇ ಸಮನೆ ಅಂಕಗಳನ್ನು ಬಾಚಿಕೊಳ್ಳುತ್ತ 5-0 ಮುನ್ನಡೆ ಸಾಧಿಸಿದರು. ಬ್ರೇಕ್‌ ವೇಳೆ ಮರಿನ್‌ 11-2 ಅಂತರದ ಭಾರೀ ಲೀಡ್‌ನ‌ಲ್ಲಿದ್ದರು. ಸಿಂಧು ಆಗಲೇ ಶರಣಾಗತಿ ಸಾರಿಯಾಗಿತ್ತು. ಇದು ಕ್ಯಾರೊಲಿನಾ ಮರಿನ್‌ ಗೆದ್ದ 3ನೇ ವಿಶ್ವ ಸ್ವರ್ಣ. ಇದೊಂದು ದಾಖಲೆಯೂ ಹೌದು. ಇದಕ್ಕೂ ಮುನ್ನ ಅವರು 2014 ಮತ್ತು 2015ರಲ್ಲಿ ಬಂಗಾರದಿಂದ ಸಿಂಗಾರಗೊಂಡಿದ್ದರು.

ಸಿಂಧು: ಫೈನಲ್‌ ಕಂಟಕ
ಫೈನಲ್‌ ತನಕ ಅಮೋಘ ಪ್ರದರ್ಶನ ನೀಡುವ ಪಿ.ವಿ. ಸಿಂಧು, ಪ್ರಶಸ್ತಿ ಸುತ್ತಿನಲ್ಲಿ ಎಡವುತ್ತಿರುವುದು ನಿಜಕ್ಕೂ ಚಿಂತೆಯ ಸಂಗತಿ. 2016ರ ಬಳಿಕ ಅವರು ವಿಶ್ವ ಮಟ್ಟದ 8 ಫೈನಲ್‌ಗ‌ಳಲ್ಲಿ ಸೋಲನುಭವಿಸಿದ್ದಾರೆ. ರಿಯೋ ಒಲಿಂಪಿಕ್ಸ್‌, ಹಾಂಕಾಂಗ್‌ ಓಪನ್‌ (2017, 2018), ಸೂಪರ್‌ ಸೀರಿಸ್‌ ಫೈನಲ್‌ (2017), ಇಂಡಿಯಾ ಓಪನ್‌ (2018), ಥಾಯ್ಲೆಂಡ್‌ ಓಪನ್‌ (2018), ವಿಶ್ವ ಬ್ಯಾಡ್ಮಿಂಟನ್‌ (2017 ಮತ್ತು 2018). ಈ ಸಲವಾದರೂ ಸಿಂಧು ಫೈನಲ್‌ ಕಂಟಕದಿಂದ ಮುಕ್ತರಾಗಬಹುದೆಂಬ ನಿರೀಕ್ಷೆ ಹುಸಿಯಾಗಿದೆ.ಆದರೆ ವಿಶ್ವ ಬ್ಯಾಡ್ಮಿಂಟನ್‌ನಲ್ಲಿ ಅತ್ಯಧಿಕ 4 ಪದಕ ಗೆದ್ದ ಭಾರತೀಯ ಆಟಗಾರ್ತಿ ಎಂಬ ದಾಖಲೆ ಸಿಂಧು ಹೆಸರಲ್ಲಿರುವುದನ್ನು ಮರೆಯುವಂತಿಲ್ಲ (2 ಬೆಳ್ಳಿ, 2 ಕಂಚು).

ಆಘಾತಕಾರಿ ಸೋಲು
“ನಿಜಕ್ಕೂ ಇದು ಅತ್ಯಂತ ಆಘಾತಕಾರಿ ಸೋಲು. ಸತತ 2ನೇ ವರ್ಷವೂ ಚಿನ್ನ ಕೈಜಾರಿದೆ. ಬಹಳ ದುಃಖವಾಗುತ್ತಿದೆ. ಕೆಲವೊಮ್ಮೆ ನಮ್ಮ ದಿನ ಆಗಿರುವುದಿಲ್ಲ. ಏರಿಳಿತ, ಸೋಲು-ಗೆಲುವು ಸಹಜ. ಮುಂದಿನ ಕೂಟಕ್ಕೆ ಅತ್ಯಂತ ಬಲಿಷ್ಠವಾಗಿ ಮರ ಳುವುದೊಂದೇ ದಾರಿ…’
– ಪಿ.ವಿ. ಸಿಂಧು

ಟಾಪ್ ನ್ಯೂಸ್

PM Modi spoke about AI with Bill Gates

ಬಿಲ್ ಗೇಟ್ಸ್‌ ಜತೆ ಮಾತುಕತೆಯಲ್ಲಿ ಪ್ರಧಾನಿ ಮೋದಿ ಎಐ ಚರ್ಚೆ

Jammu-Srinagar National Highway; A taxi rolled into a gorge

Jammu-Srinagar National Highway; ಕಮರಿಗೆ ಉರುಳಿದ ಟ್ಯಾಕ್ಸಿ; ಹತ್ತು ಜನರು ಸಾವು

Son claims Mukhtar Ansari was given ‘slow poison’

Banda; ಗ್ಯಾಂಗ್‌ಸ್ಟರ್‌ ಮುಖ್ತಾರ್ ಅನ್ಸಾರಿಗೆ ವಿಷಪ್ರಾಶನ: ಪುತ್ರನ ಆರೋಪ

5-toll-gate

Toll Gate: ಎ.1ರಿಂದ ಟೋಲ್‌ ದರದಲ್ಲಿ ಹೆಚ್ಚಳ

4-naxal-

Mangaluru: ಶರಣಾಗುವ ನಕ್ಸಲರಿಗೆ ಸಿಗಲಿದೆ 7.50 ಲ.ರೂ. ಪ್ರೋತ್ಸಾಹಧನ

3-blthgdy

Belthangady: ತುಮಕೂರು ತ್ರಿಬ್ಬಲ್ ಮರ್ಡರ್ ಪ್ರಕರಣ;ಮನೆಮಂದಿಗೆ ಇಂದು ತಲುಪಿದ ಮೃತದೇಹ

2-mukthar-ansari

Mukhtar Ansari: ಕುಖ್ಯಾತ ಗ್ಯಾಂಗ್‌ಸ್ಟರ್‌, 5 ಬಾರಿ ಶಾಸಕ ಅನ್ಸಾರಿ ಸಾವು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Kohli IPL 2024

IPL; ಇಂದು ಚಿನ್ನಸ್ವಾಮಿಯಲ್ಲಿ ಆರ್‌ಸಿಬಿ ಬಲೆಗೆ ಬೀಳುತ್ತಾ ಕೋಲ್ಕತಾ?

1-qeqewqeqwe

IPL ಉದ್ಘಾಟನ ಸಮಾರಂಭ ವೀಕ್ಷಣೆ: ಹೊಸ ದಾಖಲೆ

1-kkr

Kolkata Raiders ಕೋಚ್‌ ಬಗ್ಗೆ ಆಟಗಾರ ಡೇವಿಡ್‌ ವೀಸ್‌ ಆರೋಪ

1-addasd

Mumbai Indians: ಸೂರ್ಯಕುಮಾರ್‌ ಶೀಘ್ರ ಚೇತರಿಕೆ ಸಾಧ್ಯತೆ

1-eewqeeeqwewqewq

Australia; ಕೇಂದ್ರೀಯ ಗುತ್ತಿಗೆ ಪಟ್ಟಿ: ವಾರ್ನರ್‌, ಸ್ಟೋಯಿನಿಸ್‌, ಅಗರ್‌ ಹೊರಕ್ಕೆ

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

9-tmpl

Malpe: ವಡಭಾಂಡೇಶ್ವರ ಭಕ್ತವೃಂದ; ಉತ್ತಿಷ್ಠ ಭಾರತ, ಸಾಧಕರಿಗೆ ಸಮ್ಮಾನ

8-pernankila

Pernankila ದೇವಾಲಯ ಬ್ರಹ್ಮಕುಂಭಾಭಿಷೇಕ ಸಂಪನ್ನ

PM Modi spoke about AI with Bill Gates

ಬಿಲ್ ಗೇಟ್ಸ್‌ ಜತೆ ಮಾತುಕತೆಯಲ್ಲಿ ಪ್ರಧಾನಿ ಮೋದಿ ಎಐ ಚರ್ಚೆ

Jammu-Srinagar National Highway; A taxi rolled into a gorge

Jammu-Srinagar National Highway; ಕಮರಿಗೆ ಉರುಳಿದ ಟ್ಯಾಕ್ಸಿ; ಹತ್ತು ಜನರು ಸಾವು

7-brijesh

Brijesh Chowta; ಎ.4: ಅಧಿಕೃತ ನಾಮಪತ್ರ ಸಲ್ಲಿಕೆ; ಕ್ಯಾ| ಚೌಟರ ಆಸ್ತಿ ಇಷ್ಟು !

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.