ಇವರು ಕ್ರಿಕೆಟ್ ಜಗತ್ತಿನಲ್ಲಿ ಒಂದೂ ಸಿಕ್ಸರ್ ಹೊಡೆಯದ ಬ್ಯಾಟ್ಸಮನ್ ಗಳು


Team Udayavani, Sep 8, 2018, 3:50 PM IST

cricket.jpg

ಕ್ರಿಕೆಟ್ ನಲ್ಲಿ ಸಿಕ್ಸ್ ಹೊಡೆಯುವುದು ಕೂಡಾ ಒಂದು ಕಲೆ. ಆಧುನಿಕ ಕಿಕೆಟ್ ನಲ್ಲಿ ಬ್ಯಾಟ್ಸಮನ್ ಗಳು ತಾ ಮುಂದು ನಾ ಮುಂದು ಎಂಬಂತೆ ಸಿಕ್ಸ್ ಬಾರಿಸುವುದನ್ನು ನಾವು ಕಂಡಿದ್ದೇವೆ. ಟಿ20 ಕ್ರಿಕೆಟ್ ನಂತೆ ಏಕದಿನ ಕ್ರಿಕೆಟ್ ನಲ್ಲಿ ಕೂಡಾ ಸಿಕ್ಸರ್ ಗಳ ಸುರಿಮಳೆಯಾಗುತ್ತಿದೆ. 

ಏಕದಿನ ಕ್ರಿಕೆಟ್ ನಲ್ಲಿ ಒಂದೂ ಸಿಕ್ಸ್ ಹೊಡೆಯದ ಬ್ಯಾಟ್ಸ್ ಮನ್ ಇದ್ದಾರೆ ಎಂದರೆ ನಂಬುತ್ತೀರಾ.! ಹೌದು ಬೌಲರ್ ಗಳು ಕೂಡಾ ಮೈದಾನದ ಮೂಲೆ ಮೂಲೆಗೆ ಸಿಕ್ಸ್ ಬಾರಿಸುವ ಈ ಕಾಲದಲ್ಲಿ ಹಲವಾರು ವರ್ಷ ಏಕದಿನ ಪಂದ್ಯಗಳನ್ನಾಡಿದರೂ ಚೆಂಡನ್ನು ಸಿಕ್ಸರ್ ಗೆರೆ ದಾಟಿಸಲು ವಿಫಲರಾದ ಬ್ಯಾಟ್ಸ್ ಮನ್ ಗಳು ಇದ್ದಾರೆ. ಇನ್ನೊಂದು ವಿಶೇಷ ಏನೆಂದರೆ ಈ ಪಟ್ಟಿಯಲ್ಲಿ ಭಾರತಿಯರೂ ಕೂಡಾ ಇದ್ದಾರೆ. !

1. ಕಾಲಮ್ ಫರ್ಗ್ಯುಸನ್ (ಆಸ್ಟ್ರೇಲಿಯಾ)

ಆಸ್ಟ್ರೇಲಿಯನ್ನರು ಸಿಕ್ಸರ್ ಬಾರಿಸುವುದರಲ್ಲಿ ಎತ್ತಿದ ಕೈ. ಆದರೆ  ಆಸ್ಟ್ರೇಲಿಯಾದ ಮಧ್ಯಮ ಕ್ರಮಾಂಕದ ಆಟಗಾರ ಕಾಲಮ್  ಫರ್ಗ್ಯುಸನ ಈ ಪಟ್ಟಿಯಲ್ಲಿರುವ ಏಕೈಕ ಆಸೀಸ್ ಆಟಗಾರ.  2009 ರಲ್ಲಿ ಆಸ್ಟ್ರೇಲಿಯಾ ತಂಡಕ್ಕೆ ಆಯ್ಕೆಯಾದ ಕಾಲಮ್ 30 ಅಂತಾರಾಷ್ಟ್ರೀಯ ಏಕದಿನ ಪಂದ್ಯಗಳನ್ನಾಡಿದ್ದಾರೆ. 5 ಅರ್ಧಶತಕ ಒಳಗೊಂಡ 662 ರನ್ ಗಳಿಸಿರುವ ಕಾಂಗರೂ ನಾಡಿನ ಆಟಗಾರ ಸಿಕ್ಸರ್ ಹೊಡೆಯಲು ಮಾತ್ರ ವಿಫಲರಾಗಿದ್ದಾರೆ. 

2. ತಿಲಾನ್ ಸಮರವೀರ ( ಶ್ರೀಲಂಕಾ)

ದ್ವೀಪ ರಾಷ್ಟ್ರ ಶ್ರೀಲಂಕಾದ ಈ ಆಟಗಾರ ಟೆಸ್ಟ್ ಕ್ರಿಕೆಟ್ ನಲ್ಲಿ ತನ್ನದೇ ಆದ ಛಾಪು ಮೂಡಿಸಿದ್ದಾರೆ. ದಿಗ್ಗಜ ಆಟಗಾರರಾದ ಕುಮಾರ ಸಂಗಕ್ಕಾರ ಮತ್ತು ಮಹೇಲ ಜಯವರ್ಧನೆ ಜೊತೆ ಟೆಸ್ಟ್ ಕ್ರಿಕೆಟ್ ಜೊತೆಯಾಟವಾಡುತ್ತಿದ್ದ ಸಮರವೀರ 81 ಟೆಸ್ಟ್ ಪಂದ್ಯಗಳಿಂದ 5000 ರನ್ ಗಳಿಸಿದ ಸಾಧನೆ ಮಾಡಿದ್ದಾರೆ.

ಆದರೆ ಏಕದಿನ ಕ್ರಿಕೆಟ್ ನಲ್ಲಿ ಸಮರವೀರ ಸಾಧನೆ ಅಷ್ಟಕ್ಕಷ್ಟೆ. ತನ್ನ 12 ವರ್ಷಗಳ ಕ್ರಿಕೆಟ್ ಜೀವನದಲ್ಲಿ 53 ಏಕದಿನ ಪಂದ್ಯಗಳನ್ನಾಡಿ 862 ರನ್ ಗಳಿಸಿದ್ದಾರೆ. ಆದರೆ ಒಂದೇ ಒಂದು ಸಿಕ್ಸ್ ಬಾರಿಸಲೂ ಸಾಧ್ಯವಾಗಿಲ್ಲ. 

3. ಜೆಫ್ರೀ ಬಾಯ್ಕಾಟ್ ( ಇಂಗ್ಲೆಂಡ್)

ಇಂಗ್ಲೆಂಡ್ ನ ಮಾಜಿ ಕ್ರಿಕೆಟರ್ ಜೆಫ್ರೀ ಬಾಯ್ಕಾಟ್ ಕೂಡಾ ಈ ಪಟ್ಟಿಯಲ್ಲಿ ಸ್ಥಾನ ಪಡೆದಿದ್ದಾರೆ. ಟೆಸ್ಟ್ ಕ್ರಿಕೆಟ್ ನ ದಿಗ್ಗಜ ಎಂದು ಕರೆಯಲ್ಪಡುವ ಬಾಯ್ಕಾಟ್ 36 ಏಕದಿನ ಪಂದ್ಯಗಳನ್ನಾಡಿದ್ದಾರೆ. ಒಂದು ಶತಕ ಸೇರಿದಂತೆ 9 ಅರ್ಧ ಶತಕಗಳನ್ನು ದಾಖಲಿಸಿದ್ದರೂ ಏಕದಿನ ಕ್ರಿಕೆಟ್ ನಲ್ಲಿ ಸಿಕ್ಸರ್ ಮಾತ್ರ ಇವರಿಗೆ ಮರೀಚಿಕೆಯಾಗಿಯೇ ಉಳಿದಿದೆ.

4. ಡಾಯಿನ್ ಇಬ್ರಾಹಿಂ ( ಜಿಂಬಾಬ್ವೆ )

ಜಿಂಬಾಬ್ವೆ ತಂಡದ ಮಾಜಿ ಆಟಗಾರ ಡಾಯಿನ್ ಇಬ್ರಾಹಿಂ ಈ ಪಟ್ಟಿಯಲ್ಲಿ ಸ್ಥಾನ ಪಡೆದಿರುವ ಮತ್ತೋರ್ವ ಬ್ಯಾಟ್ಸ್ ಮನ್. 2001ರಲ್ಲಿ ಅಂತಾರಾಷ್ಟ್ರೀಯ ಕ್ರಿಕೆಟ್ ಗೆ ಪಾದಾರ್ಪಣೆ ಮಾಡಿದ ಈ ಆಟಗಾರ ಜಿಂಬಾಬ್ವೆ ಟೆಸ್ಟ್ ಮತ್ತು ಏಕದಿನ ತಂಡದ ಭಾಗವಾಗಿದ್ದರು.
82 ಏಕದಿನ ಪಂದ್ಯಗಳಿಂದ 1442 ರನ್ ಗಳಿಸಿರುವ ಇಬ್ರಾಹಿಂ ಒಂದು ಶತಕ ಮತ್ತು ನಾಲ್ಕು ಅರ್ಧ ಶತಕ ದಾಖಲಿಸಿದ್ದಾರೆ. ಬಾಂಗ್ಲಾದೇಶದೆದುರು ಬಾರಿಸಿದ 121 ರನ್ ಇವರ ಅತ್ಯಧಿಕ ರನ್. ಇವರು ತಮ್ಮ ಕ್ರಿಕಟ್ ಬಾಳ್ವೆಯನ್ನು ಒಂದೂ ಸಿಕ್ಸ್ ಬಾರಿಸದೆ ಕಳೆದಿದ್ದಾರೆ. ಯಾಕೆಂದರೆ ಇಬ್ರಾಹಿಂ ಟೆಸ್ಟ್ ಕ್ರಿಕೆಟ್ ನಲ್ಲಿ ಕೂಡಾ ಸಿಕ್ಸರ್ ಬಾರಿಸಲು ಸಫಲರಾಗಿಲ್ಲ. 

5. ಮನೋಜ್ ಪ್ರಭಾಕರ್ (ಭಾರತ)

ಒಂದೂ ಸಿಕ್ಸ್ ಹೊಡೆಯದವರ ಪಟ್ಟಿಯಲ್ಲಿರುವ ಏಕೈಕ ಭಾರತೀಯ ಮನೋಜ್ ಪ್ರಭಾಕರ್.1984ರಿಂದ 1996 ರವರೆಗೆ ಭಾರತ ತಂಡವನ್ನು ಪ್ರತಿನಿಧಿಸಿದ್ದ ಈ ಆಲ್ ರೌಂಡರ್ ಕೂಡಾ ಸಿಕ್ಸ್ ಹೊಡೆಯಲು ವಿಫಲರಾಗಿದ್ದರು.

ವೇಗದ ಬೌಲರ್ ಆಗಿದ್ದ ಮನೋಜ್ ಪ್ರಭಾಕರ್ ಬ್ಯಾಟಿಂಗ್ ಕೂಡಾ ಉತ್ತಮವಾಗಿಯೇ ಇತ್ತು. ಹಲವಾರು ಇನ್ನಿಂಗ್ಸ್ ಗಳಲ್ಲಿ ಓಪನಿಂಗ್ ಬ್ಯಾಟ್ಸ್ ಮನ್ ಆಗಿ ಕಣಕ್ಕಿಳಿದಿದ್ದ ಮನೋಜ್ 98 ಏಕದಿನ ಇನ್ನಿಂಗ್ಸ್ ಗಳಿಂದ 1858 ರನ್ ಗಳಿಸಿದ್ದರು. ಇದು 11 ಅರ್ಧ ಶತಕ ಮತ್ತು 2 ಶತಕಗಳನ್ನು ಒಳಗೊಂಡಿತ್ತು. 

1987,1992, 1996ರ ಏಕದಿನ ವಿಶ್ವಕಪ್ ಗಳಲ್ಲಿ ಭಾರತ ತಂಡದ ಭಾಗವಾಗಿದ್ದ ಮನೋಜ್ ಪ್ರಭಾಕರ್‌ಗೆ ಚೆಂಡನ್ನು ಮೈದಾನದ ಅಂಚಿನ ಸಿಕ್ಸರ್ ಗೆರೆ ದಾಟಿಸಲು ಮಾತ್ರ ಸಾಧ್ಯವಾಗಲೇ ಇಲ್ಲ. 

ಟಾಪ್ ನ್ಯೂಸ್

Sringeri Sharadamba Temple; ಪ್ರಧಾನಿ ಮೋದಿ ಹೆಸರಲ್ಲಿ ಸಹಸ್ರನಾಮ ಪೂಜೆ

Sringeri Sharadamba Temple; ಪ್ರಧಾನಿ ಮೋದಿ ಹೆಸರಲ್ಲಿ ಸಹಸ್ರನಾಮ ಪೂಜೆ

Mangaluru: ಸಂಪರ್ಕ ಸೇತುವೆ ಇಲ್ಲದೆ ಬೋಟ್ ಮೂಲಕ ಬಂದು ಮತ ಚಲಾಯಿಸಿದ ಜನ

Mangaluru: ಸಂಪರ್ಕ ಸೇತುವೆ ಇಲ್ಲದೆ ಬೋಟ್ ಮೂಲಕ ಬಂದು ಮತ ಚಲಾಯಿಸಿದ ಜನ

INDIA ಒಕ್ಕೂಟ ಅಧಿಕಾರಕ್ಕೆ ಬಂದರೆ ರೈತರ ಸಾಲಮನ್ನಾ, ನಿರುದ್ಯೋಗ ನಿವಾರಣೆಗೆ ಆದ್ಯತೆ: ರಾಹುಲ್

INDIA ಒಕ್ಕೂಟ ಅಧಿಕಾರಕ್ಕೆ ಬಂದರೆ ರೈತರ ಸಾಲಮನ್ನಾ, ನಿರುದ್ಯೋಗ ನಿವಾರಣೆಗೆ ಆದ್ಯತೆ: ರಾಹುಲ್

Lok Sabha Polls: ಧರ್ಮಸ್ಥಳದಲ್ಲಿ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆ ಮತದಾನ

Lok Sabha Polls: ಧರ್ಮಸ್ಥಳದಲ್ಲಿ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆ ಮತದಾನ

WhatsApp ಭಾರತದಲ್ಲಿ ಸ್ಥಗಿತಗೊಳಿಸ್ತೇವೆ; ಹೈಕೋರ್ಟ್‌ ಮೆಟ್ಟಿಲೇರಿದ ಪ್ರಕರಣ, ಏನಿದು?

WhatsApp ಭಾರತದಲ್ಲಿ ಸ್ಥಗಿತಗೊಳಿಸ್ತೇವೆ; ಹೈಕೋರ್ಟ್‌ ಮೆಟ್ಟಿಲೇರಿದ ಪ್ರಕರಣ, ಏನಿದು?

Eletion: ತೀರ್ಥಹಳ್ಳಿಯಲ್ಲಿ ಪ್ರಚಾರದ ವೇಳೆ ತಮಿಳಿನಲ್ಲೆ ಮಾತನಾಡಿದ ನಟ ಶಿವರಾಜ್ ಕುಮಾರ್

Eletion: ತೀರ್ಥಹಳ್ಳಿಯಲ್ಲಿ ಪ್ರಚಾರದ ವೇಳೆ ತಮಿಳಿನಲ್ಲೆ ಮಾತನಾಡಿದ ನಟ ಶಿವರಾಜ್ ಕುಮಾರ್

Chitradurga: ಹೃದಯಾಘಾತದಿಂದ ಚುನಾವಣಾ ಕರ್ತವ್ಯದಲ್ಲಿದ್ದ ಶಿಕ್ಷಕಿ ಮೃತ್ಯು…

Chitradurga: ಚುನಾವಣಾ ಕರ್ತವ್ಯದಲ್ಲಿದ್ದಾಗಲೇ ಹೃದಯಾಘಾತಗೊಂಡು ಶಿಕ್ಷಕಿ ಮೃತ್ಯು…


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

IPL 2024: ಗೆಲುವಿನ ವಿಶ್ವಾಸದಲ್ಲಿ ಕೆಕೆಆರ್‌

IPL 2024: ಗೆಲುವಿನ ವಿಶ್ವಾಸದಲ್ಲಿ ಕೆಕೆಆರ್‌

17

Team India: ಟಿ20 ವಿಶ್ವಕಪ್‌ ತಂಡ ರಾಹುಲ್‌ಗೆ ಚಾನ್ಸ್‌, ಹಾರ್ದಿಕ್‌ ಪಾಂಡ್ಯಗೆ ಕೊಕ್‌?

Chess: ವಿಶ್ವ ಚೆಸ್‌ ಚಾಂಪಿಯನ್‌ಶಿಪ್‌: ಆತಿಥ್ಯ ಹಕ್ಕಿಗಾಗಿ ಭಾರತ ಬಿಡ್‌

Chess: ವಿಶ್ವ ಚೆಸ್‌ ಚಾಂಪಿಯನ್‌ಶಿಪ್‌: ಆತಿಥ್ಯ ಹಕ್ಕಿಗಾಗಿ ಭಾರತ ಬಿಡ್‌

Archery World Cup: ಆರ್ಚರಿ ವಿಶ್ವಕಪ್‌ ರಿಕರ್ವ್‌ ವಿಭಾಗದಲ್ಲೂ ಭಾರತ ಫೈನಲ್‌ಗೆ

Archery World Cup: ಆರ್ಚರಿ ವಿಶ್ವಕಪ್‌ ರಿಕರ್ವ್‌ ವಿಭಾಗದಲ್ಲೂ ಭಾರತ ಫೈನಲ್‌ಗೆ

1-rerwer

IPL; ಸನ್‌ರೈಸರ್ಸ್ ಹೈದರಾಬಾದ್ ವಿರುದ್ಧ ಜಯದ ನಗು ಬೀರಿದ ಆರ್ ಸಿಬಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Sringeri Sharadamba Temple; ಪ್ರಧಾನಿ ಮೋದಿ ಹೆಸರಲ್ಲಿ ಸಹಸ್ರನಾಮ ಪೂಜೆ

Sringeri Sharadamba Temple; ಪ್ರಧಾನಿ ಮೋದಿ ಹೆಸರಲ್ಲಿ ಸಹಸ್ರನಾಮ ಪೂಜೆ

ಮೊದಲ ಬಾರಿ ಕುಂದಾನಗರಿಯಲ್ಲಿ ಪ್ರಧಾನಿ ಮೋದಿ ವಾಸ್ತವ್ಯ; 28ಕ್ಕೆ ಸಮಾವೇಶ

ಮೊದಲ ಬಾರಿ ಕುಂದಾನಗರಿಯಲ್ಲಿ ಪ್ರಧಾನಿ ಮೋದಿ ವಾಸ್ತವ್ಯ; 28ಕ್ಕೆ ಸಮಾವೇಶ

ಬಿಸಿಲ ಝಳದಿಂದ ಮೈದಾನಗಳು ಖಾಲಿ; ಮಕ್ಕಳ ಆಟಕ್ಕೂ ಉರಿ ಬಿಸಿಲು ಅಡ್ಡಿ!

ಬಿಸಿಲ ಝಳದಿಂದ ಮೈದಾನಗಳು ಖಾಲಿ; ಮಕ್ಕಳ ಆಟಕ್ಕೂ ಉರಿ ಬಿಸಿಲು ಅಡ್ಡಿ!

Mangaluru: ಸಂಪರ್ಕ ಸೇತುವೆ ಇಲ್ಲದೆ ಬೋಟ್ ಮೂಲಕ ಬಂದು ಮತ ಚಲಾಯಿಸಿದ ಜನ

Mangaluru: ಸಂಪರ್ಕ ಸೇತುವೆ ಇಲ್ಲದೆ ಬೋಟ್ ಮೂಲಕ ಬಂದು ಮತ ಚಲಾಯಿಸಿದ ಜನ

INDIA ಒಕ್ಕೂಟ ಅಧಿಕಾರಕ್ಕೆ ಬಂದರೆ ರೈತರ ಸಾಲಮನ್ನಾ, ನಿರುದ್ಯೋಗ ನಿವಾರಣೆಗೆ ಆದ್ಯತೆ: ರಾಹುಲ್

INDIA ಒಕ್ಕೂಟ ಅಧಿಕಾರಕ್ಕೆ ಬಂದರೆ ರೈತರ ಸಾಲಮನ್ನಾ, ನಿರುದ್ಯೋಗ ನಿವಾರಣೆಗೆ ಆದ್ಯತೆ: ರಾಹುಲ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.