ಸಿಂಗಾಪುರದಿಂದ ತಷ್ಮಾಗೆ ವಸತಿ ನೆರವು
Team Udayavani, Sep 5, 2018, 6:00 AM IST
ಬೆಂಗಳೂರು: ಕೊಡಗಿನಲ್ಲಿ ಉಂಟಾಗಿದ್ದ ಗುಡ್ಡ ಕುಸಿತದಿಂದ ಮನೆ, ಆಸ್ತಿ-ಪಾಸ್ತಿ, ಕ್ರೀಡಾ ದಾಖಲೆ ಕಳೆದುಕೊಂಡಿದ್ದ ತ್ರೋಬಾಲ್ ಆಟಗಾರ್ತಿ 23 ವರ್ಷದ ತಷ್ಮಾ ಮುತ್ತಪ್ಪ ಅವರಿಗೆ ವಿದೇಶದಿಂದಲೂ ನೆರವಿನ ಮಹಾಪೂರವೇ ಹರಿದು ಬರುತ್ತಿದೆ.
ಈ ಕುರಿತಂತೆ ಉದಯವಾಣಿ ಆ. 29ರಂದು “ತ್ರೋಬಾಲ್ ಆಟಗಾರ್ತಿ ಬೀದಿಪಾಲು’ ಎಂಬ ಶೀರ್ಷಿಕೆಯಡಿ ಮುಖ ಪುಟದಲ್ಲಿ ವಿಶೇಷ ವರದಿ ಪ್ರಕಟಿಸಿತ್ತು. ಈ ಬೆನ್ನಲ್ಲೇ ರಾಜ್ಯ ಮಾತ್ರವಲ್ಲದೇ ಸಿಂಗಾಪುರ, ದುಬಾೖನಲ್ಲಿ ನೆಲೆಸಿರುವ ರಾಜ್ಯದ ಜನತೆ ಕೂಡ ಸಹಾಯ ಮಾಡಿದ್ದಾರೆ. ಸಿಂಗಾಪುರದಲ್ಲಿರುವ ಕೊಡವ ಕುಟುಂಬ ಹಾಗೂ ಆರ್ಟ್ ಆಫ್ ಲಿವಿಂಗ್ ಸಂಸ್ಥೆ ಜಂಟಿಯಾಗಿ ಮಡಿಕೇರಿಯ ಫೀಲ್ಡ್ ಮಾರ್ಷಲ್ ಕಾರಿಯಪ್ಪ (ಎಫ್ಎಂಸಿ) ಕಾಲೇಜು ರಸ್ತೆಯ ಬಳಿ ಬಾಡಿಗೆ ಮನೆಯೊಂದನ್ನು ಹುಡುಕಿ ತಷ್ಮಾಗೆ ನೀಡಿದೆ. ಇದಕ್ಕೆ ಬೇಕಿದ್ದ ಮುಂಗಡ ಹಣ 50 ಸಾವಿರ ರೂ.ವನ್ನು ಈಗಾಗಲೇ ಪಾವತಿ ಮಾಡಲಾಗಿದೆ. ಮನೆಯ ತಿಂಗಳ 10 ಸಾವಿರ ರೂ. ಬಾಡಿಗೆಯನ್ನು ಕೊಡಲು ಇನ್ನೊಬ್ಬರು ಒಪ್ಪಿದ್ದಾರೆ.
ಸೋಮವಾರ ನಿರಾಶ್ರಿತ ಕೇಂದ್ರಕ್ಕೆ ವಿದಾಯ ಹೇಳಿದ್ದೇನೆ. ಸಿಂಗಾಪುರದ ದಾನಿಗಳು ನೀಡಿರುವ ಬಾಡಿಗೆ ಮನೆಗೆ ಅಪ್ಪ-ಅಮ್ಮನ ಜತೆಗೆ ಬಂದಿದ್ದೇನೆ. ಉದಯವಾಣಿ ಬಳಗಕ್ಕೆ ಜೀವನದುದ್ದಕ್ಕೂ ಆಭಾರಿಯಾಗಿದ್ದೇನೆ.
– ತಷ್ಮಾ, ತ್ರೋಬಾಲ್ ಆಟಗಾರ್ತಿ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Patna: ಪಾಟ್ನಾದಲ್ಲಿ ನಿತೀಶ್ ಕುಮಾರ್ ಪಕ್ಷದ ನಾಯಕನ ಗುಂಡಿಕ್ಕಿ ಹತ್ಯೆ… ಆರೋಪಿಗಳು ಪರಾರಿ
Ramakrishna Mission: ರಾಮಕೃಷ್ಣ ಮಠ, ಮಿಷನ್ನ ಅಧ್ಯಕ್ಷರಾಗಿ ಕನ್ನಡಿಗ ಸ್ವಾಮೀಜಿ ಆಯ್ಕೆ
Sam Pitroda: ಪಿತ್ರೋಡಾ ಹೇಳಿಕೆ, ನಮ್ಮ ಅಭಿಪ್ರಾಯ ಅಲ್ಲ: ಕಾಂಗ್ರೆಸ್
Lok Sabha Election: ಸೀನಿಯರ್ ಖೂಬಾಗೆ ಜ್ಯೂನಿಯರ್ ಖಂಡ್ರೆ ಸವಾಲು
Vote: ಉದಾಸೀನ ಮಾಡದಿರಿ, ತಪ್ಪದೇ ಮತ ಹಾಕಿ…