ಭಾರತ ಅಫ್ಘಾನ್ ಪಂದ್ಯ ರೋಚಕ ‘ಟೈ’ಯಲ್ಲಿ ಅಂತ್ಯ


Team Udayavani, Sep 26, 2018, 1:23 AM IST

afghan-600.jpg

ದುಬೈ: ಏಷ್ಯಾ ಕಪ್ ಟೂರ್ನಿಯುದ್ದಕ್ಕೂ ಪಾಕಿಸ್ಥಾನ, ಶ್ರೀಲಂಕಾ ಮತ್ತು ಬಾಂಗ್ಲಾದೇಶ ತಂಡಗಳಿಗೆ ಚಳಿ ಹುಟ್ಟಿಸಿದ್ದ ‘ಕ್ರಿಕೆಟ್ ಶಿಶು’ ಅಫ್ಘಾನ್ ತಂಡವು ಇಂದು ನಡೆದ ‘ಸೂಪರ್ 4’ ಹಣಾಹಣಿಯ ಪಂದ್ಯದಲ್ಲಿ ಈ ಕೂಟದ ಅಜೇಯ ತಂಡವಾಗಿದ್ದ ಭಾರತಕ್ಕೆ ಸೋಲಿನ ರುಚಿ ತೋರಿಸುವ ಹಂತದಲ್ಲಿ ಸ್ವಲ್ಪದರಲ್ಲೇ ಮುಗ್ಗರಿಸಿ ತನ್ನ ಏಷ್ಯಾ ಕಪ್ ಅಭಿಯಾನವನ್ನು ಸ್ಮರಣೀಯವಾಗಿ ಮುಗಿಸಿದೆ.

ಅಫ್ಘಾನ್ ನೀಡಿದ 252 ರನ್ನುಗಳ ಸಾಧಾರಣ ಮೊತ್ತವನ್ನು ಬೆನ್ನಟ್ಟುವಲ್ಲಿ ಎಡವಿದ ಭಾರತವು ಇನ್ನೂ 1 ಎಸೆತ ಬಾಕಿಯಿದ್ದಂತೆ 252 ರನ್ನುಗಳಿಗೆ ಆಲೌಟ್ ಆಗುವ ಮೂಲಕ ಜಯದ ಹೊಸ್ತಿಲಲ್ಲಿ ಎಡವಿತು. ರವೀಂದ್ರ ಜಡೇಜಾ (25) ಅವರು ಅಂತಿಮ ವಿಕೆಟ್ ರೂಪದಲ್ಲಿ ಔಟಾಗುತ್ತಿದ್ದಂತೆಯೇ ಅಫ್ಘಾನ್ ಆಟಗಾರರು ಮೈದಾನದಲ್ಲಿ ಸಂಭ್ರಮಾಚರಣೆಯಲ್ಲಿ ತೊಡಗಿದರು. ಈಗಾಗಲೇ ಫೈನಲ್ ಪ್ರವೇಶಿಸಿರುವ ಭಾರತಕ್ಕೆ ಹಾಗೂ ಕೂಟದಿಂದ ಹೊರಬಿದ್ದಿದ್ದ ಅಫ್ಘಾನಿಸ್ಥಾನಕ್ಕೆ ಈ ಪಂದ್ಯ ಯಾವುದೇ ರೀತಿಯಲ್ಲಿ ಮಹತ್ವದಲ್ಲವಾಗಿದ್ದರೂ ಕ್ರಿಕೆಟ್ ಶಿಶು ಅಫ್ಘಾನಿಸ್ಥಾನಕ್ಕೆ ಈ ಚೇತೋಹಾರಿ ಪ್ರದರ್ಶನ ಅದ್ಭುತವಾದ ನೈತಿಕ ಬಲವನ್ನು ತುಂಬಿರುವುದರಲ್ಲಿ ಯಾವುದೇ ಅನುಮಾನಗಳಿಲ್ಲ.
 


ಅಫ್ಘಾನ್ ವಿಕೆಟ್ ಕೀಪರ್ ಮುಹಮ್ಮದ್ ಶಹಝಾದ್ (124) ಅವರ ಭರ್ಜರಿ ಶತಕದ ನೆರವಿನಿಂದ ನಿಗದಿತ 50 ಓವರುಗಳಲ್ಲಿ 8 ವಿಕೆಟ್ ನಷ್ಟದಲ್ಲಿ 252 ರನ್ನುಗಳನ್ನು ಕಲೆಹಾಕಿದ ಅಫ್ಘಾನ್ ಎದುರಾಳಿಯ ಗೆಲುವಿಗೆ 253 ರನ್ನುಗಳ ಗುರಿಯನ್ನು ನಿಗದಿಪಡಿಸಿತು.

ಧವನ್ ರೋಹಿತ್ ಅನುಪಸ್ಥಿತಿಯಲ್ಲಿ ಭಾರತದ ಇನ್ನಿಂಗ್ಸ್ಆರಂಭಿಸಿದ ಕೆ.ಎಲ್. ರಾಹುಲ್ (60) ಮತ್ತು ಅಂಬಟಿ ರಾಯುಡು (57) ಉತ್ತಮ ಆರಂಭವನ್ನೇ ಒದಗಿಸಿದರು. ಈ ಜೋಡಿ ಮೊದಲ ವಿಕೆಟಿಗೆ 110 ರನ್ನುಗಳನ್ನು ಕಲೆ ಹಾಕಿತು. ಇಲ್ಲಿಯವರೆಗೆ ಭಾರತದ ಗೆಲುವಿನ ಹಾದಿ ಸುಲಭವಾಗಿಯೇ ಇತ್ತು. ಆದರೆ ಇವರ ಜೊತೆಯಾಟ ಮುರಿಯುತ್ತಲೇ ಭಾರತ ಸಂಕಷ್ಟಕ್ಕೆ ಸಿಲುಕಿತು. ಒಂದು ಬದಿಯಲ್ಲಿ ದಿನೇಶ್ ಕಾರ್ತಿಕ್ (44) ತಾಳ್ಮೆಯ ಆಟದ ಮೊರೆ ಹೋದರೆ ಇನ್ನೊಂದು ಕಡೆಯಿಂದ ವಿಕೆಟ್ ಗಳು ಉದುರುತ್ತಾ ಸಾಗಿತು. ನಾಯಕ ಧೋನಿ (8), ಮನೀಶ್ ಪಾಂಡೆ (8), ಜಾಧವ್ (19) ಹೋರಾಟ ನೀಡುವಲ್ಲಿ ವಿಫಲರಾದರು. ಅಂತಿಮವಾಗಿ ಅನುಭವಿ ಆಟಗಾರ ರವೀಂದ್ರ ಜಡೇಜಾ (25) ತಂಡವನ್ನು ಗೆಲುವಿನ ಹೊಸ್ತಿಲಿಗೆ ತಂದರಾದರೂ ಅಂತಿಮವಾಗಿ ಕ್ಯಾಚ್ ನೀಡಿ ಔಟಾಗುವ ಮೂಲಕ ಭಾರತ ತಂಡ ಆಲೌಟ್ ಆಗುವುದರೊಂದಿಗೆ ಪಂದ್ಯ ‘ಟೈ’ಗೊಂಡಿತು. ಈ ಹಂತದಲ್ಲಿ ಭಾರತದ ಗೆಲುವಿಗೆ 2 ಎಸೆತದಲ್ಲಿ 1 ರನ್ ಬೇಕಿತ್ತು ಕೈಯಲ್ಲಿದ್ದಿದ್ದು 1 ವಿಕೆಟ್ ಮಾತ್ರ.

ಕಳೆದ ಪಂದ್ಯದ ಹೀರೋಗಳಾಗಿದ್ದ ರೋಹಿತ್ ಶರ್ಮಾ ಮತ್ತು ಶಿಖರ್ ಧವನ್ ಸೇರಿದಂತೆ ಬುಮ್ರಾ, ಭುವನೇಶ್ವರ್ ಮತ್ತು ಚಾಹಲ್ ಅವರಿಲ್ಲದಿದ್ದ ಟೀಂ ಇಂಡಿಯಾವನ್ನು ಮಹೇಂದ್ರ ಸಿಂಗ್ ಧೋನಿ ಮುನ್ನಡೆಸಿದರು. ಇದು ಕೂಲ್ ಕ್ಯಾಪ್ಟನ್ ಧೋನಿ ಅವರ ನಾಯಕತ್ವದ 200ನೇ ಏಕದಿನ ಪಂದ್ಯವಾಗಿತ್ತು.

ಟಾಪ್ ನ್ಯೂಸ್

Bhojshala: ASI seeks 8 weeks time for scientific survey

Bhojshala: ವೈಜ್ಞಾನಿಕ ಸಮೀಕ್ಷೆಗೆ 8 ವಾರ ಕಾಲಾವಕಾಶ ಕೋರಿದ ಎಎಸ್‌ಐ

Kollam; ಪಕ್ಷಗಳ ಮೇಲೆ ಆರೋಪ ಹೊರಿಸಿ ಪೇಚಿಗೆ ಸಿಲುಕಿದ ಬಿಜೆಪಿ ಅಭ್ಯರ್ಥಿ!

Kollam; ವಿಪಕ್ಷಗಳ ಮೇಲೆ ಆರೋಪ ಹೊರಿಸಿ ಪೇಚಿಗೆ ಸಿಲುಕಿದ ಬಿಜೆಪಿ ಅಭ್ಯರ್ಥಿ!

Seat next to parents for children under 12 years on the plane?

DGCA: ವಿಮಾನದಲ್ಲಿ 12 ವರ್ಷದೊಳಗಿನ ಮಕ್ಕಳಿಗೆ ಪೋಷಕರ ಪಕ್ಕ ಆಸನ?

Congress ಗೆದ್ದರೆ ದಲಿತರ ಮೀಸಲು ಮುಸ್ಲಿಂ ಪಾಲು: ಮೋದಿ ಮತ್ತೆ ವಾಗ್ಬಾಣ

Congress ಗೆದ್ದರೆ ದಲಿತರ ಮೀಸಲು ಮುಸ್ಲಿಂ ಪಾಲು: ಮೋದಿ ಮತ್ತೆ ವಾಗ್ಬಾಣ

Dakshina Kannada: 5 ಸಿಎಪಿಎಫ್‌/ಕೆಎಸ್‌ಆರ್‌ಪಿ ತುಕಡಿ, 3,100 ಸಿಬಂದಿ ನಿಯೋಜನೆ

Dakshina Kannada: 5 ಸಿಎಪಿಎಫ್‌/ಕೆಎಸ್‌ಆರ್‌ಪಿ ತುಕಡಿ, 3,100 ಸಿಬಂದಿ ನಿಯೋಜನೆ

Election: ಮಂಗಳೂರು-ಶೋರ್ನೂರು-ಬೆಂಗಳೂರು ಮಧ್ಯೆ ವಿಶೇಷ ರೈಲು

Election: ಮಂಗಳೂರು-ಶೋರ್ನೂರು-ಬೆಂಗಳೂರು ಮಧ್ಯೆ ವಿಶೇಷ ರೈಲು

Udupi-Chikmagalur Lok Sabha constituency: ಯುವ ಮತದಾರರ ಚುನಾವಣೆ ಉತ್ಸಾಹ

Udupi-Chikmagalur: ಯುವ ಮತದಾರರ ಚುನಾವಣೆ ಉತ್ಸಾಹ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Rajastan Royals; ಪ್ಲೇ ಆಫ್ ಮೊದಲ ಗುರಿ: ಸಂಜು ಸ್ಯಾಮ್ಸನ್‌

Rajastan Royals; ಪ್ಲೇ ಆಫ್ ಮೊದಲ ಗುರಿ: ಸಂಜು ಸ್ಯಾಮ್ಸನ್‌

IPL 2024; ಫಿಟ್‌ ಆಗಿದ್ದೇ ನಿನ್ನೆ: ಸಂದೀಪ್‌ ಶರ್ಮ

Northamptonshire: ಕೌಂಟಿ ಕ್ರಿಕೆಟ್‌ನಲ್ಲಿ ಕರುಣ್‌ ನಾಯರ್‌ ದ್ವಿಶತಕ

Northamptonshire: ಕೌಂಟಿ ಕ್ರಿಕೆಟ್‌ನಲ್ಲಿ ಕರುಣ್‌ ನಾಯರ್‌ ದ್ವಿಶತಕ

Pakistan cricket team military training wasted

PCB; ಪಾಕ್‌ ಕ್ರಿಕೆಟ್‌ ತಂಡದ ಸೇನಾ ತರಬೇತಿ ವ್ಯರ್ಥ: ಹಾಸ್ಯ

Shotgun

Shotgun ಶೂಟಿಂಗ್‌ ಅರ್ಹತಾ ಸುತ್ತಿನಲ್ಲಿ ಕರಣ್‌: ವಿವಾದ

MUST WATCH

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

ಹೊಸ ಸೇರ್ಪಡೆ

Bhojshala: ASI seeks 8 weeks time for scientific survey

Bhojshala: ವೈಜ್ಞಾನಿಕ ಸಮೀಕ್ಷೆಗೆ 8 ವಾರ ಕಾಲಾವಕಾಶ ಕೋರಿದ ಎಎಸ್‌ಐ

Kollam; ಪಕ್ಷಗಳ ಮೇಲೆ ಆರೋಪ ಹೊರಿಸಿ ಪೇಚಿಗೆ ಸಿಲುಕಿದ ಬಿಜೆಪಿ ಅಭ್ಯರ್ಥಿ!

Kollam; ವಿಪಕ್ಷಗಳ ಮೇಲೆ ಆರೋಪ ಹೊರಿಸಿ ಪೇಚಿಗೆ ಸಿಲುಕಿದ ಬಿಜೆಪಿ ಅಭ್ಯರ್ಥಿ!

Seat next to parents for children under 12 years on the plane?

DGCA: ವಿಮಾನದಲ್ಲಿ 12 ವರ್ಷದೊಳಗಿನ ಮಕ್ಕಳಿಗೆ ಪೋಷಕರ ಪಕ್ಕ ಆಸನ?

Congress ಗೆದ್ದರೆ ದಲಿತರ ಮೀಸಲು ಮುಸ್ಲಿಂ ಪಾಲು: ಮೋದಿ ಮತ್ತೆ ವಾಗ್ಬಾಣ

Congress ಗೆದ್ದರೆ ದಲಿತರ ಮೀಸಲು ಮುಸ್ಲಿಂ ಪಾಲು: ಮೋದಿ ಮತ್ತೆ ವಾಗ್ಬಾಣ

Dakshina Kannada: 5 ಸಿಎಪಿಎಫ್‌/ಕೆಎಸ್‌ಆರ್‌ಪಿ ತುಕಡಿ, 3,100 ಸಿಬಂದಿ ನಿಯೋಜನೆ

Dakshina Kannada: 5 ಸಿಎಪಿಎಫ್‌/ಕೆಎಸ್‌ಆರ್‌ಪಿ ತುಕಡಿ, 3,100 ಸಿಬಂದಿ ನಿಯೋಜನೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.