ಕುಸ್ತಿ ನಿರೀಕ್ಷೆಗಳು ಜಾಸ್ತಿ


Team Udayavani, Aug 19, 2018, 10:22 AM IST

pti8172018000236b.jpg

ಜಕಾರ್ತಾ: ರವಿವಾರದಿಂದಲೇ ಆರಂಭವಾಗಲಿರುವ ಏಶ್ಯಾಡ್‌ ಕುಸ್ತಿ ಸ್ಪರ್ಧೆಯಲ್ಲಿ ಭಾರತದ ಮೇಲೆ ವಿಪರೀತ ನಿರೀಕ್ಷೆ ಇರಿಸಿಕೊಳ್ಳಲಾಗಿದೆ. 

ಪುರುಷರ ಫ್ರೀಸ್ಟೈಲ್‌ ಕುಸ್ತಿಯ 6 “ಜಟ್ಟಿ’ಗಳಲ್ಲಿ ಐವರು ರವಿವಾರ ಅದೃಷ್ಟ ಪರೀಕ್ಷೆಗೆ ಇಳಿಯಲಿರುವುದು ವಿಶೇಷ. ಕಾಮನ್ವೆಲ್ತ್‌ ಬಂಗಾರ ವಿಜೇತ ಭಜರಂಗ್‌ ಪೂನಿಯ (65 ಕೆಜಿ) ಉಜ್ಬೆಕಿಸ್ಥಾನದ ಸಿರೋಜಿದ್ದಿನ್‌ ಕಸನೋವ್‌ ವಿರುದ್ಧ ಸೆಣಸುವುದರೊಂದಿಗೆ ಭಾರತದ ಹೋರಾಟ ಮೊದಲ್ಗೊಳ್ಳಲಿದೆ. ಸತತ 3 ಚಿನ್ನದ ಪದಕಗಳ ಸಾಧನೆಯೊಂದಿಗೆ ಭಜರಂಗ್‌ ಏಶ್ಯಾಡ್‌ ಅಖಾಡಕ್ಕೆ  ಧುಮುಕಲಿದ್ದಾರೆ. ಗೋಲ್ಡ್‌ಕೋಸ್ಟ್‌ ಕಾಮನ್ವೆಲ್ತ್‌ ಗೇಮ್ಸ್‌, ಜಾರ್ಜಿಯಾದಲ್ಲಿ ನಡೆದ ಟಿಬಿಸಿಲಿ ಗ್ರ್ಯಾನ್‌ಪ್ರಿ ಹಾಗೂ ಇಸ್ತಾನ್‌ಬುಲ್‌ನಲ್ಲಿ ಜರಗಿದ ಯಾಸರ್‌ ಡೋಗು ಅಂತಾರಾಷ್ಟ್ರೀಯ ಕೂಟಗಳಲ್ಲಿ ಭಜರಂಗ್‌ ಚಿನ್ನದ ಪದಕಗಳಿಗೆ ಕೊರಳೊಡ್ಡಿದ್ದರು.

ಒಲಿಂಪಿಕ್ಸ್‌ನಲ್ಲಿ 2 ವೈಯಕ್ತಿಕ ಪದಕ ಗೆದ್ದ ಭಾರತದ ಏಕೈಕ ಕ್ರೀಡಾಳಾಗಿರುವ ಸುಶೀಲ್‌ ಕುಮಾರ್‌, ಟಿಬಿಸಿಲಿ ಗ್ರ್ಯಾನ್‌ಪ್ರಿ ಕೂಟದ ಮೊದಲ ಸುತ್ತಿನಲ್ಲೇ ಸೋತರೂ ತುಂಬು ಆತ್ಮವಿಶ್ವಾಸದಲ್ಲಿದ್ದಾರೆ. ಇದು ಕಳೆದ 4 ವರ್ಷ ಗಳಲ್ಲಿ ಸುಶೀಲ್‌ ಅನುಭವಿಸಿದ ಏಕೈಕ ಸೋಲಾಗಿದೆ. ಇವರ ಮೊದಲ ಸುತ್ತಿನ ಎದು ರಾಳಿ ಬಹ್ರೈನಿನ ಅದಾಮ್‌ ಬಟಿರೋವ್‌.

ಒಲಿಂಪಿಕ್ಸ್‌ನಷ್ಟೇ ಕಠಿನ ಸ್ಪರ್ಧೆ
ಇದು ಒಲಿಂಪಿಕ್ಸ್‌ನಷ್ಟೇ ಕಠಿನ ಸ್ಪರ್ಧೆ ಎಂಬುದಾಗಿ ಭಾರತದ ಕುಸ್ತಿ ಕೋಚ್‌ಗಳು ಅಭಿಪ್ರಾಯಪಟ್ಟಿದ್ದಾರೆ. ಒಲಿಂಪಿಕ್ಸ್‌ ಕುಸ್ತಿಯಲ್ಲೂ ಏಶ್ಯನ್ನರದೇ ಪ್ರಾಬಲ್ಯ ಇರುವುದರಿಂದ ಇದು ಏಶ್ಯನ್‌ ಗೇಮ್ಸ್‌ನಲ್ಲೂ ಪುನರಾವರ್ತನೆಗೊಳ್ಳುತ್ತದೆ ಎಂಬುದು ಫ್ರೀಸ್ಟೈಲ್‌ ನ್ಯಾಶನಲ್‌ ಕೋಚ್‌ ಜಗ¾ಂದರ್‌ ಸಿಂಗ್‌ ಅಭಿಪ್ರಾಯಪಟ್ಟಿದ್ದಾರೆ. ವಿಶ್ವ ಚಾಂಪಿಯನ್‌ಶಿಪ್‌ನಲ್ಲಿ ಪದಕ ಗೆದ್ದ ಅಷ್ಟೂ ಜಪಾನೀ ವನಿತಾ ಕುಸ್ತಿಪಟುಗಳು ಏಶ್ಯಾಡ್‌ನ‌ಲ್ಲಿದ್ದಾರೆ ಎಂದು ಅವರು ಎಚ್ಚರಿಸಿದ್ದಾರೆ.

ಗ್ರೀಕೊ ರೋಮನ್‌ ವಿಭಾಗದಲ್ಲಿ ಸುಲಭ ಡ್ರಾ ಪಡೆದಿರುವ ಹರ್‌ಪ್ರೀತ್‌ ಸಿಂಗ್‌ (87 ಕೆಜಿ) ಪದಕದ ದೊಡ್ಡ ಭರವಸೆಯಾಗಿದ್ದಾರೆ ಎಂಬುದು ಕೋಚ್‌ ಕುಲದೀಪ್‌ ಸಿಂಗ್‌ ಅನಿಸಿಕೆ. 2014ರ ಏಶ್ಯಾಡ್‌ನ‌ಲ್ಲಿ ರಜತ ಪದಕ ಗೆದ್ದ ಭಜರಂಗ್‌ ಪೂನಿಯ ಮೇಲೂ ಕುಲದೀಪ್‌ ವಿಶ್ವಾಸ ಹೊಂದಿದ್ದಾರೆ.  ಜಪಾನ್‌ ಮತ್ತು ಇರಾನ್‌ ಬಲಿಷ್ಠ ಸ್ಪರ್ಧಿಗಳನ್ನು ಹೊಂದಿದ್ದರೂ ಇವರು ಇನ್ನೊಂದು ವಿಭಾಗ ದಲ್ಲಿದ್ದಾರೆ. ಕಳೆದ ಏಶ್ಯಾಡ್‌ನ‌ಲ್ಲಿ ಭಾರತ 5 ಕುಸ್ತಿ ಪದಕಗಳನ್ನು ಗೆದ್ದಿತ್ತು. ಚಿನ್ನ ಜಯಿಸಿದ್ದ ಏಕೈಕ ಸಾಧಕನೆಂದರೆ ಯೋಗೇಶ್ವರ್‌ ದತ್‌. ಪುರುಷರ ಗ್ರೀಕೊ ರೋಮನ್‌, ವನಿತಾ ಸ್ಪರ್ಧೆಗಳು ಸೋಮವಾರದಿಂದ ಆರಂಭವಾಗಲಿವೆ. 

ಪದಕ ಹೆಚ್ಚಳ
ಈ ಏಶ್ಯಾಡ್‌ನ‌ಲ್ಲಿ ಭಾರತದ ಕುಸ್ತಿ ಪದಕಗಳ ಸಂಖ್ಯೆಯಲ್ಲಿ ಹೆಚ್ಚಳವಾಗುವುದನ್ನು ಕಾಣಬಹುದು.
-ಕೋಚ್‌

ಟಾಪ್ ನ್ಯೂಸ್

Malpe ಮೀನುಗಾರಿಕೆ ಅಭಿವೃದ್ಧಿಗೆ ಹೆಚ್ಚಿನ ಆದ್ಯತೆ: ಜೆ.ಪಿ. ಹೆಗ್ಡೆ

Malpe ಮೀನುಗಾರಿಕೆ ಅಭಿವೃದ್ಧಿಗೆ ಹೆಚ್ಚಿನ ಆದ್ಯತೆ: ಜೆ.ಪಿ. ಹೆಗ್ಡೆ

Rahul Gandhi: ಜಾತಿಗಣತಿಯನ್ನು ಯಾವ ಶಕ್ತಿಯೂ ತಡೆಯಲಾರದು: ರಾಹುಲ್‌ ಗಾಂಧಿ

Rahul Gandhi: ಜಾತಿಗಣತಿಯನ್ನು ಯಾವ ಶಕ್ತಿಯೂ ತಡೆಯಲಾರದು: ರಾಹುಲ್‌ ಗಾಂಧಿ

Sagara: ಮಹಿಳೆಯ ಗರ್ಭಕೋಶದಲ್ಲಿದ್ದ 7 ಕೆಜಿ ಗಡ್ಡೆ ಹೊರತೆಗೆದ ವೈದ್ಯರು

Sagara: ಮಹಿಳೆಯ ಗರ್ಭಕೋಶದಲ್ಲಿದ್ದ 7 ಕೆಜಿ ಗಡ್ಡೆ ಹೊರತೆಗೆದ ವೈದ್ಯರು

Sirsi: ಏ. 28ಕ್ಕೆ ಶಿರಸಿಗೆ ಪ್ರಧಾನಿ ಮೋದಿ… ಸಿದ್ಧತೆ ಆರಂಭ: ಕಾಗೇರಿ

Sirsi: ಏ. 28ಕ್ಕೆ ಶಿರಸಿಗೆ ಪ್ರಧಾನಿ ಮೋದಿ… ಸಿದ್ಧತೆ ಆರಂಭ: ಕಾಗೇರಿ

ಮೂಲಭೂತ ಸೌಕರ್ಯ ಕೊಡಿ ಎಂದಿದ್ದೇನೆ ಹೊರತು, ಒಕ್ಕಲೆಬ್ಬಿಸಿ ಎಂದಿಲ್ಲ; ಬೇಳೂರು ಸ್ಪಷ್ಟನೆ

ಮೂಲಭೂತ ಸೌಕರ್ಯ ಕೊಡಿ ಎಂದಿದ್ದೇನೆ ಹೊರತು, ಒಕ್ಕಲೆಬ್ಬಿಸಿ ಎಂದಿಲ್ಲ; ಬೇಳೂರು ಸ್ಪಷ್ಟನೆ

Jamie Dimon: ಮೋದಿ ಆರ್ಥಿಕ ನೀತಿ ಅದ್ಭುತ, ಅಮೆರಿಕದಲ್ಲೂ ಜಾರಿ ಮಾಡಿ: ಜೇಮಿ

Jamie Dimon: ಮೋದಿ ಆರ್ಥಿಕ ನೀತಿ ಅದ್ಭುತ, ಅಮೆರಿಕದಲ್ಲೂ ಜಾರಿ ಮಾಡಿ: ಜೇಮಿ

Sunita Williams: ಮೇ 6ರಂದು 3ನೇ ಬಾರಿಗೆ ಸುನಿತಾ ವಿಲಿಯಮ್ಸ್‌ ಗಗನ ಯಾತ್ರೆ

Sunita Williams: ಮೇ 6ರಂದು 3ನೇ ಬಾರಿಗೆ ಸುನಿತಾ ವಿಲಿಯಮ್ಸ್‌ ಗಗನ ಯಾತ್ರೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-asdasdas

IPL; ಸ್ಟಾಯಿನಿಸ್‌ ಏಟಿಗೆ ತವರಲ್ಲೆ ಚಾಂಪಿಯನ್‌ ಚೆನ್ನೈ ಠುಸ್‌!

DCvsGT; ಪಂತ್‌ ನಾಯಕತ್ವಕ್ಕೆ ಅಗ್ನಿಪರೀಕ್ಷೆ:  ತವರಿನ “ಕೋಟ್ಲಾ’ದಲ್ಲಿ ಗುಜರಾತ್‌ ಎದುರಾಳಿ

DCvsGT; ಪಂತ್‌ ನಾಯಕತ್ವಕ್ಕೆ ಅಗ್ನಿಪರೀಕ್ಷೆ:  ತವರಿನ “ಕೋಟ್ಲಾ’ದಲ್ಲಿ ಗುಜರಾತ್‌ ಎದುರಾಳಿ

IPL 2024; Chahal’s 200-wicket haul; First bowler to achieve this feat

IPL 2024; ಚಹಲ್‌ 200 ವಿಕೆಟ್‌ಗಳ ಕಮಾಲ್‌; ಈ ಸಾಧನೆಗೈದ ಮೊದಲ ಬೌಲರ್‌

CSKvsLSG: ಶತಕ ಸಿಡಿಸಿದ ಚೆನ್ನೈನ ಮೊದಲ ನಾಯಕ ಗಾಯಕ್ವಾಡ್‌

CSKvsLSG: ಶತಕ ಸಿಡಿಸಿದ ಚೆನ್ನೈನ ಮೊದಲ ನಾಯಕ ಗಾಯಕ್ವಾಡ್‌

Rajastan Royals; ಪ್ಲೇ ಆಫ್ ಮೊದಲ ಗುರಿ: ಸಂಜು ಸ್ಯಾಮ್ಸನ್‌

Rajastan Royals; ಪ್ಲೇ ಆಫ್ ಮೊದಲ ಗುರಿ: ಸಂಜು ಸ್ಯಾಮ್ಸನ್‌

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Malpe ಮೀನುಗಾರಿಕೆ ಅಭಿವೃದ್ಧಿಗೆ ಹೆಚ್ಚಿನ ಆದ್ಯತೆ: ಜೆ.ಪಿ. ಹೆಗ್ಡೆ

Malpe ಮೀನುಗಾರಿಕೆ ಅಭಿವೃದ್ಧಿಗೆ ಹೆಚ್ಚಿನ ಆದ್ಯತೆ: ಜೆ.ಪಿ. ಹೆಗ್ಡೆ

Subramanya ಏನೆಕಲ್ಲು: ಕಾರಿಗೆ ಗೂಡ್ಸ್‌ ಆಟೋ ಢಿಕ್ಕಿ

Subramanya ಏನೆಕಲ್ಲು: ಕಾರಿಗೆ ಗೂಡ್ಸ್‌ ಆಟೋ ಢಿಕ್ಕಿ

Rahul Gandhi: ಜಾತಿಗಣತಿಯನ್ನು ಯಾವ ಶಕ್ತಿಯೂ ತಡೆಯಲಾರದು: ರಾಹುಲ್‌ ಗಾಂಧಿ

Rahul Gandhi: ಜಾತಿಗಣತಿಯನ್ನು ಯಾವ ಶಕ್ತಿಯೂ ತಡೆಯಲಾರದು: ರಾಹುಲ್‌ ಗಾಂಧಿ

Sagara: ಮಹಿಳೆಯ ಗರ್ಭಕೋಶದಲ್ಲಿದ್ದ 7 ಕೆಜಿ ಗಡ್ಡೆ ಹೊರತೆಗೆದ ವೈದ್ಯರು

Sagara: ಮಹಿಳೆಯ ಗರ್ಭಕೋಶದಲ್ಲಿದ್ದ 7 ಕೆಜಿ ಗಡ್ಡೆ ಹೊರತೆಗೆದ ವೈದ್ಯರು

Sirsi: ಏ. 28ಕ್ಕೆ ಶಿರಸಿಗೆ ಪ್ರಧಾನಿ ಮೋದಿ… ಸಿದ್ಧತೆ ಆರಂಭ: ಕಾಗೇರಿ

Sirsi: ಏ. 28ಕ್ಕೆ ಶಿರಸಿಗೆ ಪ್ರಧಾನಿ ಮೋದಿ… ಸಿದ್ಧತೆ ಆರಂಭ: ಕಾಗೇರಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.