ಚಿನ್ನದ ಕುವರ: ನೀರಜ್‌ ಚೋಪ್ರಾ


Team Udayavani, Aug 28, 2018, 6:00 AM IST

40.jpg

ಜಕಾರ್ತಾ: ಭಾರತದ ಯುವ ಜಾವೆಲಿನ್‌ ಎಸೆತಗಾರ, 20ರ ಹರೆಯದ ನೀರಜ್‌ ಚೋಪ್ರಾ ಮುಟ್ಟಿದ್ದೆಲ್ಲ ಚಿನ್ನವಾಗುತ್ತಿದೆ. ತಮ್ಮ ಗೆಲುವಿನ ಓಟವನ್ನು ಏಶ್ಯಾಡ್‌ನ‌ಲ್ಲೂ ಮುಂದುವರಿಸಿದ ಅವರು ಬಂಗಾರದ ಪದಕ ಗೆದ್ದು ಇತಿಹಾಸ ನಿರ್ಮಿಸಿದ್ದಾರೆ. ಸೋಮವಾರ ನಡೆದ ಫೈನಲ್‌ನಲ್ಲಿ ಗರಿಷ್ಠ 88.06 ಮೀ. ದೂರದ ಜೀವನಶ್ರೇಷ್ಠ ಸಾಧನೆಯೊಂದಿಗೆ ನೀರಜ್‌ ಮೆರೆದಾಡಿದರು.

ಇದು ಏಶ್ಯನ್‌ ಗೇಮ್ಸ್‌ ಜಾವೆಲಿನ್‌ನಲ್ಲಿ ಭಾರತಕ್ಕೆ ಒಲಿದ ಮೊದಲ ಚಿನ್ನದ ಪದಕ. ಹಾಗೆಯೇ ಏಶ್ಯಾಡ್‌ ಜಾವೆಲಿನ್‌ ಎಸೆತದಲ್ಲಿ ಭಾರತಕ್ಕೆ ಲಭಿಸಿದ ಕೇವಲ 2ನೇ ಪದಕವೂ ಆಗಿದೆ. ಇದಕ್ಕೂ ಮುನ್ನ 1982ರ ಹೊಸದಿಲ್ಲಿ ಏಶ್ಯಾಡ್‌ನ‌ಲ್ಲಿ ಗುರುತೇಜ್‌ ಸಿಂಗ್‌ ಕಂಚಿನ ಪದಕ ಜಯಿಸಿದ್ದರು.

ಒಟ್ಟು 6 ಸುತ್ತುಗಳ ಸ್ಪರ್ಧೆಯ 3ನೇ ಸುತ್ತಿನಲ್ಲಿ ನೀರಜ್‌ 88.06 ಮೀ. ದೂರ ಎಸೆದು ಬಂಗಾರಕ್ಕೆ ಮುತ್ತಿಕ್ಕಿದರು. ಮೊದಲ ಪ್ರಯತ್ನದಲ್ಲಿ 83.46 ಮೀ., 4ನೇ ಪ್ರಯತ್ನದಲ್ಲಿ 83.25 ಮೀ. ಹಾಗೂ 5ನೇ ಪ್ರಯತ್ನದಲ್ಲಿ 86.36 ಮೀ. ದೂರಕ್ಕೆ ಜಾವೆಲಿನ್‌ ಎಸೆದರು. ಅವರ 2ನೇ ಹಾಗೂ 6ನೇ ಪ್ರಯತ್ನ “ಫೌಲ್‌’ ಆಯಿತು. ಚೀನದ ಲಿಯು ಕ್ವಿಜೆನ್‌ ಬೆಳ್ಳಿ ಪದಕ (82.22 ಮೀ.) ಹಾಗೂ ಪಾಕಿಸ್ಥಾನದ ಅರ್ಷದ್‌ ನದೀಮ್‌ ಕಂಚಿನ ಪದಕ (80.75 ಮೀ.) ಗೆದ್ದರು. 

ಜೀವನಶ್ರೇಷ್ಠ ಸಾಧನೆ
ಇದು ನೀರಜ್‌ ಚೋಪ್ರಾ ಅವರ ಅತ್ಯುತ್ತಮ ಸಾಧನೆಯಾಗಿದೆ. ಇದಕ್ಕೂ ಮುನ್ನ ದೋಹಾ ಕೂಟದಲ್ಲಿ 87.43 ಮೀ. ದೂರ ಎಸೆದು ನೂತನ ರಾಷ್ಟ್ರೀಯ ದಾಖಲೆ ನಿರ್ಮಿಸಿದ್ದರು. ಇದು ವಿಶ್ವ ಮಟ್ಟದಲ್ಲಿ ನೀರಜ್‌ ಚೋಪ್ರಾ ಪಾಲಾದ 5ನೇ ಚಿನ್ನದ ಪದಕ. ಇದಕ್ಕೂ ಮುನ್ನ ಅವರು 2016ರ ವಿಶ್ವ ಜೂನಿಯರ್‌ ಚಾಂಪಿಯನ್‌ಶಿಪ್‌, 2017ರ ಏಶ್ಯನ್‌ ಚಾಂಪಿಯನ್‌ಶಿಪ್‌, 2016ರ ಸೌತ್‌ ಏಶ್ಯನ್‌ ಗೇಮ್ಸ್‌ ಹಾಗೂ ಕಳೆದ ಗೋಲ್ಡ್‌ಕೋಸ್ಟ್‌ ಕಾಮನ್ವೆಲ್ತ್‌ ಗೇಮ್ಸ್‌ನಲ್ಲೂ ಬಂಗಾರದಿಂದ ಸಿಂಗಾರಗೊಂಡಿದ್ದರು.

ಈ ಸ್ಪರ್ಧೆಯಲ್ಲಿ ಚೈನೀಸ್‌ ತೈಪೆಯ ಚಾವೊ ಸುನ್‌ ಚೆಂಗ್‌ ಭಾರತೀಯನಿಗೆ ಪ್ರಬಲ ಸ್ಪರ್ಧೆ ಒಡ್ಡಬಹುದೆಂಬ ನಿರೀಕ್ಷೆ ಇತ್ತು. ಕಳೆದ ವರ್ಷ ಅವರು 91.36 ಮೀ. ದೂರ ಎಸೆದು ದಾಖಲೆ ನಿರ್ಮಿಸಿದ್ದರು. ಆದರೆ ಇಲ್ಲಿ ಅವರು ಕೇವಲ 79.81 ಮೀ. ದೂರ ಎಸೆದು 5ನೇ ಸ್ಥಾನಕ್ಕೆ ಕುಸಿದರು.
ಹರ್ಯಾಣದ ಪಾಣಿಪತ್‌ನ ಖಂದ್ರಾ ಗ್ರಾಮದ ಈ ಜಾವೆಲಿನ್‌ ತ್ರೋವರ್‌ ಸಾಧನೆಗೆ ಭಾರತವೇ ಹೆಮ್ಮೆಪಡುತ್ತಿದೆ.

ಸಾಧನೆಗೆ ಕೊನೆ ಇಲ್ಲ!
ವಿಶ್ವ ಜೂನಿಯರ್‌ ಮಟ್ಟದಲ್ಲೂ ದಾಖಲೆ ಹೊಂದಿರುವ ನೀರಜ್‌ ಚೋಪ್ರಾ (86.48 ಮೀ.) ಪ್ರಸಕ್ತ ಋತುವಿನಲ್ಲಿ ಪ್ರಚಂಡ ಫಾರ್ಮ್ನೊಂದಿಗೆ ಭಾರತದ ಕೀರ್ತಿ ಪತಾಕೆಯನ್ನು ಮುಗಿಲೆತ್ತರದಲ್ಲಿ ಹಾರಿಸುತ್ತಿದ್ದಾರೆ. ಕಳೆದ ಮಾರ್ಚ್‌ನಲ್ಲಿ 85.94 ಮೀ. ದೂರದ ಸಾಧನೆ ದಾಖಲಿಸಿ ಫೆಡರೇಶನ್‌ ಕಪ್‌ ಜಯಿಸಿದ್ದ ನೀರಜ್‌, ದೋಹಾದಲ್ಲಿ 87.43 ಮೀ., ಗೋಲ್ಡ್‌ಕೋಸ್ಟ್‌ ಗೇಮ್ಸ್‌ನಲ್ಲಿ 86.47 ಮೀ., ಫ್ರಾನ್ಸ್‌ ಮತ್ತು ಫಿನ್‌ಲ್ಯಾಂಡ್ ನ‌ಲ್ಲಿ ಕ್ರಮವಾಗಿ 85.17 ಮೀ. ಹಾಗೂ 85.69 ಮೀ. ದೂರದ ಸಾಧನೆಗೈದಿದ್ದರು. ಅರ್ಥಾತ್‌, ವಿಶ್ವ ಮಟ್ಟದ ಸ್ಪರ್ಧೆಗಳಲ್ಲಿ ನೀರಜ್‌ ಚೋಪ್ರಾ ಈವರೆಗೆ ವೈಫ‌ಲ್ಯ ಕಂಡದ್ದೇ ಇಲ್ಲ. ಎಲ್ಲದರಲ್ಲೂ ಚಿನ್ನ ಗೆದ್ದು ವಿಜೃಂಭಿಸಿದ್ದಾರೆ.

ಟಾಪ್ ನ್ಯೂಸ್

Mangalore University; ಪದವಿಗೆ ಸೇರಲು 4 ತಿಂಗಳು ಕಾಯಬೇಕು!

Mangalore University; ಪದವಿಗೆ ಸೇರಲು 4 ತಿಂಗಳು ಕಾಯಬೇಕು!

Andhra ಟಿಡಿಪಿ ಅಭ್ಯರ್ಥಿ ಆಸ್ತಿ ಬರೋಬ್ಬರಿ 5,785 ಕೋ.ರೂ.!

Andhra ಟಿಡಿಪಿ ಅಭ್ಯರ್ಥಿ ಆಸ್ತಿ ಬರೋಬ್ಬರಿ 5,785 ಕೋ.ರೂ.!

ಕಾಂಗ್ರೆಸ್‌ ವಿರುದ್ಧ ಮೋದಿ ಈಗ ದೇಶ ವಿಭಜನೆ ಅಸ್ತ್ರ ಪ್ರಯೋಗ

Loksabha election; ಕಾಂಗ್ರೆಸ್‌ ವಿರುದ್ಧ ಮೋದಿ ಈಗ ದೇಶ ವಿಭಜನೆ ಅಸ್ತ್ರ ಪ್ರಯೋಗ

Temperature ರಾಜ್ಯದ 10 ಜಿಲ್ಲೆಗಳಲ್ಲಿ ಬೀಸಲಿದೆ ಬಿಸಿಗಾಳಿ

Temperature ರಾಜ್ಯದ 10 ಜಿಲ್ಲೆಗಳಲ್ಲಿ ಬೀಸಲಿದೆ ಬಿಸಿಗಾಳಿ

6-court

Mangaluru: ಬಾಲಕಿಯನ್ನು ಅಪಹರಿಸಿ ಅತ್ಯಾಚಾರ; ಅಪರಾಧಿಗೆ 10 ವರ್ಷ ಕಠಿನ ಕಾರಾಗೃಹ ಶಿಕ್ಷೆ

ಸಂಪತ್ತು ಹಂಚಿಕೆ ಬಗ್ಗೆ ನಾವೆಲ್ಲಿ ಹೇಳಿದ್ದೇವೆ: ಖರ್ಗೆ ಪ್ರಶ್ನೆ

ಸಂಪತ್ತು ಹಂಚಿಕೆ ಬಗ್ಗೆ ನಾವೆಲ್ಲಿ ಹೇಳಿದ್ದೇವೆ: ಖರ್ಗೆ ಪ್ರಶ್ನೆ

ಉಡುಪಿ-ಚಿಕ್ಕಮಗಳೂರು ಲೋಕಸಭಾ ಕ್ಷೇತ್ರ: 405 ಸೂಕ್ಷ್ಮ ಮತಗಟ್ಟೆ : ಕೆ. ವಿದ್ಯಾಕುಮಾರಿ

ಉಡುಪಿ-ಚಿಕ್ಕಮಗಳೂರು ಲೋಕಸಭಾ ಕ್ಷೇತ್ರ: 405 ಸೂಕ್ಷ್ಮ ಮತಗಟ್ಟೆ : ಕೆ. ವಿದ್ಯಾಕುಮಾರಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

CSKvsLSG: ಶತಕ ಸಿಡಿಸಿದ ಚೆನ್ನೈನ ಮೊದಲ ನಾಯಕ ಗಾಯಕ್ವಾಡ್‌

CSKvsLSG: ಶತಕ ಸಿಡಿಸಿದ ಚೆನ್ನೈನ ಮೊದಲ ನಾಯಕ ಗಾಯಕ್ವಾಡ್‌

Rajastan Royals; ಪ್ಲೇ ಆಫ್ ಮೊದಲ ಗುರಿ: ಸಂಜು ಸ್ಯಾಮ್ಸನ್‌

Rajastan Royals; ಪ್ಲೇ ಆಫ್ ಮೊದಲ ಗುರಿ: ಸಂಜು ಸ್ಯಾಮ್ಸನ್‌

IPL 2024; ಫಿಟ್‌ ಆಗಿದ್ದೇ ನಿನ್ನೆ: ಸಂದೀಪ್‌ ಶರ್ಮ

Northamptonshire: ಕೌಂಟಿ ಕ್ರಿಕೆಟ್‌ನಲ್ಲಿ ಕರುಣ್‌ ನಾಯರ್‌ ದ್ವಿಶತಕ

Northamptonshire: ಕೌಂಟಿ ಕ್ರಿಕೆಟ್‌ನಲ್ಲಿ ಕರುಣ್‌ ನಾಯರ್‌ ದ್ವಿಶತಕ

Pakistan cricket team military training wasted

PCB; ಪಾಕ್‌ ಕ್ರಿಕೆಟ್‌ ತಂಡದ ಸೇನಾ ತರಬೇತಿ ವ್ಯರ್ಥ: ಹಾಸ್ಯ

MUST WATCH

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

ಹೊಸ ಸೇರ್ಪಡೆ

Mangalore University; ಪದವಿಗೆ ಸೇರಲು 4 ತಿಂಗಳು ಕಾಯಬೇಕು!

Mangalore University; ಪದವಿಗೆ ಸೇರಲು 4 ತಿಂಗಳು ಕಾಯಬೇಕು!

Dina Bhavishya

Daily Horoscope; ಉದ್ಯೋಗಸ್ಥರಿಗೆ ಹಿತಶತ್ರುಗಳ ಕಾಟ.ಶನಿ ಅನುಗ್ರಹ ಪ್ರಾಪ್ತಿಯ ಸಮಯ

Andhra ಟಿಡಿಪಿ ಅಭ್ಯರ್ಥಿ ಆಸ್ತಿ ಬರೋಬ್ಬರಿ 5,785 ಕೋ.ರೂ.!

Andhra ಟಿಡಿಪಿ ಅಭ್ಯರ್ಥಿ ಆಸ್ತಿ ಬರೋಬ್ಬರಿ 5,785 ಕೋ.ರೂ.!

ಕಾಂಗ್ರೆಸ್‌ ವಿರುದ್ಧ ಮೋದಿ ಈಗ ದೇಶ ವಿಭಜನೆ ಅಸ್ತ್ರ ಪ್ರಯೋಗ

Loksabha election; ಕಾಂಗ್ರೆಸ್‌ ವಿರುದ್ಧ ಮೋದಿ ಈಗ ದೇಶ ವಿಭಜನೆ ಅಸ್ತ್ರ ಪ್ರಯೋಗ

Temperature ರಾಜ್ಯದ 10 ಜಿಲ್ಲೆಗಳಲ್ಲಿ ಬೀಸಲಿದೆ ಬಿಸಿಗಾಳಿ

Temperature ರಾಜ್ಯದ 10 ಜಿಲ್ಲೆಗಳಲ್ಲಿ ಬೀಸಲಿದೆ ಬಿಸಿಗಾಳಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.