ಧವನ್ – ರೋಹಿತ್ ಶತಕದಾಟಕ್ಕೆ ಪಾಕ್ ಕಂಗಾಲು


Team Udayavani, Sep 23, 2018, 11:56 PM IST

dhawan-23-9.jpg

ದುಬೈ: ಏಷಿಯಾ ಕಪ್ ಕ್ರೀಡಾಕೂಟದ ‘ಸೂಪರ್ ಫೋರ್’ ಹಣಾಹಣಿಯ ಭಾರತ-ಪಾಕಿಸ್ಥಾನ ನಡುವಿನ ಹೈವೋಲ್ಟೇಜ್ ಹಣಾಹಣಿಯಲ್ಲಿ ತನ್ನ ಸಾಂಪ್ರದಾಯಿಕ ಎದುರಾಳಿ ಪಾಕಿಸ್ಥಾನವನ್ನು 9 ವಿಕೆಟ್ ಗಳಿಂದ ಭರ್ಜರಿಯಾಗಿ ಮಣಿಸಿದ ಟೀಂ ಇಂಡಿಯಾ ಈ ಕೂಟದ ಫೈನಲ್ ಗೆ ಲಗ್ಗೆಯಿಟ್ಟಿದೆ. ಈ ಟೂರ್ನಿಯಲ್ಲಿ ಪಾಕಿಸ್ಥಾನಕ್ಕೆ ಭಾರತ ಎದುರು ಇದು ಎರಡನೇ ಸೋಲಾಗಿದೆ. ​​​​​​ ಇದು ವಿಕೆಟುಗಳ ಅಂತರದಲ್ಲಿ ಪಾಕಿಸ್ತಾನ ವಿರುದ್ಧ ಟೀಮ್ ಇಂಡಿಯಾ ದಾಖಲಿಸಿದ ಅತಿ ದೊಡ್ಡ ಗೆಲುವಾಗಿದೆ.

ಟಾಸ್ ಗೆದ್ದು ಮೊದಲು ಬ್ಯಾಟಿಂಗ್ ನಡೆಸಿದ ಪಾಕಿಸ್ಥಾನವು ನಿಗದಿತ 50 ಓವರುಗಳಲ್ಲಿ 7 ವಿಕೆಟುಗಳನ್ನು ಕಳೆದುಕೊಂಡು 237 ರನ್ನುಗಳ ಸಾಧಾರಣ ಮೊತ್ತವನ್ನು ಪೇರಿಸಿತು. ಈ ಮೊತ್ತವನ್ನು ಬೆನ್ನಟ್ಟಲಾರಂಭಿಸಿದ ಭಾರತ ತಂಡವು ಆರಂಭಿಕ ಆಟಗಾರರ ಭರ್ಜರಿ ಶತಕದಾಟದ ನೆರವಿನಿಂದ ಅಂತಿಮವಾಗಿ ಇನ್ನು 63 ಎಸೆತಗಳು ಬಾಕಿ ಉಳಿದಿರುವಂತೆಯೇ​​​​​​​ 39.3 ಓವರುಗಳಲ್ಲಿ ಗುರಿ ತಲುಪುವ ಮೂಲಕ ಅಧಿಕಾರಯುತ ಜಯವನ್ನು ತನ್ನದಾಗಿಸಿಕೊಂಡಿತು. ಕೊನೆಯ ವರೆಗೂ ಅಜೇಯರಾಗುಳಿದ ರೋಹಿತ್ 119 ಎಸೆತಗಳಲ್ಲಿ ಏಳು ಬೌಂಡರಿ ಹಾಗೂ ನಾಲ್ಕು ಸಿಕ್ಸರ್‌ಗಳ ನೆರವಿನಿಂದ 111 ರನ್ ಗಳಿಸಿದರು. ಹಾಗೆಯೇ ಅಂಬಟಿ ರಾಯುಡು 12 ರನ್ ಗಳಿಸಿ ಔಟಾಗದೆ ಉಳಿದರು.​​​​​​​​ ಈ ಜಯದೊಂದಿಗೆ ‘ಸೂಪರ್ ಫೋರ್’ ಮುಖಾಮುಖಿಯಲ್ಲಿ ಇನ್ನೂ ಒಂದು ಪಂದ್ಯ ಬಾಕಿ ಇರುತ್ತಲೇ ಭಾರತವು ಏಷ್ಯಾ ಕಪ್ ಫೈನಲ್ ಗೆ ಲಗ್ಗೆಯಿಟ್ಟಿದೆ. ಭಾರತ ಈ ಕೂಟದಲ್ಲಿ ತನ್ನ ಅಂತಿಮ ಪಂದ್ಯವನ್ನು ಅಫ್ಘಾನಿಸ್ಥಾನ ವಿರುದ್ಧ ಆಡಲಿದೆ.​​​​​​​ ಸೆಪ್ಟಂಬರ್ 28ರ ಶುಕ್ರವಾರ ನಡೆಯುವ ಫೈನಲ್ ನಲ್ಲಿ ಮತ್ತೆ ಪಾಕಿಸ್ಥಾನವೇ ಭಾರತದ ಎದುರಾಳಿಯಾಗಬಹುದೇ ಎಂಬ ಕುತೂಹಲ ಕ್ರಿಕೆಟ್ ಪ್ರೇಮಿಗಳದ್ದಾಗಿದೆ. 

ಆರಂಭಿಕರ ಅಬ್ಬರಕ್ಕೆ ಪಾಕ್ ಕಂಗಾಲು

ಆರಂಭಿಕ ಆಟಗಾರರಾದ ಶಿಖರ್ ಧವನ್ (114) ಮತ್ತು ಕಪ್ತಾನ ರೋಹಿತ್ ಶರ್ಮಾ (111 Not Out) ಅವರ ಸೊಗಸಾದ ಶತಕದಾಟವು ಭಾರತದ ಗೆಲುವನ್ನು ಸುಲಭಗೊಳಿಸಿತು. ಭಾರತಕ್ಕೆ ಗೆಲ್ಲಲು 28 ರನ್ನುಗಳ ಅಗತ್ಯವಿದ್ದಾಗ ಶತಕವೀರ ಶಿಖರ್ ಧವನ್ ಅವರು ನಾನ್ ಸ್ಟ್ರೈಕರ್ ಕಡೆಯಿಂದ ಇಲ್ಲದ ರನ್ನೊಂದನ್ನು ತೆಗೆಯಲು ಓಡಿ ರನೌಟ್ ಆಗಿ ನಿರ್ಗಮಿಸಬೇಕಾಯಿತು. ಇದರಿಂದಾಗಿ ತನ್ನ ಸಾಂಪ್ರದಾಯಿಕ ಎದುರಾಳಿಯ ವಿರುದ್ಧ 10 ವಿಕೆಟ್ ಗಳ ಭರ್ಜರಿ ಜಯ ದಾಖಲಿಸುವ ಅಪೂರ್ವ ಅವಕಾಶದಿಂದ ಭಾರತ ವಂಚಿತವಾದಂತಾಯಿತು. ಧವನ್ ಮತ್ತು ರೋಹಿತ್ ಜೋಡಿ ಬರೋಬ್ಬರಿ 210 ರನ್ನುಗಳ ಅಪೂರ್ವ ಜೊತೆಯಾಟವನ್ನು ದಾಖಲಿಸಿತು. ಈ ಭರ್ಜರಿ ಜೊತೆಯಾಟದಲ್ಲಿ ಒಟ್ಟು 5 ಸಿಕ್ಸರ್ ಮತ್ತು 23 ಬೌಂಡರಿಗಳು ದಾಖಲಾಗಿದ್ದವು.

ಕಪ್ತಾನನ ಆಟವಾಡಿದ ರೋಹಿತ್ ಶರ್ಮಾ ಅವರು 111 ರನ್ನುಗಳನ್ನು ಗಳಿಸಿ ಅಜೇಯರಾಗಿ ಉಳಿದರು. ಇವರ ಈ ಮ್ಯಾರಥಾನ್ ಇನ್ನಿಂಗ್ಸ್ ನಲ್ಲಿ 7 ಬೌಂಡರಿ ಮತ್ತು 4 ಸಿಕ್ಸರ್ ಗಳು ಒಳಗೊಂಡಿದ್ದವು. ಇದೇ ಸಂದರ್ಭದಲ್ಲಿ ರೋಹಿತ್ ಶರ್ಮಾ ಅವರು ಏಕದಿನ ಕ್ರಿಕೆಟ್ ನಲ್ಲಿ 7000 ರನ್ನುಗಳನ್ನು ದಾಖಲಿಸಿದ ಸಾಧಕನಾಗಿ ಮೂಡಿಬಂದರು. ಇದು ಏಕದಿನದಲ್ಲಿ ರೋಹಿತ್ ಬ್ಯಾಟ್‌ನಿಂದ ಸಿಡಿದ 19ನೇ ಶತಕವಾಗಿದೆ. ​​​​​​​

ಪಾಕ್ ವಿರುದ್ಧ ಟೀಂ ಇಂಡಿಯಾ ಗೆಲುವಿಗೆ 238 ರನ್ನುಗಳ ಗುರಿ
ದುಬೈ:
ಏಷಿಯಾ ಕಪ್ ಕ್ರೀಡಾಕೂಟದ ‘ಸೂಪರ್ ಫೋರ್’ ಹಣಾಹಣಿಯ ಭಾರತ-ಪಾಕಿಸ್ಥಾನ ನಡುವಿನ ಹೈವೋಲ್ಟೇಜ್ ಹಣಾಹಣಿಯಲ್ಲಿ ಭಾರತ ತಂಡದ ಗೆಲುವಿಗೆ 238 ರನ್ನುಗಳ ಗುರಿ ನಿಗದಿಯಾಗಿದೆ. ಟಾಸ್ ಗೆದ್ದು ಬ್ಯಾಟಿಂಗ್ ಆಯ್ದುಕೊಂಡ ಪಾಕಿಸ್ಥಾನ ನಿಗದಿತ 50 ಓವರುಗಳಲ್ಲಿ 7 ವಿಕೆಟ್ ಗಳ ನಷ್ಟಕ್ಕೆ 237 ರನ್ನುಗಳನ್ನು ಕಲೆಹಾಕಿತು.


ಭಾರತ್ ಬಿಗು ಬೌಲಿಂಗ್ ಮತ್ತು ಶಿಸ್ತಿನ ಫೀಲ್ಡಿಂಗ್ ಎದುರು ರನ್ ಗಳಿಸಲು ಪಾಕಿಸ್ಥಾನ ಬ್ಯಾಟ್ಸ್ ಮನ್ ಗಳು ಪರದಾಡಿದರು. ಆದರೆ ಮಧ್ಯಮ ಕ್ರಮಾಂಕದಲ್ಲಿ ಪಾಕ್ ಕಪ್ತಾನ ಸರ್ಫರಾಜ್ ಅಹಮ್ಮದ್ (44) ಮತ್ತು ಅನುಭವಿ ಆಟಗಾರ ಶೋಯಬ್ ಮಲಿಕ್ (78) ಅವರ ಜವಾಬ್ದಾರಿಯುತ ಆಟದ ನೆರವಿನಿಂದ ಪಾಕಿಸ್ಥಾನ ಗೌರವಯುತ ಮೊತ್ತವನ್ನು ಪೇರಿಸುವಂತಾಯಿತು. ಉಳಿದಂತೆ ಪಾಕಿಸ್ಥಾನ ಪರ ಫಖಾರ್ ಝಮಾನ್ (31), ಆಸಿಫ್ ಅಲಿ (30) ಮಾತ್ರವೇ ಉತ್ತಮ ಆಟವಾಡಿದರು.

ಭಾರತದ ಪರ ಸ್ಪಿನ್ನರ್ ಗಳಾದ ಚಾಹಾಲ್ ಮತ್ತು ಕುಲದೀಪ್ ಯಾದವ್ ಮತ್ತು ಜಸ್ಪ್ರೀತ್ ಬುಮ್ರಾ ತಲಾ 2 ವಿಕೆಟ್ ಗಳನ್ನು ಪಡೆದರು. ಇನ್ನೊಂದು ವಿಕೆಟ್ ರನೌಟ್ ರೂಪದಲ್ಲಿ ಬಂತು.


​​​​​​​

ಟಾಪ್ ನ್ಯೂಸ್

ರಾಜ್ಯದಲ್ಲಿ ಐದೂವರೆ ಸಿಎಂಗಳು: ಬಿಜೆಪಿ ರಾಷ್ಟ್ರೀಯ ವಕ್ತಾರ ಗೌರವ್‌ ಭಾಟಿಯಾ ವ್ಯಂಗ್ಯ

ರಾಜ್ಯದಲ್ಲಿ ಐದೂವರೆ ಸಿಎಂಗಳು: ಬಿಜೆಪಿ ರಾಷ್ಟ್ರೀಯ ವಕ್ತಾರ ಗೌರವ್‌ ಭಾಟಿಯಾ ವ್ಯಂಗ್ಯ

ರಾಜ್ಯಕ್ಕೆ ಅನ್ಯಾಯವಾದಾಗ ಸ್ಪಂದಿಸದ ಕೇಂದ್ರ ಸರಕಾರ: ಇಂಧನ ಸಚಿವ ಜಾರ್ಜ್‌

ರಾಜ್ಯಕ್ಕೆ ಅನ್ಯಾಯವಾದಾಗ ಸ್ಪಂದಿಸದ ಕೇಂದ್ರ ಸರಕಾರ: ಇಂಧನ ಸಚಿವ ಜಾರ್ಜ್‌

kejriwal 2

ED; ನಾನು ತಿಂದದ್ದು ಮೂರೇ ಮಾವು: ಕೋರ್ಟ್‌ಗೆ ಕೇಜ್ರಿವಾಲ್‌ ಮಾಹಿತಿ

ದೇಶದ ಅಭಿವೃದ್ಧಿಗೆ ಮೋದಿ ಗ್ಯಾರಂಟಿಯೇ ಶಾಶ್ವತ: ಕೇಂದ್ರ ಸಚಿವೆ ಮೀನಾಕ್ಷಿ ಲೇಖಿ

ದೇಶದ ಅಭಿವೃದ್ಧಿಗೆ ಮೋದಿ ಗ್ಯಾರಂಟಿಯೇ ಶಾಶ್ವತ: ಕೇಂದ್ರ ಸಚಿವೆ ಮೀನಾಕ್ಷಿ ಲೇಖಿ

ದೇಶ ಒಡೆಯುವ ಮಾನಸಿಕತೆ ಕಾಂಗ್ರೆಸ್‌ನದ್ದು: ಮೀನಾಕ್ಷಿ ಲೇಖಿ

ದೇಶ ಒಡೆಯುವ ಮಾನಸಿಕತೆ ಕಾಂಗ್ರೆಸ್‌ನದ್ದು: ಮೀನಾಕ್ಷಿ ಲೇಖಿ

Lok Sabha Elections; ಕಾಂಗ್ರೆಸ್‌ಗೆ ಉತ್ತಮ ಅವಕಾಶ: ದಿನೇಶ್‌ ಗುಂಡೂರಾವ್‌

Lok Sabha Elections; ಕಾಂಗ್ರೆಸ್‌ಗೆ ಉತ್ತಮ ಅವಕಾಶ: ದಿನೇಶ್‌ ಗುಂಡೂರಾವ್‌

Mangaluru ಪೆಟ್ರೋಲ್‌, ಡೀಸೆಲ್‌ ತುಟ್ಟಿ : ಪುಷ್ಪಾ ಅಮರನಾಥ್‌

Mangaluru ಪೆಟ್ರೋಲ್‌, ಡೀಸೆಲ್‌ ತುಟ್ಟಿ : ಪುಷ್ಪಾ ಅಮರನಾಥ್‌


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-ewqe

Olympics ಅರ್ಹತೆ ತಪ್ಪುವ ಭೀತಿಯಲ್ಲಿ ದೀಪಕ್‌, ಸುಜೀತ್‌

1-wqewqewq

Doping: ಶಾಲು ಚೌಧರಿ ದೋಷಮುಕ್ತ

1-aaaaaawwq

Bumrah ಎಸೆತಕ್ಕೆ ಸ್ವೀಪ್‌ ಶಾಟ್‌: ಅಶುತೋಷ್‌ ಶರ್ಮ ಫುಲ್‌ ಖುಷ್‌

1aaaa

IPL; ಚೆನ್ನೈ ವಿರುದ್ಧ ಲಕ್ನೋಗೆ 8 ವಿಕೆಟ್ ಗಳ ಅಮೋಘ ಜಯ

RCB; ಸುಮ್ಮನೆ ಒಪ್ಪಂದಕ್ಕೆ ಸಹಿ ಹಾಕು…: ವಿರಾಟ್ ಜತೆಗಿನ ಮಾತುಕತೆ ನೆನೆದ ಕೆ.ಎಲ್ ರಾಹುಲ್

RCB; ಸುಮ್ಮನೆ ಒಪ್ಪಂದಕ್ಕೆ ಸಹಿ ಹಾಕು…: ವಿರಾಟ್ ಜತೆಗಿನ ಮಾತುಕತೆ ನೆನೆದ ಕೆ.ಎಲ್ ರಾಹುಲ್

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

ರಾಜ್ಯದಲ್ಲಿ ಐದೂವರೆ ಸಿಎಂಗಳು: ಬಿಜೆಪಿ ರಾಷ್ಟ್ರೀಯ ವಕ್ತಾರ ಗೌರವ್‌ ಭಾಟಿಯಾ ವ್ಯಂಗ್ಯ

ರಾಜ್ಯದಲ್ಲಿ ಐದೂವರೆ ಸಿಎಂಗಳು: ಬಿಜೆಪಿ ರಾಷ್ಟ್ರೀಯ ವಕ್ತಾರ ಗೌರವ್‌ ಭಾಟಿಯಾ ವ್ಯಂಗ್ಯ

ರಾಜ್ಯಕ್ಕೆ ಅನ್ಯಾಯವಾದಾಗ ಸ್ಪಂದಿಸದ ಕೇಂದ್ರ ಸರಕಾರ: ಇಂಧನ ಸಚಿವ ಜಾರ್ಜ್‌

ರಾಜ್ಯಕ್ಕೆ ಅನ್ಯಾಯವಾದಾಗ ಸ್ಪಂದಿಸದ ಕೇಂದ್ರ ಸರಕಾರ: ಇಂಧನ ಸಚಿವ ಜಾರ್ಜ್‌

kejriwal 2

ED; ನಾನು ತಿಂದದ್ದು ಮೂರೇ ಮಾವು: ಕೋರ್ಟ್‌ಗೆ ಕೇಜ್ರಿವಾಲ್‌ ಮಾಹಿತಿ

ದೇಶದ ಅಭಿವೃದ್ಧಿಗೆ ಮೋದಿ ಗ್ಯಾರಂಟಿಯೇ ಶಾಶ್ವತ: ಕೇಂದ್ರ ಸಚಿವೆ ಮೀನಾಕ್ಷಿ ಲೇಖಿ

ದೇಶದ ಅಭಿವೃದ್ಧಿಗೆ ಮೋದಿ ಗ್ಯಾರಂಟಿಯೇ ಶಾಶ್ವತ: ಕೇಂದ್ರ ಸಚಿವೆ ಮೀನಾಕ್ಷಿ ಲೇಖಿ

ದೇಶ ಒಡೆಯುವ ಮಾನಸಿಕತೆ ಕಾಂಗ್ರೆಸ್‌ನದ್ದು: ಮೀನಾಕ್ಷಿ ಲೇಖಿ

ದೇಶ ಒಡೆಯುವ ಮಾನಸಿಕತೆ ಕಾಂಗ್ರೆಸ್‌ನದ್ದು: ಮೀನಾಕ್ಷಿ ಲೇಖಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.