ನೀಗೀತೇ ಭಾರತೀಯರ ಪ್ರಶಸ್ತಿ ಬರಗಾಲ?


Team Udayavani, Oct 23, 2018, 6:00 AM IST

20.jpg

ಪ್ಯಾರಿಸ್‌: ರವಿವಾರವಷ್ಟೇ ಮುಕ್ತಾಯಗೊಂಡ “ಡೆನ್ಮಾರ್ಕ್‌ ಓಪನ್‌ ಬ್ಯಾಡ್ಮಿಂಟನ್‌’ ಟೂರ್ನಿಯ ಬಳಿಕ ಭಾರತದ ಬ್ಯಾಡ್ಮಿಂಟನ್‌ ಆಟಗಾರರಿಗೆ ಮತ್ತೂಂದು ಸವಾಲು ಸಿದ್ದವಾಗಿದೆ. ಮಂಗಳವಾರದಿಂದ “ಫ್ರೆಂಚ್‌ ಓಪನ್‌ ಬ್ಯಾಡ್ಮಿಂಟನ್‌ ಟೂರ್ನಿ’ ಆರಂಭವಾಗಲಿದ್ದು, ಪ್ರಶಸ್ತಿಯ ತೀವ್ರ ಬರಗಾಲದಲ್ಲಿರುವ ದೇಶದ ತಾರಾ ಆಟಗಾರರಿಗೆ ಏನು ಕಾದಿದೆ ಎಂಬುದೊಂದು ಪ್ರಶ್ನೆ.

ಹಾಲಿ ಚಾಂಪಿಯನ್‌ ಕಿಡಂಬಿ ಶ್ರೀಕಾಂತ್‌, ಪಿ. ವಿ. ಸಿಂಧು ಹಾಗೂ ಸೈನಾ ನೆಹ್ವಾಲ್‌ ಈ ಟೂರ್ನಿಯಲ್ಲಿ ಪಾಲ್ಗೊಳ್ಳಲಿದ್ದು, ಈ ಋತುವಿನ ಮೊದಲ ಪ್ರಮುಖ ಬಿಡಬ್ಲ್ಯುಎಫ್ ಪ್ರಶಸ್ತಿಯ ಮೇಲೆ ಕಣ್ಣಿಟ್ಟಿದ್ದಾರೆ. ಸತತ ಟೂರ್ನಿಗಳಲ್ಲಿ ಮುಗ್ಗರಿಸುತ್ತ ಬಂದಿರುವ ಭಾರತೀಯ ಆಟಗಾರರಿಗೆ ಈ ಟೂರ್ನಿಯಲ್ಲಿ ಉತ್ತಮ ಪ್ರದರ್ಶನ ನೀಡಬೇಕಾದ ಅನಿವಾರ್ಯತೆಯಿದೆ. 

ವಿಶ್ರಾಂತಿ ಇಲ್ಲದೆ ಕಣಕ್ಕೆ
ರವಿವಾರ ಡೆನ್ಮಾರ್ಕ್‌ ಓಪನ್‌ ಫೈನಲ್‌ನಲ್ಲಿ ಸೋತ ಸೈನಾ ನೆಹ್ವಾಲ್‌ ಹಾಗೂ ಸೆಮಿಫೈನಲ್‌ ಪ್ರವೇಶಿಸಿದ್ದ ಕೆ. ಶ್ರೀಕಾಂತ್‌ ಅವರಿಗೆ ಈ ಟೂರ್ನಿಯ ತಯಾರಿಗೆ ಹೆಚ್ಚಿನ ಸಮಯ ದೊರೆತಿಲ್ಲ. ಹೀಗಾಗಿ ಅವರು ವಿಶ್ರಾಂತಿ ಇಲ್ಲದೆ ಒತ್ತಡದಲ್ಲಿ ಆಡಬೇಕಾದ ಪರಿಸ್ಥಿತಿ ಬಂದಿದೆ. ಇತ್ತ ಡೆನ್ಮಾರ್ಕ್‌ ಓಪನ್‌ನ ಮೊದಲ ಸುತ್ತಿನಲ್ಲೇ ಅಘಾತ ಅನುಭವಿಸಿದ ಪಿ. ವಿ. ಸಿಂಧು ಫ್ರಾನ್ಸ್‌ನಲ್ಲಿ ಮತ್ತೆ ಟ್ರ್ಯಾಕ್‌ಗೆ ಮರಳುಲೇಬೇಕಿದೆ. ಉಳಿದಂತೆ ಬಿ. ಸಾಯಿ ಪ್ರಣೀತ್‌, ಸಮೀರ್‌ ವರ್ಮ ಹಾಗೂ ಮಿಶ್ರ ಡಬಲ್ಸ್‌ ವಿಭಾಗದಲ್ಲಿ ಅಶ್ವಿ‌ನಿ ಪೊನ್ನಪ್ಪ-ಸಾತ್ವಿಕ್‌  ಸಾಯಿರಾಜ್‌ ರಾಂಕಿ ರೆಡ್ಡಿ ಸ್ಪರ್ಧಿಸಲಿದ್ದಾರೆ. 

ಪ್ರಶಸ್ತಿ ಉಳಿಸಿಕೊಳ್ಳುವರೇ ಶ್ರೀ?
ಕಳೆದ ವರ್ಷದ ಪುರುಷರ ಸಿಂಗಲ್ಸ್‌ ನಲ್ಲಿ ಕಿಡಂಬಿ ಶ್ರೀಕಾಂತ್‌ ಜಪಾನಿನ ಕೆಂಟ ನಿಶಿಮೊಟೊ ಅವರನ್ನು 21-14, 21-13 ಅಂತರದಿಂದ ಮಣಿಸಿ ಪ್ರಶಸ್ತಿ ಎತ್ತಿದ್ದರು. ಇದನ್ನು ಉಳಿಸಿಕೊಳ್ಳುವಲ್ಲಿ ಯಶಸ್ವಿಯಾಗುವರೇ ಎಂಬುದೊಂದು ಕುತೂಹಲ. ಶ್ರೀಕಾಂತ್‌ ಈ ಸಲ ಆರಂಭಿಕ ಸುತ್ತಿ ನಲ್ಲಿ ಹಾಂಕಾಂಗ್‌ನ ವಾಂಗ್‌ ವಿಂಗ್‌ ಕಿ ವಿನ್ಸೆಂಟ್‌ ವಿರುದ್ಧ ಆಡಲಿದ್ದಾರೆ. ವನಿತಾ ಸಿಂಗಲ್ಸ್‌ನಲ್ಲಿ ಸೈನಾ ನೆಹ್ವಾಲ್‌ ಜಪಾನಿನ ಸಯೇನಾ ಕವಾಕಮಿ ಅವರನ್ನು, ಪಿ.ವಿ. ಸಿಂಧು ಚೀನ ಮೂಲದ ಅಮೆರಿಕನ್‌ ಆಟಗಾರ್ತಿ ಬೀವೆನ್‌ ಜಂಗ್‌ ಅವರನ್ನು ಮೊದಲ ಸುತ್ತಿನಲ್ಲಿ ಎದುರಿಸಲಿದ್ದಾರೆ. 

ಜಂಗ್‌ ಕಳೆದ ವಾರವಷ್ಟೇ ಡೆನ್ಮಾರ್ಕ್‌ನಲ್ಲಿ ಸಿಂಧು ವಿರುದ್ಧ ಗೆಲುವು ದಾಖಲಿಸಿದ್ದರು. ಅದು ಮೊದಲ ಸುತ್ತಿನ ಸ್ಪರ್ಧೆಯಾಗಿತ್ತು. ಇಲ್ಲಿಯೂ ಇವರಿಬ್ಬರು ಮೊದಲ ಸುತ್ತಿ ನ ಲ್ಲಿಯೇ ಎದುರಾಗಿರುವುದು ಕಾಕತಾಳೀಯ.  ಡೆನ್ಮಾರ್ಕ್‌ ಓಪನ್‌ ಪ್ರಶಸ್ತಿ ಗೆದ್ದ ತೈ ತ್ಸು ಯಿಂಗ್‌ ಹಾಗೂ ಜಪಾನಿನ ಕೆಂಟೊ ಮೊಮೊಟ ಪ್ಯಾರಿಸ್‌ ಕೂಟದಲ್ಲೂ ಪ್ರಶಸ್ತಿ ಗೆಲ್ಲುವ ನೆಚ್ಚಿನ ಆಟಗಾರರಾಗಿದ್ದಾರೆ.

ಟಾಪ್ ನ್ಯೂಸ್

ನೀತಿ ಸಂಹಿತೆ ಉಲ್ಲಂಘನೆ: ಏಪ್ರಿಲ್ 29ರೊಳಗೆ ಉತ್ತರ ನೀಡಲು ಮೋದಿ, ರಾಹುಲ್‌ಗೆ ಸೂಚನೆ

ನೀತಿ ಸಂಹಿತೆ ಉಲ್ಲಂಘನೆ: ಏಪ್ರಿಲ್ 29ರೊಳಗೆ ಉತ್ತರ ನೀಡಲು ಮೋದಿ, ರಾಹುಲ್‌ಗೆ ಸೂಚನೆ

Anil Kumble Reveals His IPL Bid 2008

IPL: ಆರ್ ಸಿಬಿ ತಂಡಕ್ಕಾಗಿ ಮಲ್ಯ ಅಂದು…..: ವಿಶೇಷ ಘಟನೆ ನೆನೆದ ಅನಿಲ್ ಕುಂಬ್ಳೆ

11-belthangady

LS Polls: ಬೆಳ್ತಂಗಡಿ ತಾಲೂಕಿನ ಉಜಿರೆಯ ಮಸ್ಟರಿಂಗ್ ಕೇಂದ್ರಕ್ಕೆ ದ.ಕ. ಜಿಲ್ಲಾಧಿಕಾರಿ ಭೇಟಿ

siddaramaiah

Bidar; ನೇಹಾ ಪ್ರಕರಣದಲ್ಲಿ ಬಿಜೆಪಿ ರಾಜಕೀಯ‌ ಮಾಡುವುದು ಸರಿಯಲ್ಲ: ಸಿಎಂ ಸಿದ್ಧರಾಮಯ್ಯ‌

Arunachal Pradesh: ಧಾರಾಕಾರ ಮಳೆ… ಭೂಕುಸಿತ, ಕೊಚ್ಚಿಹೋದ ಚೀನಾ ಗಡಿ ಸಂಪರ್ಕ ಹೆದ್ದಾರಿ

Arunachal Pradesh: ಧಾರಾಕಾರ ಮಳೆ… ಭೂಕುಸಿತ, ಕೊಚ್ಚಿಹೋದ ಚೀನಾ ಗಡಿ ಸಂಪರ್ಕ ಹೆದ್ದಾರಿ

9-bantwala

Bantwala: ಬಾಲಕಿಯೊಂದಿಗೆ ಅನುಚಿತ ವರ್ತನೆ; ಆರೋಪಿ ವಿರುದ್ಧ ಪ್ರಕರಣ ದಾಖಲು

I.N.D.I.A ಮೈತ್ರಿಕೂಟದ ಪ್ರಧಾನಿ ಅಭ್ಯರ್ಥಿ ಯಾರೆಂದು ಹೇಳಲಿ: ಮಾಳವಿಕಾ ಅವಿನಾಶ್

I.N.D.I.A ಮೈತ್ರಿಕೂಟದ ಪ್ರಧಾನಿ ಅಭ್ಯರ್ಥಿ ಯಾರೆಂದು ಹೇಳಲಿ: ಮಾಳವಿಕಾ ಅವಿನಾಶ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Anil Kumble Reveals His IPL Bid 2008

IPL: ಆರ್ ಸಿಬಿ ತಂಡಕ್ಕಾಗಿ ಮಲ್ಯ ಅಂದು…..: ವಿಶೇಷ ಘಟನೆ ನೆನೆದ ಅನಿಲ್ ಕುಂಬ್ಳೆ

Ipl: ಡೆಲ್ಲಿ ಗೆಲುವಿಗೆ ಪಂತ್‌, ಪಟೇಲ್‌ ನೆರವು

Ipl: ಡೆಲ್ಲಿ ಗೆಲುವಿಗೆ ಪಂತ್‌, ಪಟೇಲ್‌ ನೆರವು

IPL: ಮತ್ತೂಂದು ದೊಡ್ಡ ಮೊತ್ತಕ್ಕೆ ಎಸ್‌ಆರ್‌ಎಚ್‌ ಸ್ಕೆಚ್‌

IPL: ಮತ್ತೂಂದು ದೊಡ್ಡ ಮೊತ್ತಕ್ಕೆ ಎಸ್‌ಆರ್‌ಎಚ್‌ ಸ್ಕೆಚ್‌

1-asdasdas

IPL; ಸ್ಟಾಯಿನಿಸ್‌ ಏಟಿಗೆ ತವರಲ್ಲೆ ಚಾಂಪಿಯನ್‌ ಚೆನ್ನೈ ಠುಸ್‌!

DCvsGT; ಪಂತ್‌ ನಾಯಕತ್ವಕ್ಕೆ ಅಗ್ನಿಪರೀಕ್ಷೆ:  ತವರಿನ “ಕೋಟ್ಲಾ’ದಲ್ಲಿ ಗುಜರಾತ್‌ ಎದುರಾಳಿ

DCvsGT; ಪಂತ್‌ ನಾಯಕತ್ವಕ್ಕೆ ಅಗ್ನಿಪರೀಕ್ಷೆ:  ತವರಿನ “ಕೋಟ್ಲಾ’ದಲ್ಲಿ ಗುಜರಾತ್‌ ಎದುರಾಳಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

ನೀತಿ ಸಂಹಿತೆ ಉಲ್ಲಂಘನೆ: ಏಪ್ರಿಲ್ 29ರೊಳಗೆ ಉತ್ತರ ನೀಡಲು ಮೋದಿ, ರಾಹುಲ್‌ಗೆ ಸೂಚನೆ

ನೀತಿ ಸಂಹಿತೆ ಉಲ್ಲಂಘನೆ: ಏಪ್ರಿಲ್ 29ರೊಳಗೆ ಉತ್ತರ ನೀಡಲು ಮೋದಿ, ರಾಹುಲ್‌ಗೆ ಸೂಚನೆ

Anil Kumble Reveals His IPL Bid 2008

IPL: ಆರ್ ಸಿಬಿ ತಂಡಕ್ಕಾಗಿ ಮಲ್ಯ ಅಂದು…..: ವಿಶೇಷ ಘಟನೆ ನೆನೆದ ಅನಿಲ್ ಕುಂಬ್ಳೆ

11-belthangady

LS Polls: ಬೆಳ್ತಂಗಡಿ ತಾಲೂಕಿನ ಉಜಿರೆಯ ಮಸ್ಟರಿಂಗ್ ಕೇಂದ್ರಕ್ಕೆ ದ.ಕ. ಜಿಲ್ಲಾಧಿಕಾರಿ ಭೇಟಿ

siddaramaiah

Bidar; ನೇಹಾ ಪ್ರಕರಣದಲ್ಲಿ ಬಿಜೆಪಿ ರಾಜಕೀಯ‌ ಮಾಡುವುದು ಸರಿಯಲ್ಲ: ಸಿಎಂ ಸಿದ್ಧರಾಮಯ್ಯ‌

10-screenshot

Students Notes: ಸ್ಕ್ರೀನ್‌ ಶಾರ್ಟ್‌ಗಳೆಂದು ಪುಸ್ತಕವಾಗದಿರಲಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.