ತಾಲೀಮ್‌ ವೇಳೆ ಫ‌ುಟ್‌ಬಾಲ್‌ ಆಟ


Team Udayavani, Oct 20, 2018, 9:21 AM IST

21.jpg

ಗುವಾಹಾಟಿ: ಟೆಸ್ಟ್‌ ಸರಣಿಯ ಬಳಿಕ ಕೆಲವು ದಿನ ವಿಶ್ರಾಂತಿ ಪಡೆದ ಭಾರತೀಯ ಕ್ರಿಕೆಟ್‌ ಆಟಗಾರರು ಶುಕ್ರವಾರ ತಾಲೀಮ್‌ ನಡೆಸಿದರು. ಏಕದಿನ ಸರಣಿಯ ಮೊದಲ ಪಂದ್ಯಕ್ಕಾಗಿ ಆಟಗಾರರು ಮುಖ್ಯ ಕೋಚ್‌ ರವಿಶಾಸ್ತ್ರಿ ಅವರ ಮಾರ್ಗದರ್ಶನದಲ್ಲಿ ತರಬೇತಿಯಲ್ಲಿ ಪಾಲ್ಗೊಂಡರು. ಅಭ್ಯಾಸದ ನಡುವೆ ನಾಯಕ ವಿರಾಟ್‌ ಕೊಹ್ಲಿ, ಧೋನಿ ಅವರು ಕೆಎಲ್‌ ರಾಹುಲ್‌, ಮೊಹಮ್ಮದ್‌ ಶಮಿ ಮತ್ತು ಉಮೇಶ್‌ ಯಾದವ್‌ ಜತೆಗೆ ಫ‌ುಟ್‌ಬಾಲ್‌ ಆಟ ಆಡಿದರು. ಆಟಗಾರರು ತಾಲೀಮ್‌ ನಡೆಸುತ್ತಿರುವ ಚಿತ್ರ ಮತ್ತು ವೀಡಿಯೊ ತುಣುಕೊಂದನ್ನು ಭಾರತೀಯ ಕ್ರಿಕೆಟ್‌ ಮಂಡಳಿ ಸಾಮಾಜಿಕ ಜಾಲತಾಣದಲ್ಲಿ ಹಾಕಿದೆ. 

ಐದು ಪಂದ್ಯಗಳ ಸರಣಿ
ಭಾರತ ಮತ್ತು ವೆಸ್ಟ್‌ಇಂಡೀಸ್‌ ನಡುವೆ ಐದು ಪಂದ್ಯಗಳ ಸರಣಿ ನಡೆಯಲಿದ್ದು ಮೊದಲ ಪಂದ್ಯ ಗುವಾಹಾಟಿಯಲ್ಲಿ ರವಿವಾರ ನಡೆಯಲಿದೆ. ಆಬಳಿಕ ಉಭಯ ತಂಡಗಳು ಮೂರು ಪಂದ್ಯಗಳ ಟ್ವೆಂಟಿ20 ಸರಣಿಯಲ್ಲಿ ಆಡಲಿವೆ.

ದಾಖಲೆಯತ್ತ ಕೊಹ್ಲಿ, ಧೋನಿ
ವಿಂಡೀಸ್‌ ವಿರುದ್ಧದ ಏಕದಿನ ಸರಣಿ ವೇಳೆ ಕೊಹ್ಲಿ ಮತ್ತು ಧೋನಿ ಇನ್ನಷ್ಟು ದಾಖಲೆ ಮುರಿಯುವ ಸಾಧ್ಯತೆಯಿದೆ. ಏಕದಿನದಲ್ಲಿ ವೆಸ್ಟ್‌ ಇಂಡೀಸ್‌ ವಿರುದ್ಧ ಗರಿಷ್ಠ ರನ್‌ ಪೇರಿಸಿದ ಸಾಧಕ ಎಂದೆನಿಸಿಕೊಳ್ಳಲು ವಿರಾಟ್‌ ಕೊಹ್ಲಿ ಅವರಿಗೆ ಇನ್ನು 187 ರನ್‌ ಬೇಕಾಗಿದೆ. ಸದ್ಯ ಈ ದಾಖಲೆ 1573 ರನ್‌ ಗಳಿಸಿರುವ ಸಚಿನ್‌ ತೆಂಡುಲ್ಕರ್‌ ಅವರ ಹೆಸರಲ್ಲಿದೆ. ಏಕದಿನ ಕ್ರಿಕೆಟ್‌ನಲ್ಲಿ 10 ಸಾವಿರ ರನ್‌ ಪೂರ್ತಿಗೊಳಿಸಲು ಕೊಹ್ಲಿ ಅವರಿಗೆ ಇನ್ನು 221 ರನ್‌ ಬೇಕಾಗಿದೆ. ಒಂದು ವೇಳೆ ಅವರು ಈ ಸಾಧನೆ ಮಾಡಿದರೆ ತೆಂಡುಲ್ಕರ್‌ (18,426), ಸೌರವ್‌ ಗಂಗೂಲಿ (11,363), ರಾಹುಲ್‌ ದ್ರಾವಿಡ್‌ (10,889) ಮತ್ತು ಧೋನಿ (10,123) ಅವರ ಸಾಲಿಗೆ ಸೇರ್ಪಡೆಯಾಗಲಿದ್ದಾರೆ.

ಏಕದಿನದಲ್ಲಿ ವೆಸ್ಟ್‌ಇಂಡೀಸ್‌ ವಿರುದ್ಧ ಒಂದು ಸಾವಿರ ರನ್‌ ಪೂರ್ತಿಗೊಳಿಸಲು ಧೋನಿ ಅವರಿಗೆ ಇನ್ನು 101 ರನ್‌ ಬೇಕಾಗಿದೆ. ಅವರು ಈಗಾಗಲೇ ಶ್ರೀಲಂಕಾ, ಇಂಗ್ಲೆಂಡ್‌, ಆಸ್ಟ್ರೇಲಿಯ ಮತ್ತು ಪಾಕಿಸ್ಥಾನ ವಿರುದ್ಧ ಒಂದು ಸಾವಿರ ರನ್‌ ಪೂರ್ತಿಗೊಳಿಸಿದ್ದಾರೆ. ರೋಹಿತ್‌ ಶರ್ಮ ಅವರಿಗೆ ವಿಂಡೀಸ್‌ ವಿರುದ್ಧ ಒಂದು ಸಾವಿರ ರನ್‌ ಪೂರ್ತಿಗೊಳಿಸಲು 170 ರನ್‌ ಬೇಕಾಗಿದೆ.

ಕೊಹ್ಲಿ ಆಗಮನ
ವಿರಾಟ್‌ ಕೊಹ್ಲಿ ಏಶ್ಯ ಕಪ್‌ ಕೂಟದಿಂದ ಹೊರಕ್ಕೆ ಉಳಿದಿದ್ದರು. ಇದೀಗ ಕೊಹ್ಲಿ ಮರಳಿ ತಂಡ ಸೇರಿಕೊಂಡಿದ್ದಾರೆ. ವಿಂಡೀಸ್‌ ವಿರುದ್ಧದ ಸರಣಿಯಲ್ಲಿ ಗೆಲುವಿನ ಕನಸು ಹೊತ್ತು ಅವರು ತಂಡವನ್ನು ಮುನ್ನಡೆಸಲಿದ್ದಾರೆ. ಕೆ.ಎಲ್‌.ರಾಹುಲ್‌, ಉಮೇಶ್‌ ಯಾದವ್‌ ಹಾಗೂ ಮೊಹಮ್ಮದ್‌ ಶಮಿ ಅವರಂತಹ ತಾರಾ ಆಟಗಾರರನ್ನು ಹೊಂದಿರುವ ಭಾರತ ಗೆಲ್ಲುವ ಫೇವರಿಟ್‌. ಮೊದಲೆರಡು ಏಕದಿನ ಪಂದ್ಯಕ್ಕೆ ಭಾರತ ತಂಡವನ್ನು ಕಳೆದ ವಾರವೇ ಪ್ರಕಟಿಸಲಾಗಿದ್ದು ರಿಷಭ್‌ ಪಂತ್‌ ತಂಡದಲ್ಲಿ ಸ್ಥಾನ ಪಡೆದು ಅಚ್ಚರಿ ಮೂಡಿಸಿದ್ದಾರೆ. ಪಂತ್‌ ಭವಿಷ್ಯದಲ್ಲಿ ವಿಕೆಟ್‌ ಕೀಪರ್‌ ಆಗಿ ಭಾರತ ತಂಡದಲ್ಲಿ ಸ್ಥಾನ ತುಂಬುವ ಸಾಧ್ಯತೆ ಕಾಣಿಸುತ್ತಿದೆ. ಪಂತ್‌ ಇಂಗ್ಲೆಂಡ್‌ ವಿರುದ್ಧ ತಾನಾಡಿದ ಮೊದಲ ಟೆಸ್ಟ್‌ನಲ್ಲಿ 184 ರನ್‌ ಸಿಡಿಸಿ ಸುದ್ದಿಯಾಗಿದ್ದರು. ಆದರೆ ಮಾಜಿ ನಾಯಕ ಎಂ.ಎಸ್‌.ಧೋನಿ ಏಷ್ಯಾ ಕಪ್‌ನಲ್ಲಿ ಕಳಪೆ ಬ್ಯಾಟಿಂಗ್‌ ಪ್ರದರ್ಶಿಸಿರುವುದು ತಂಡಕ್ಕೆ ಚಿಂತೆಯಾಗಿದೆ. ಇನ್ನು ಗಾಯದ ಕಾರಣದಿಂದ ಹಾರ್ದಿಕ್‌ ಪಾಂಡ್ಯ ಹೊರಬಿದ್ದಿದ್ದಾರೆ. ರವೀಂದ್ರ ಜಡೇಜ ಏಶ್ಯಕಪ್‌ನಲ್ಲಿ ವಿಕೆಟ್‌ ಕಿತ್ತು ಯಶಸ್ವಿಯಾಗಿದ್ದಾರೆ. ಹೀಗಾಗಿ ಅವರಿಗೆ ತಂಡದಲ್ಲಿ ಮತ್ತೂಂದು ಅವಕಾಶ ನೀಡಲಾಗಿದೆ. ರೋಹಿತ್‌, ಧವನ್‌ ಕೂಡ ತಂಡ ಕೂಡಿಕೊಂಡಿದ್ದು ಜಾದೂ ಮಾಡಬಲ್ಲರೆ ಎನ್ನುವುದು ಅಭಿಮಾನಿಗಳ ನಿರೀಕ್ಷೆ.

ಟಾಪ್ ನ್ಯೂಸ್

1-weweew

Congress; ತಮ್ಮ ಆಸ್ತಿ ಉಳಿಕೆಗೆ ರಾಜೀವ್‌ರಿಂದ ಉತ್ತರಾಧಿಕಾರ ಕಾಯ್ದೆ ರದ್ದು: ಪಿಎಂ

yogi-3

Congress ಬಂದರೆ ತಾಲಿಬಾನ್‌ ಶೈಲಿ ಆಡಳಿತ: ಯೋಗಿ

supreem

WhatsApp ಮೂಲಕ ವಕೀಲರಿಗೆ ಎಲ್ಲ ಮಾಹಿತಿ: ಸುಪ್ರೀಂ ಕೋರ್ಟ್‌

jairam ramesh

Wealth redistribution ಬಗ್ಗೆ ಕೈ ಪ್ರಣಾಳಿಕೆಯಲ್ಲಿ ಎಲ್ಲಿದೆ?: ಜೈರಾಂ

1-wqewq-eqw

Modi ಕೈ ಬಲಪಡಿಸಲು, ದ.ಕ. ಸಮಗ್ರ ಸುಧಾರಣೆಗಾಗಿ ಬಿಜೆಪಿಗೆ ಮತ ನೀಡಿ: ಚೌಟ

1-asasas

Naxal ಬಾಧಿತ ಮತಗಟ್ಟೆಗಳ ಭದ್ರತೆಗೆ ಹೆಚ್ಚುವರಿ ಆದ್ಯತೆ: ಮುಲ್ಲೈ ಮುಗಿಲನ್‌

D. K. Shivakumar: ಡೆತ್‌, ಬರ್ತ್‌ ಯಾವ ಟ್ಯಾಕ್ಸೂ ಇಲ್ಲ; ಡಿಕೆಶಿ

D. K. Shivakumar: ಡೆತ್‌, ಬರ್ತ್‌ ಯಾವ ಟ್ಯಾಕ್ಸೂ ಇಲ್ಲ; ಡಿಕೆಶಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-rerwer

IPL; ಸನ್‌ರೈಸರ್ಸ್ ಹೈದರಾಬಾದ್ ವಿರುದ್ಧ ಜಯದ ನಗು ಬೀರಿದ ಆರ್ ಸಿಬಿ

28

Athletics: ಕಿರಿಯರ ಏಷ್ಯನ್‌ ಆ್ಯತ್ಲೆಟಿಕ್ಸ್‌  ಜಾವೆಲಿನ್‌ನಲ್ಲಿ ದೀಪಾಂಶುಗೆ ಬಂಗಾರ

Gukesh: ಚಾಂಪಿಯನ್‌ ಗುಕೇಶ್‌ಗೆ ಭವ್ಯ ಸ್ವಾಗತ

Gukesh: ಚಾಂಪಿಯನ್‌ ಗುಕೇಶ್‌ಗೆ ಭವ್ಯ ಸ್ವಾಗತ

IPL: ಎಲ್ಲೆ ಮೀರಿ ವಿಕೆಟ್‌ ಸಂಭ್ರಮಾಚರಣೆಡೆಲ್ಲಿ ವೇಗಿ ರಸಿಕ್‌ ಸಲಾಂಗೆ ಛೀಮಾರಿ

IPL: ಎಲ್ಲೆ ಮೀರಿ ವಿಕೆಟ್‌ ಸಂಭ್ರಮಾಚರಣೆಡೆಲ್ಲಿ ವೇಗಿ ರಸಿಕ್‌ ಸಲಾಂಗೆ ಛೀಮಾರಿ

IPL: ಇಂಪ್ಯಾಕ್ಟ್ ಪ್ಲೇಯರ್‌ ನಿಯಮಕ್ಕೆ ಅಕ್ಷರ್‌ ಪಟೇಲ್‌ ಕೂಡ ವಿರೋಧ

IPL: ಇಂಪ್ಯಾಕ್ಟ್ ಪ್ಲೇಯರ್‌ ನಿಯಮಕ್ಕೆ ಅಕ್ಷರ್‌ ಪಟೇಲ್‌ ಕೂಡ ವಿರೋಧ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-weweew

Congress; ತಮ್ಮ ಆಸ್ತಿ ಉಳಿಕೆಗೆ ರಾಜೀವ್‌ರಿಂದ ಉತ್ತರಾಧಿಕಾರ ಕಾಯ್ದೆ ರದ್ದು: ಪಿಎಂ

yogi-3

Congress ಬಂದರೆ ತಾಲಿಬಾನ್‌ ಶೈಲಿ ಆಡಳಿತ: ಯೋಗಿ

supreem

WhatsApp ಮೂಲಕ ವಕೀಲರಿಗೆ ಎಲ್ಲ ಮಾಹಿತಿ: ಸುಪ್ರೀಂ ಕೋರ್ಟ್‌

jairam ramesh

Wealth redistribution ಬಗ್ಗೆ ಕೈ ಪ್ರಣಾಳಿಕೆಯಲ್ಲಿ ಎಲ್ಲಿದೆ?: ಜೈರಾಂ

1-wqewq-eqw

Modi ಕೈ ಬಲಪಡಿಸಲು, ದ.ಕ. ಸಮಗ್ರ ಸುಧಾರಣೆಗಾಗಿ ಬಿಜೆಪಿಗೆ ಮತ ನೀಡಿ: ಚೌಟ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.