ಏಕಕಾಲಕ್ಕೆ ಭಾರತ-ಬಾಂಗ್ಲಾ; ಪಾಕ್‌-ಅಫ್ಘಾನ್‌ ಸ್ಪರ್ಧೆ


Team Udayavani, Sep 21, 2018, 6:00 AM IST

asia-ban-ind-pak-af.jpg

ದುಬಾೖ: ಬಿಡುವಿಲ್ಲದ ವೇಳಾಪಟ್ಟಿಗೆ ಆಕ್ಷೇಪ ವ್ಯಕ್ತವಾಗುತ್ತಲೇ “ಏಶ್ಯ ಕಪ್‌’ ಕ್ರಿಕೆಟ್‌ ಪಂದ್ಯಾವಳಿ “ಸೂಪರ್‌ ಫೋರ್‌’ ದಿಕ್ಕಿನತ್ತ ಮುಖ ಮಾಡಿದೆ. 

ಗುರುವಾರದ ಅಂತಿಮ ಗ್ರೂಪ್‌ ಪಂದ್ಯ ಮುಗಿಯುತ್ತಿದ್ದಂತೆಯೇ ಶುಕ್ರವಾರದಿಂದಲೇ ಮುಂದಿನ ಸುತ್ತಿನ ಹಣಾಹಣಿ ಮೊದಲ್ಗೊಳ್ಳಲಿದೆ. ಭಾರತ, ಪಾಕಿಸ್ಥಾನ, ಬಾಂಗ್ಲಾದೇಶ ಮತ್ತು ಅಫ್ಘಾನಿಸ್ಥಾನ ತಂಡಗಳು ಈ ಹಂತದಲ್ಲಿ ಪರಸ್ಪರ ಮುಖಾಮುಖೀಯಾಗಲಿವೆ.

ಶುಕ್ರವಾರ ಮತ್ತು ರವಿವಾರ ಏಕಕಾಲಕ್ಕೆ 2 ಪಂದ್ಯಗಳು ನಡೆಯುವುದು ಈ ಕೂಟದ ವೇಳಾಪಟ್ಟಿಯ ಮತ್ತೂಂದು ಎಡವಟ್ಟು. ಸೂಪರ್‌ ಫೋರ್‌ ಹಂತದ ಒಂದು ಸುತ್ತಿನ ಪಂದ್ಯದ ಬಳಿಕ ಶನಿವಾರ ಕೂಟಕ್ಕೆ ವಿರಾಮ ನೀಡಲಾಗಿದೆ. ಕೊನೆಯ 2 ಸೂಪರ್‌ ಫೋರ್‌ ಪಂದ್ಯಗಳು ಮಂಗಳವಾರ ಹಾಗೂ ಬುಧವಾರ ನಡೆಯಲಿವೆ.

ಭಾರತ ಗ್ರೂಪ್‌ ಹಂತದಲ್ಲಿ ಸತತ 2 ದಿನ 2 ಪಂದ್ಯಗಳನ್ನಾಡುವ ಅನಿವಾರ್ಯತೆಗೆ ಸಿಲುಕಿತ್ತು. ಈಗ ಬಾಂಗ್ಲಾದೇಶ ಮತ್ತು ಅಫ್ಘಾನಿಸ್ಥಾನಕ್ಕೂ ಈ ಒತ್ತಡ ಎದುರಾಗಿದೆ. ಗುರುವಾರ ಕೊನೆಯ ಗ್ರೂಪ್‌ ಪಂದ್ಯ ಆಡಲಿರುವ ಈ ತಂಡಗಳು ಶುಕ್ರವಾರವೇ ಸೂಪರ್‌ ಫೋರ್‌ ಮುಖಾಮುಖೀಗೆ ಅಣಿಯಾಗಬೇಕಿದೆ!

ಭಾರತಕ್ಕೆ ಬಾಂಗ್ಲಾ ಸವಾಲು
ದುಬಾೖಯಲ್ಲಿ ನಡೆಯುವ ಪಂದ್ಯದಲ್ಲಿ ಟೀಮ್‌ ಇಂಡಿಯಾ ಬಾಂಗ್ಲಾದೇಶದ ಸವಾಲನ್ನು ಎದುರಿಸಲಿದೆ. ಅಬುಧಾಬಿಯಲ್ಲಿ ಪಾಕಿಸ್ಥಾನ-ಅಫ್ಘಾನಿಸ್ಥಾನ ಸೆಣಸಾಡಲಿವೆ. ಹಾಂಕಾಂಗ್‌ ಮತ್ತು ಶ್ರೀಲಂಕಾ ಕೂಟದಿಂದ ಹೊರಬಿದ್ದಿವೆ.

ಹಾಂಕಾಂಗ್‌ ವಿರುದ್ಧ ಪರದಾಡಿ, ಪಾಕಿಸ್ಥಾನದ ಸದ್ದಡಗಿಸಿದ ರೋಹಿತ್‌ ಶರ್ಮ ನಾಯಕತ್ವದ ಭಾರತ, ಶುಕ್ರವಾರದ ಸೂಪರ್‌ ಫೋರ್‌ ಪಂದ್ಯದಲ್ಲಿ ಬಾಂಗ್ಲಾದೇಶದ ಸವಾಲನ್ನು ಎದುರಿಸಲಿದೆ. ಮಶ್ರಫೆ ಮೊರ್ತಜ ನಾಯಕತ್ವದ ಬಾಂಗ್ಲಾ ಏಕದಿನ ಮಟ್ಟಿಗೆ ಬಲಿಷ್ಠ ಹಾಗೂ ಸಶಕ್ತ ತಂಡವೇ ಆಗಿದೆ. ಭಾರತ ಸ್ವಲ್ಪವೇ ಯಾಮಾರಿದರೂ ಅಪಾಯಕ್ಕೆ ಸಿಲುಕುವ ಸಾಧ್ಯತೆ ಇಲ್ಲದಿಲ್ಲ.

ಪಾಕನ್ನು ಮಣಿಸಿದ ಹುರುಪು
ಇತ್ತ ಬದ್ಧ ಎದುರಾಳಿ ಪಾಕ್‌ ವಿರುದ್ಧ ನಿರೀಕ್ಷೆಗೂ ಮೀರಿದ ಪ್ರದರ್ಶನವಿತ್ತು ಗೆದ್ದು ಬಂದ ಭಾರತ ಹೊಸ ಹುರುಪಿನಲ್ಲಿದೆ. ಬಾಂಗ್ಲಾ ವಿರುದ್ಧವೂ ಇದೇ ಲಯವನ್ನು ಕಾಯ್ದುಕೊಳ್ಳುವುದು ರೋಹಿತ್‌ ಪಡೆಯ ಮುಂದಿರುವ ಯೋಜನೆ.

ಆರಂಭಿಕರಾದ ರೋಹಿತ್‌ ಶರ್ಮ-ಶಿಖರ್‌ ಧವನ್‌ ಎರಡೂ ಪಂದ್ಯಗಳಲ್ಲಿ ಉತ್ತಮ ಅಡಿಪಾಯ ನಿರ್ಮಿಸಿದ್ದಾರೆ. ವಿರಾಟ್‌ ಕೊಹ್ಲಿ ಗೈರಲ್ಲಿ ಅಂಬಾಟಿ ರಾಯುಡು ಆಟ ಭರವಸೆದಾಯಕವಾಗಿದೆ. ಹೀಗಾಗಿ ಕೆ.ಎಲ್‌. ರಾಹುಲ್‌ ವೇಟಿಂಗ್‌ ಲಿಸ್ಟ್‌ನಲ್ಲೇ ಇರಬೇಕೋ ಏನೋ. ದಿನೇಶ್‌ ಕಾರ್ತಿಕ್‌ ಮೇಲೆ ಆಡಳಿತ ಮಂಡಳಿಗೆ ಭಾರೀ ವಿಶ್ವಾಸ ಇರುವುದರಿಂದ ಮನೀಷ್‌ ಪಾಂಡೆಗೆ ಅವಕಾಶ ದೂರ ಎಂದೇ ಭಾವಿಸಬೇಕಾಗುತ್ತದೆ. ಹಾಂಕಾಂಗ್‌ ಎದುರು ಸೊನ್ನೆ ಸುತ್ತಿದ ಅನುಭವಿ ಧೋನಿ ಅವರ ಬ್ಯಾಟಿಂಗ್‌ ಫಾರ್ಮ್ ಹೇಗೆ ಎಂಬುದನ್ನು ತಿಳಿಯಬೇಕಿದೆ. ಕೇದಾರ್‌ ಜಾಧವ್‌ ಅವರ ಆಲ್‌ರೌಂಡ್‌ ಯಶಸ್ಸು ಭಾರತದ ಪಾಲಿಗೊಂದು ಬೋನಸ್‌ ಎಂಬುದರಲ್ಲಿ ಎರಡು ಮಾತಿಲ್ಲ. ಹೀಗಾಗಿ ಹಾರ್ದಿಕ್‌ ಪಾಂಡ್ಯ ಗೈರು ಭಾರತಕ್ಕೆ ದೊಡ್ಡ ಹೊಡೆತವೇನೂ ಅಲ್ಲ. ಇವರ ಬದಲು ಮತ್ತೆ ಖಲೀಲ್‌ ಅಹ್ಮದ್‌ ಆಡುವ ಸಾಧ್ಯತೆ ಇದೆ.
ಪಾಕಿಸ್ಥಾನವನ್ನು ಉರುಳಿಸುವಲ್ಲಿ ಪ್ರಧಾನ ಪಾತ್ರ ವಹಿಸಿದ ಭುವನೇಶ್ವರ್‌ ಆ್ಯಂಡ್‌ ಕಂಪೆನಿ ತನ್ನ “ಘಾತಕ ಮಟ್ಟ’ವನ್ನು ಉಳಿಸಿಕೊಂಡೀತೆಂಬ ವಿಶ್ವಾಸ ಇದೆ.

ಏಶ್ಯ ಕಪ್‌: ಸೂಪರ್‌-4 ವೇಳಾಪಟ್ಟಿ
ದಿನಾಂಕ    ಪಂದ್ಯ    ಸ್ಥಳ    ಆರಂಭ

ಸೆ. 21 (ಶುಕ್ರವಾರ)    ಭಾರತ-ಬಾಂಗ್ಲಾದೇಶ    ದುಬಾೖ    ಸಂಜೆ 5.00
ಸೆ. 21 (ಶುಕ್ರವಾರ)    ಪಾಕಿಸ್ಥಾನ-ಅಫ್ಘಾನಿಸ್ಥಾನ    ಅಬುಧಾಬಿ    ಸಂಜೆ 5.00
ಸೆ. 23 (ರವಿವಾರ)    ಭಾರತ-ಪಾಕಿಸ್ಥಾನ    ದುಬಾೖ        ಸಂಜೆ 5.00
ಸೆ. 23 (ರವಿವಾರ)    ಬಾಂಗ್ಲಾದೇಶ-ಅಫ್ಘಾನಿಸ್ಥಾನ    ಅಬುಧಾಬಿ    ಸಂಜೆ 5.00
ಸೆ. 25 (ಮಂಗಳವಾರ)    ಭಾರತ-ಅಫ್ಘಾನಿಸ್ಥಾನ    ದುಬಾೖ    ಸಂಜೆ 5.00
ಸೆ. 26 (ಬುಧವಾರ)    ಪಾಕಿಸ್ಥಾನ-ಬಾಂಗ್ಲಾದೇಶ    ಅಬುಧಾಬಿ    ಸಂಜೆ 5.00
* ಸಮಯ: ಭಾರತೀಯ ಕಾಲಮಾನ
* ಪ್ರಸಾರ: ಸ್ಟಾರ್‌ ನ್ಪೋರ್ಟ್ಸ್

ಟಾಪ್ ನ್ಯೂಸ್

ಲೋಕಸಭೆ ಚುನಾವಣೆ ಫಲಿತಾಂಶ ರಾಜ್ಯ ರಾಜಕಾರಣದ ಮೇಲೆ ದೊಡ್ಡ ಪರಿಣಾಮ ಬೀರಲಿದೆ: ಬೊಮ್ಮಾಯಿ

ಲೋಕಸಭೆ ಚುನಾವಣೆ ಫಲಿತಾಂಶ ರಾಜ್ಯ ರಾಜಕಾರಣದ ಮೇಲೆ ದೊಡ್ಡ ಪರಿಣಾಮ ಬೀರಲಿದೆ: ಬೊಮ್ಮಾಯಿ

LS polls: ನಾಳೆ ಸಿಎಂ, ಡಿಸಿಎಂ ಭೇಟಿಯಾಗಿ ಕಾಂಗ್ರೆಸ್ ಸೇರ್ಪಡೆ ಬಗ್ಗೆ ತೀರ್ಮಾನ; ಸಂಗಣ್ಣ

LS polls: ನಾಳೆ ಸಿಎಂ, ಡಿಸಿಎಂ ಭೇಟಿಯಾಗಿ ಕಾಂಗ್ರೆಸ್ ಸೇರ್ಪಡೆ ಬಗ್ಗೆ ತೀರ್ಮಾನ; ಸಂಗಣ್ಣ

Davanagare: ಚುನಾವಣಾ ತರಬೇತಿಗೆ ಚಕ್ಕರ್; ಅನುಚಿತ ವರ್ತನೆಗೆ ಶಿಕ್ಷಕ ಅಮಾನತು

Davanagare: ಚುನಾವಣಾ ತರಬೇತಿಗೆ ಚಕ್ಕರ್; ಅನುಚಿತ ವರ್ತನೆಗೆ ಶಿಕ್ಷಕ ಅಮಾನತು

10

ದ.ಕ: ಬಿಜೆಪಿ ಜತೆಗಿನ ಮೈತ್ರಿಗೆ ವಿರೋಧ: 42 ಮಂದಿ ಜೆಡಿಎಸ್ ಪದಾಧಿಕಾರಿಗಳು ‘ಕೈʼ ಸೇರ್ಪಡೆ

Chikkamagaluru: ದಾಖಲೆ ಇಲ್ಲದೆ ಸಾಗಿಸುತ್ತಿದ್ದ 13.10 ಲಕ್ಷ ರೂ. ವಶಕ್ಕೆ

Chikkamagaluru: ದಾಖಲೆ ಇಲ್ಲದೆ ಸಾಗಿಸುತ್ತಿದ್ದ 13.10 ಲಕ್ಷ ರೂ. ವಶಕ್ಕೆ

ಸಮೀಕ್ಷೆಗಳಲ್ಲಿ ಹಿನ್ನಡೆ; ಹೀಗಾಗಿ ಕಾಂಗ್ರೆಸ್ ಕೀಳು‌ಮಟ್ಟದ ರಾಜಕಾರಣ ಮಾಡುತ್ತಿದೆ: ಜೋಶಿ

ಸಮೀಕ್ಷೆಗಳಲ್ಲಿ ಹಿನ್ನಡೆ; ಹೀಗಾಗಿ ಕಾಂಗ್ರೆಸ್ ಕೀಳು‌ಮಟ್ಟದ ರಾಜಕಾರಣ ಮಾಡುತ್ತಿದೆ: ಜೋಶಿ

Road mishap: ಖಾಸಗಿ ಬಸ್‌ – ಕಾರು ಅಪಘಾತ; ಆಂಧ್ರ ಮೂಲದ ಮೂವರು ಮೃತ್ಯು

Road mishap: ಖಾಸಗಿ ಬಸ್‌ – ಕಾರು ಅಪಘಾತ; ಆಂಧ್ರ ಮೂಲದ ಮೂವರು ಮೃತ್ಯು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಮಣಿಪಾಲ್ ಆಸ್ಪತ್ರೆಯ ವಿಶೇಷ ಆಯೋಜನೆ: RCBvsSRH ಪಂದ್ಯ ವೀಕ್ಷಿಸಿದ ಕ್ಯಾನ್ಸರ್‌ ಪೀಡಿತರು

ಮಣಿಪಾಲ್ ಆಸ್ಪತ್ರೆಯ ವಿಶೇಷ ಆಯೋಜನೆ: RCBvsSRH ಪಂದ್ಯ ವೀಕ್ಷಿಸಿದ ಕ್ಯಾನ್ಸರ್‌ ಪೀಡಿತರು

IPL 2024; ಮುಂಬೈ ಪಂದ್ಯದ ಟಾಸ್ ಕಳ್ಳಾಟ ಬಿಚ್ಚಿಟ್ಟ ಆರ್ ಸಿಬಿ ನಾಯಕ ಫಾಫ್| Video

IPL 2024; ಮುಂಬೈ ಪಂದ್ಯದ ಟಾಸ್ ಕಳ್ಳಾಟ ಬಿಚ್ಚಿಟ್ಟ ಆರ್ ಸಿಬಿ ನಾಯಕ ಫಾಫ್| Video

RCBsvSRH; ಚಿನ್ನಸ್ವಾಮಿಯಲ್ಲಿ ರೆಕಾರ್ಡ್ಸ್ ಸುರಿಮಳೆ; ದಾಖಲೆಗಳ ವಿವರ ಇಲ್ಲಿದೆ

RCBsvSRH; ಚಿನ್ನಸ್ವಾಮಿಯಲ್ಲಿ ರೆಕಾರ್ಡ್ಸ್ ಸುರಿಮಳೆ; ದಾಖಲೆಗಳ ವಿವರ ಇಲ್ಲಿದೆ

‘Please sell the RCB team to someone else’; Tennis star appeal

IPL 2024; ‘ದಯವಿಟ್ಟು ಆರ್ ಸಿಬಿ ತಂಡವನ್ನು ಬೇರೆಯವರಿಗೆ ಮಾರಿ ಬಿಡಿ’; ಟೆನ್ನಿಸ್ ತಾರೆ ಮನವಿ

1-eweqw

RR vs KKR : ನಂ. 1, 2 ತಂಡಗಳ ನಡುವೆ ಬಿಗ್‌ ಫೈಟ್‌

MUST WATCH

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

udayavani youtube

ಕೇಕ್ ಪ್ರಿಯರಿಗೆ ಹೇಳಿ ಮಾಡಿಸಿದ ಜಾಗ ಔರಾ .

udayavani youtube

ಶ್ರೀ ವೈಷ್ಣವಿ ದುರ್ಗಾ ದೇವಾಲಯ

udayavani youtube

ಟೈಟನ್ ಕಂಪೆನಿಯ Xylys ವಾಚ್ ವಿಶೇಷತೆಗಳೇನು ?

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

ಹೊಸ ಸೇರ್ಪಡೆ

ಲೋಕಸಭೆ ಚುನಾವಣೆ ಫಲಿತಾಂಶ ರಾಜ್ಯ ರಾಜಕಾರಣದ ಮೇಲೆ ದೊಡ್ಡ ಪರಿಣಾಮ ಬೀರಲಿದೆ: ಬೊಮ್ಮಾಯಿ

ಲೋಕಸಭೆ ಚುನಾವಣೆ ಫಲಿತಾಂಶ ರಾಜ್ಯ ರಾಜಕಾರಣದ ಮೇಲೆ ದೊಡ್ಡ ಪರಿಣಾಮ ಬೀರಲಿದೆ: ಬೊಮ್ಮಾಯಿ

LS polls: ನಾಳೆ ಸಿಎಂ, ಡಿಸಿಎಂ ಭೇಟಿಯಾಗಿ ಕಾಂಗ್ರೆಸ್ ಸೇರ್ಪಡೆ ಬಗ್ಗೆ ತೀರ್ಮಾನ; ಸಂಗಣ್ಣ

LS polls: ನಾಳೆ ಸಿಎಂ, ಡಿಸಿಎಂ ಭೇಟಿಯಾಗಿ ಕಾಂಗ್ರೆಸ್ ಸೇರ್ಪಡೆ ಬಗ್ಗೆ ತೀರ್ಮಾನ; ಸಂಗಣ್ಣ

Davanagare: ಚುನಾವಣಾ ತರಬೇತಿಗೆ ಚಕ್ಕರ್; ಅನುಚಿತ ವರ್ತನೆಗೆ ಶಿಕ್ಷಕ ಅಮಾನತು

Davanagare: ಚುನಾವಣಾ ತರಬೇತಿಗೆ ಚಕ್ಕರ್; ಅನುಚಿತ ವರ್ತನೆಗೆ ಶಿಕ್ಷಕ ಅಮಾನತು

10

ದ.ಕ: ಬಿಜೆಪಿ ಜತೆಗಿನ ಮೈತ್ರಿಗೆ ವಿರೋಧ: 42 ಮಂದಿ ಜೆಡಿಎಸ್ ಪದಾಧಿಕಾರಿಗಳು ‘ಕೈʼ ಸೇರ್ಪಡೆ

Chikkamagaluru: ದಾಖಲೆ ಇಲ್ಲದೆ ಸಾಗಿಸುತ್ತಿದ್ದ 13.10 ಲಕ್ಷ ರೂ. ವಶಕ್ಕೆ

Chikkamagaluru: ದಾಖಲೆ ಇಲ್ಲದೆ ಸಾಗಿಸುತ್ತಿದ್ದ 13.10 ಲಕ್ಷ ರೂ. ವಶಕ್ಕೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.