ಪರಿಪೂರ್ಣ ಅಂತ್ಯ: ರೂಟ್‌


Team Udayavani, Sep 13, 2018, 6:00 AM IST

ap9112018000206b.jpg

ಲಂಡನ್‌: ಅಲಸ್ಟೇರ್‌ ಕುಕ್‌ ಅವರಿಗೆ ಗೆಲುವಿನ ವಿದಾಯ ಮತ್ತು ವೇಗಿ ಜೇಮ್ಸ್‌ ಆ್ಯಂಡರ್ಸನ್‌ ಅಂತಿಮ ವಿಕೆಟ್‌ ಕಿತ್ತು ಟೆಸ್ಟ್‌ ಇತಿಹಾಸದ ಶ್ರೇಷ್ಠ ವೇಗದ ಬೌಲರ್‌ ಎಂದೆನಿಸಿಕೊಂಡ ಈ ಭಾರತ ವಿರುದ್ಧದ ಐದು ಪಂದ್ಯಗಳ ಟೆಸ್ಟ್‌ ಸರಣಿ 4-1 ಗೆಲುವಿನೊಂದಿಗೆ ಪರಿಪೂರ್ಣ ರೀತಿಯಲ್ಲಿ ಅಂತ್ಯಗೊಂಡಿದೆ ಎಂದು ಇಂಗ್ಲೆಂಡ್‌ ತಂಡದ ನಾಯಕ ಜೋ ರೂಟ್‌ ಹೇಳಿದ್ದಾರೆ. 

ಲಂಡನ್‌ನಲ್ಲಿ ಮಂಗಳವಾರ ಮುಗಿದ ಐದನೇ ಟೆಸ್ಟ್‌ ಪಂದ್ಯವನ್ನು 118 ರನ್ನುಗಳಿಂದ ಗೆದ್ದ ಇಂಗ್ಲೆಂಡ್‌ ಸರಣಿಯನ್ನು 4-1 ಅಂತರದಿಂದ ತನ್ನದಾಗಿಸಿಕೊಂಡಿದೆ.

ಕೌಂಟಿಯಲ್ಲಿ ಆಡಲು ನಿರಾಕರಿಸಿ ಟೀಕೆಗಳನ್ನು ಎದುರಿಸಿದ್ದ ಲೆಗ್‌ ಸ್ಪಿನ್ನರ್‌ ಅದಿಲ್‌ ರಶೀದ್‌ ಅಪಾಯಕಾರಿ ಕೆಎಲ್‌ ರಾಹುಲ್‌ ಅವರ ವಿಕೆಟನ್ನು ಹಾರಿಸುವ ಮೂಲಕ ಇಂಗ್ಲೆಂಡ್‌ ಗೆಲುವಿಗೆ ಚಾಲನೆ ನೀಡಿದರು. ರಾಹುಲ್‌ ಮತ್ತು ಪಂತ್‌ ಜತೆಯಾಟ ಮುರಿದ ಬಳಿಕ ಭಾರತ ಹಠಾತ್‌ ಕುಸಿಯಿತು.

ವಿದಾಯ ಪಂದ್ಯದಲ್ಲಿ ಇಂಗ್ಲೆಂಡ್‌ ಗೆಲ್ಲುವ ಮೂಲಕ  ಕುಕ್‌ ಸಂಭ್ರಮಪಟ್ಟರೆ ಜಿಮ್ಮಿ ಶ್ರೇಷ್ಠ ವೇಗದ ಬೌಲರ್‌ ಎಂದೆನಿಸಿಕೊಂಡಿದ್ದಾರೆ. ಇದರ ನಡುವೆ ಇಂಗ್ಲೆಂಡ್‌ ಸರಣಿ ಗೆದ್ದಿರುವುದು ಅವರಿಬ್ಬರ ಸಂಭ್ರಮವನ್ನು ಮತ್ತಷ್ಟು ಹೆಚ್ಚಿಸಿದೆ ಎಂದು ರೂಟ್‌ ತಿಳಿಸಿದರು.

ಓವಲ್‌ ಟೆಸ್ಟ್‌ ಆಡಲು ಬಂದಾಗ ಅಗ್ರ ಕ್ರಮಾಂಕದ ಬ್ಯಾಟಿಂಗ್‌ ಬಗ್ಗೆ ಇಂಗ್ಲೆಂಡಿಗೆ ಒತ್ತಡವಿತ್ತು ಮತ್ತು ವಿಕೆಟ್‌ಕೀಪಿಂಗ್‌ ಕುರಿತು ಗೊಂದಲವಿತ್ತು. ಆದರೆ ಎಲ್ಲವೂ ಸುಗಮವಾಗಿ ಸಾಗಿದೆ. ಭಾರತ ಪ್ರತಿಹೋರಾಟ ನೀಡಿದರೂ ಅಸಾಧ್ಯ ಗೆಲುವಿನಿಂದ ದೂರ ಉಳಿಯಿತು ಎಂದು ರೂಟ್‌ ನುಡಿದರು.

ರಶೀದ್‌ ಅವರ ದಾಳಿ ಅತ್ಯದ್ಭುತವಾಗಿತ್ತು. ಕ್ರೀಸ್‌ನಲ್ಲಿ ಗಟ್ಟಿಯಾಗಿ ನಿಂತಿದ್ದ ರಾಹುಲ್‌ಗೆ ಇದರಿಂದ ತೀವ್ರ ಆಘಾತವಾಗಿತ್ತು. ಈ ಎಸೆತವನ್ನು ಶೇನ್‌ ವಾರ್ನ್ ಅವರ ಬಾಲ್‌ ಆಫ್ ದಿ ಸೆಂಚುರಿಗೆ ಹೋಲಿಸಲಾಗಿದೆ. 1993ರ ಆ್ಯಷಸ್‌ ಟೆಸ್ಟ್‌ ಸರಣಿಯ ಮೊದಲ ಪಂದ್ಯದಲ್ಲಿ ಮೈಕ್‌ ಗ್ಯಾಟಿಂಗ್‌ ಅವರ ವಿಕೆಟನ್ನು ಹಾರಿಸಿದ ವಾರ್ನ್ ಎಸೆತವನ್ನು ಬಾಲ್‌ ಆಫ್ ದಿ ಸೆಂಚುರಿ ಎಂದು ಬಣ್ಣಿಸಲಾಗಿತ್ತು.

ಇದೊಂದು ರಶೀದ್‌ ಅವರ ಅದ್ಭುತ ಎಸೆತವಾಗಿತ್ತು. ಈ ಎಸೆತ ತೀಕ್ಷ್ಣವಾಗಿತ್ತು. ಹಾಗಾಗಿ ಅವರು ನಮ್ಮ ತಂಡದಲ್ಲಿದ್ದಾರೆ. ಪಂದ್ಯವನ್ನು ಅಥವಾ ಪರಿಸ್ಥಿತಿಯನ್ನು ತಿರುಗಿಸಬಲ್ಲ ಸಾಮರ್ಥ್ಯ ಅವರಲ್ಲಿದೆ ಎಂದು ರೂಟ್‌ ತಿಳಿಸಿದರು.

ಟಾಪ್ ನ್ಯೂಸ್

Afghan batsman Rahmanullah Gurbaz to return to KKR team

KKR ತಂಡಕ್ಕೆ ಮರಳಲಿರುವ ಅಫ್ಘಾನ್‌ ಬ್ಯಾಟರ್‌ ರಹ್ಮಾನುಲ್ಲ ಗುರ್ಬಾಝ್

G. Parameshwara ಕಾನೂನಾತ್ಮಕ ಸಂಸ್ಥೆ ಮೇಲೆ ಮಾಜಿ ಸಿಎಂ ಅನುಮಾನಪಟ್ಟರೆ ಹೇಗೆ?

G. Parameshwara ಕಾನೂನಾತ್ಮಕ ಸಂಸ್ಥೆ ಮೇಲೆ ಮಾಜಿ ಸಿಎಂ ಅನುಮಾನಪಟ್ಟರೆ ಹೇಗೆ?

H. D. Kumaraswamy ಸದ್ಯದಲ್ಲೇ ರಾಜ್ಯಪಾಲರ ಭೇಟಿ

Prajwal Revanna Case ಸದ್ಯದಲ್ಲೇ ರಾಜ್ಯಪಾಲರ ಭೇಟಿ: ಕುಮಾರಸ್ವಾಮಿ

D. V. Sadananda Gowda; ಸಿ.ಡಿ. ಬಿಡುವಂಥ ನೀಚ ಕೆಲಸದಿಂದ ಒಕ್ಕಲಿಗ ನಾಯಕರಾಗುವುದಿಲ್ಲ

D. V. Sadananda Gowda; ಸಿ.ಡಿ. ಬಿಡುವಂಥ ನೀಚ ಕೆಲಸದಿಂದ ಒಕ್ಕಲಿಗ ನಾಯಕರಾಗುವುದಿಲ್ಲ

Bad weather: KKR team landed in Varanasi

Bad weather: ವಾರಾಣಸಿಯಲ್ಲಿ ಉಳಿದ ಕೆಕೆಆರ್‌ ತಂಡ

18

Benjana Padavu: ನೇಣು ಬಿಗಿದು ಆತ್ಮಹತ್ಯೆ

Encounter in Kashmir:

ಕಾಶ್ಮೀರದಲ್ಲಿ ಎನ್‌ಕೌಂಟರ್‌: ಇಬ್ಬರು ಉಗ್ರರ ಹತ್ಯೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Afghan batsman Rahmanullah Gurbaz to return to KKR team

KKR ತಂಡಕ್ಕೆ ಮರಳಲಿರುವ ಅಫ್ಘಾನ್‌ ಬ್ಯಾಟರ್‌ ರಹ್ಮಾನುಲ್ಲ ಗುರ್ಬಾಝ್

Bad weather: KKR team landed in Varanasi

Bad weather: ವಾರಾಣಸಿಯಲ್ಲಿ ಉಳಿದ ಕೆಕೆಆರ್‌ ತಂಡ

yuzvendra Chahal

IPL 2024; ಹೊಸ ಭಾರತೀಯ ದಾಖಲೆ ಬರೆದ ಯುಜುವೇಂದ್ರ ಚಾಹಲ್

Truth Behind MS Dhoni’s No. 9 Decision Out

CSK; ಧೋನಿ ಯಾಕೆ ಕೆಳ ಕ್ರಮಾಂಕದಲ್ಲಿ ಆಡುತ್ತಿದ್ದಾರೆ…: ಹೊರಬಿತ್ತು ಸತ್ಯ

1-ewqqwewq

Must win ಡೆಲ್ಲಿ ಪ್ಲೇ ಆಫ್ ಆಸೆ ಜೀವಂತ: ರಾಜಸ್ಥಾನ್‌ ರಾಯಲ್ಸ್‌ ಸವಾಲು

MUST WATCH

udayavani youtube

ಭಗವಂತನ ಆಣೆ ಯಾವ ಸಂತ್ರಸ್ತೆಯರನ್ನು ನಾನು ಭೇಟಿ ಮಾಡಿಲ್ಲಶ್ರೇಯಸ್‌ಪಟೇಲ್ ಹೇಳಿಕೆ

udayavani youtube

ಉಡುಪಿ ರೈತನ ವಿಭಿನ್ನ ಪ್ರಯತ್ನ : ಕೈ ಹಿಡಿದ ಕೇಸರಿ ಕಲ್ಲಂಗಡಿ

udayavani youtube

ಹಿಮೋಫಿಲಿಯಾ ಈ ರಕ್ತದ ಕಾಯಿಲೆ ಇರುವವರು ಮಾಡಬೇಕಾದ್ದೇನು ?

udayavani youtube

ಪ್ರಚಾರದ ವೇಳೆ ಕೈ ಮುಖಂಡನಿಗೆ ಕಪಾಳ ಮೋಕ್ಷ‌ ಮಾಡಿದ ಡಿಕೆಶಿ;

udayavani youtube

ಅಂಕಲ್ ಎಗ್ ರೈಸ್ ಕಾರ್ನರ್ ನಲ್ಲಿ ದಿನಕ್ಕೆ ಎಷ್ಟು ಮೊಟ್ಟೆ ಉಪಯೋಗಿಸುತ್ತಾರೆ ಗೊತ್ತಾ ?|

ಹೊಸ ಸೇರ್ಪಡೆ

Afghan batsman Rahmanullah Gurbaz to return to KKR team

KKR ತಂಡಕ್ಕೆ ಮರಳಲಿರುವ ಅಫ್ಘಾನ್‌ ಬ್ಯಾಟರ್‌ ರಹ್ಮಾನುಲ್ಲ ಗುರ್ಬಾಝ್

G. Parameshwara ಕಾನೂನಾತ್ಮಕ ಸಂಸ್ಥೆ ಮೇಲೆ ಮಾಜಿ ಸಿಎಂ ಅನುಮಾನಪಟ್ಟರೆ ಹೇಗೆ?

G. Parameshwara ಕಾನೂನಾತ್ಮಕ ಸಂಸ್ಥೆ ಮೇಲೆ ಮಾಜಿ ಸಿಎಂ ಅನುಮಾನಪಟ್ಟರೆ ಹೇಗೆ?

H. D. Kumaraswamy ಸದ್ಯದಲ್ಲೇ ರಾಜ್ಯಪಾಲರ ಭೇಟಿ

Prajwal Revanna Case ಸದ್ಯದಲ್ಲೇ ರಾಜ್ಯಪಾಲರ ಭೇಟಿ: ಕುಮಾರಸ್ವಾಮಿ

D. V. Sadananda Gowda; ಸಿ.ಡಿ. ಬಿಡುವಂಥ ನೀಚ ಕೆಲಸದಿಂದ ಒಕ್ಕಲಿಗ ನಾಯಕರಾಗುವುದಿಲ್ಲ

D. V. Sadananda Gowda; ಸಿ.ಡಿ. ಬಿಡುವಂಥ ನೀಚ ಕೆಲಸದಿಂದ ಒಕ್ಕಲಿಗ ನಾಯಕರಾಗುವುದಿಲ್ಲ

Bad weather: KKR team landed in Varanasi

Bad weather: ವಾರಾಣಸಿಯಲ್ಲಿ ಉಳಿದ ಕೆಕೆಆರ್‌ ತಂಡ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.