ಫೆಡರರ್‌, ಶರಪೋವಾ ಪತನ


Team Udayavani, Sep 5, 2018, 6:00 AM IST

37.jpg

ನ್ಯೂಯಾರ್ಕ್‌: ಐದು ಬಾರಿಯ ಚಾಂಪಿಯನ್‌ ಸ್ವಿಸ್‌ನ ರೋಜರ್‌ ಫೆಡರರ್‌ ಮತ್ತು ರಶ್ಯದ ಮರಿಯಾ ಶರಪೋವಾ ಅವರು ಯುಎಸ್‌ ಓಪನ್‌ ಗ್ರ್ಯಾನ್‌ ಸ್ಲಾಮ್‌ ಕೂಟದ ನಾಲ್ಕನೇ ಸುತ್ತಿನಲ್ಲಿ ಆಘಾತಕಾರಿ ಸೋಲನ್ನು ಕಂಡಿದ್ದಾರೆ. ಗ್ರ್ಯಾನ್‌ ಸ್ಲಾಮ್‌ ಕೂಟದ ನಾಲ್ಕನೇ ಸುತ್ತಿನಲ್ಲಿ ಇದೇ ಮೊದಲ ಬಾರಿ ಆಡಿದ ಆಸ್ಟ್ರೇಲಿಯದ ಜಾನ್‌ ಮಿಲ್ಮನ್‌ ಅವರು 3-6, 7-5, 7-6 (9-7), 7-6 (7-3) ಸೆಟ್‌ಗಳಿಂದ ಫೆಡರರ್‌ಗೆ ಆಘಾತ ನೀಡಿದರು. ಇದರಿಂದಾಗಿ ಎರಡು ಬಾರಿಯ ವಿಜೇತ ನೊವಾಕ್‌ ಜೊಕೋವಿಕ್‌ ಅವರು ಕ್ವಾರ್ಟರ್‌ಫೈನಲ್‌ನಲ್ಲಿ ಫೆಡರರ್‌ ಅವರನ್ನು ಎದುರಿಸುವುದು ತಪ್ಪಿದೆ. ಎರಡನೇ ಮತ್ತು ಮೂರನೇ ಸೆಟ್‌ನಲ್ಲಿ ಸೆಟ್‌ ಪಾಯಿಂಟ್‌ ಪಡೆದಿದ್ದ ಫೆಡರರ್‌ ತನ್ನದೇ ತಪ್ಪಿನಿಂದಾಗಿ ಪಂದ್ಯವನ್ನು ಕಳೆದುಕೊಂಡರು. ಪಂದ್ಯದಲ್ಲಿ 77 ಅನಗತ್ಯ ತಪ್ಪು ಮಾಡಿದ ಫೆಡರರ್‌ ಅವರು ಮಿಲ್ಮನ್‌ ಅವರ ಮನಮೋಹಕ ಆಟದೆದುರು ಮಂಕಾದರು. ಫೆಡರರ್‌ 2013ರ ಬಳಿಕ ಇದೇ ಮೊದಲ ಸಲ ಬೇಗನೇ ಕೂಟದಿಂದ ನಿರ್ಗಮಿಸಿದ್ದಾರೆ. 2013ರಲ್ಲಿಯೂ ಅವರು ನಾಲ್ಕನೇ ಸುತ್ತಿನಲ್ಲಿ ನೇರ ಸೆಟ್‌ಗಳಿಂದ ಟಾಮಿ ರಾಬ್ರೆಡೊ ಅವರಿಗೆ ಶರಣಾಗಿದ್ದರು. 

ನನಗೆ ನಂಬಲಿಕ್ಕೆ ಸಾಧ್ಯವಾಗುತ್ತಿಲ್ಲ ಎಂದು 29ರ ಹರೆಯದ ಮಿಲ್ಮನ್‌ ಪ್ರತಿಕ್ರಿಯೆ ನೀಡಿದರು. ನನಗೆ ರೋಜರ್‌ ಅವರ ಬಗ್ಗೆ ಬಹಳ ಗೌರವವಿದೆ. ಅವರು ಟೆನಿಸ್‌ಗೆ ಸರ್ವಸ್ವವನ್ನು ಕೊಟ್ಟಿದ್ದಾರೆ. ಅವರು ನನ್ನ ಪಾಲಿನ ಹೀರೋ ಎಂದು ಮಿಲ್ಮನ್‌ ತಿಳಿಸಿದರು. ಅವರಿಂದು ಖಂಡಿತವಾಗಿಯೂ ಶ್ರೇಷ್ಠ ನಿರ್ವಹಣೆ ನೀಡಿಲ್ಲ. ಆದರೆ ಅದನ್ನು ನಾನು ಪಡೆದುಕೊಂಡೆ ಎಂದರು ಮಿಲ್ಮನ್‌.

ನವಾರೊ ಸಂಭ್ರಮ
ಸ್ಪೇನ್‌ನ ಬರ್ತ್‌ಡೆ ಹುಡುಗಿ ಕಾರ್ಲಾ ಸೂರೆಜ್‌ ನವಾರೊ ಅವರು ನೇರ ಸೆಟ್‌ಗಳಿಂದ 2006ರ ಚಾಂಪಿಯನ್‌ ಮರಿಯಾ ಶರಪೋವಾ ಅವರನ್ನು ಉರುಳಿಸಿದರು. ಶರಪೋವಾ 2012ರ ಬಳಿಕ ಇದೇ ಮೊದಲ ಸಲ ಇಲ್ಲಿ ಕ್ವಾರ್ಟರ್‌ಫೈನಲ್‌ ತಲುಪುವ ನಿರೀಕ್ಷೆ ಇಟ್ಟುಕೊಂಡಿದ್ದರು. ಆದರೆ 4-6, 3-6 ಸೆಟ್‌ಗಳ ಸೋಲಿನಿಂದ ತೀವ್ರ ಆಘಾತಕ್ಕೆ ಒಳಗಾದರು. ಹೊನಲು ಬೆಳಕಿನಲ್ಲಿ ಆಡಿದ 23 ಪಂದ್ಯಗಳಲ್ಲಿ ಗೆಲುವು ಸಾಧಿಸಿದ ಸಾಧನೆಗೈದಿದ್ದ ಶರಪೋವಾ ಮೊದಲ ಬಾರಿ ಸೋತರು. ಭರ್ಜರಿ ಗೆಲುವಿನ ಮೂಲಕ ನವಾರೊ 30ನೇ ಹುಟ್ಟುಹಬ್ಬವನ್ನು ಆಚರಿಸಿದರು. ಅವರು 2013ರಲ್ಲಿ ಕ್ವಾರ್ಟರ್‌ಫೈನಲ್‌ ತಲುಪಿದ್ದರು.

ಕ್ವಾರ್ಟರ್‌ಫೈನಲ್‌ನಲ್ಲಿ ನವಾರೊ ಅವರು 2017ರ ರನ್ನರ್‌ ಅಪ್‌ ಮ್ಯಾಡಿಸನ್‌ ಕೀಸ್‌ ಅವರನ್ನು ಎದುರಿಸಲಿದ್ದಾರೆ. ಮ್ಯಾಡಿಸನ್‌ ಅಮೆರಿಕದವರಾದ ಕಾರಣ ಪ್ರೇಕ್ಷಕರು ಅವರಿಗೆ ಪೂರ್ಣ ಬೆಂಬಲ ನೀಡಲಿದ್ದಾರೆ. ನಾನು ಕೂಡ ಆಕೆಯ ಜತೆ ಆಡಿದ್ದೇನೆ. ಅವರ ಸರ್ವ್‌ ಬಲಶಾಲಿಯಾಗಿದೆ ಎಂದು ನವಾರೊ ಹೇಳಿದರು. ಮ್ಯಾಡಿಸನ್‌ ಕೀಸ್‌ ಅವರು ಇನ್ನೊಂದು ಪಂದ್ಯದಲ್ಲಿ ಡೊಮಿನಿಕಾ ಸಿಬುಲ್ಕೋವಾ ಅವರನ್ನು 6-1, 6-3 ಸೆಟ್‌ಗಳಿಂದ ಸೋಲಿಸಿ ಕ್ವಾರ್ಟರ್‌ಫೈನಲ್‌ ತಲುಪಿದರು.

ಟಾಪ್ ನ್ಯೂಸ್

1-wqewq-eqw

Modi ಕೈ ಬಲಪಡಿಸಲು, ದ.ಕ. ಸಮಗ್ರ ಸುಧಾರಣೆಗಾಗಿ ಬಿಜೆಪಿಗೆ ಮತ ನೀಡಿ: ಚೌಟ

1-asasas

Naxal ಬಾಧಿತ ಮತಗಟ್ಟೆಗಳ ಭದ್ರತೆಗೆ ಹೆಚ್ಚುವರಿ ಆದ್ಯತೆ: ಮುಲ್ಲೈ ಮುಗಿಲನ್‌

D. K. Shivakumar: ಡೆತ್‌, ಬರ್ತ್‌ ಯಾವ ಟ್ಯಾಕ್ಸೂ ಇಲ್ಲ; ಡಿಕೆಶಿ

D. K. Shivakumar: ಡೆತ್‌, ಬರ್ತ್‌ ಯಾವ ಟ್ಯಾಕ್ಸೂ ಇಲ್ಲ; ಡಿಕೆಶಿ

KPCC: ಮೋದಿ, ರಾಜನಾಥ್‌ಸಿಂಗ್‌ ವಿರುದ್ಧ ಕ್ರಮಕ್ಕೆ ಕೆಪಿಸಿಸಿ ದೂರು

KPCC: ಮೋದಿ, ರಾಜನಾಥ್‌ಸಿಂಗ್‌ ವಿರುದ್ಧ ಕ್ರಮಕ್ಕೆ ಕೆಪಿಸಿಸಿ ದೂರು

1-rerwer

IPL; ಸನ್‌ರೈಸರ್ಸ್ ಹೈದರಾಬಾದ್ ವಿರುದ್ಧ ಜಯದ ನಗು ಬೀರಿದ ಆರ್ ಸಿಬಿ

MONEY (2)

Mysuru: ದಾಖಲೆ ಇಲ್ಲದೆ ಸಾಗಿಸುತ್ತಿದ್ದ 89 ಲಕ್ಷ ರೂ. ವಶಕ್ಕೆ

Crime: ತಾಯಿ ಆತ್ಮಹತ್ಯೆಗೆ ಕಾರಣನಾದ ತಂದೆಯನ್ನು ಕೊಂದ ಮಗ

Crime: ತಾಯಿ ಆತ್ಮಹತ್ಯೆಗೆ ಕಾರಣನಾದ ತಂದೆಯನ್ನು ಕೊಂದ ಮಗ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-rerwer

IPL; ಸನ್‌ರೈಸರ್ಸ್ ಹೈದರಾಬಾದ್ ವಿರುದ್ಧ ಜಯದ ನಗು ಬೀರಿದ ಆರ್ ಸಿಬಿ

28

Athletics: ಕಿರಿಯರ ಏಷ್ಯನ್‌ ಆ್ಯತ್ಲೆಟಿಕ್ಸ್‌  ಜಾವೆಲಿನ್‌ನಲ್ಲಿ ದೀಪಾಂಶುಗೆ ಬಂಗಾರ

Gukesh: ಚಾಂಪಿಯನ್‌ ಗುಕೇಶ್‌ಗೆ ಭವ್ಯ ಸ್ವಾಗತ

Gukesh: ಚಾಂಪಿಯನ್‌ ಗುಕೇಶ್‌ಗೆ ಭವ್ಯ ಸ್ವಾಗತ

IPL: ಎಲ್ಲೆ ಮೀರಿ ವಿಕೆಟ್‌ ಸಂಭ್ರಮಾಚರಣೆಡೆಲ್ಲಿ ವೇಗಿ ರಸಿಕ್‌ ಸಲಾಂಗೆ ಛೀಮಾರಿ

IPL: ಎಲ್ಲೆ ಮೀರಿ ವಿಕೆಟ್‌ ಸಂಭ್ರಮಾಚರಣೆಡೆಲ್ಲಿ ವೇಗಿ ರಸಿಕ್‌ ಸಲಾಂಗೆ ಛೀಮಾರಿ

IPL: ಇಂಪ್ಯಾಕ್ಟ್ ಪ್ಲೇಯರ್‌ ನಿಯಮಕ್ಕೆ ಅಕ್ಷರ್‌ ಪಟೇಲ್‌ ಕೂಡ ವಿರೋಧ

IPL: ಇಂಪ್ಯಾಕ್ಟ್ ಪ್ಲೇಯರ್‌ ನಿಯಮಕ್ಕೆ ಅಕ್ಷರ್‌ ಪಟೇಲ್‌ ಕೂಡ ವಿರೋಧ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-wqewq-eqw

Modi ಕೈ ಬಲಪಡಿಸಲು, ದ.ಕ. ಸಮಗ್ರ ಸುಧಾರಣೆಗಾಗಿ ಬಿಜೆಪಿಗೆ ಮತ ನೀಡಿ: ಚೌಟ

1-asasas

Naxal ಬಾಧಿತ ಮತಗಟ್ಟೆಗಳ ಭದ್ರತೆಗೆ ಹೆಚ್ಚುವರಿ ಆದ್ಯತೆ: ಮುಲ್ಲೈ ಮುಗಿಲನ್‌

1-MB

Note Ban ವೇಳೆ ಮಹಿಳೆಯರು ಮಂಗಳಸೂತ್ರ ಅಡವಿಟ್ಟಾಗ ಮೋದಿ ಮೌನ: ಭಂಡಾರಿ

Exam

Udupi; ಪಿಯುಸಿ ಪರೀಕ್ಷೆ-2 : ನಿಷೇಧಾಜ್ಞೆ ಜಾರಿ

IMD

Dakshina Kannada ಜಿಲ್ಲೆಯಲ್ಲಿ ಮುಂದುವರಿದ ಉರಿಬಿಸಿಲು:ಮಳೆಯ ಮುನ್ಸೂಚನೆ ಇಲ್ಲ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.