ದೈತ್ಯ ಸೆರೆನಾಗೆ ಒಸಾಕಾ ಸವಾಲು


Team Udayavani, Sep 8, 2018, 10:15 AM IST

23.jpg

ನ್ಯೂಯಾರ್ಕ್‌: ಯುಎಸ್‌ ಓಪನ್‌ ವನಿತಾ ಫೈನಲ್‌ ಹಣಾಹಣಿಗೆ ರಂಗ ಸಜ್ಜಾಗಿದೆ. ಆತಿಥೇಯ ನಾಡಿನ ದೈತ್ಯ ಆಟಗಾರ್ತಿ ಸೆರೆನಾ ವಿಲಿಯಮ್ಸ್‌ ಮತ್ತು ಜಪಾನಿನ ಯುವ ತಾರೆ ನವೋಮಿ ಒಸಾಕಾ ಪರಸ್ಪರ ಎದುರಾಗಲಿದ್ದಾರೆ. ಭಾರತೀಯ ಕಾಲಮಾನ ಪ್ರಕಾರ ಶನಿವಾರ ನಡು ರಾತ್ರಿ ಬಳಿಕ 1.30ಕ್ಕೆ ಈ ಕುತೂಹಲಕಾರಿ ಸಮರ ಆರಂಭವಾಗಲಿದೆ.

ಸೆಮಿಫೈನಲ್‌ ಹಣಾಹಣಿ ಯಲ್ಲಿ ಸೆರೆನಾ ವಿಲಿಯಮ್ಸ್‌ ಲಾತ್ವಿಯಾದ ಅನಾಸ್ತಾಸಿಜಾ ಸೆವಸ್ತೋವಾ ಅವರನ್ನು 6-3, 6-0 ಅಂತರದಿಂದ ಸುಲಭದಲ್ಲಿ ಸೋಲಿಸಿದರೆ, ನವೋಮಿ ಒಸಾಕಾ ಆತಿಥೇಯ ನಾಡಿನ ಮ್ಯಾಡಿಸನ್‌ ಕೀಸ್‌ ಅವರನ್ನು 6-2, 6-4 ನೇರ ಸೆಟ್‌ಗಳಿಂದ ಹಿಮ್ಮೆಟ್ಟಿಸಿದರು. ಕೀಸ್‌ ಪರಾಭವದೊಂದಿಗೆ ಸತತ 2ನೇ ವರ್ಷ ಯುಎಸ್‌ ಓಪನ್‌ ವನಿತಾ ಸಿಂಗಲ್ಸ್‌ನಲ್ಲಿ “ಆಲ್‌ ಅಮೆರಿಕನ್‌ ಫೈನಲ್‌’ ತಪ್ಪಿತು. 2017ರಲ್ಲಿ ಮ್ಯಾಡಿಸನ್‌ ಕೀಸ್‌ ಮತ್ತು ಸ್ಲೋನ್‌ ಸ್ಟೀಫ‌ನ್ಸ್‌ ಮುಖಾಮುಖಿಯಾಗಿದ್ದರು.

ಜಪಾನಿಗೆ ಮೊದಲ ಫೈನಲ್‌ ಟಿಕೆಟ್‌
ಜಪಾನಿ ಆಟಗಾರ್ತಿಯೊಬ್ಬರು ಗ್ರ್ಯಾನ್‌ಸ್ಲಾಮ್‌ ಫೈನಲ್‌ಗೆ ಲಗ್ಗೆ ಇಡುತ್ತಿರುವುದು ಇದೇ ಮೊದಲು. ಅಕಸ್ಮಾತ್‌ ಸೆರೆನಾ ಅವರನ್ನು ಮಣಿಸಿ ಒಸಾಕಾ ಚಾಂಪಿಯನ್‌ ಆದರಂತೂ ಅದು ಟೆನಿಸ್‌ ಲೋಕದ ಇತಿಹಾಸ ಹಾಗೂ ಪವಾಡಗಳೆರಡಕ್ಕೂ ಸಾಕ್ಷಿಯಾಗಲಿದೆ. 

ಕಳೆದ ಮಾರ್ಚ್‌ನಲ್ಲಿ ನಡೆದ ಮಯಾಮಿ ಟೆನಿಸ್‌ ಕೂಟದಲ್ಲಿ ಸೆರೆನಾ ಅವರನ್ನು ಸೋಲಿಸಿದ ಹೆಗ್ಗಳಿಕೆ ಒಸಾಕಾ ಪಾಲಿಗಿದೆ. ಆದರೆ ಮ್ಯಾಡಿಸನ್‌ ಕೀಸ್‌ ವಿರುದ್ಧ ಒಸಾಕಾ ದಾಖಲೆಯೇನೂ ಉತ್ತಮವಾಗಿರಲಿಲ್ಲ. ಈ ಸೆಮಿಫೈನಲ್‌ಗ‌ೂ ಮೊದಲು ಕೀಸ್‌ ವಿರುದ್ಧ ಆಡಿದ ಎಲ್ಲ 3 ಪಂದ್ಯಗಳಲ್ಲೂ ಸೋಲನುಭವಿಸಿದ್ದರು.

ಸೆಮಿಫೈನಲ್‌ನಲ್ಲಿ ಸೆರೆನಾ ವಿಲಿಯಮ್ಸ್‌ ಗೆಲುವು ಅಚ್ಚರಿಯೇನಲ್ಲ. ಆದರೆ ಜಪಾನಿನ ನವೋಮಿ ಒಸಾಕಾ ಗೆದ್ದು ಬಂದದ್ದು ನಿಜಕ್ಕೂ ಅಚ್ಚರಿ. ಅಮೆರಿಕನ್‌ ಆಟಗಾರ್ತಿಯನ್ನು ಅವರದೇ ನೆಲದಲ್ಲಿ ಸೋಲಿಸುವ ಮೂಲಕ ಒಸಾಕಾ ನ್ಯೂಯಾರ್ಕ್‌ನಲ್ಲಿ ನೂತನ ಸಂಚಲನವನ್ನೇ ಮೂಡಿಸಿದ್ದಾರೆ. ಎಂದೂ ಗ್ರ್ಯಾನ್‌ಸ್ಲಾಮ್‌ ನಾಕೌಟ್‌ ಹಂತ ಪ್ರವೇಶಿಸದ ಒಸಾಕಾ, ಈ ವರ್ಷದ ಆಸ್ಟ್ರೇಲಿಯನ್‌ ಓಪನ್‌ನಲ್ಲಿ 4ನೇ ಸುತ್ತು ಪ್ರವೇಶಿಸಿದ್ದೇ ಶ್ರೇಷ್ಠ ಸಾಧನೆ. ಫ್ರೆಂಚ್‌ ಓಪನ್‌ ಹಾಗೂ ವಿಂಬಲ್ಡನ್‌ನಲ್ಲಿ 3ನೇ ಸುತ್ತು ಗಡಿ ದಾಟಿದವರಲ್ಲ. ಹೀಗಿರುವಾಗ ಏಕಾಏಕಿ ಗ್ರ್ಯಾನ್‌ಸ್ಲಾಮ್‌ ಪ್ರಶಸ್ತಿ ಸುತ್ತಿಗೆ ನೆಗೆಯುವ ಮೂಲಕ ಒಸಾಕಾ ವಿಶ್ವ ಟೆನಿಸ್‌ನಲ್ಲಿ ಏಶ್ಯದ ಛಾಪು ಮೂಡಿಸಿದ್ದಾರೆ.

ಸೆರೆನಾಗೆ 31ನೇ ಫೈನಲ್‌
ಇತ್ತ ವೀನಸ್‌ ವಿಲಿಯಮ್ಸ್‌ಗೆ ಇದು 9ನೇ ಯುಎಸ್‌ ಓಪನ್‌ ಫೈನಲ್‌. ಒಟ್ಟಾರೆಯಾಗಿ 31ನೇ ಗ್ರ್ಯಾನ್‌ಸ್ಲಾಮ್‌ ಪ್ರಶಸ್ತಿ ಸಮರ. ಕಳೆದೆರಡು ಸಲವೂ ಸೆರೆನಾ ಯುಎಸ್‌ ಓಪನ್‌ ಸೆಮಿಫೈನಲ್‌ ದಾಟುವಲ್ಲಿ ವಿಫ‌ಲರಾಗಿದ್ದರು. 2015ರಲ್ಲಿ ರಾಬರ್ಟಾ ವಿನ್ಸಿಗೆ ಶರಣಾದರೆ, 2016ರಲ್ಲಿ ಕ್ಯಾರೋಲಿನಾ ಪ್ಲಿಸ್ಕೋವಾಗೆ ಸೋತಿದ್ದರು. ಮಗುವಿಗೆ ಜನ್ಮ ನೀಡಿದ್ದರಿಂದ ಕಳೆದ ವರ್ಷದ ತವರಿನ ಕೂಟದಿಂದ ದೂರ ಉಳಿದಿದ್ದರು. ಈಗ ಮತ್ತೆ ಲಯ ಕಂಡುಕೊಂಡು 24ನೇ ಗ್ರ್ಯಾನ್‌ಸ್ಲಾಮ್‌ ಪ್ರಶಸ್ತಿಯ ಹೊಸ್ತಿಲಲ್ಲಿ ನಿಂತಿದ್ದಾರೆ. ಜಯ ಸಾಧಿಸಿದರೆ ಮಾರ್ಗರೇಟ್‌ ಕೋರ್ಟ್‌ ಅವರ ಸಾರ್ವಕಾಲಿಕ ದಾಖಲೆಯನ್ನು ಸರಿದೂಗಿಸಲಿದ್ದಾರೆ. ಇದೇ 26ರಂದು 37ನೇ ಜನ್ಮದಿನವನ್ನು ಆಚರಿಸಿಕೊಳ್ಳಲಿರುವ ಸೆರೆನಾ, ಇಲ್ಲಿ ಚಾಂಪಿಯನ್‌ ಆದರೆ ಗ್ರ್ಯಾನ್‌ಸ್ಲಾಮ್‌ ಸಿಂಗಲ್ಸ್‌ ಗೆದ್ದ ಅತೀ ಹಿರಿಯ ಆಟಗಾರ್ತಿ ಎಂಬ ದಾಖಲೆಯನ್ನೂ ಬರೆಯಲಿದ್ದಾರೆ.

ಟಾಪ್ ನ್ಯೂಸ್

ಚೌಟರನ್ನು ದಾಖಲೆಯ ಅಂತರದಿಂದ ಗೆಲ್ಲಿಸಿ: ತಮಿಳುನಾಡು ಬಿಜೆಪಿ ಅಧ್ಯಕ್ಷ ಅಣ್ಣಾಮಲೈ

Puttur; ಚೌಟರನ್ನು ದಾಖಲೆಯ ಅಂತರದಿಂದ ಗೆಲ್ಲಿಸಿ: ಅಣ್ಣಾಮಲೈ

Lok Sabha Election ಕಾಂಗ್ರೆಸ್‌ಗೆ 20ಕ್ಕೂ ಅಧಿಕ ಸ್ಥಾನ: ದಿನೇಶ್‌

Lok Sabha Election ಕಾಂಗ್ರೆಸ್‌ಗೆ 20ಕ್ಕೂ ಅಧಿಕ ಸ್ಥಾನ: ದಿನೇಶ್‌

ಪ್ರಧಾನಮಂತ್ರಿ ಸ್ಥಾನಕ್ಕೆ “ಇಂಡಿಯ’ ರಾಹುಲ್‌ ಗಾಂಧಿಯನ್ನು ಪರಿಗಣಿಸಿಲ್ಲ: ಪಿಣರಾಯಿ

ಪ್ರಧಾನಮಂತ್ರಿ ಸ್ಥಾನಕ್ಕೆ “ಇಂಡಿಯ’ ರಾಹುಲ್‌ ಗಾಂಧಿಯನ್ನು ಪರಿಗಣಿಸಿಲ್ಲ: ಪಿಣರಾಯಿ

Kota: ಬೈಕ್‌ ಅಪಘಾತ; ಯುವಕ ಸಾವು

Kota: ಬೈಕ್‌ ಅಪಘಾತ; ಯುವಕ ಸಾವು

Uppinangady : ಗ್ರಾ.ಪಂ. ಸಿಬಂದಿ ಆತ್ಮಹತ್ಯೆ

Uppinangady : ಗ್ರಾ.ಪಂ. ಸಿಬಂದಿ ಆತ್ಮಹತ್ಯೆ

Subrahmanya: ಬಸ್ಸಿನಿಂದ ಬಿದ್ದು ಪ್ರಯಾಣಿಕ ಸಾವು

Subrahmanya: ಬಸ್ಸಿನಿಂದ ಬಿದ್ದು ಪ್ರಯಾಣಿಕ ಸಾವು

ಬರ ಪರಿಹಾರದಲ್ಲಿ ಸಿಎಂ, ಕಾಂಗ್ರೆಸ್‌ ರಾಜಕೀಯ: ಅಶೋಕ್‌

ಬರ ಪರಿಹಾರದಲ್ಲಿ ಸಿಎಂ, ಕಾಂಗ್ರೆಸ್‌ ರಾಜಕೀಯ: ಅಶೋಕ್‌


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Rajastan Royals; ಪ್ಲೇ ಆಫ್ ಮೊದಲ ಗುರಿ: ಸಂಜು ಸ್ಯಾಮ್ಸನ್‌

Rajastan Royals; ಪ್ಲೇ ಆಫ್ ಮೊದಲ ಗುರಿ: ಸಂಜು ಸ್ಯಾಮ್ಸನ್‌

IPL 2024; ಫಿಟ್‌ ಆಗಿದ್ದೇ ನಿನ್ನೆ: ಸಂದೀಪ್‌ ಶರ್ಮ

Northamptonshire: ಕೌಂಟಿ ಕ್ರಿಕೆಟ್‌ನಲ್ಲಿ ಕರುಣ್‌ ನಾಯರ್‌ ದ್ವಿಶತಕ

Northamptonshire: ಕೌಂಟಿ ಕ್ರಿಕೆಟ್‌ನಲ್ಲಿ ಕರುಣ್‌ ನಾಯರ್‌ ದ್ವಿಶತಕ

Pakistan cricket team military training wasted

PCB; ಪಾಕ್‌ ಕ್ರಿಕೆಟ್‌ ತಂಡದ ಸೇನಾ ತರಬೇತಿ ವ್ಯರ್ಥ: ಹಾಸ್ಯ

Shotgun

Shotgun ಶೂಟಿಂಗ್‌ ಅರ್ಹತಾ ಸುತ್ತಿನಲ್ಲಿ ಕರಣ್‌: ವಿವಾದ

MUST WATCH

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

ಹೊಸ ಸೇರ್ಪಡೆ

ಚೌಟರನ್ನು ದಾಖಲೆಯ ಅಂತರದಿಂದ ಗೆಲ್ಲಿಸಿ: ತಮಿಳುನಾಡು ಬಿಜೆಪಿ ಅಧ್ಯಕ್ಷ ಅಣ್ಣಾಮಲೈ

Puttur; ಚೌಟರನ್ನು ದಾಖಲೆಯ ಅಂತರದಿಂದ ಗೆಲ್ಲಿಸಿ: ಅಣ್ಣಾಮಲೈ

Lok Sabha Election ಕಾಂಗ್ರೆಸ್‌ಗೆ 20ಕ್ಕೂ ಅಧಿಕ ಸ್ಥಾನ: ದಿನೇಶ್‌

Lok Sabha Election ಕಾಂಗ್ರೆಸ್‌ಗೆ 20ಕ್ಕೂ ಅಧಿಕ ಸ್ಥಾನ: ದಿನೇಶ್‌

ಪ್ರಧಾನಮಂತ್ರಿ ಸ್ಥಾನಕ್ಕೆ “ಇಂಡಿಯ’ ರಾಹುಲ್‌ ಗಾಂಧಿಯನ್ನು ಪರಿಗಣಿಸಿಲ್ಲ: ಪಿಣರಾಯಿ

ಪ್ರಧಾನಮಂತ್ರಿ ಸ್ಥಾನಕ್ಕೆ “ಇಂಡಿಯ’ ರಾಹುಲ್‌ ಗಾಂಧಿಯನ್ನು ಪರಿಗಣಿಸಿಲ್ಲ: ಪಿಣರಾಯಿ

Kota: ಬೈಕ್‌ ಅಪಘಾತ; ಯುವಕ ಸಾವು

Kota: ಬೈಕ್‌ ಅಪಘಾತ; ಯುವಕ ಸಾವು

Uppinangady : ಗ್ರಾ.ಪಂ. ಸಿಬಂದಿ ಆತ್ಮಹತ್ಯೆ

Uppinangady : ಗ್ರಾ.ಪಂ. ಸಿಬಂದಿ ಆತ್ಮಹತ್ಯೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.