ಏಶ್ಯಾಡ್‌ನ‌ಲ್ಲಿದ್ದರೂ ಕೇರಳ ಸ್ಪರ್ಧಿಗಳಿಗೆ ಕುಟುಂಬದವರದೇ ಚಿಂತೆ…


Team Udayavani, Aug 21, 2018, 6:30 AM IST

asia-20181.jpg

ಜಕಾರ್ತಾ: ಕೇರಳದಲ್ಲಿ ಮಳೆಯ ಅಬ್ಬರಕ್ಕೆ ಜೀವಸಂಕುಲವೇ ನಡುಗಿಹೋಗಿದ್ದು, ಜಕಾರ್ತಾದಲ್ಲಿ ನಡೆಯುತ್ತಿರುವ ಏಶ್ಯನ್‌ ಗೇಮ್ಸ್‌ನಲ್ಲಿ ಭಾಗವಹಿಸುತ್ತಿರುವ ಕೇರಳದ ಕ್ರೀಡಾಪಟುಗಳಲ್ಲಿಯೂ ನಡುಕ ಹುಟ್ಟಿಸಿದೆ. ಆ್ಯತ್ಲೀಟ್‌ಗಳ ಗಮನ ಕ್ರೀಡೆ ಮೇಲಿದ್ದರೂ, ಹೃದಯ ಮಾತ್ರ ಕುಟುಂಬ ಮತ್ತು ಸ್ನೇಹಿತರ ಸೌಖ್ಯಕ್ಕಾಗಿ ಮಿಡಿಯುತ್ತಿದೆ.

ಗೃಹ ಸಚಿವಾಲಯದ ನೆರವಿನಿಂದ ಕ್ರೀಡಾಪಟುಗಳ ಕುಟುಂಬದವರ ಸುರಕ್ಷೆತೆಯ ಬಗ್ಗೆ ಮಾಹಿತಿ ನೀಡಲಾಗುತ್ತಿದೆ. “ಕೇರಳ ಆ್ಯತ್ಲೀಟ್‌ಗಳ ಕುಟುಂಬಗಳು ಎಲ್ಲಿವೆ ಎಂಬ ಬಗ್ಗೆ ಮಾಹಿತಿ ಪಡೆಯುತ್ತಿದ್ದೇವೆ. ಯಾವುದೇ ಒತ್ತಡಗಳಿಲ್ಲ ಸ್ಪರ್ಧಿಸಲು ಆ್ಯತ್ಲೀಟ್‌ಗಳಿಗೆ ನಮ್ಮ ಸಹಕಾರ ಬೇಕಾಗಿದೆ. ಇಂತಹ ಸಂದರ್ಭದಲ್ಲಿ  ಅವರ ಮನಸ್ಸು ಹೇಗಿರುತ್ತದೆ ಎಂಬ ಅರಿವಿದೆ. ಸುರಕ್ಷೆತೆಯ ಮಾಹಿತಿಯನ್ನು ನೀಡುತ್ತಿರುತ್ತೇವೆ’ ಎಂದು ಜಕಾರ್ತಾದಲ್ಲಿರುವ ಭಾರತದ ಮುಖ್ಯ ಅಧಿಕಾರಿ, ಬ್ರಿಜ್‌ಭೂಷಣ್‌ ಶರಣ್‌ ಸಿಂಗ್‌ ತಿಳಿಸಿದ್ದಾರೆ.

ಕೇರಳದ 34 ಕ್ರೀಡಾಪಟುಗಳು
ಭಾರತದ ತಂಡದಲ್ಲಿ  ಆ್ಯತ್ಲೆಟಿಕ್ಸ್‌, ವಾಲಿಬಾಲ್‌, ಬಾಸ್ಕೆಟ್‌ಬಾಲ್‌, ಈಜು ಮತ್ತು ಹಾಕಿ ಮುಂತಾದ ಕ್ರೀಡೆಗಳಲ್ಲಿ ಕೇರಳದ ಒಟ್ಟು 34 ಕ್ರೀಡಾಪಟುಗಳಿದ್ದಾರೆ.

“ನನ್ನ ಕುಟುಂಬ ಸುರಕ್ಷಿತ ಸ್ಥಳದಲ್ಲಿದೆ. ಆದರೆ, ಸಂಬಂಧಿಗಳು ಮತ್ತು ಸ್ನೇಹಿತರು ಈ ಭೀಕರ ಪ್ರವಾಹದಲ್ಲಿ ಸಿಲುಕಿದ್ದಾರೆ. ಇದು ಬೇಸರದ ಸಂಗತಿ’ ಎಂದು 400ಮೀ. ಓಟದಲ್ಲಿ ರಾಷ್ಟ್ರೀಯ ದಾಖಲೆ ಹೊಂದಿರುವ ಓಟಗಾರ ಮೊಹಮ್ಮದ್‌ ಅನಾಸ್‌ ಹೇಳಿದ್ದಾರೆ. ಅನಾಸ್‌ ಅವರು ಕೇರಳದ ರಾಜಧಾನಿ ತಿರುವನಂತಪುರಂ ಸಮೀಪದ ನಿಲಾಮೇಲ್‌ ನಗರದವರಾಗಿದ್ದಾರೆ.

“ಕೇರಳದಲ್ಲಿ ಏನಾಗುತ್ತಿದೆ ಎಂಬುದನ್ನು ನನ್ನ ಕಣ್ಣುಗಳಿಂದ ಕಂಡೆ. ಜನರೆಲ್ಲ ಸಾವನ್ನಪ್ಪುತ್ತಿದ್ದಾರೆ. ಮನೆಗಳೆಲ್ಲ ಉರುಳುತ್ತಿವೆ. ಜನರು ರಸ್ತೆಯಲ್ಲಿ ಮತ್ತು ನಿರಾಶ್ರಿತರ ಕೇಂದ್ರಗಳಲ್ಲಿದ್ದಾರೆ. ನನ್ನ ಅಜ್ಜ-ಅಜ್ಜಿ  ಕುಟುಂಬದ ಸಂಪರ್ಕಕ್ಕೆ ಸಿಗುತ್ತಿಲ್ಲ ಎಂದು ಮಾಹಿತಿ ದೊರಕಿತು. ಸ್ವಲ್ಪ ಸಮಯದ ಅನಂತರ ನನ್ನ ಹೆತ್ತವರು ಕರೆ ಮಾಡಿ, ಅಜ್ಜ-ಅಜ್ಜಿ ಸುರಕ್ಷಿತವಾಗಿದ್ದಾರೆ ಎಂದು ತಿಳಿಸಿದ್ದಾರೆ. ಇದನ್ನು ಕೇಳಿ ಮನಸ್ಸಿಗೆ ಸಮಾಧಾನವಾಗಿದೆ. ಇನ್ನು  ಯಾವುದೇ ಗೊಂದಲವಿಲ್ಲದೆ ಆಟದ ಮೇಲೆ ಗಮನಹರಿಸುತ್ತೇನೆ’ ಎಂದು ಲಾಂಗ್‌ಜಂಪರ್‌ ಶ್ರೀಶಂಕರ್‌ ಹೇಳಿದ್ದಾರೆ.

ಟಾಪ್ ನ್ಯೂಸ್

1-sadasd

Yadgir BJP ಬೃಹತ್ ರೋಡ್ ಶೋ; ದೇಶದ ರಕ್ಷಣೆಗಾಗಿ ಮತ್ತೆ ಬೆಂಬಲಿಸಿ: ನಡ್ಡಾ

1-wqeqqwe

Vote; ಕರ್ನಾಟಕ ಮೊದಲ ಹಂತ: ಶೇಕಡಾವಾರು ಮತದಾನದ ವಿವರ

voter

Chamarajanagar; ಮತದಾನ ಮಾಡಬೇಕೋ ಬೇಡವೋ ಎಂದು EVM ಗಳೇ ಧ್ವಂಸ !

1-wqeqewqe

EVM ಕುರಿತು ಸುಪ್ರೀಂ ತೀರ್ಪು ಪ್ರತಿಪಕ್ಷಗಳಿಗೆ ಕಪಾಳ ಮೋಕ್ಷ: ಪ್ರಧಾನಿ ಮೋದಿ

militry

Baramulla ಗುಂಡಿನ ಚಕಮಕಿಯಲ್ಲಿ ಉಗ್ರರಿಬ್ಬರ ಹತ್ಯೆ; ಇಬ್ಬರು ಸೇನಾ ಸಿಬಂದಿಗೆ ಗಾಯ

shettar

Minority ತುಷ್ಟೀಕರಣದಿಂದ ನೇಹಾಳ ಹತ್ಯೆಯಾಗಿದೆ :ಜಗದೀಶ್ ಶೆಟ್ಟರ್

1-adasdsad

Davanagere; ಪ್ರಧಾನಿ ಮೋದಿ ರ್‍ಯಾಲಿಗೆ ಅನುಮತಿ ನೀಡಬಾರದು:ಕಾಂಗ್ರೆಸ್ ಮನವಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

IPL 2024: ಗೆಲುವಿನ ವಿಶ್ವಾಸದಲ್ಲಿ ಕೆಕೆಆರ್‌

IPL 2024: ಗೆಲುವಿನ ವಿಶ್ವಾಸದಲ್ಲಿ ಕೆಕೆಆರ್‌

17

Team India: ಟಿ20 ವಿಶ್ವಕಪ್‌ ತಂಡ ರಾಹುಲ್‌ಗೆ ಚಾನ್ಸ್‌, ಹಾರ್ದಿಕ್‌ ಪಾಂಡ್ಯಗೆ ಕೊಕ್‌?

Chess: ವಿಶ್ವ ಚೆಸ್‌ ಚಾಂಪಿಯನ್‌ಶಿಪ್‌: ಆತಿಥ್ಯ ಹಕ್ಕಿಗಾಗಿ ಭಾರತ ಬಿಡ್‌

Chess: ವಿಶ್ವ ಚೆಸ್‌ ಚಾಂಪಿಯನ್‌ಶಿಪ್‌: ಆತಿಥ್ಯ ಹಕ್ಕಿಗಾಗಿ ಭಾರತ ಬಿಡ್‌

Archery World Cup: ಆರ್ಚರಿ ವಿಶ್ವಕಪ್‌ ರಿಕರ್ವ್‌ ವಿಭಾಗದಲ್ಲೂ ಭಾರತ ಫೈನಲ್‌ಗೆ

Archery World Cup: ಆರ್ಚರಿ ವಿಶ್ವಕಪ್‌ ರಿಕರ್ವ್‌ ವಿಭಾಗದಲ್ಲೂ ಭಾರತ ಫೈನಲ್‌ಗೆ

1-rerwer

IPL; ಸನ್‌ರೈಸರ್ಸ್ ಹೈದರಾಬಾದ್ ವಿರುದ್ಧ ಜಯದ ನಗು ಬೀರಿದ ಆರ್ ಸಿಬಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-sadasd

Yadgir BJP ಬೃಹತ್ ರೋಡ್ ಶೋ; ದೇಶದ ರಕ್ಷಣೆಗಾಗಿ ಮತ್ತೆ ಬೆಂಬಲಿಸಿ: ನಡ್ಡಾ

1-wqeqqwe

Vote; ಕರ್ನಾಟಕ ಮೊದಲ ಹಂತ: ಶೇಕಡಾವಾರು ಮತದಾನದ ವಿವರ

voter

Chamarajanagar; ಮತದಾನ ಮಾಡಬೇಕೋ ಬೇಡವೋ ಎಂದು EVM ಗಳೇ ಧ್ವಂಸ !

1-wqeqewqe

EVM ಕುರಿತು ಸುಪ್ರೀಂ ತೀರ್ಪು ಪ್ರತಿಪಕ್ಷಗಳಿಗೆ ಕಪಾಳ ಮೋಕ್ಷ: ಪ್ರಧಾನಿ ಮೋದಿ

militry

Baramulla ಗುಂಡಿನ ಚಕಮಕಿಯಲ್ಲಿ ಉಗ್ರರಿಬ್ಬರ ಹತ್ಯೆ; ಇಬ್ಬರು ಸೇನಾ ಸಿಬಂದಿಗೆ ಗಾಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.