ವಿರಾಟ್‌ ಕೊಹ್ಲಿ ಸೆಂಚುರಿ: ಭಾರತಕ್ಕೆ ಭರ್ಜರಿ ಮುನ್ನಡೆ


Team Udayavani, Aug 21, 2018, 6:00 AM IST

virat-kohli-nottingham-test.jpg

ನಾಟಿಂಗ್‌ಹ್ಯಾಮ್‌: ಮೊದಲ ಇನ್ನಿಂಗ್ಸ್‌ನಲ್ಲಿ ಕೇವಲ 3 ರನ್ನಿನಿಂದ ಶತಕ ತಪ್ಪಿಸಿಕೊಂಡಿದ್ದ ವಿರಾಟ್‌ ಕೊಹ್ಲಿ, ದ್ವಿತೀಯ ಸರದಿಯಲ್ಲಿ ಸೆಂಚುರಿ ಸಂಭ್ರಮ ಆಚರಿಸಿದ್ದಾರೆ. ಇದರೊಂದಿಗೆ ನಾಟಿಂಗ್‌ಹ್ಯಾಮ್‌ ಟೆಸ್ಟ್‌ನಲ್ಲಿ ಅಮೋಘ ಬ್ಯಾಟಿಂಗ್‌ ಪ್ರದರ್ಶನ ಮುಂದುವರಿಸಿರುವ ಭಾರತ, 7 ವಿಕೆಟಿಗೆ 352 ರನ್‌ ಮಾಡಿ ಡಿಕ್ಲೇರ್‌ ಮಾಡಿದೆ. 

ಇಂಗ್ಲೆಂಡಿಗೆ 521 ರನ್‌ ಗುರಿ ನೀಡಿದೆ.ಭಾರತ 2 ವಿಕೆಟ್‌ ನಷ್ಟಕ್ಕೆ 124 ರನ್‌ ಮಾಡಿದಲ್ಲಿಂದ ಸೋಮವಾರದ ಆಟ ಆರಂಭಿಸಿತ್ತು. ಡಿಕ್ಲೇರ್‌ ಮಾಡುವಾಗ ಹಾರ್ದಿಕ್‌ ಪಾಂಡ್ಯ 52 ರನ್‌ ಸಿಡಿಸಿ ಅಜೇಯರಾಗಿದ್ದರು.  ಪಂದ್ಯವಿನ್ನೂ 2 ದಿನ ಕಾಣಲಿಕ್ಕಿರುವುದರಿಂದ ಭಾರತದ ಮುಂದೆ ಗೆಲುವಿನ ಉತ್ತಮ ಅವಕಾಶವೊಂದು ಎದುರಾಗಿದೆ ಎನ್ನಲಡ್ಡಿಯಿಲ್ಲ.

8 ರನ್‌ ಗಳಿಸಿ ಬ್ಯಾಟಿಂಗ್‌ ಕಾಯ್ದುಕೊಂಡಿದ್ದ ವಿರಾಟ್‌ ಕೊಹ್ಲಿ 103 ರನ್‌ ಬಾರಿಸಿ ಮೆರೆದರು. 33ರಲ್ಲಿದ್ದ ಚೇತೇಶ್ವರ್‌ ಪೂಜಾರ 72 ರನ್ನುಗಳ ಕೊಡುಗೆ ಸಲ್ಲಿಸಿದರು. ಇವರಿಬ್ಬರ 3ನೇ ವಿಕೆಟ್‌ ಜತೆಯಾಟದಲ್ಲಿ 113 ರನ್‌ ಒಟ್ಟುಗೂಡಿತು. 

ಕೊಹ್ಲಿ: ಸರಣಿಯಲ್ಲಿ 400 ರನ್‌
ಮೊದಲ ಇನ್ನಿಂಗ್ಸ್‌ನಲ್ಲಿ 97 ರನ್‌ ಮಾಡಿ ಔಟಾಗಿದ್ದ ವಿರಾಟ್‌ ಕೊಹ್ಲಿ ಈ ಬಾರಿ ಸೆಂಚುರಿಯನ್ನು ಮಿಸ್‌ ಮಾಡಿಕೊಳ್ಳಲಿಲ್ಲ. 191 ಎಸೆತಗಳಲ್ಲಿ 23ನೇ ಟೆಸ್ಟ್‌ ಶತಕದ ಸಂಭ್ರಮ ಆಚರಿಸಿದರು. ಇದು ಈ ಸರಣಿಯಲ್ಲಿ ಕೊಹ್ಲಿ ಹೊಡೆದ 2ನೇ ಶತಕ. 197 ಎಸೆತಗಳ ಈ ಮನಮೋಹಕ ಇನ್ನಿಂಗ್ಸ್‌ ವೇಳೆ 10 ಬೌಂಡರಿ ಸಿಡಿಯಲ್ಪಟ್ಟಿತು. ಈ ಸಾಧನೆಯ ವೇಳೆ ಕೊಹ್ಲಿ 400 ರನ್ನುಗಳ ಗಡಿಯನ್ನೂ ದಾಟಿದರು. ಇಂಗ್ಲೆಂಡ್‌ನ‌ಲ್ಲಿ ನಡೆದ ಸರಣಿಯೊಂದರಲ್ಲಿ 400 ರನ್‌ ಪೇರಿಸಿದ ಭಾರತದ ದ್ವಿತೀಯ ನಾಯಕ ಹಾಗೂ ಭಾರತದ 6ನೇ ಬ್ಯಾಟ್ಸ್‌ಮನ್‌ ಎಂಬ ಹಿರಿಮೆ ಕೊಹ್ಲಿ ಅವರದ್ದಾಗಿದೆ. ಇದಕ್ಕೂ ಮುನ್ನ ಮೊಹಮ್ಮದ್‌ ಅಜರುದ್ದೀನ್‌ 426 ರನ್‌ ಪೇರಿಸಿದ್ದರು.
ಚೇತೇಶ್ವರ್‌ ಪೂಜಾರ 208 ಎಸೆತ ಎದುರಿಸಿ 72 ರನ್‌ ಮಾಡಿದರು. ಇದರಲ್ಲಿ 9 ಬೌಂಡರಿ ಸೇರಿತ್ತು. ಇದು ಅವರ 18ನೇ ಅರ್ಧ ಶತಕ. ಮೊದಲ ಅವಧಿಯಲ್ಲಿ ಪೂಜಾರ-ಕೊಹ್ಲಿ ಜೋಡಿಯೇ ಕ್ರೀಸ್‌ ಆಕ್ರಮಿಸಿಕೊಂಡಿತು. ಇಂಗ್ಲೆಂಡಿಗೆ ಯಾವುದೇ ಯಶಸ್ಸು ಸಿಗಲಿಲ್ಲ. ಭೋಜನ ವಿರಾಮದ ವೇಳೆ ಭಾರತ 2 ವಿಕೆಟಿಗೆ 194 ರನ್‌ ಗಳಿಸಿತ್ತು.

ಎರಡನೇ ಅವಧಿಯ ಆಟದಲ್ಲಿ ಪೂಜಾರ ವಿಕೆಟ್‌ ಬಿತ್ತು. ಟೀ ವಿರಾಮದ ವೇಳೆ ಭಾರತ 3 ವಿಕೆಟ್‌ ನಷ್ಟಕ್ಕೆ 270 ರನ್‌ ಮಾಡಿತ್ತು. 2ನೇ ಹೊಸ ಚೆಂಡು ತೆಗೆದುಕೊಂಡ ಬಳಿಕ ವಿರಾಟ್‌ ಕೊಹ್ಲಿ ಮತ್ತು ರಿಷಬ್‌ ಪಂತ್‌ (1) ವಿಕೆಟ್‌ ಉರುಳಿಸುವಲ್ಲಿ ಇಂಗ್ಲೆಂಡ್‌ ಯಶಸ್ವಿಯಾಯಿತು. 2ನೇ ದಿನದ ಕೊನೆಯಲ್ಲಿ ಆರಂಭಿಕರಾದ ಕೆ.ಎಲ್‌. ರಾಹುಲ್‌ (36) ಮತ್ತು ಶಿಖರ್‌ ಧವನ್‌ (44) ವಿಕೆಟ್‌ ಉರುಳಿತ್ತು. ಭಾರತದ 329 ರನ್ನುಗಳ ಮೊದಲ ಇನ್ನಿಂಗ್ಸಿಗೆ ಉತ್ತರವಾಗಿ ಇಂಗ್ಲೆಂಡ್‌ 161ಕ್ಕೆ ಆಲೌಟ್‌ ಆಗಿತ್ತು.

ಟಾಪ್ ನ್ಯೂಸ್

Eletion: ತೀರ್ಥಹಳ್ಳಿಯಲ್ಲಿ ಪ್ರಚಾರದ ವೇಳೆ ತಮಿಳಿನಲ್ಲೆ ಮಾತನಾಡಿದ ನಟ ಶಿವರಾಜ್ ಕುಮಾರ್

Eletion: ತೀರ್ಥಹಳ್ಳಿಯಲ್ಲಿ ಪ್ರಚಾರದ ವೇಳೆ ತಮಿಳಿನಲ್ಲೆ ಮಾತನಾಡಿದ ನಟ ಶಿವರಾಜ್ ಕುಮಾರ್

Chitradurga: ಹೃದಯಾಘಾತದಿಂದ ಚುನಾವಣಾ ಕರ್ತವ್ಯದಲ್ಲಿದ್ದ ಶಿಕ್ಷಕಿ ಮೃತ್ಯು…

Chitradurga: ಚುನಾವಣಾ ಕರ್ತವ್ಯದಲ್ಲಿದ್ದಾಗಲೇ ಹೃದಯಾಘಾತಗೊಂಡು ಶಿಕ್ಷಕಿ ಮೃತ್ಯು…

Lok Sabha Polls: ಉಡುಪಿ: ಕುಟುಂಬ ಸಮೇತರಾಗಿ ಬಂದು ಮತದಾನ ಮಾಡಿದ ನಟ ರಕ್ಷಿತ್ ಶೆಟ್ಟಿ

Lok Sabha Polls: ಉಡುಪಿ: ಕುಟುಂಬ ಸಮೇತರಾಗಿ ಬಂದು ಮತದಾನ ಮಾಡಿದ ನಟ ರಕ್ಷಿತ್ ಶೆಟ್ಟಿ

Kadaba: ಬಿಳಿನೆಲೆ ಮತದಾನ ಕೇಂದ್ರದಲ್ಲಿ ಕಾಂಗ್ರೆಸ್-ಬಿಜೆಪಿ ಕಾರ್ಯಕರ್ತರ ಮಾತಿನ ಚಕಮಕಿ

Kadaba: ಬಿಳಿನೆಲೆ ಮತದಾನ ಕೇಂದ್ರದಲ್ಲಿ ಕಾಂಗ್ರೆಸ್-ಬಿಜೆಪಿ ಕಾರ್ಯಕರ್ತರ ಮಾತಿನ ಚಕಮಕಿ

EVM, VVPAT ಮತಗಳ ಹೋಲಿಕೆ- ಎಲ್ಲಾ ಅರ್ಜಿ ವಜಾಗೊಳಿಸಿದ ಸುಪ್ರೀಂ…ಆದರೆ…

EVM, VVPAT ಮತಗಳ ಹೋಲಿಕೆ- ಎಲ್ಲಾ ಅರ್ಜಿ ವಜಾಗೊಳಿಸಿದ ಸುಪ್ರೀಂಕೋರ್ಟ್…ಆದರೆ…

Belthangady: ದಿಬ್ಬಣದಲ್ಲೇ ಮತಗಟ್ಟೆಗೆ ಬಂದು ಮತ ಚಲಾಯಿಸಿದ ವಧು

Belthangady: ದಿಬ್ಬಣದಲ್ಲೇ ಮತಗಟ್ಟೆಗೆ ಬಂದು ಮತ ಚಲಾಯಿಸಿದ ವಧು

LS Polls: ಚಿಕ್ಕಮಗಳೂರು… ವಿದೇಶದಿಂದ ಬಂದು ಮತದಾನ ಮಾಡಿ ಮಾದರಿಯಾದ ದಂಪತಿ…

LS Polls: ಚಿಕ್ಕಮಗಳೂರು… ವಿದೇಶದಿಂದ ಬಂದು ಮತದಾನ ಮಾಡಿ ಮಾದರಿಯಾದ ದಂಪತಿ…


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

IPL 2024: ಗೆಲುವಿನ ವಿಶ್ವಾಸದಲ್ಲಿ ಕೆಕೆಆರ್‌

IPL 2024: ಗೆಲುವಿನ ವಿಶ್ವಾಸದಲ್ಲಿ ಕೆಕೆಆರ್‌

17

Team India: ಟಿ20 ವಿಶ್ವಕಪ್‌ ತಂಡ ರಾಹುಲ್‌ಗೆ ಚಾನ್ಸ್‌, ಹಾರ್ದಿಕ್‌ ಪಾಂಡ್ಯಗೆ ಕೊಕ್‌?

Chess: ವಿಶ್ವ ಚೆಸ್‌ ಚಾಂಪಿಯನ್‌ಶಿಪ್‌: ಆತಿಥ್ಯ ಹಕ್ಕಿಗಾಗಿ ಭಾರತ ಬಿಡ್‌

Chess: ವಿಶ್ವ ಚೆಸ್‌ ಚಾಂಪಿಯನ್‌ಶಿಪ್‌: ಆತಿಥ್ಯ ಹಕ್ಕಿಗಾಗಿ ಭಾರತ ಬಿಡ್‌

Archery World Cup: ಆರ್ಚರಿ ವಿಶ್ವಕಪ್‌ ರಿಕರ್ವ್‌ ವಿಭಾಗದಲ್ಲೂ ಭಾರತ ಫೈನಲ್‌ಗೆ

Archery World Cup: ಆರ್ಚರಿ ವಿಶ್ವಕಪ್‌ ರಿಕರ್ವ್‌ ವಿಭಾಗದಲ್ಲೂ ಭಾರತ ಫೈನಲ್‌ಗೆ

1-rerwer

IPL; ಸನ್‌ರೈಸರ್ಸ್ ಹೈದರಾಬಾದ್ ವಿರುದ್ಧ ಜಯದ ನಗು ಬೀರಿದ ಆರ್ ಸಿಬಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Eletion: ತೀರ್ಥಹಳ್ಳಿಯಲ್ಲಿ ಪ್ರಚಾರದ ವೇಳೆ ತಮಿಳಿನಲ್ಲೆ ಮಾತನಾಡಿದ ನಟ ಶಿವರಾಜ್ ಕುಮಾರ್

Eletion: ತೀರ್ಥಹಳ್ಳಿಯಲ್ಲಿ ಪ್ರಚಾರದ ವೇಳೆ ತಮಿಳಿನಲ್ಲೆ ಮಾತನಾಡಿದ ನಟ ಶಿವರಾಜ್ ಕುಮಾರ್

LS Polls: ರಾಜ್ಯದಲ್ಲಿ ಕಾಂಗ್ರೆಸ್‌ ವಿರೋಧಿ ಅಲೆ: ರಾಘವೇಂದ್ರ

LS Polls: ರಾಜ್ಯದಲ್ಲಿ ಕಾಂಗ್ರೆಸ್‌ ವಿರೋಧಿ ಅಲೆ: ರಾಘವೇಂದ್ರ

Lok Sabha Election: ಮೋದಿಗೆ ಪರ್ಯಾಯ ನಾಯಕ ಮತ್ತೊಬ್ಬರಿಲ್ಲ… ಗಾಯಿತ್ರಿ ಸಿದ್ದೇಶ್ವರ

Lok Sabha Election: ಮೋದಿಗೆ ಪರ್ಯಾಯ ನಾಯಕ ಮತ್ತೊಬ್ಬರಿಲ್ಲ… ಗಾಯಿತ್ರಿ ಸಿದ್ದೇಶ್ವರ

Chitradurga: ಹೃದಯಾಘಾತದಿಂದ ಚುನಾವಣಾ ಕರ್ತವ್ಯದಲ್ಲಿದ್ದ ಶಿಕ್ಷಕಿ ಮೃತ್ಯು…

Chitradurga: ಚುನಾವಣಾ ಕರ್ತವ್ಯದಲ್ಲಿದ್ದಾಗಲೇ ಹೃದಯಾಘಾತಗೊಂಡು ಶಿಕ್ಷಕಿ ಮೃತ್ಯು…

Lok Sabha Polls: ಉಡುಪಿ: ಕುಟುಂಬ ಸಮೇತರಾಗಿ ಬಂದು ಮತದಾನ ಮಾಡಿದ ನಟ ರಕ್ಷಿತ್ ಶೆಟ್ಟಿ

Lok Sabha Polls: ಉಡುಪಿ: ಕುಟುಂಬ ಸಮೇತರಾಗಿ ಬಂದು ಮತದಾನ ಮಾಡಿದ ನಟ ರಕ್ಷಿತ್ ಶೆಟ್ಟಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.