ಫೆಡರರ್‌, ಶರಪೋವಾ ಪತನ


Team Udayavani, Sep 5, 2018, 6:00 AM IST

37.jpg

ನ್ಯೂಯಾರ್ಕ್‌: ಐದು ಬಾರಿಯ ಚಾಂಪಿಯನ್‌ ಸ್ವಿಸ್‌ನ ರೋಜರ್‌ ಫೆಡರರ್‌ ಮತ್ತು ರಶ್ಯದ ಮರಿಯಾ ಶರಪೋವಾ ಅವರು ಯುಎಸ್‌ ಓಪನ್‌ ಗ್ರ್ಯಾನ್‌ ಸ್ಲಾಮ್‌ ಕೂಟದ ನಾಲ್ಕನೇ ಸುತ್ತಿನಲ್ಲಿ ಆಘಾತಕಾರಿ ಸೋಲನ್ನು ಕಂಡಿದ್ದಾರೆ. ಗ್ರ್ಯಾನ್‌ ಸ್ಲಾಮ್‌ ಕೂಟದ ನಾಲ್ಕನೇ ಸುತ್ತಿನಲ್ಲಿ ಇದೇ ಮೊದಲ ಬಾರಿ ಆಡಿದ ಆಸ್ಟ್ರೇಲಿಯದ ಜಾನ್‌ ಮಿಲ್ಮನ್‌ ಅವರು 3-6, 7-5, 7-6 (9-7), 7-6 (7-3) ಸೆಟ್‌ಗಳಿಂದ ಫೆಡರರ್‌ಗೆ ಆಘಾತ ನೀಡಿದರು. ಇದರಿಂದಾಗಿ ಎರಡು ಬಾರಿಯ ವಿಜೇತ ನೊವಾಕ್‌ ಜೊಕೋವಿಕ್‌ ಅವರು ಕ್ವಾರ್ಟರ್‌ಫೈನಲ್‌ನಲ್ಲಿ ಫೆಡರರ್‌ ಅವರನ್ನು ಎದುರಿಸುವುದು ತಪ್ಪಿದೆ. ಎರಡನೇ ಮತ್ತು ಮೂರನೇ ಸೆಟ್‌ನಲ್ಲಿ ಸೆಟ್‌ ಪಾಯಿಂಟ್‌ ಪಡೆದಿದ್ದ ಫೆಡರರ್‌ ತನ್ನದೇ ತಪ್ಪಿನಿಂದಾಗಿ ಪಂದ್ಯವನ್ನು ಕಳೆದುಕೊಂಡರು. ಪಂದ್ಯದಲ್ಲಿ 77 ಅನಗತ್ಯ ತಪ್ಪು ಮಾಡಿದ ಫೆಡರರ್‌ ಅವರು ಮಿಲ್ಮನ್‌ ಅವರ ಮನಮೋಹಕ ಆಟದೆದುರು ಮಂಕಾದರು. ಫೆಡರರ್‌ 2013ರ ಬಳಿಕ ಇದೇ ಮೊದಲ ಸಲ ಬೇಗನೇ ಕೂಟದಿಂದ ನಿರ್ಗಮಿಸಿದ್ದಾರೆ. 2013ರಲ್ಲಿಯೂ ಅವರು ನಾಲ್ಕನೇ ಸುತ್ತಿನಲ್ಲಿ ನೇರ ಸೆಟ್‌ಗಳಿಂದ ಟಾಮಿ ರಾಬ್ರೆಡೊ ಅವರಿಗೆ ಶರಣಾಗಿದ್ದರು. 

ನನಗೆ ನಂಬಲಿಕ್ಕೆ ಸಾಧ್ಯವಾಗುತ್ತಿಲ್ಲ ಎಂದು 29ರ ಹರೆಯದ ಮಿಲ್ಮನ್‌ ಪ್ರತಿಕ್ರಿಯೆ ನೀಡಿದರು. ನನಗೆ ರೋಜರ್‌ ಅವರ ಬಗ್ಗೆ ಬಹಳ ಗೌರವವಿದೆ. ಅವರು ಟೆನಿಸ್‌ಗೆ ಸರ್ವಸ್ವವನ್ನು ಕೊಟ್ಟಿದ್ದಾರೆ. ಅವರು ನನ್ನ ಪಾಲಿನ ಹೀರೋ ಎಂದು ಮಿಲ್ಮನ್‌ ತಿಳಿಸಿದರು. ಅವರಿಂದು ಖಂಡಿತವಾಗಿಯೂ ಶ್ರೇಷ್ಠ ನಿರ್ವಹಣೆ ನೀಡಿಲ್ಲ. ಆದರೆ ಅದನ್ನು ನಾನು ಪಡೆದುಕೊಂಡೆ ಎಂದರು ಮಿಲ್ಮನ್‌.

ನವಾರೊ ಸಂಭ್ರಮ
ಸ್ಪೇನ್‌ನ ಬರ್ತ್‌ಡೆ ಹುಡುಗಿ ಕಾರ್ಲಾ ಸೂರೆಜ್‌ ನವಾರೊ ಅವರು ನೇರ ಸೆಟ್‌ಗಳಿಂದ 2006ರ ಚಾಂಪಿಯನ್‌ ಮರಿಯಾ ಶರಪೋವಾ ಅವರನ್ನು ಉರುಳಿಸಿದರು. ಶರಪೋವಾ 2012ರ ಬಳಿಕ ಇದೇ ಮೊದಲ ಸಲ ಇಲ್ಲಿ ಕ್ವಾರ್ಟರ್‌ಫೈನಲ್‌ ತಲುಪುವ ನಿರೀಕ್ಷೆ ಇಟ್ಟುಕೊಂಡಿದ್ದರು. ಆದರೆ 4-6, 3-6 ಸೆಟ್‌ಗಳ ಸೋಲಿನಿಂದ ತೀವ್ರ ಆಘಾತಕ್ಕೆ ಒಳಗಾದರು. ಹೊನಲು ಬೆಳಕಿನಲ್ಲಿ ಆಡಿದ 23 ಪಂದ್ಯಗಳಲ್ಲಿ ಗೆಲುವು ಸಾಧಿಸಿದ ಸಾಧನೆಗೈದಿದ್ದ ಶರಪೋವಾ ಮೊದಲ ಬಾರಿ ಸೋತರು. ಭರ್ಜರಿ ಗೆಲುವಿನ ಮೂಲಕ ನವಾರೊ 30ನೇ ಹುಟ್ಟುಹಬ್ಬವನ್ನು ಆಚರಿಸಿದರು. ಅವರು 2013ರಲ್ಲಿ ಕ್ವಾರ್ಟರ್‌ಫೈನಲ್‌ ತಲುಪಿದ್ದರು.

ಕ್ವಾರ್ಟರ್‌ಫೈನಲ್‌ನಲ್ಲಿ ನವಾರೊ ಅವರು 2017ರ ರನ್ನರ್‌ ಅಪ್‌ ಮ್ಯಾಡಿಸನ್‌ ಕೀಸ್‌ ಅವರನ್ನು ಎದುರಿಸಲಿದ್ದಾರೆ. ಮ್ಯಾಡಿಸನ್‌ ಅಮೆರಿಕದವರಾದ ಕಾರಣ ಪ್ರೇಕ್ಷಕರು ಅವರಿಗೆ ಪೂರ್ಣ ಬೆಂಬಲ ನೀಡಲಿದ್ದಾರೆ. ನಾನು ಕೂಡ ಆಕೆಯ ಜತೆ ಆಡಿದ್ದೇನೆ. ಅವರ ಸರ್ವ್‌ ಬಲಶಾಲಿಯಾಗಿದೆ ಎಂದು ನವಾರೊ ಹೇಳಿದರು. ಮ್ಯಾಡಿಸನ್‌ ಕೀಸ್‌ ಅವರು ಇನ್ನೊಂದು ಪಂದ್ಯದಲ್ಲಿ ಡೊಮಿನಿಕಾ ಸಿಬುಲ್ಕೋವಾ ಅವರನ್ನು 6-1, 6-3 ಸೆಟ್‌ಗಳಿಂದ ಸೋಲಿಸಿ ಕ್ವಾರ್ಟರ್‌ಫೈನಲ್‌ ತಲುಪಿದರು.

ಟಾಪ್ ನ್ಯೂಸ್

1-wwqwqe

BJP ಶ್ರೀರಾಮುಲು, ಗಾಯತ್ರಿ ಸಿದ್ದೇಶ್ವರ್ ಈಗಾಗಲೇ ಗೆದ್ದಿದ್ದಾರೆ: ಜನಾರ್ದನ ರೆಡ್ಡಿ

Outrage over mistakes in CET exam question paper; Request for mercy marks

CET ಪರೀಕ್ಷೆ ಪ್ರಶ್ನೆಪತ್ರಿಕೆಯಲ್ಲಿ ಲೋಪಕ್ಕೆ ಆಕ್ರೋಶ; ಕೃಪಾಂಕಕ್ಕೆ ಆಗ್ರಹ

1-qweeweq

Viral video; ಯಾರಿವರು ಇಶಾ ಅರೋರಾ? ಮತದಾನದ ದಿನ ಭಾರಿ ಸುದ್ದಿ

New Jersey: ಸ್ಥಳೀಯ ಶಾಪ್‌ ನಲ್ಲಿ ಕಳ್ಳತನ- ಇಬ್ಬರು ಭಾರತೀಯ ವಿದ್ಯಾರ್ಥಿನಿಯರ ಬಂಧನ

New Jersey: ಸ್ಥಳೀಯ ಶಾಪ್‌ ನಲ್ಲಿ ಕಳ್ಳತನ- ಇಬ್ಬರು ಭಾರತೀಯ ವಿದ್ಯಾರ್ಥಿನಿಯರ ಬಂಧನ

RCB; ಸುಮ್ಮನೆ ಒಪ್ಪಂದಕ್ಕೆ ಸಹಿ ಹಾಕು…: ವಿರಾಟ್ ಜತೆಗಿನ ಮಾತುಕತೆ ನೆನೆದ ಕೆ.ಎಲ್ ರಾಹುಲ್

RCB; ಸುಮ್ಮನೆ ಒಪ್ಪಂದಕ್ಕೆ ಸಹಿ ಹಾಕು…: ವಿರಾಟ್ ಜತೆಗಿನ ಮಾತುಕತೆ ನೆನೆದ ಕೆ.ಎಲ್ ರಾಹುಲ್

ನೇಹಾ ಹತ್ಯೆ ಖಂಡನೀಯ… ಅಪರಾಧಿಗೆ ಕಠಿಣ ಶಿಕ್ಷೆ ನೀಡಲು ಸರಕಾರ ಬದ್ದ: ಸತೀಶ್ ಜಾರಕಿಹೊಳಿ

ನೇಹಾ ಹತ್ಯೆ ಖಂಡನೀಯ… ಅಪರಾಧಿಗೆ ಕಠಿಣ ಶಿಕ್ಷೆ ನೀಡಲು ಸರ್ಕಾರ ಬದ್ಧ: ಸತೀಶ್ ಜಾರಕಿಹೊಳಿ

Lok Sabha Poll: 2019ರಲ್ಲಿ ಕೇವಲ 9 ರೂ. ಇದ್ದ ವ್ಯಕ್ತಿ ಈಗ 108 ಕೋಟಿ ಒಡೆಯ!

Lok Sabha Poll: 2019ರಲ್ಲಿ ಕೇವಲ 9 ರೂ. ಇದ್ದ ವ್ಯಕ್ತಿ ಈಗ 108 ಕೋಟಿ ಒಡೆಯ!


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

RCB; ಸುಮ್ಮನೆ ಒಪ್ಪಂದಕ್ಕೆ ಸಹಿ ಹಾಕು…: ವಿರಾಟ್ ಜತೆಗಿನ ಮಾತುಕತೆ ನೆನೆದ ಕೆ.ಎಲ್ ರಾಹುಲ್

RCB; ಸುಮ್ಮನೆ ಒಪ್ಪಂದಕ್ಕೆ ಸಹಿ ಹಾಕು…: ವಿರಾಟ್ ಜತೆಗಿನ ಮಾತುಕತೆ ನೆನೆದ ಕೆ.ಎಲ್ ರಾಹುಲ್

Wrestlers: ದುಬಾೖ ವಿಮಾನ ನಿಲ್ದಾಣದಲ್ಲಿ ಸಿಕ್ಕಿಬಿದ್ದ ಇಬ್ಬರು ಕುಸ್ತಿಪಟುಗಳು

Wrestlers: ದುಬಾೖ ವಿಮಾನ ನಿಲ್ದಾಣದಲ್ಲಿ ಸಿಕ್ಕಿಬಿದ್ದ ಇಬ್ಬರು ಕುಸ್ತಿಪಟುಗಳು

LSG vs CSK: ಲಕ್ನೋದಲ್ಲೂ ಚೆನ್ನೈ  ಫೇವರಿಟ್‌

LSG vs CSK: ಲಕ್ನೋದಲ್ಲೂ ಚೆನ್ನೈ  ಫೇವರಿಟ್‌

1-wewq-eqwe

IPL; ರೋಚಕ ಪಂದ್ಯದಲ್ಲಿ ಪಂಜಾಬ್‌ ಎದುರು 9 ರನ್ ಜಯ ಸಾಧಿಸಿದ ಮುಂಬೈ

1aaa

Austria Marathon: ಭಾರತವನ್ನು ಪ್ರತಿನಿಧಿಸಲಿರುವ ಕೊಡಗಿನ ಅಪ್ಪಚಂಗಡ ಬೆಳ್ಯಪ್ಪ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

1-qweqwewq

Congress;ಕಾರ್ಕಳ ಕ್ಷೇತ್ರದಿಂದ 40 ಸಾವಿರ ಲೀಡ್ ಗೆ ಪ್ರಯತ್ನ: ಮುನಿಯಾಲು

1-wewqe

Belgavi; ತಂದೆ ಮಾಡಿದ ಅಭಿವೃದ್ಧಿ ಕೆಲಸಗಳನ್ನು ಮುಂದುವರಿಸುತ್ತೇವೆ: ಶ್ರದ್ಧಾ ಶೆಟ್ಟರ್

2-aa

ಮೂಡುಬೆಳ್ಳೆ : ವೈಭವದ ಹಸಿರುವಾಣಿ ಹೊರೆಕಾಣಿಕೆ ಮೆರವಣಿಗೆ

1-weew

Mudigere; ಹುಲಿ ಹತ್ಯೆ ಆರೋಪದ ಮೇಲೆ ಇಬ್ಬರ ಬಂಧನ

1-wwqwqe

BJP ಶ್ರೀರಾಮುಲು, ಗಾಯತ್ರಿ ಸಿದ್ದೇಶ್ವರ್ ಈಗಾಗಲೇ ಗೆದ್ದಿದ್ದಾರೆ: ಜನಾರ್ದನ ರೆಡ್ಡಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.