ದೈತ್ಯ ಸೆರೆನಾಗೆ ಒಸಾಕಾ ಸವಾಲು


Team Udayavani, Sep 8, 2018, 10:15 AM IST

23.jpg

ನ್ಯೂಯಾರ್ಕ್‌: ಯುಎಸ್‌ ಓಪನ್‌ ವನಿತಾ ಫೈನಲ್‌ ಹಣಾಹಣಿಗೆ ರಂಗ ಸಜ್ಜಾಗಿದೆ. ಆತಿಥೇಯ ನಾಡಿನ ದೈತ್ಯ ಆಟಗಾರ್ತಿ ಸೆರೆನಾ ವಿಲಿಯಮ್ಸ್‌ ಮತ್ತು ಜಪಾನಿನ ಯುವ ತಾರೆ ನವೋಮಿ ಒಸಾಕಾ ಪರಸ್ಪರ ಎದುರಾಗಲಿದ್ದಾರೆ. ಭಾರತೀಯ ಕಾಲಮಾನ ಪ್ರಕಾರ ಶನಿವಾರ ನಡು ರಾತ್ರಿ ಬಳಿಕ 1.30ಕ್ಕೆ ಈ ಕುತೂಹಲಕಾರಿ ಸಮರ ಆರಂಭವಾಗಲಿದೆ.

ಸೆಮಿಫೈನಲ್‌ ಹಣಾಹಣಿ ಯಲ್ಲಿ ಸೆರೆನಾ ವಿಲಿಯಮ್ಸ್‌ ಲಾತ್ವಿಯಾದ ಅನಾಸ್ತಾಸಿಜಾ ಸೆವಸ್ತೋವಾ ಅವರನ್ನು 6-3, 6-0 ಅಂತರದಿಂದ ಸುಲಭದಲ್ಲಿ ಸೋಲಿಸಿದರೆ, ನವೋಮಿ ಒಸಾಕಾ ಆತಿಥೇಯ ನಾಡಿನ ಮ್ಯಾಡಿಸನ್‌ ಕೀಸ್‌ ಅವರನ್ನು 6-2, 6-4 ನೇರ ಸೆಟ್‌ಗಳಿಂದ ಹಿಮ್ಮೆಟ್ಟಿಸಿದರು. ಕೀಸ್‌ ಪರಾಭವದೊಂದಿಗೆ ಸತತ 2ನೇ ವರ್ಷ ಯುಎಸ್‌ ಓಪನ್‌ ವನಿತಾ ಸಿಂಗಲ್ಸ್‌ನಲ್ಲಿ “ಆಲ್‌ ಅಮೆರಿಕನ್‌ ಫೈನಲ್‌’ ತಪ್ಪಿತು. 2017ರಲ್ಲಿ ಮ್ಯಾಡಿಸನ್‌ ಕೀಸ್‌ ಮತ್ತು ಸ್ಲೋನ್‌ ಸ್ಟೀಫ‌ನ್ಸ್‌ ಮುಖಾಮುಖಿಯಾಗಿದ್ದರು.

ಜಪಾನಿಗೆ ಮೊದಲ ಫೈನಲ್‌ ಟಿಕೆಟ್‌
ಜಪಾನಿ ಆಟಗಾರ್ತಿಯೊಬ್ಬರು ಗ್ರ್ಯಾನ್‌ಸ್ಲಾಮ್‌ ಫೈನಲ್‌ಗೆ ಲಗ್ಗೆ ಇಡುತ್ತಿರುವುದು ಇದೇ ಮೊದಲು. ಅಕಸ್ಮಾತ್‌ ಸೆರೆನಾ ಅವರನ್ನು ಮಣಿಸಿ ಒಸಾಕಾ ಚಾಂಪಿಯನ್‌ ಆದರಂತೂ ಅದು ಟೆನಿಸ್‌ ಲೋಕದ ಇತಿಹಾಸ ಹಾಗೂ ಪವಾಡಗಳೆರಡಕ್ಕೂ ಸಾಕ್ಷಿಯಾಗಲಿದೆ. 

ಕಳೆದ ಮಾರ್ಚ್‌ನಲ್ಲಿ ನಡೆದ ಮಯಾಮಿ ಟೆನಿಸ್‌ ಕೂಟದಲ್ಲಿ ಸೆರೆನಾ ಅವರನ್ನು ಸೋಲಿಸಿದ ಹೆಗ್ಗಳಿಕೆ ಒಸಾಕಾ ಪಾಲಿಗಿದೆ. ಆದರೆ ಮ್ಯಾಡಿಸನ್‌ ಕೀಸ್‌ ವಿರುದ್ಧ ಒಸಾಕಾ ದಾಖಲೆಯೇನೂ ಉತ್ತಮವಾಗಿರಲಿಲ್ಲ. ಈ ಸೆಮಿಫೈನಲ್‌ಗ‌ೂ ಮೊದಲು ಕೀಸ್‌ ವಿರುದ್ಧ ಆಡಿದ ಎಲ್ಲ 3 ಪಂದ್ಯಗಳಲ್ಲೂ ಸೋಲನುಭವಿಸಿದ್ದರು.

ಸೆಮಿಫೈನಲ್‌ನಲ್ಲಿ ಸೆರೆನಾ ವಿಲಿಯಮ್ಸ್‌ ಗೆಲುವು ಅಚ್ಚರಿಯೇನಲ್ಲ. ಆದರೆ ಜಪಾನಿನ ನವೋಮಿ ಒಸಾಕಾ ಗೆದ್ದು ಬಂದದ್ದು ನಿಜಕ್ಕೂ ಅಚ್ಚರಿ. ಅಮೆರಿಕನ್‌ ಆಟಗಾರ್ತಿಯನ್ನು ಅವರದೇ ನೆಲದಲ್ಲಿ ಸೋಲಿಸುವ ಮೂಲಕ ಒಸಾಕಾ ನ್ಯೂಯಾರ್ಕ್‌ನಲ್ಲಿ ನೂತನ ಸಂಚಲನವನ್ನೇ ಮೂಡಿಸಿದ್ದಾರೆ. ಎಂದೂ ಗ್ರ್ಯಾನ್‌ಸ್ಲಾಮ್‌ ನಾಕೌಟ್‌ ಹಂತ ಪ್ರವೇಶಿಸದ ಒಸಾಕಾ, ಈ ವರ್ಷದ ಆಸ್ಟ್ರೇಲಿಯನ್‌ ಓಪನ್‌ನಲ್ಲಿ 4ನೇ ಸುತ್ತು ಪ್ರವೇಶಿಸಿದ್ದೇ ಶ್ರೇಷ್ಠ ಸಾಧನೆ. ಫ್ರೆಂಚ್‌ ಓಪನ್‌ ಹಾಗೂ ವಿಂಬಲ್ಡನ್‌ನಲ್ಲಿ 3ನೇ ಸುತ್ತು ಗಡಿ ದಾಟಿದವರಲ್ಲ. ಹೀಗಿರುವಾಗ ಏಕಾಏಕಿ ಗ್ರ್ಯಾನ್‌ಸ್ಲಾಮ್‌ ಪ್ರಶಸ್ತಿ ಸುತ್ತಿಗೆ ನೆಗೆಯುವ ಮೂಲಕ ಒಸಾಕಾ ವಿಶ್ವ ಟೆನಿಸ್‌ನಲ್ಲಿ ಏಶ್ಯದ ಛಾಪು ಮೂಡಿಸಿದ್ದಾರೆ.

ಸೆರೆನಾಗೆ 31ನೇ ಫೈನಲ್‌
ಇತ್ತ ವೀನಸ್‌ ವಿಲಿಯಮ್ಸ್‌ಗೆ ಇದು 9ನೇ ಯುಎಸ್‌ ಓಪನ್‌ ಫೈನಲ್‌. ಒಟ್ಟಾರೆಯಾಗಿ 31ನೇ ಗ್ರ್ಯಾನ್‌ಸ್ಲಾಮ್‌ ಪ್ರಶಸ್ತಿ ಸಮರ. ಕಳೆದೆರಡು ಸಲವೂ ಸೆರೆನಾ ಯುಎಸ್‌ ಓಪನ್‌ ಸೆಮಿಫೈನಲ್‌ ದಾಟುವಲ್ಲಿ ವಿಫ‌ಲರಾಗಿದ್ದರು. 2015ರಲ್ಲಿ ರಾಬರ್ಟಾ ವಿನ್ಸಿಗೆ ಶರಣಾದರೆ, 2016ರಲ್ಲಿ ಕ್ಯಾರೋಲಿನಾ ಪ್ಲಿಸ್ಕೋವಾಗೆ ಸೋತಿದ್ದರು. ಮಗುವಿಗೆ ಜನ್ಮ ನೀಡಿದ್ದರಿಂದ ಕಳೆದ ವರ್ಷದ ತವರಿನ ಕೂಟದಿಂದ ದೂರ ಉಳಿದಿದ್ದರು. ಈಗ ಮತ್ತೆ ಲಯ ಕಂಡುಕೊಂಡು 24ನೇ ಗ್ರ್ಯಾನ್‌ಸ್ಲಾಮ್‌ ಪ್ರಶಸ್ತಿಯ ಹೊಸ್ತಿಲಲ್ಲಿ ನಿಂತಿದ್ದಾರೆ. ಜಯ ಸಾಧಿಸಿದರೆ ಮಾರ್ಗರೇಟ್‌ ಕೋರ್ಟ್‌ ಅವರ ಸಾರ್ವಕಾಲಿಕ ದಾಖಲೆಯನ್ನು ಸರಿದೂಗಿಸಲಿದ್ದಾರೆ. ಇದೇ 26ರಂದು 37ನೇ ಜನ್ಮದಿನವನ್ನು ಆಚರಿಸಿಕೊಳ್ಳಲಿರುವ ಸೆರೆನಾ, ಇಲ್ಲಿ ಚಾಂಪಿಯನ್‌ ಆದರೆ ಗ್ರ್ಯಾನ್‌ಸ್ಲಾಮ್‌ ಸಿಂಗಲ್ಸ್‌ ಗೆದ್ದ ಅತೀ ಹಿರಿಯ ಆಟಗಾರ್ತಿ ಎಂಬ ದಾಖಲೆಯನ್ನೂ ಬರೆಯಲಿದ್ದಾರೆ.

ಟಾಪ್ ನ್ಯೂಸ್

kejriwal-2

Kejriwal ಕುರಿತು ಅಮೆರಿಕದ ಹೇಳಿಕೆ ಸ್ವೀಕಾರಾರ್ಹವಲ್ಲ ಎಂದ ಭಾರತದ ವಿದೇಶಾಂಗ ಇಲಾಖೆ

1—eewqewq

World’s largest ಅನಕೊಂಡ ಅನಾ ಜೂಲಿಯಾ ಸಾವು; ಆಗಿದ್ದೇನು?

Politics: ಅಮಿತ್‌ ಶಾ ಓರ್ವ ಗೂಂಡಾ, ರೌಡಿ: ಯತೀಂದ್ರ 

Politics: ಅಮಿತ್‌ ಶಾ ಓರ್ವ ಗೂಂಡಾ, ರೌಡಿ: ಯತೀಂದ್ರ 

1-asdasdad

Pralhad Joshi ವಿರುದ್ದ ಸಿಡಿದೆದ್ದ ದಿಂಗಾಲೇಶ್ವರ ಶ್ರಿಗಳಿಗೆ ವೀರಶೈವ ಮಹಾಸಭಾ ಬೆಂಬಲ

NIA (2)

Rameshwaram Cafe case: ಎನ್‌ಐಎಯಿಂದ ಸಹ ಸಂಚುಕೋರನ ಬಂಧನ

1-qqwewqe

Congress ಹಾಸನ, ಮಂಡ್ಯದಲ್ಲೂ ಗೆಲ್ಲಲಿದೆ : ಸಚಿವ ಎಂ.ಬಿ.ಪಾಟೀಲ್

1-eewqe

BJP MP ಜಿಗಜಿಣಗಿ ಮಾಡಿದ ಅಪಮಾನವನ್ನು ಸಮಾಜದ ಮನೆ ಮನೆಗೆ ತಿಳಿಸುತ್ತೇವೆ: ರಾಠೋಡ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Delhi: ದುಬಾರಿ ಮರ್ಸಿಡೆಸ್‌ ಕಾರಿನಲ್ಲಿ ಡ್ರಗ್ಸ್‌ ಸಾಗಾಟ-ರಾಷ್ಟ್ರಮಟ್ಟದ ಕುಸ್ತಿಪಟು ಬಂಧನ!

Delhi: ದುಬಾರಿ ಮರ್ಸಿಡೆಸ್‌ ಕಾರಿನಲ್ಲಿ ಡ್ರಗ್ಸ್‌ ಸಾಗಾಟ-ರಾಷ್ಟ್ರಮಟ್ಟದ ಕುಸ್ತಿಪಟು ಬಂಧನ!

Virat Kohli Fan: ಕೊಹ್ಲಿ ಕಾಲಿಗೆರಗಿದ ಅಭಿಮಾನಿಗೆ ಭದ್ರತಾ ಸಿಬಂದಿಯಿಂದ ಹಲ್ಲೆ?

Virat Kohli Fan: ಕೊಹ್ಲಿ ಕಾಲಿಗೆರಗಿದ ಅಭಿಮಾನಿಗೆ ಭದ್ರತಾ ಸಿಬಂದಿಯಿಂದ ಹಲ್ಲೆ?

MS Dhoni Catch: 42ರ ಧೋನಿಯ ಡೈವಿಂಗ್‌ ಕ್ಯಾಚ್‌!

MS Dhoni Catch: 42ರ ಧೋನಿಯ ಡೈವಿಂಗ್‌ ಕ್ಯಾಚ್‌!

Ipl: ಪಂತ್‌ ಪಡೆಗೆ ರಾಜಸ್ಥಾನ್‌ ರಾಯಲ್ಸ್‌ ಚಾಲೆಂಜ್‌

Ipl: ಪಂತ್‌ ಪಡೆಗೆ ರಾಜಸ್ಥಾನ್‌ ರಾಯಲ್ಸ್‌ ಚಾಲೆಂಜ್‌

IPL 2024: ಧೋನಿ ಸೂಚನೆಯಂತೆ ಆಡಿದೆ: ರಿಝ್ವಿ

IPL 2024: ಧೋನಿ ಸೂಚನೆಯಂತೆ ಆಡಿದೆ: ರಿಝ್ವಿ

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

kejriwal-2

Kejriwal ಕುರಿತು ಅಮೆರಿಕದ ಹೇಳಿಕೆ ಸ್ವೀಕಾರಾರ್ಹವಲ್ಲ ಎಂದ ಭಾರತದ ವಿದೇಶಾಂಗ ಇಲಾಖೆ

Dinesh Gundu Rao: ಕ್ಷಯ ರೋಗ ನಿಯಂತ್ರಣ ಔಷಧ ಪೂರೈಕೆಗೆ ಕೇಂದ್ರಕ್ಕೆ ಮನವಿ; ದಿನೇಶ್‌

Dinesh Gundu Rao: ಕ್ಷಯ ರೋಗ ನಿಯಂತ್ರಣ ಔಷಧ ಪೂರೈಕೆಗೆ ಕೇಂದ್ರಕ್ಕೆ ಮನವಿ; ದಿನೇಶ್‌

Lok Sabha elections: ಸಂಸದ ಬಸವರಾಜುಗೆ “ಗೋ ಬ್ಯಾಕ್‌’ ಎಂದ ಬಿಜೆಪಿಗರು!

Lok Sabha elections: ಸಂಸದ ಬಸವರಾಜುಗೆ “ಗೋ ಬ್ಯಾಕ್‌’ ಎಂದ ಬಿಜೆಪಿಗರು!

Narayan Gowda: ಹೆಚ್ಚಿನ ಮತಗಳಿಂದ ಎಚ್‌ಡಿಕೆ ಗೆಲ್ಲಿಸುತ್ತೇವೆ: ನಾರಾಯಣ ಗೌಡ

Narayan Gowda: ಹೆಚ್ಚಿನ ಮತಗಳಿಂದ ಎಚ್‌ಡಿಕೆ ಗೆಲ್ಲಿಸುತ್ತೇವೆ: ನಾರಾಯಣ ಗೌಡ

1-qweqwew

Mangaluru;ಮನೆಯಲ್ಲೇ ಅಕ್ರಮ ಕಸಾಯಿಖಾನೆ:ಗೋಮಾಂಸ ಸಹಿತ ಮೂವರ ಬಂಧನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.