ಗ್ರ್ಯಾಂಡ್‌ ಫಿನಾಲೆಗೂ ಮುನ್ನ ಅಫ್ಘಾನ್‌ ಟೆಸ್ಟ್‌


Team Udayavani, Sep 25, 2018, 12:37 PM IST

afg.jpg

ದುಬಾೖ: ಏಶ್ಯ ಕಪ್‌ ಕ್ರಿಕೆಟ್‌ನಲ್ಲಿ ಸೋಲಿಲ್ಲದ ಸರದಾರನಾಗಿ ಪ್ರಶಸ್ತಿ ಸುತ್ತಿಗೆ ಲಗ್ಗೆ ಇರಿಸಿರುವ ಭಾರತ, ಮಂಗಳವಾರದ ತನ್ನ ಅಂತಿಮ ಸೂಪರ್‌-4 ಪಂದ್ಯದಲ್ಲಿ ಅಫ್ಘಾನಿಸ್ಥಾನ ವಿರುದ್ಧ ಅದೃಷ್ಟವನ್ನು ಪರೀಕ್ಷಿಸಿಕೊಳ್ಳಲಿದೆ. ರವಿವಾರ ಪಾಕಿಸ್ಥಾನವನ್ನು ಸದೆಬಡಿದ ರೀತಿಯನ್ನು ಗಮನಿಸಿದಾಗ ಟೀಮ್‌ ಇಂಡಿಯಾ ಅಫ್ಘಾನ್‌ ತಂಡಕ್ಕೂ ಅಂಜಿಕೆ ಹುಟ್ಟಿಸುವುದು ಖಚಿತ ಎನ್ನಲಡ್ಡಿಯಿಲ್ಲ.

ಈಗಾಗಲೇ ಫೈನಲ್‌ ಪ್ರವೇಶಿಸಿರುವ ಭಾರತಕ್ಕೆ, ಹಾಗೆಯೇ ಕೂಟದಿಂದ ಹೊರಬಿದ್ದಿರುವ ಅಫ್ಘಾನಿಸ್ಥಾನಕ್ಕೆ ಇದು ಮಹತ್ವದ ಪಂದ್ಯವೇನಲ್ಲ. ಇಲ್ಲಿನ ಫ‌ಲಿತಾಂಶದಿಂದ ಇತ್ತಂಡಗಳಿಗೆ ಆಗಬೇಕಾದ್ದೇನೂ ಇಲ್ಲ. ಆದರೆ ಇದು ಪ್ರತಿಷ್ಠೆಯ ಕಾಳಗವೆಂಬುದು ಸುಳ್ಳಲ್ಲ. ಬದ್ಧ ಎದುರಾಳಿ ಪಾಕಿಸ್ಥಾನಕ್ಕೇ 2 ಸಲ ಶಾಕ್‌ ಟ್ರೀಟ್‌ಮೆಂಟ್‌ ನೀಡಿರುವ ಭಾರತ, ಅಫ್ಘಾನಿಸ್ಥಾನದಂಥ ಅನನುಭವಿ ತಂಡದ ವಿರುದ್ಧ ಜಾರದಂತೆ ಎಚ್ಚರ ವಹಿಸಬೇಕಿದೆ. ಸೋತರೆ ಮರ್ಯಾದೆ ಪ್ರಶ್ನೆ!

ಹಾಗೆಯೇ ಈಗಾಗಲೇ ನಿರ್ಗಮಿ ಸಿದರೂ ಭಾರತದ ವಿರುದ್ಧ ಗೆದ್ದರೆ ಅದು ಅಫ್ಘಾನಿಸ್ಥಾನಕ್ಕೆ ಚಾಂಪಿಯನ್‌ ಆದಷ್ಟೇ ಸಂಭ್ರಮ ತರುವ ಸಂಗತಿ. ಕಾರಣ, ಭಾರತ ಫೈನಲಿಸ್ಟ್‌ ತಂಡ ತಾನೆ! ಅಸYರ್‌ ಅಫ್ಘಾನ್‌ ಬಳಗ ಇಂಥದೊಂದು ಪ್ರಯತ್ನಕ್ಕೆ ಮುಂದಾಗುವುದರಲ್ಲಿ ಅನುಮಾನವಿಲ್ಲ.

ಭಾರತದ ಮೀಸಲು ಸಾಮರ್ಥ್ಯ ಪರೀಕ್ಷೆ ?
ಫೈನಲ್‌ ಟಿಕೆಟ್‌ ಲಭಿಸಿರುವುದರಿಂದ ಈ ಪಂದ್ಯಕ್ಕಾಗಿ ಭಾರತ ತನ್ನ ಮೀಸಲು ಸಾಮರ್ಥ್ಯವನ್ನು ಪರಿಚಯಿಸುವ ಸಾಧ್ಯತೆ ಇದೆ. ಮುಖ್ಯವಾಗಿ ಮಧ್ಯಮ ಕ್ರಮಾಂಕದಲ್ಲಿ ಕೆಲವು ಬದಲಾವಣೆಗಳನ್ನು ಮಾಡಿ ಕೊಳ್ಳಬಹುದು. ಸರಣಿಯುದ್ದಕ್ಕೂ ಆರಂಭಿಕರಾದ ಶಿಖರ್‌ ಧವನ್‌ (327) ಮತ್ತು ರೋಹಿತ್‌ ಶರ್ಮ (269) ಅವರೇ ರನ್‌ ಪ್ರವಾಹ ಹರಿಸುತ್ತ ಬಂದಿದ್ದಾರೆ. ಉಳಿದವರಿಗೆ ಹೆಚ್ಚಿನ ಅವಕಾಶ ಲಭಿಸಿದರೆ ಹೇಗೆ ಬ್ಯಾಟಿಂಗ್‌ ನಡೆಸಿಯಾರೆಂಬ ಪ್ರಶ್ನೆಗೆ ತುರ್ತಾಗಿ ಉತ್ತರ ಕಂಡುಕೊಳ್ಳಬೇಕಿದೆ.

ಟಾಪ್ ನ್ಯೂಸ್

militry

Baramulla ಗುಂಡಿನ ಚಕಮಕಿಯಲ್ಲಿ ಉಗ್ರರಿಬ್ಬರ ಹತ್ಯೆ; ಇಬ್ಬರು ಸೇನಾ ಸಿಬಂದಿಗೆ ಗಾಯ

shettar

Minority ತುಷ್ಟೀಕರಣದಿಂದ ನೇಹಾಳ ಹತ್ಯೆಯಾಗಿದೆ :ಜಗದೀಶ್ ಶೆಟ್ಟರ್

1-adasdsad

Davanagere; ಪ್ರಧಾನಿ ಮೋದಿ ರ್‍ಯಾಲಿಗೆ ಅನುಮತಿ ನೀಡಬಾರದು:ಕಾಂಗ್ರೆಸ್ ಮನವಿ

2nd PUC: ಮರುಮೌಲ್ಯಮಾಪನದಲ್ಲಿ ರಾಜ್ಯಕ್ಕೆ ಆರನೇ ರ್‍ಯಾಂಕ್‌ ಪಡೆದ ತೀರ್ಥಹಳ್ಳಿಯ ಸುಚಿಂತ್

2nd PUC: ಮರುಮೌಲ್ಯಮಾಪನದಲ್ಲಿ ರಾಜ್ಯಕ್ಕೆ ಆರನೇ ರ್‍ಯಾಂಕ್‌ ಪಡೆದ ತೀರ್ಥಹಳ್ಳಿಯ ಸುಚಿಂತ್

1-wewqewqewq

Belthangady: ಬಾಂಜಾರು ಮಲೆಯಲ್ಲಿ ದಾಖಲೆ ಶೇ.100 ಮತದಾನ

1-asaa

Vijaypura:ರಾಹುಲ್ ಗಾಂಧಿ ನಿರ್ಗಮಿಸುವಾಗ ವೇದಿಕೆಗೆ ಬಂದ ಸಿದ್ದರಾಮಯ್ಯ

1-sadsadad

CBI ತನಿಖೆ; ಸಂದೇಶಖಾಲಿಯಲ್ಲಿ ಬೀಡುಬಿಟ್ಟ ಕಮಾಂಡೋಗಳು; ಸುಪ್ರೀಂ ಮೆಟ್ಟಿಲೇರಿದ ಸರಕಾರ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

IPL 2024: ಗೆಲುವಿನ ವಿಶ್ವಾಸದಲ್ಲಿ ಕೆಕೆಆರ್‌

IPL 2024: ಗೆಲುವಿನ ವಿಶ್ವಾಸದಲ್ಲಿ ಕೆಕೆಆರ್‌

17

Team India: ಟಿ20 ವಿಶ್ವಕಪ್‌ ತಂಡ ರಾಹುಲ್‌ಗೆ ಚಾನ್ಸ್‌, ಹಾರ್ದಿಕ್‌ ಪಾಂಡ್ಯಗೆ ಕೊಕ್‌?

Chess: ವಿಶ್ವ ಚೆಸ್‌ ಚಾಂಪಿಯನ್‌ಶಿಪ್‌: ಆತಿಥ್ಯ ಹಕ್ಕಿಗಾಗಿ ಭಾರತ ಬಿಡ್‌

Chess: ವಿಶ್ವ ಚೆಸ್‌ ಚಾಂಪಿಯನ್‌ಶಿಪ್‌: ಆತಿಥ್ಯ ಹಕ್ಕಿಗಾಗಿ ಭಾರತ ಬಿಡ್‌

Archery World Cup: ಆರ್ಚರಿ ವಿಶ್ವಕಪ್‌ ರಿಕರ್ವ್‌ ವಿಭಾಗದಲ್ಲೂ ಭಾರತ ಫೈನಲ್‌ಗೆ

Archery World Cup: ಆರ್ಚರಿ ವಿಶ್ವಕಪ್‌ ರಿಕರ್ವ್‌ ವಿಭಾಗದಲ್ಲೂ ಭಾರತ ಫೈನಲ್‌ಗೆ

1-rerwer

IPL; ಸನ್‌ರೈಸರ್ಸ್ ಹೈದರಾಬಾದ್ ವಿರುದ್ಧ ಜಯದ ನಗು ಬೀರಿದ ಆರ್ ಸಿಬಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

militry

Baramulla ಗುಂಡಿನ ಚಕಮಕಿಯಲ್ಲಿ ಉಗ್ರರಿಬ್ಬರ ಹತ್ಯೆ; ಇಬ್ಬರು ಸೇನಾ ಸಿಬಂದಿಗೆ ಗಾಯ

shettar

Minority ತುಷ್ಟೀಕರಣದಿಂದ ನೇಹಾಳ ಹತ್ಯೆಯಾಗಿದೆ :ಜಗದೀಶ್ ಶೆಟ್ಟರ್

1-adasdsad

Davanagere; ಪ್ರಧಾನಿ ಮೋದಿ ರ್‍ಯಾಲಿಗೆ ಅನುಮತಿ ನೀಡಬಾರದು:ಕಾಂಗ್ರೆಸ್ ಮನವಿ

2nd PUC: ಮರುಮೌಲ್ಯಮಾಪನದಲ್ಲಿ ರಾಜ್ಯಕ್ಕೆ ಆರನೇ ರ್‍ಯಾಂಕ್‌ ಪಡೆದ ತೀರ್ಥಹಳ್ಳಿಯ ಸುಚಿಂತ್

2nd PUC: ಮರುಮೌಲ್ಯಮಾಪನದಲ್ಲಿ ರಾಜ್ಯಕ್ಕೆ ಆರನೇ ರ್‍ಯಾಂಕ್‌ ಪಡೆದ ತೀರ್ಥಹಳ್ಳಿಯ ಸುಚಿಂತ್

1-wewqewqewq

Belthangady: ಬಾಂಜಾರು ಮಲೆಯಲ್ಲಿ ದಾಖಲೆ ಶೇ.100 ಮತದಾನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.