ಟೆಸ್ಟ್ ಗೆ ಪಂತ್ ಪಾದಾರ್ಪಣೆ :3ನೇ ಟೆಸ್ಟ್ ಆದರೂ ಗೆಲ್ಲುತ್ತಾ ಭಾರತ?


Team Udayavani, Aug 18, 2018, 3:06 PM IST

rishabh.jpg

ಲಂಡನ್: ನಾಟಿಗ್ಯಾಂನ ಟ್ರೆಂಟ್ ಬ್ರಿಜ್ ನಲ್ಲಿ ಶನಿವಾರ ಆರಂಭವಾದ  ಭಾರತ -ಇಂಗ್ಲೆಂಡ್ ನಡುವಿನ ತೃತೀಯ ಟೆಸ್ಟ್ ಪಂದ್ಯದಲ್ಲಿ ಭಾರತದ ಯುವ ವಿಕೆಟ್ ಕೀಪರ್, ಬ್ಯಾಟ್ಸಮನ್ ರಿಷಭ್ ಪಂತ್ ಆಡುವ ಬಳಗದಲ್ಲಿ ಸ್ಥಾನ ಪಡೆದಿದ್ದಾರೆ. ಕಳೆದ ಎರಡು ಪಂದ್ಯಗಳಲ್ಲಿ ಕಣಕ್ಕಿಳಿದಿದ್ದ ದಿನೇಶ್ ಕಾರ್ತಿಕ್ ಬದಲಿಗೆ ರಿಷಬ್ ಪಂತ್ ಅವಕಾಶ ಪಡೆದಿದ್ದಾರೆ. ಕಳೆದ ಎರಡು ಪಂದ್ಯ ಸೋತಿದ್ದ ಭಾರತ ಮೂರನೇ ಪಂದ್ಯ ಗೆಲ್ಲುವ ಹುರುಪಿನಿಂದ ಆಡಲು ಸಜ್ಜಾಗಿದೆ. ಟಾಸ್ ಗೆದ್ದ ಇಂಗ್ಲೆಂಡ್ ಬೌಲಿಂಗ್ ಆಯ್ಕೆ ಮಾಡಿಕೊಂಡಿದೆ. 

20ರ ಹರೆಯದ ದೆಹಲಿ ಮೂಲದ ಸ್ಪೋಟಕ  ಬ್ಯಾಟ್ಸಮನ್ ಪಂತ್ ಈ ಮೊದಲು ಇಂಗ್ಲೆಂಡ್ ವಿರುದ್ದವೇ ಬೆಂಗಳೂರಿನಲ್ಲಿ ಟಿ20 ಕ್ರಿಕೆಟ್ ಗೆ ಪಾದಾರ್ಪಣೆ ಮಾಡಿದ್ದರು. ಇದೀಗ ಮತ್ತೆ ಇಂಗ್ಲೆಂಡ್ ವಿರುದ್ದ ತಮ್ಮ ಮೊದಲ ಅಂತಾರಾಷ್ತ್ರೀಯ  ಟೆಸ್ಟ್ ಪಂದ್ಯವನ್ನಾಡಲು ಭಾರತದ 291ನೇ ಟೆಸ್ಟ್ ಆಟಗಾರನಾಗಿ ಕಣಕ್ಕಿಳಿಯುತ್ತಿದ್ದಾರೆ.

ದೆಹಲಿ ಪರವಾಗಿ 23 ಪ್ರಥಮ ದರ್ಜೆ ಪಂದ್ಯಗಳನ್ನಾಡಿರುವ ಈ ಎಡಗೈ ಬ್ಯಾಟ್ಸಮನ್ 54.50ರ ಸರಾಸರಿಯಲ್ಲಿ 1744 ರನ್ ಗಳಿಸಿದ್ದಾರೆ. ಕಳೆದ ಐಪಿಎಲ್‌ನಲ್ಲಿ ಡೆಲ್ಲಿ ಡೇರ್‌ಡೆವಿಲ್ಸ್ನಲ್ಲಿ ಪರವಾಗಿ ಅಬ್ಬರಿಸಿದ್ದ ಪಂತ್ 14 ಪಂದ್ಯಗಳಿಂದ 684 ರನ್ ಗಳಿಸಿ ಮಿಂಚಿದ್ದರು. 

ಮಹೇಂದ್ರ ಸಿಂಗ್ ಧೋನಿ ನಿವೃತ್ತಿ ನಂತರ ಭಾರತ ಟೆಸ್ಟ್ ತಂಡದಲ್ಲಿ ವೃದ್ಧಿಮಾನ್ ಸಾಹಾ ಮತ್ತು ದಿನೇಶ್ ಕಾರ್ತಿಕ್ ವಿಕೇಟ್ ಕೀಪರ್ ಆಗಿ  ಪ್ರತಿನಿಧಿಸಿದ್ದರು. ಸಾಹಾ ಗಾಯಾಳಾಗಿ ತಂಡದಿಂದ ಹೊರಬಿದ್ದರೆ, ಈ ಸರಣಿಯ ಮೊದಲೆರಡು ಪಂದ್ಯಗಳಲ್ಲಿ ಆಡಿದ್ದ ಕಾರ್ತಿಕ್ ಕೂಡಾ ಗಾಯಾಳಾಗಿ ಈ ಪಂದ್ಯದಿಂದ ಹೊರಬಿದ್ದಿರುವುದರಿಂದ ಪಂತ್‌ಗೆ ಅವಕಾಶ ಸಿಕ್ಕಿದೆ.  

ಈ ಪಂದ್ಯದಲ್ಲಿ ಭಾರತ ತಂಡದಲ್ಲಿ ಮೂರೂ ಬದಲಾವಣೆ ಮಾಡಿದ್ದು , ಕುಲದೀಪ್ ಬದಲಿಗೆ ಜಸ್ಪ್ರೀತ್  ಬುಮ್ರ, ಮುರಳಿ ವಿಜಯ್ ಬದಲಿಗೆ ಶಿಖರ್ ಧವನ್ ಗೆ ಅವಕಾಶ ನೀಡಲಾಗಿದೆ. ಇಂಗ್ಲೆಂಡ್ ತಂಡ ಈ ಪಂದ್ಯಕ್ಕಾಗಿ ಒಂದು ಬದಲಾವಣೆ ಮಾಡಿದ್ದು ಸ್ಯಾಮ್ ಕರನ್ ಬದಲಿಗೆ ಕಳೆದ ಪಂದ್ಯ ತಪ್ಪಿಸಿಕೊಂಡಿದ್ದ ಬೆನ್ ಸ್ಟೋಕ್ಸ್ ಅವಕಾಶ ಪಡೆದಿದ್ದರೆ. 

ಟಾಪ್ ನ್ಯೂಸ್

1-weweew

Congress; ತಮ್ಮ ಆಸ್ತಿ ಉಳಿಕೆಗೆ ರಾಜೀವ್‌ರಿಂದ ಉತ್ತರಾಧಿಕಾರ ಕಾಯ್ದೆ ರದ್ದು: ಪಿಎಂ

yogi-3

Congress ಬಂದರೆ ತಾಲಿಬಾನ್‌ ಶೈಲಿ ಆಡಳಿತ: ಯೋಗಿ

supreem

WhatsApp ಮೂಲಕ ವಕೀಲರಿಗೆ ಎಲ್ಲ ಮಾಹಿತಿ: ಸುಪ್ರೀಂ ಕೋರ್ಟ್‌

jairam ramesh

Wealth redistribution ಬಗ್ಗೆ ಕೈ ಪ್ರಣಾಳಿಕೆಯಲ್ಲಿ ಎಲ್ಲಿದೆ?: ಜೈರಾಂ

1-wqewq-eqw

Modi ಕೈ ಬಲಪಡಿಸಲು, ದ.ಕ. ಸಮಗ್ರ ಸುಧಾರಣೆಗಾಗಿ ಬಿಜೆಪಿಗೆ ಮತ ನೀಡಿ: ಚೌಟ

1-asasas

Naxal ಬಾಧಿತ ಮತಗಟ್ಟೆಗಳ ಭದ್ರತೆಗೆ ಹೆಚ್ಚುವರಿ ಆದ್ಯತೆ: ಮುಲ್ಲೈ ಮುಗಿಲನ್‌

D. K. Shivakumar: ಡೆತ್‌, ಬರ್ತ್‌ ಯಾವ ಟ್ಯಾಕ್ಸೂ ಇಲ್ಲ; ಡಿಕೆಶಿ

D. K. Shivakumar: ಡೆತ್‌, ಬರ್ತ್‌ ಯಾವ ಟ್ಯಾಕ್ಸೂ ಇಲ್ಲ; ಡಿಕೆಶಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-rerwer

IPL; ಸನ್‌ರೈಸರ್ಸ್ ಹೈದರಾಬಾದ್ ವಿರುದ್ಧ ಜಯದ ನಗು ಬೀರಿದ ಆರ್ ಸಿಬಿ

28

Athletics: ಕಿರಿಯರ ಏಷ್ಯನ್‌ ಆ್ಯತ್ಲೆಟಿಕ್ಸ್‌  ಜಾವೆಲಿನ್‌ನಲ್ಲಿ ದೀಪಾಂಶುಗೆ ಬಂಗಾರ

Gukesh: ಚಾಂಪಿಯನ್‌ ಗುಕೇಶ್‌ಗೆ ಭವ್ಯ ಸ್ವಾಗತ

Gukesh: ಚಾಂಪಿಯನ್‌ ಗುಕೇಶ್‌ಗೆ ಭವ್ಯ ಸ್ವಾಗತ

IPL: ಎಲ್ಲೆ ಮೀರಿ ವಿಕೆಟ್‌ ಸಂಭ್ರಮಾಚರಣೆಡೆಲ್ಲಿ ವೇಗಿ ರಸಿಕ್‌ ಸಲಾಂಗೆ ಛೀಮಾರಿ

IPL: ಎಲ್ಲೆ ಮೀರಿ ವಿಕೆಟ್‌ ಸಂಭ್ರಮಾಚರಣೆಡೆಲ್ಲಿ ವೇಗಿ ರಸಿಕ್‌ ಸಲಾಂಗೆ ಛೀಮಾರಿ

IPL: ಇಂಪ್ಯಾಕ್ಟ್ ಪ್ಲೇಯರ್‌ ನಿಯಮಕ್ಕೆ ಅಕ್ಷರ್‌ ಪಟೇಲ್‌ ಕೂಡ ವಿರೋಧ

IPL: ಇಂಪ್ಯಾಕ್ಟ್ ಪ್ಲೇಯರ್‌ ನಿಯಮಕ್ಕೆ ಅಕ್ಷರ್‌ ಪಟೇಲ್‌ ಕೂಡ ವಿರೋಧ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-weweew

Congress; ತಮ್ಮ ಆಸ್ತಿ ಉಳಿಕೆಗೆ ರಾಜೀವ್‌ರಿಂದ ಉತ್ತರಾಧಿಕಾರ ಕಾಯ್ದೆ ರದ್ದು: ಪಿಎಂ

yogi-3

Congress ಬಂದರೆ ತಾಲಿಬಾನ್‌ ಶೈಲಿ ಆಡಳಿತ: ಯೋಗಿ

supreem

WhatsApp ಮೂಲಕ ವಕೀಲರಿಗೆ ಎಲ್ಲ ಮಾಹಿತಿ: ಸುಪ್ರೀಂ ಕೋರ್ಟ್‌

jairam ramesh

Wealth redistribution ಬಗ್ಗೆ ಕೈ ಪ್ರಣಾಳಿಕೆಯಲ್ಲಿ ಎಲ್ಲಿದೆ?: ಜೈರಾಂ

1-wqewq-eqw

Modi ಕೈ ಬಲಪಡಿಸಲು, ದ.ಕ. ಸಮಗ್ರ ಸುಧಾರಣೆಗಾಗಿ ಬಿಜೆಪಿಗೆ ಮತ ನೀಡಿ: ಚೌಟ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.