ಶಿರಾಡಿ, ಸಂಪಾಜೆ ಘಾಟಿ 6 ತಿಂಗಳು ಬಂದ್‌ 


Team Udayavani, Aug 22, 2018, 6:00 AM IST

19.jpg

ವಾಹನ ದಟ್ಟಣೆ ತಪ್ಪಿಸಲು ಮಂಗಳೂರಿನಿಂದ ಹೊರಡುವ ವಾಹನಗಳು ಚಾರ್ಮಾಡಿ ಮತ್ತು ಆಗುಂಬೆ ಘಾಟಿ ಮೂಲಕ ಪ್ರಯಾಣಿಸುವುದು ಸೂಕ್ತ. ಕುಂದಾಪುರ ಮತ್ತು ಉಡುಪಿಯಿಂದ ಹೊರಡುವ ವಾಹನಗಳು ಕುದುರೆಮುಖ-ಮಾಲಘಾಟ್‌ ಮಾರ್ಗ ಅಥವಾ ಬಾಳೆಬರೆ ಘಾಟಿ ಮೂಲಕ ಬೆಂಗಳೂರು ಕಡೆ ಬರುವುದು ಸೂಕ್ತ.

ಬೆಂಗಳೂರು: ರಾಜಧಾನಿ ಸೇರಿದಂತೆ ಹಳೇ ಮೈಸೂರು ಭಾಗದಿಂದ ಕರಾವಳಿಗೆ ಸಂಪರ್ಕ ಕಲ್ಪಿಸುವ ಶಿರಾಡಿ ಘಾಟಿ ಮತ್ತು ಸಂಪಾಜೆ ಘಾಟಿ ರಸ್ತೆಗಳಲ್ಲಿ ಇನ್ನೂ ಆರು ತಿಂಗಳು ವಾಹನಗಳ ಓಡಾಟ ಸಾಧ್ಯವಿಲ್ಲ. ಹೀಗಾಗಿ ಕರಾವಳಿ ಭಾಗಕ್ಕೆ ತೆರಳುವವರು ಪರ್ಯಾಯ ರಸ್ತೆಗಳನ್ನು ಅವಲಂಬಿಸುವುದು ಅನಿವಾರ್ಯವಾಗಿದೆ. ಸುದ್ದಿಗಾರರೊಂದಿಗೆ ಲೋಕೋಪಯೋಗಿ ಸಚಿವ ಎಚ್‌.ಡಿ. ರೇವಣ್ಣ ಮಾತನಾಡಿ, ಮಳೆ ಮತ್ತು ಗುಡ್ಡ ಕುಸಿತದಿಂದ ಶಿರಾಡಿಹಾಗೂ ಸಂಪಾಜೆ ಘಾಟಿ ಸಂಪೂರ್ಣ ಹಾಳಾಗಿದ್ದು, ದುರಸ್ತಿಗೆ ಕನಿಷ್ಠ ತಿಂಗಳು ಬೇಕು. ಸಂಪಾಜೆ ಘಾಟಿಯಲ್ಲಿ 32 ಕಿ.ಮೀ. ಉದ್ದದ ರಸ್ತೆ ಸಂಪೂರ್ಣ ನಾಶವಾಗಿದೆ. ರಸ್ತೆ ಸಂಚಾರಕ್ಕೆ ಯೋಗ್ಯ ಎಂದು ತಜ್ಞರು ವರದಿ ನೀಡುವವರೆಗೂ ವಾಹನ ಸಂಚಾರಕ್ಕೆ
ಅವಕಾಶ ನೀಡದಂತೆ ಸಂಬಂಧಿಸಿದ ಜಿಲ್ಲಾಧಿಕಾರಿಗಳಿಗೆ ಸೂಚನೆ ನೀಡಿದ್ದೇನೆ ಎಂದರು.

ಮಳೆ ನಿಂತ ನಂತರ ಸಂಪಾಜೆ ಘಾಟಿ ರಸ್ತೆಯನ್ನು ತಾತ್ಕಾಲಿಕವಾಗಿ ದುರಸ್ತಿಗೊಳಿಸಿ ಲಘು ವಾಹನಗಳ ಸಂಚಾರಕ್ಕೆ ಅವಕಾಶ ಕಲ್ಪಿಸಬಹುದು. ಬಸ್‌ ಸೇರಿದಂತೆ ಭಾರೀ ವಾಹನಗಳು ಓಡಾಡಲು ಸಾಧ್ಯವಿಲ್ಲ. ಆದರೆ, ಶಿರಾಡಿ ಘಾಟಿ ರಸ್ತೆ ಸಂಪೂರ್ಣವಾಗಿ ಕೊಚ್ಚಿ ಹೋಗಿದೆ. ಒಂದೆಡೆ ಗುಡ್ಡ ಕುಸಿದು ರಸ್ತೆ ಮೇಲೆ ಮಣ್ಣು ಬಿದ್ದರೆ, ಇನ್ನೊಂದೆಡೆ ರಸ್ತೆ ಕೆಳಗಿನ ಗುಡ್ಡ ಕುಸಿದು ರಸ್ತೆ ಆಳಕ್ಕೆ ಜರುಗುತ್ತಿದೆ. ಇದನ್ನು ಸರಿಪಡಿಸಬೇಕಾದರೆ ಮಂಗಳೂರು ಅಥವಾ
ಪಿರಿಯಾಪಟ್ಟಣದಿಂದ ಮಣ್ಣು ತಂದು ಹಾಕಬೇಕಾಗಿದೆ. ಹೀಗಾಗಿ ರಸ್ತೆ ದುರಸ್ತಿಗೆ ಹೆಚ್ಚು ಸಮಯ ಬೇಕಾಗುತ್ತದೆ. ಜತೆಗೆ ಸುಮಾರು 60 ಕೋಟಿ ರೂ. ವೆಚ್ಚವಾಗುತ್ತದೆ ಎಂದು ತಿಳಿಸಿದರು.

ಚಿಕ್ಕಮಗಳೂರಲ್ಲಿ ಭೂಕುಸಿತ 
ಮಂಗಳವಾರ ಕೊಪ್ಪ ತಾಲೂಕಿನ ಭೂತನಕಾಡು ಸಮೀಪದ ಮೈಸೂರು ಪ್ಲಾಂಟೇಷನ್‌ನಲ್ಲಿ ಅರ್ಧ ಎಕರೆಯಷ್ಟು ಪ್ರದೇಶದಲ್ಲಿ ಸುಮಾರು 30 ಅಡಿ ಆಳಕ್ಕೆ ಮಣ್ಣು ಕುಸಿದಿದೆ. ತಾಲೂಕಿನ ಜಾಗರ ಸಮೀಪದ ಸುಗುಡವಾನಿ ಗ್ರಾಮದಲ್ಲೂ ಗುಡ್ಡ ಕುಸಿದಿದ್ದು, ಕಾಫಿ ಗಿಡಗಳು ಹಾಗೂ ಅಡಕೆ ಮರಗಳು ನೆಲಕ್ಕುರುಳಿವೆ. ಲಕ್ಷಾಂತರ ರೂ. ಮೌಲ್ಯದ ಬೆಳೆ ನಾಶವಾಗಿದೆ. ಅಲ್ಲದೆ, ಮೂಡಿಗೆರೆ, ಶೃಂಗೇರಿ, ಕೊಪ್ಪ, ನರಸಿಂಹರಾಜಪುರ ತಾಲೂಕುಗಳಲ್ಲೂ ಭೂಕುಸಿತವಾಗಿರುವ ವರದಿಯಾಗಿದೆ. 

ಭಾರೀ ವಾಹನ ಸಂಚಾರ ನಿಷೇಧ: ನಿರಂತರ ಮಳೆ ಹಾಗೂ ಭೂ ಕುಸಿತ ಸಾಧ್ಯತೆ ಹಿನ್ನೆಲೆಯಲ್ಲಿ ಮುಂಜಾಗ್ರತಾ ಕ್ರಮವಾಗಿ ಶಿವಮೊಗ್ಗ ಜಿಲ್ಲೆಯ
ಹುಲಿಕಲ್‌ ಘಾಟಿಯಲ್ಲಿ ಭಾರೀ ವಾಹನಗಳ ಸಂಚಾರ ನಿಷೇಧಿಸಲಾಗಿದೆ. 

ಪರ್ಯಾಯ ಮಾರ್ಗ
ಬೆಂಗಳೂರು-ಹಾಸನ- ಬೇಲೂರು-ಮೂಡಿಗೆರೆ- ಚಾರ್ಮಾಡಿ-ಉಜಿರೆ-ಮಂಗಳೂರು (ಎಲ್ಲಾ ರೀತಿಯ ವಾಹನಗಳು)

ಬೆಂಗಳೂರು-ಶಿವಮೊಗ್ಗ- ತೀರ್ಥಹಳ್ಳಿ-ಆಗುಂಬೆ- ಉಡುಪಿ-ಮಂಗಳೂರು (ಮಿನಿ ಬಸ್‌ ಮತ್ತು ಅದಕ್ಕಿಂತ ಸಣ್ಣ ವಾಹನಗಳು)

ಬೆಂಗಳೂರು-ಹಾಸನ- ಬೇಲೂರು-ಮೂಡಿಗೆರೆ- ಕೊಟ್ಟಿಗೆಹಾರ-ಕಳಸ-ಕುದುರೆಮುಖ- ಮಾಲಘಾಟ್‌-ಕಾರ್ಕಳ-ಮಂಗಳೂರು ( ಎಲ್ಲಾ ರೀತಿಯ ವಾಹನಗಳು) 

ಬೆಂಗಳೂರು-ಶಿವಮೊಗ್ಗ-ಆಯ ನೂರು-ಮಾಸ್ತಿಕಟ್ಟೆ-ಬಾಳೆಬರೆ ಘಾಟ್‌-ಹೊಸಂಗಡಿ-ಸಿದ್ದಾಪುರ- ಕುಂದಾಪುರ-ಉಡುಪಿ-ಮಂಗಳೂರು

ಟಾಪ್ ನ್ಯೂಸ್

ವಿಕಸಿತ ಭಾರತದಂತಹ ಬಲಾಢ್ಯ ಕಲ್ಪನೆ ಕಾಂಗ್ರೆಸ್ ಇನ್ನೆಷ್ಟು ವರ್ಷ ಆಳ್ವಿಕೆ ಮಾಡಿದರೂ ಬಾರದು

ವಿಕಸಿತ ಭಾರತದಂತ ಬಲಾಢ್ಯ ಕಲ್ಪನೆ ಕಾಂಗ್ರೆಸ್ ಎಷ್ಟು ವರ್ಷ ಆಳ್ವಿಕೆ ಮಾಡಿದರೂ ಸಾಧ್ಯವಾಗದು

it

Congress ಬಳಿಕ ಸಿಪಿಐಗೂ 11 ಕೋಟಿ ರೂ.ಬಾಕಿಗಾಗಿ ಐಟಿ ನೋಟಿಸ್

ಸಿರಿಯಾದ ಮೇಲೆ ಇಸ್ರೇಲ್ ವೈಮಾನಿಕ ದಾಳಿ… 5 ಹಿಜ್ಬುಲ್ ಸದಸ್ಯರು ಸೇರಿ 38 ಮಂದಿ ಹತ

ಸಿರಿಯಾದ ಮೇಲೆ ಇಸ್ರೇಲ್ ವೈಮಾನಿಕ ದಾಳಿ… 5 ಹಿಜ್ಬುಲ್ ಸದಸ್ಯರು ಸೇರಿ 38 ಮಂದಿ ಹತ

20-

Crime: ಗುದದ್ವಾರಕ್ಕೆ ಗಾಳಿ: ಸ್ನೇಹಿತನ ದುರ್ಮರಣ: ಕೃತ್ಯವೆಸಗಿದಾತನ ಬಂಧನ

Bidar; The man jumps into the water tank

Bidar; ಪತ್ನಿಯ ಅನೈತಿಕ ಸಂಬಂಧಕ್ಕೆ ಮನನೊಂದು ನೀರಿನ ಟ್ಯಾಂಕ್ ಗೆ ಬಿದ್ದು ಪತಿ ಆತ್ಮಹತ್ಯೆ

19-gobi

Gobi Manchurian ಬ್ಯಾನ್‌ ಎಫೆಕ್ಟ್: ಚಾಟ್ಸ್‌ ಮಾರಾಟ ಕುಸಿತ

ಡೀಸೆಲ್ ಇಲ್ಲದೆ ನಿಂತ ವಾಹನ… ಕಸವನ್ನು ಹೆಗಲ ಮೇಲೆ ಹೊತ್ತು ವಿಲೇವಾರಿ ಮಾಡಿದ ಪೌರಕಾರ್ಮಿಕ

ಡೀಸೆಲ್ ಇಲ್ಲದೆ ನಿಂತ ವಾಹನ… ಕಸವನ್ನು ಹೆಗಲ ಮೇಲೆ ಹೊತ್ತು ವಿಲೇವಾರಿ ಮಾಡಿದ ಪೌರಕಾರ್ಮಿಕ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Kohli IPL 2024

IPL; ಇಂದು ಚಿನ್ನಸ್ವಾಮಿಯಲ್ಲಿ ಆರ್‌ಸಿಬಿ ಬಲೆಗೆ ಬೀಳುತ್ತಾ ಕೋಲ್ಕತಾ?

1-qeqewqeqwe

IPL ಉದ್ಘಾಟನ ಸಮಾರಂಭ ವೀಕ್ಷಣೆ: ಹೊಸ ದಾಖಲೆ

1-kkr

Kolkata Raiders ಕೋಚ್‌ ಬಗ್ಗೆ ಆಟಗಾರ ಡೇವಿಡ್‌ ವೀಸ್‌ ಆರೋಪ

1-addasd

Mumbai Indians: ಸೂರ್ಯಕುಮಾರ್‌ ಶೀಘ್ರ ಚೇತರಿಕೆ ಸಾಧ್ಯತೆ

1-eewqeeeqwewqewq

Australia; ಕೇಂದ್ರೀಯ ಗುತ್ತಿಗೆ ಪಟ್ಟಿ: ವಾರ್ನರ್‌, ಸ್ಟೋಯಿನಿಸ್‌, ಅಗರ್‌ ಹೊರಕ್ಕೆ

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

ವಿಕಸಿತ ಭಾರತದಂತಹ ಬಲಾಢ್ಯ ಕಲ್ಪನೆ ಕಾಂಗ್ರೆಸ್ ಇನ್ನೆಷ್ಟು ವರ್ಷ ಆಳ್ವಿಕೆ ಮಾಡಿದರೂ ಬಾರದು

ವಿಕಸಿತ ಭಾರತದಂತ ಬಲಾಢ್ಯ ಕಲ್ಪನೆ ಕಾಂಗ್ರೆಸ್ ಎಷ್ಟು ವರ್ಷ ಆಳ್ವಿಕೆ ಮಾಡಿದರೂ ಸಾಧ್ಯವಾಗದು

it

Congress ಬಳಿಕ ಸಿಪಿಐಗೂ 11 ಕೋಟಿ ರೂ.ಬಾಕಿಗಾಗಿ ಐಟಿ ನೋಟಿಸ್

Belagavi; ಬಸವಜಯ ಮೃತ್ಯುಂಜಯ ಸ್ವಾಮೀಜಿ ಭೆಟಿಯಾದ ಜಗದೀಶ್ ಶೆಟ್ಟರ್

Belagavi; ಬಸವಜಯ ಮೃತ್ಯುಂಜಯ ಸ್ವಾಮೀಜಿ ಭೇಟಿಯಾದ ಜಗದೀಶ್ ಶೆಟ್ಟರ್

ಸಿರಿಯಾದ ಮೇಲೆ ಇಸ್ರೇಲ್ ವೈಮಾನಿಕ ದಾಳಿ… 5 ಹಿಜ್ಬುಲ್ ಸದಸ್ಯರು ಸೇರಿ 38 ಮಂದಿ ಹತ

ಸಿರಿಯಾದ ಮೇಲೆ ಇಸ್ರೇಲ್ ವೈಮಾನಿಕ ದಾಳಿ… 5 ಹಿಜ್ಬುಲ್ ಸದಸ್ಯರು ಸೇರಿ 38 ಮಂದಿ ಹತ

20-

Crime: ಗುದದ್ವಾರಕ್ಕೆ ಗಾಳಿ: ಸ್ನೇಹಿತನ ದುರ್ಮರಣ: ಕೃತ್ಯವೆಸಗಿದಾತನ ಬಂಧನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.