ಸಿಂಧು ಮೇಲೆ ಭಾರೀ ನಿರೀಕ್ಷೆ


Team Udayavani, Sep 11, 2018, 6:30 AM IST

pv-janpan.jpg

ಟೋಕಿಯೊ: ಸತತವಾಗಿ ದೊಡ್ಡ ಕೂಟಗಳ ಫೈನಲ್‌ನಲ್ಲಿ ಎಡವುತ್ತಿದ್ದರೂ ಮಂಗಳವಾರದಿಂದ ಆರಂಭವಾಗಲಿರುವ 
“ಜಪಾನ್‌ ಓಪನ್‌ ಬ್ಯಾಡ್ಮಿಂಟನ್‌ ಕೂಟ’ದಲ್ಲಿ ಪಿ.ವಿ. ಸಿಂಧು ಅವರೇ ಭಾರತದ ದೊಡ್ಡ ಭರವಸೆಯಾಗಿ ಗೋಚರಿಸುತ್ತಿದ್ದಾರೆ. ಭಾರತದ ಮತ್ತೋರ್ವ ಸ್ಟಾರ್‌ ಆಟಗಾರ್ತಿ ಸೈನಾ ನೆಹ್ವಾಲ್‌ ಮತ್ತು ಪುರುಷರ ವಿಭಾಗದ ಪ್ರಮುಖ ಸ್ಪರ್ಧಿ ಬಿ. ಸಾಯಿ ಪ್ರಣೀತ್‌ ಈ ಕೂಟದಿಂದ ಹಿಂದೆ ಸರಿದಿದ್ದಾರೆ.

ಜಪಾನ್‌ ಓಪನ್‌ನಲ್ಲಿ ಚೀನ, ಕೊರಿಯಾ, ಇಂಡೋನೇಶ್ಯ ಹಾಗೂ ಆತಿಥೇಯ ಜಪಾನಿನ ಬಲಿಷ್ಠ ಆಟಗಾರ್ತಿಯರು ಪಾಲ್ಗೊಳ್ಳುತ್ತಿದ್ದಾರೆ. ಹೀಗಾಗಿ ಇದು ಕೇವಲ ಏಶ್ಯ ಮಟ್ಟದ ಸ್ಪರ್ಧೆಯಾದರೂ ವಿಶ್ವ ಮಟ್ಟದ ಛಾತಿ ಪಡೆದುಕೊಂಡಿದೆ.
ಪಿ.ವಿ. ಸಿಂಧು ಮೊದಲ ಸುತ್ತಿನಲ್ಲಿ ಜಪಾನಿನ ಸಯಾಕಾ ಟಕಾಹಶಿ ವಿರುದ್ಧ ಸ್ಪರ್ಧೆಗೆ ಇಳಿಯಲಿದ್ದಾರೆ. ಭಾರತೀಯಳ ಕ್ವಾರ್ಟರ್‌ ಫೈನಲ್‌ ಪ್ರವೇಶ ಬಹುತೇಕ ಖಾತ್ರಿ. ಆಗ 3 ಬಾರಿಯ ವಿಶ್ವ ವಿಜೇತೆ ಕ್ಯಾರೋಲಿನಾ ಮರಿನ್‌ ಅಥವಾ ಅಕಾನೆ ಯಮಾಗುಚಿ ಸವಾಲನ್ನು ಎದುರಿಸಬೇಕಾಗಬಹುದು. ಸೈನಾ ನೆಹ್ವಾಲ್‌ ಜಕಾರ್ತಾ ಏಶ್ಯನ್‌ ಗೇಮ್ಸ್‌ನಲ್ಲಿ ಕಂಚಿನ ಪದಕ ಜಯಿಸಿದರೆ, ಸಿಂಧು ಬೆಳ್ಳಿ ಗೆದ್ದಿದ್ದರು.

ಶ್ರೀಕಾಂತ್‌ಗೆ ದೊಡ್ಡ ಸವಾಲು
ಪುರುಷರ ವಿಭಾಗದಲ್ಲಿ ಕೆ. ಶ್ರೀಕಾಂತ್‌ ಮತ್ತು ಎಚ್‌.ಎಸ್‌. ಪ್ರಣಯ್‌ ಅವರಿಗೆ ಮರಳಿ ಫಾರ್ಮ್ ಕಂಡುಕೊಳ್ಳಲು ಇದೊಂದು ವೇದಿಕೆಯಾಗಿದೆ. ಇವರಿಬ್ಬರೂ ವಿಶ್ವ ಚಾಂಪಿಯನ್‌ಶಿಪ್‌ ಹಾಗೂ ಜಕಾರ್ತಾ ಏಶ್ಯನ್‌ ಗೇಮ್ಸ್‌ನಲ್ಲಿ ನಿರಾಶಾದಾಯಕ ಪ್ರದರ್ಶನ ನೀಡಿದ್ದರು.

ಮಾಜಿ ನಂ.1 ಆಟಗಾರ ಕೆ. ಶ್ರೀಕಾಂತ್‌ ಪ್ರಸಕ್ತ ಋತುವಿನಲ್ಲಿ ಯಾವುದೇ ದೊಡ್ಡ ಪ್ರಶಸ್ತಿ ಗೆದ್ದಿಲ್ಲ. ಮಲೇಶ್ಯ ಓಪನ್‌ನಲ್ಲಿ ಸೆಮಿಫೈನಲ್‌ ಪ್ರವೇಶಿಸಿದ್ದೇ ಅತ್ಯುತ್ತಮ ಸಾಧನೆ. ಇವರ ಮೊದಲ ಸುತ್ತಿನ ಎದುರಾಳಿ ಚೀನದ ಹುವಾಂಗ್‌ ಯುಕ್ಸಿಯಾಂಗ್‌. ಇನ್ನೊಂದು ಪಂದ್ಯದಲ್ಲಿ ಎಚ್‌.ಎಸ್‌. ಪ್ರಣಯ್‌ ಇಂಡೋನೇಶ್ಯದ ಜೊನಾಥನ್‌ ಕ್ರಿಸ್ಟಿ ಅವರ ಕಠಿನ ಸವಾಲು ಎದುರಿಸುವರು. ಮೊನ್ನೆಯಷ್ಟೇ ಇಂಡೋನೇಶ್ಯಕ್ಕೆ ಮೊದಲ ಏಶ್ಯಾಡ್‌ ಚಿನ್ನ ತಂದಿತ್ತ ಹೆಗ್ಗಳಿಕೆ ಕ್ರಿಸ್ಟಿ ಅವರದ್ದಾಗಿದೆ.

ಡಬಲ್ಸ್‌ ಮುಖಾಮುಖೀ
ರವಿವಾರವಷ್ಟೇ “ಹೈದರಾಬಾದ್‌ ಓಪನ್‌ ಸೂಪರ್‌ 100 ಟೂರ್ನಿ’ಯಲ್ಲಿ ಚಾಂಪಿಯನ್‌ ಆದ ಸಮೀರ್‌ ವರ್ಮ ಕೊರಿಯಾದ ಲೀ ಡಾಂಗ್‌ ಕಿಯುನ್‌ ವಿರುದ್ಧ ಆಡುವರು. ಆದರೆ ಕಳೆದ ವರ್ಷ ಸಿಂಗಾಪುರ್‌ ಓಪನ್‌ ಪ್ರಶಸ್ತಿ ಗೆದ್ದ ಬಿ. ಸಾಯಿ ಪ್ರಣೀತ್‌ ಕೂಟದಿಂದ ಹಿಂದೆ ಸರಿದಿದ್ದಾರೆ. ಆದರೆ ಇದಕ್ಕೆ ಕಾರಣ ತಿಳಿದು ಬಂದಿಲ್ಲ.

ಪುರುಷರ ಡಬಲ್ಸ್‌ನಲ್ಲಿ ಕಾಮನ್ವೆಲ್ತ್‌ ಗೇಮ್ಸ್‌ ಬೆಳ್ಳಿ ಪದಕ ವಿಜೇತರಾದ ಸಾತ್ವಿಕ್‌ರಾಜ್‌ ರಾಂಕಿರೆಡ್ಡಿ-ಚಿರಾಗ್‌ ಶೆಟ್ಟಿ ಜಪಾನಿನ ಟಕೆಶಿ ಕಮುರ-ಕೀಗೊ ಸೊನೊಡ ವಿರುದ್ಧ; ಮನು ಅತ್ರಿ-ಬಿ. ಸುಮೀತ್‌ ರೆಡ್ಡಿ ಮಲೇಶ್ಯದ ಗೋಹ್‌ ವಿ ಶೆಮ್‌-ಟಾನ್‌ ವೀ ಕಿಯೋಂಗ್‌ ವಿರುದ್ಧ; ವನಿತಾ ಡಬಲ್ಸ್‌ನಲ್ಲಿ ಅಶ್ವಿ‌ನಿ ಪೊನ್ನಪೊ-ಎನ್‌. ಸಿಕ್ಕಿ ರೆಡ್ಡಿ ಕೊರಿಯಾದ ಚಾಂಗ್‌ ಯೆ ನಾ-ಜಂಗ್‌ ಕ್ಯುಂಗ್‌ ಯುನ್‌ ವಿರುದ್ಧ ಆಡುವರು.

ಮಿಶ್ರ ಡಬಲ್ಸ್‌ನಲ್ಲಿ ಪ್ರಣವ್‌ ಜೆರ್ರಿ ಚೋಪ್ರಾ-ಸಿಕ್ಕಿ ರೆಡ್ಡಿ ಇಂಡೋನೇಶ್ಯದ ಟೊಂಟೋವಿ ಅಹ್ಮದ್‌-ಲಿಲಿಯಾನಾ ನಾಸಿರ್‌ ವಿರುದ್ಧ; ಸಾತ್ವಿಕ್‌ರಾಜ್‌-ಅಶ್ವಿ‌ನಿ ಚೀನದ ವಾಂಗ್‌ ಯಿಲ್ಯು-ಹುವಾಂಗ್‌ ಡೊಂಗ್‌ಪಿಂಗ್‌ ವಿರುದ್ಧ ಸೆಣಸುವರು.

ಟಾಪ್ ನ್ಯೂಸ್

LS polls: ನಾಳೆ ಸಿಎಂ, ಡಿಸಿಎಂ ಭೇಟಿಯಾಗಿ ಕಾಂಗ್ರೆಸ್ ಸೇರ್ಪಡೆ ಬಗ್ಗೆ ತೀರ್ಮಾನ; ಸಂಗಣ್ಣ

LS polls: ನಾಳೆ ಸಿಎಂ, ಡಿಸಿಎಂ ಭೇಟಿಯಾಗಿ ಕಾಂಗ್ರೆಸ್ ಸೇರ್ಪಡೆ ಬಗ್ಗೆ ತೀರ್ಮಾನ; ಸಂಗಣ್ಣ

Davanagare: ಚುನಾವಣಾ ತರಬೇತಿಗೆ ಚಕ್ಕರ್; ಅನುಚಿತ ವರ್ತನೆಗೆ ಶಿಕ್ಷಕ ಅಮಾನತು

Davanagare: ಚುನಾವಣಾ ತರಬೇತಿಗೆ ಚಕ್ಕರ್; ಅನುಚಿತ ವರ್ತನೆಗೆ ಶಿಕ್ಷಕ ಅಮಾನತು

10

ದ.ಕ: ಬಿಜೆಪಿ ಜತೆಗಿನ ಮೈತ್ರಿಗೆ ವಿರೋಧ: 42 ಮಂದಿ ಜೆಡಿಎಸ್ ಪದಾಧಿಕಾರಿಗಳು ‘ಕೈʼ ಸೇರ್ಪಡೆ

Chikkamagaluru: ದಾಖಲೆ ಇಲ್ಲದೆ ಸಾಗಿಸುತ್ತಿದ್ದ 13.10 ಲಕ್ಷ ರೂ. ವಶಕ್ಕೆ

Chikkamagaluru: ದಾಖಲೆ ಇಲ್ಲದೆ ಸಾಗಿಸುತ್ತಿದ್ದ 13.10 ಲಕ್ಷ ರೂ. ವಶಕ್ಕೆ

ಸಮೀಕ್ಷೆಗಳಲ್ಲಿ ಹಿನ್ನಡೆ; ಹೀಗಾಗಿ ಕಾಂಗ್ರೆಸ್ ಕೀಳು‌ಮಟ್ಟದ ರಾಜಕಾರಣ ಮಾಡುತ್ತಿದೆ: ಜೋಶಿ

ಸಮೀಕ್ಷೆಗಳಲ್ಲಿ ಹಿನ್ನಡೆ; ಹೀಗಾಗಿ ಕಾಂಗ್ರೆಸ್ ಕೀಳು‌ಮಟ್ಟದ ರಾಜಕಾರಣ ಮಾಡುತ್ತಿದೆ: ಜೋಶಿ

Road mishap: ಖಾಸಗಿ ಬಸ್‌ – ಕಾರು ಅಪಘಾತ; ಆಂಧ್ರ ಮೂಲದ ಮೂವರು ಮೃತ್ಯು

Road mishap: ಖಾಸಗಿ ಬಸ್‌ – ಕಾರು ಅಪಘಾತ; ಆಂಧ್ರ ಮೂಲದ ಮೂವರು ಮೃತ್ಯು

Dwarakish: ಕನ್ನಡದ ಹಿರಿಯ ನಟ, ನಿರ್ಮಾಪಕ ದ್ವಾರಕೀಶ್‌ ವಿಧಿವಶ

Dwarakish: ಕನ್ನಡದ ಹಿರಿಯ ನಟ, ನಿರ್ಮಾಪಕ ದ್ವಾರಕೀಶ್‌ ವಿಧಿವಶ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಮಣಿಪಾಲ್ ಆಸ್ಪತ್ರೆಯ ವಿಶೇಷ ಆಯೋಜನೆ: RCBvsSRH ಪಂದ್ಯ ವೀಕ್ಷಿಸಿದ ಕ್ಯಾನ್ಸರ್‌ ಪೀಡಿತರು

ಮಣಿಪಾಲ್ ಆಸ್ಪತ್ರೆಯ ವಿಶೇಷ ಆಯೋಜನೆ: RCBvsSRH ಪಂದ್ಯ ವೀಕ್ಷಿಸಿದ ಕ್ಯಾನ್ಸರ್‌ ಪೀಡಿತರು

IPL 2024; ಮುಂಬೈ ಪಂದ್ಯದ ಟಾಸ್ ಕಳ್ಳಾಟ ಬಿಚ್ಚಿಟ್ಟ ಆರ್ ಸಿಬಿ ನಾಯಕ ಫಾಫ್| Video

IPL 2024; ಮುಂಬೈ ಪಂದ್ಯದ ಟಾಸ್ ಕಳ್ಳಾಟ ಬಿಚ್ಚಿಟ್ಟ ಆರ್ ಸಿಬಿ ನಾಯಕ ಫಾಫ್| Video

RCBsvSRH; ಚಿನ್ನಸ್ವಾಮಿಯಲ್ಲಿ ರೆಕಾರ್ಡ್ಸ್ ಸುರಿಮಳೆ; ದಾಖಲೆಗಳ ವಿವರ ಇಲ್ಲಿದೆ

RCBsvSRH; ಚಿನ್ನಸ್ವಾಮಿಯಲ್ಲಿ ರೆಕಾರ್ಡ್ಸ್ ಸುರಿಮಳೆ; ದಾಖಲೆಗಳ ವಿವರ ಇಲ್ಲಿದೆ

‘Please sell the RCB team to someone else’; Tennis star appeal

IPL 2024; ‘ದಯವಿಟ್ಟು ಆರ್ ಸಿಬಿ ತಂಡವನ್ನು ಬೇರೆಯವರಿಗೆ ಮಾರಿ ಬಿಡಿ’; ಟೆನ್ನಿಸ್ ತಾರೆ ಮನವಿ

1-eweqw

RR vs KKR : ನಂ. 1, 2 ತಂಡಗಳ ನಡುವೆ ಬಿಗ್‌ ಫೈಟ್‌

MUST WATCH

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

udayavani youtube

ಕೇಕ್ ಪ್ರಿಯರಿಗೆ ಹೇಳಿ ಮಾಡಿಸಿದ ಜಾಗ ಔರಾ .

udayavani youtube

ಶ್ರೀ ವೈಷ್ಣವಿ ದುರ್ಗಾ ದೇವಾಲಯ

udayavani youtube

ಟೈಟನ್ ಕಂಪೆನಿಯ Xylys ವಾಚ್ ವಿಶೇಷತೆಗಳೇನು ?

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

ಹೊಸ ಸೇರ್ಪಡೆ

LS polls: ನಾಳೆ ಸಿಎಂ, ಡಿಸಿಎಂ ಭೇಟಿಯಾಗಿ ಕಾಂಗ್ರೆಸ್ ಸೇರ್ಪಡೆ ಬಗ್ಗೆ ತೀರ್ಮಾನ; ಸಂಗಣ್ಣ

LS polls: ನಾಳೆ ಸಿಎಂ, ಡಿಸಿಎಂ ಭೇಟಿಯಾಗಿ ಕಾಂಗ್ರೆಸ್ ಸೇರ್ಪಡೆ ಬಗ್ಗೆ ತೀರ್ಮಾನ; ಸಂಗಣ್ಣ

Davanagare: ಚುನಾವಣಾ ತರಬೇತಿಗೆ ಚಕ್ಕರ್; ಅನುಚಿತ ವರ್ತನೆಗೆ ಶಿಕ್ಷಕ ಅಮಾನತು

Davanagare: ಚುನಾವಣಾ ತರಬೇತಿಗೆ ಚಕ್ಕರ್; ಅನುಚಿತ ವರ್ತನೆಗೆ ಶಿಕ್ಷಕ ಅಮಾನತು

10

ದ.ಕ: ಬಿಜೆಪಿ ಜತೆಗಿನ ಮೈತ್ರಿಗೆ ವಿರೋಧ: 42 ಮಂದಿ ಜೆಡಿಎಸ್ ಪದಾಧಿಕಾರಿಗಳು ‘ಕೈʼ ಸೇರ್ಪಡೆ

Chikkamagaluru: ದಾಖಲೆ ಇಲ್ಲದೆ ಸಾಗಿಸುತ್ತಿದ್ದ 13.10 ಲಕ್ಷ ರೂ. ವಶಕ್ಕೆ

Chikkamagaluru: ದಾಖಲೆ ಇಲ್ಲದೆ ಸಾಗಿಸುತ್ತಿದ್ದ 13.10 ಲಕ್ಷ ರೂ. ವಶಕ್ಕೆ

ಸಮೀಕ್ಷೆಗಳಲ್ಲಿ ಹಿನ್ನಡೆ; ಹೀಗಾಗಿ ಕಾಂಗ್ರೆಸ್ ಕೀಳು‌ಮಟ್ಟದ ರಾಜಕಾರಣ ಮಾಡುತ್ತಿದೆ: ಜೋಶಿ

ಸಮೀಕ್ಷೆಗಳಲ್ಲಿ ಹಿನ್ನಡೆ; ಹೀಗಾಗಿ ಕಾಂಗ್ರೆಸ್ ಕೀಳು‌ಮಟ್ಟದ ರಾಜಕಾರಣ ಮಾಡುತ್ತಿದೆ: ಜೋಶಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.