ವಿಶ್ವ ಶೂಟಿಂಗ್‌: ಭಾರತದ ಸರ್ವಾಧಿಕ ಪದಕ ದಾಖಲೆ


Team Udayavani, Sep 15, 2018, 6:00 AM IST

issf-2222.jpg

ಚಾಂಗ್ವಾನ್‌ (ದಕ್ಷಿಣ ಕೊರಿಯಾ): ಐಎಸ್‌ಎಸ್‌ಎಫ್ ವಿಶ್ವ ಶೂಟಿಂಗ್‌ ಚಾಂಪಿಯನ್‌ಶಿಪ್‌ನಲ್ಲಿ ಕಳಪೆ ಪ್ರದರ್ಶನ ನೀಡಿದ್ದ ಭಾರತ ಹಿರಿಯರ ಶೂಟಿಂಗ್‌ ತಂಡಕ್ಕೆ ಗುರುಪ್ರೀತ್‌ ಸಿಂಗ್‌ ಬೆಳ್ಳಿ ನಗು ಮೂಡಿಸಿದ್ದಾರೆ. ಇದೇ ವೇಳೆ ಕೂಟದ ಅಂತಿಮ ದಿನವೂ ಭಾರತ ಕಿರಿಯರು ಮಿಂಚಿದರು. 

ಕೊನೆಯ ದಿನದ ಅಂತ್ಯಕ್ಕೆ 11 ಚಿನ್ನ, 9 ಬೆಳ್ಳಿ ಹಾಗೂ 7 ಕಂಚಿನ ಪದಕ ಸೇರಿದಂತೆ ಒಟ್ಟಾರೆ 27 ಪದಕ ಬಾಚಿಕೊಂಡು ಭಾರತ ಹಿಂದಿನ ಎಲ್ಲ ಕೂಟಗಳಿಗಿಂತಲೂ ಸರ್ವ ಶ್ರೇಷ್ಠ ಪ್ರದರ್ಶನ ನೀಡಿತು. ಒಟ್ಟಾರೆ ಕೂಟಕ್ಕೆ ತೆರೆಬಿದ್ದಿತ್ತು.  ಮುಂದೆ ಭಾರತೀಯರು ಯೂತ್‌ ಒಲಿಂಪಿಕ್ಸ್‌ ಗೇಮ್ಸ್‌ ಶೂಟಿಂಗ್‌ಗೆ ಸಿದ್ಧವಾಗಬೇಕಿದೆ. ಇದಾದ ಬಳಿಕ 2019 ಫೆಬ್ರವರಿಯಲ್ಲಿ ವಿಶ್ವಕಪ್‌ ಶೂಟಿಂಗ್‌ ಗುಂಪು 1ರಲ್ಲಿ ಸ್ಪರ್ಧೆ ನಡೆಯಲಿದೆ. 2020ರ ಟೋಕಿಯೋ ಒಲಿಂಪಿಕ್ಸ್‌ಗೆ ಅರ್ಹತೆ ಪಡೆಯುವಲ್ಲಿ ಕೂಟ ಪ್ರಮುಖವಾಗಿದ್ದು ಭಾರತೀಯರು ಅದೃಷ್ಟ ಪರೀಕ್ಷೆಗೆ ಇಳಿಯಲಿದ್ದಾರೆ.

ಗುರುಪ್ರೀತ್‌ಗೆ ಬೆಳ್ಳಿ: ಹಿರಿಯರ ವಿಭಾಗದ ಸ್ಟಾಂಡರ್ಡ್‌ ಪಿಸ್ತೂಲ್‌ ವಿಭಾಗದಲ್ಲಿ ಮಾಜಿ ಕಾಮನ್‌ವೆಲ್ತ್‌ ಗೇಮ್ಸ್‌ ಚಿನ್ನದ ಪದಕ ವಿಜೇತ ಗುರುಪ್ರೀತ್‌ ಒಟ್ಟು 579 ಅಂಕ ಕಲೆ ಹಾಕಿ ಬೆಳ್ಳಿ ಗೆದ್ದರು. ಹಿರಿಯರ ತಂಡದ ಸ್ಪರ್ಧಿಗಳ ಕಳಪೆ ಪ್ರದರ್ಶನದ ನಡುವೆಯೂ ಇವರು ಬೆಳ್ಳಿ ಗೆದ್ದದ್ದು ವಿಶೇಷವಾಗಿತ್ತು. ಆದರೆ ಗುರುಪ್ರೀತ್‌ (560),  ಅಮನ್‌ಪ್ರೀತ್‌ ಸಿಂಗ್‌(560), ಲಂಡನ್‌ ಒಲಿಂಪಿಕ್ಸ್‌ ಬೆಳ್ಳಿ ವಿಜೇತ ವಿಜಯ್‌ ಕುಮಾರ್‌ (560) ಅಂಕ ಒಳಗೊಂಡ ತಂಡ ಸೋಲುಂಡು ನಿರಾಸೆ ಅನುಭವಿಸಿತು.

ಕಿರಿಯರ ಸ್ವರ್ಣ ಯುಗ: ಕಿರಿಯರ ವಿಭಾಗದಲ್ಲಿ ಭಾರತೀಯರ ಚಿನ್ನದ ಪಾರಮ್ಯ ಮತ್ತೆ ಮುಂದುವರಿಯಿತು. ಕೂಟದ ಆರಂಭದಿಮದಲೂ ಕಿರಿಯರ ವಿಭಾಗದ ಶೂಟರ್‌ಗಳು ಪದಕಗಳ ಮಳೆಯನ್ನೇ ಸುರಿಸಿದ್ದರು. ಕೊನೆಯ ದಿನವೂ ಅಂತಹುದೇ ಸಾಧನೆ ಮುಂದುವರಿಯಿತು. 25 ಮೀ. ಸ್ಟಾಂಡರ್ಡ್‌ ಪಿಸ್ತೂಲ್‌ ವಿಭಾಗದಲ್ಲಿ ವಿಜಯವೀರ್‌ ಸಿಧು ಚಿನ್ನದ ಪದಕ ಪಡೆದುಕೊಂಡರು. ಇದಕ್ಕೂ ಮೊದಲು ಇವರನ್ನು ಒಳಗೊಂಡ ತಂಡವು ಚಿನ್ನದ ಪದಕ ಪಡೆದಿತ್ತು. ವಿಜಯವೀರ್‌ ಸಿಧು (564 ಅಂಕ), ರಾಜ್‌ಕನ್ವರ್‌ ಸಿಂಗ್‌ ಸಿಧು (564) ಹಾಗೂ ಆದರ್ಶ್‌ ಸಿಂಗ್‌ (559) ಅಂಕಗಳಿಸಿ ತಂಡವು ಚಿನ್ನ ಕೊರಳಿಗೇರಿಸಿಕೊಂಡಿತ್ತು.

ಟಾಪ್ ನ್ಯೂಸ್

Patna: ಪಾಟ್ನಾದಲ್ಲಿ ನಿತೀಶ್ ಕುಮಾರ್ ಪಕ್ಷದ ನಾಯಕನ ಗುಂಡಿಕ್ಕಿ ಹತ್ಯೆ… ಆರೋಪಿಗಳು ಪರಾರಿ

Patna: ಪಾಟ್ನಾದಲ್ಲಿ ನಿತೀಶ್ ಕುಮಾರ್ ಪಕ್ಷದ ನಾಯಕನ ಗುಂಡಿಕ್ಕಿ ಹತ್ಯೆ… ಆರೋಪಿಗಳು ಪರಾರಿ

Ramakrishna Mission: ರಾಮಕೃಷ್ಣ ಮಠ, ಮಿಷನ್‌ನ ಅಧ್ಯಕ್ಷರಾಗಿ ಕನ್ನಡಿಗ ಸ್ವಾಮೀಜಿ ಆಯ್ಕೆ

Ramakrishna Mission: ರಾಮಕೃಷ್ಣ ಮಠ, ಮಿಷನ್‌ನ ಅಧ್ಯಕ್ಷರಾಗಿ ಕನ್ನಡಿಗ ಸ್ವಾಮೀಜಿ ಆಯ್ಕೆ

Sam Pitroda: ಪಿತ್ರೋಡಾ ಹೇಳಿಕೆ, ನಮ್ಮ ಅಭಿಪ್ರಾಯ ಅಲ್ಲ: ಕಾಂಗ್ರೆಸ್‌

Sam Pitroda: ಪಿತ್ರೋಡಾ ಹೇಳಿಕೆ, ನಮ್ಮ ಅಭಿಪ್ರಾಯ ಅಲ್ಲ: ಕಾಂಗ್ರೆಸ್‌

Lok Sabha Election: ಸೀನಿಯರ್‌ ಖೂಬಾಗೆ ಜ್ಯೂನಿಯರ್‌ ಖಂಡ್ರೆ ಸವಾಲು

Lok Sabha Election: ಸೀನಿಯರ್‌ ಖೂಬಾಗೆ ಜ್ಯೂನಿಯರ್‌ ಖಂಡ್ರೆ ಸವಾಲು

Vote: ಉದಾಸೀನ ಮಾಡದಿರಿ, ತಪ್ಪದೇ ಮತ ಹಾಕಿ…

Vote: ಉದಾಸೀನ ಮಾಡದಿರಿ, ತಪ್ಪದೇ ಮತ ಹಾಕಿ…

ರಕ್ಷಣೆ: ಸ್ವಾವಲಂಬನೆಯತ್ತ ಭಾರತದ ದೃಢ ಹೆಜ್ಜೆ

ರಕ್ಷಣೆ: ಸ್ವಾವಲಂಬನೆಯತ್ತ ಭಾರತದ ದೃಢ ಹೆಜ್ಜೆ

yaksh

Kundapura: ಕಳಚಿದ ಕೊಂಡಿ: ಭಾಗವತ ಸುಬ್ರಹ್ಮಣ್ಯ ಧಾರೇಶ್ವರ ಇನ್ನಿಲ್ಲ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Ipl: ಡೆಲ್ಲಿ ಗೆಲುವಿಗೆ ಪಂತ್‌, ಪಟೇಲ್‌ ನೆರವು

Ipl: ಡೆಲ್ಲಿ ಗೆಲುವಿಗೆ ಪಂತ್‌, ಪಟೇಲ್‌ ನೆರವು

IPL: ಮತ್ತೂಂದು ದೊಡ್ಡ ಮೊತ್ತಕ್ಕೆ ಎಸ್‌ಆರ್‌ಎಚ್‌ ಸ್ಕೆಚ್‌

IPL: ಮತ್ತೂಂದು ದೊಡ್ಡ ಮೊತ್ತಕ್ಕೆ ಎಸ್‌ಆರ್‌ಎಚ್‌ ಸ್ಕೆಚ್‌

1-asdasdas

IPL; ಸ್ಟಾಯಿನಿಸ್‌ ಏಟಿಗೆ ತವರಲ್ಲೆ ಚಾಂಪಿಯನ್‌ ಚೆನ್ನೈ ಠುಸ್‌!

DCvsGT; ಪಂತ್‌ ನಾಯಕತ್ವಕ್ಕೆ ಅಗ್ನಿಪರೀಕ್ಷೆ:  ತವರಿನ “ಕೋಟ್ಲಾ’ದಲ್ಲಿ ಗುಜರಾತ್‌ ಎದುರಾಳಿ

DCvsGT; ಪಂತ್‌ ನಾಯಕತ್ವಕ್ಕೆ ಅಗ್ನಿಪರೀಕ್ಷೆ:  ತವರಿನ “ಕೋಟ್ಲಾ’ದಲ್ಲಿ ಗುಜರಾತ್‌ ಎದುರಾಳಿ

IPL 2024; Chahal’s 200-wicket haul; First bowler to achieve this feat

IPL 2024; ಚಹಲ್‌ 200 ವಿಕೆಟ್‌ಗಳ ಕಮಾಲ್‌; ಈ ಸಾಧನೆಗೈದ ಮೊದಲ ಬೌಲರ್‌

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Patna: ಪಾಟ್ನಾದಲ್ಲಿ ನಿತೀಶ್ ಕುಮಾರ್ ಪಕ್ಷದ ನಾಯಕನ ಗುಂಡಿಕ್ಕಿ ಹತ್ಯೆ… ಆರೋಪಿಗಳು ಪರಾರಿ

Patna: ಪಾಟ್ನಾದಲ್ಲಿ ನಿತೀಶ್ ಕುಮಾರ್ ಪಕ್ಷದ ನಾಯಕನ ಗುಂಡಿಕ್ಕಿ ಹತ್ಯೆ… ಆರೋಪಿಗಳು ಪರಾರಿ

Ramakrishna Mission: ರಾಮಕೃಷ್ಣ ಮಠ, ಮಿಷನ್‌ನ ಅಧ್ಯಕ್ಷರಾಗಿ ಕನ್ನಡಿಗ ಸ್ವಾಮೀಜಿ ಆಯ್ಕೆ

Ramakrishna Mission: ರಾಮಕೃಷ್ಣ ಮಠ, ಮಿಷನ್‌ನ ಅಧ್ಯಕ್ಷರಾಗಿ ಕನ್ನಡಿಗ ಸ್ವಾಮೀಜಿ ಆಯ್ಕೆ

Sam Pitroda: ಪಿತ್ರೋಡಾ ಹೇಳಿಕೆ, ನಮ್ಮ ಅಭಿಪ್ರಾಯ ಅಲ್ಲ: ಕಾಂಗ್ರೆಸ್‌

Sam Pitroda: ಪಿತ್ರೋಡಾ ಹೇಳಿಕೆ, ನಮ್ಮ ಅಭಿಪ್ರಾಯ ಅಲ್ಲ: ಕಾಂಗ್ರೆಸ್‌

Lok Sabha Election: ಸೀನಿಯರ್‌ ಖೂಬಾಗೆ ಜ್ಯೂನಿಯರ್‌ ಖಂಡ್ರೆ ಸವಾಲು

Lok Sabha Election: ಸೀನಿಯರ್‌ ಖೂಬಾಗೆ ಜ್ಯೂನಿಯರ್‌ ಖಂಡ್ರೆ ಸವಾಲು

Vote: ಉದಾಸೀನ ಮಾಡದಿರಿ, ತಪ್ಪದೇ ಮತ ಹಾಕಿ…

Vote: ಉದಾಸೀನ ಮಾಡದಿರಿ, ತಪ್ಪದೇ ಮತ ಹಾಕಿ…

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.