ಟೀಂ ಇಂಡಿಯಾಗೆ ಕಾಡುತ್ತಿದೆ ಮೂರನೇ ವೇಗದ ಬೌಲರ್ ಚಿಂತೆ!


Team Udayavani, Oct 26, 2018, 4:44 PM IST

bhvi-1.jpg

ಪ್ರಸ್ತುತ ನಡೆಯುತ್ತಿರುವ ವೆಸ್ಟ್ ಇಂಡೀಸ್ ವಿರುದ್ದದ ಏಕದಿನ ಸರಣಿಯಲ್ಲಿ ಟೀಂ ಇಂಡಿಯಾದ ವೇಗದ ಬೌಲಿಂಗ್ ನ ವಿಫಲತೆ ಬಟಾ ಬಯಲಾಗಿದೆ. ಮೊದಲೆರಡು ಪಂದ್ಯಗಳಿಗೆ ಭುವನೇಶ್ವರ್ ಕುಮಾರ್ ಮತ್ತು ಜಸ್ಪ್ರೀತ್ ಬುಮ್ರಾಹ್ ಗೆ ವಿಶ್ರಾಂತಿ ನೀಡಿದ್ದ ಆಯ್ಕೆ ಮಂಡಳಿ ಕೊನೆಗೂ ಉಳಿದ ಪಂದ್ಯಗಳಿಗೆ ಅವರಿಬ್ಬರನ್ನೇ ಕರೆಸಿಕೊಳ್ಳಬೇಕಾಯಿತು. 

ಮೊದಲೆರಡು ಪಂದ್ಯಗಳಲ್ಲಿ ಆಡಿದ್ದ ಟೆಸ್ಟ್ ಸ್ಪೆಶಲಿಸ್ಟ್ ಗಳಾದ ಮೊಹಮ್ಮದ್ ಶಮಿ ಮತ್ತು ಉಮೇಶ್ ಯಾದವ್ ಮತ್ತು ಮೊದಲ ಪಂದ್ಯ ಆಡಿದ್ದ ಖಲೀಲ್ ಅಹಮದ್ ಸಿಕ್ಕಾಪಟ್ಟೆ ದುಬಾರಿಯಾದರು. ಈ ಮೂವರು ಎರಡು ಪಂದ್ಯಗಳಲ್ಲಿ ಒಟ್ಟು 50 ಓವರ್ ಎಸೆದಿದ್ದು, ಬಿಟ್ಟುಕೊಟ್ಟ ರನ್ ಬರೋಬ್ಬರಿ 346. ಆದರೆ ಕಬಳಿಸಿದ್ದು ಕೇವಲ 5 ವಿಕೆಟ್. 

ಈ ಅಂಕಿ ಅಂಶಗಳು ಭಾರತೀಯ ಕ್ರಿಕೆಟ್ ತಂಡದ ನಾಯಕ ವಿರಾಟ್ ಕೊಹ್ಲಿ ಮತ್ತು ಕೋಚ್ ರವಿ ಶಾಸ್ತ್ರೀಗೆ  ತಲೆ ನೋವಾಗಿರುವುದು ಮಾತ್ರ ಸತ್ಯ. ಭುವಿ, ಬುಮ್ರಾಹ್ ಜೊತೆಗೆ ಇನ್ಯಾವ ಬೌಲರ್ ನನ್ನು ಆಡಿಸುವುದು ಎಂಬ ಚಿಂತೆ ಕಾಡಿದೆ. ಮುಂದಿನ ವರ್ಷ ಇಂಗ್ಲೆಂಡ್ ನಲ್ಲಿ ನಡೆಯಲಿರುವ ಏಕದಿನ ವಿಶ್ವಕಪ್ ವರೆಗೆ ಭಾರತ 16  ಏಕದಿನ ಅಂತರಾಷ್ಟ್ರೀಯ ಪಂದ್ಯಗಳನ್ನು ಆಡಲಿದೆ. ಅದರ ಒಳಗಾಗಿ ಭಾರತಕ್ಕೆ ಇನ್ನೋರ್ವ  ಸ್ಥಿರ ಪ್ರದರ್ಶನ ನೀಡುವ ವೇಗದ ಬೌಲರ್ ನನ್ನು ಸಿದ್ದ ಪಡಿಸಬೇಕಾದ ಅನಿವಾರ್ಯತೆ ಇದೆ. 

ಮುಂದಿನ ವಿಶ್ವಕಪ್ ಇಂಗ್ಲೆಂಡ್ ನಲ್ಲಿ ನಡೆಯುದರಿಂದ ಅಲ್ಲಿನ ಬೌನ್ಸಿ ಪಿಚ್ ಗಳಲ್ಲಿ ಕೇವಲ ಇಬ್ಬರು ಸ್ಪೀಡ್ ಬೌಲರ್ಸ್ ಮತ್ತು ಮೂವರು ಸ್ಪಿನ್ನರ್ ಗಳನ್ನು ಆಡಿಸುವ ತಂತ್ರಗಾರಿಕೆ ಯಶಸ್ವಿಯಾಗುವುದು ಕಷ್ಟ. ಆದುದರಿಂದ ಇನ್ನೊರ್ವ ವೇಗದ ಬೌಲರ್ ತಂಡಕ್ಕೆ ಅಗತ್ಯವಾಗಿದೆ. 

ಭುವಿ ಮತ್ತು ಬುಮ್ರಾಹ್ ಜೊತೆ ಸದ್ಯ ಗಾಯಾಳಾಗಿರುವ ಆಲ್ ರೌಂಡರ್ ಹಾರ್ದಿಕ್ ಪಾಂಡ್ಯರನ್ನು ವಿಶ್ವಕಪ್ ಆಡಿಸುವ ಆಲೋಚನೆಯಲ್ಲಿ ಆಯ್ಕೆ ಮಂಡಳಿ ಇದೆ. ಆದರೆ ಹಾರ್ದಿಕ್ ಸಂಪೂರ್ಣ 10 ಓವರ್ ಎಸೆಯುವ ಸಾಮರ್ಥ್ಯ ಹೊಂದಿದ್ದಾರೆಯೇ ಎಂಬುದು ಇಲ್ಲಿ ಕಾಡುವ ಪ್ರಶ್ನೆ. ಈ ಹಿಂದೆ ಹಾರ್ದಿಕ್ ಮೊದಲ ಕೆಲವು ಓವರ್ ಗಳಲ್ಲಿ ದುಬಾರಿಯಾದಾಗ ಅವರ ಓವರ್ ಗಳನ್ನು ಕೇದಾರ್ ಜಾದವ್ ಪೂರ್ಣ ಗೊಳಿಸಿದ್ದನ್ನು ನಾವು ಕೆಲವು ಪಂದ್ಯಗಳಲ್ಲಿ ನೋಡಿದ್ದೇವೆ. ಹಾಗಾಗಿ ಪಾಂಡ್ಯರನ್ನು ಇನ್ನೂ ಕೂಡಾ ಪೂರ್ಣ ಪ್ರಮಾಣದ ಬೌಲರ್ ಎಂದು ಒಪ್ಪಿಕೊಳ್ಳುವುದು ಕಷ್ಟ. 

ಈ ಮೂವರನ್ನು ಹೊರತು ಪಡಿಸಿ 2017ರ ಜನವರಿಯಿಂದ ಟೀಂ ಇಂಡಿಯಾ ಪರವಾಗಿ ಉಮೇಶ್ ಯಾದವ್, ಶಾರ್ದೂಲ್ ಠಾಕೂರ್, ಮೊಹಮ್ಮದ್ ಶಮಿ, ಖಲೀಲ್ ಅಹಮದ್, ದೀಪಕ್ ಚಾಹರ್ ಮತ್ತು ಸಿದ್ದಾರ್ಥ ಕೌಲ್ ಏಕದಿನ ಪಂದ್ಯಗಳಲ್ಲಿ ವೇಗದ ಬೌಲಿಂಗ್ ನಡೆಸಿದ್ದಾರೆ. ಆದರೆ ಇವರ‍್ಯಾರು ತಮ್ಮ ಆಯ್ಕೆಯನ್ನು ಸಮರ್ಥಿಸಿ ಕೊಳ್ಳುವಲ್ಲಿ ಸಫಲರಾಗಿಲ್ಲ. ಶಮಿ ಮತ್ತು ಖಲೀಲ್ ಅಹಮದ್ ಎಕಾನಮಿ ರೇಟ್ ಮಾತ್ರ ಆರಕ್ಕಿಂತ ಕಡಿಮೆಯಿದೆ.  ಉಳಿದವರ‍್ಯಾರಿಗೂ ತಮ್ಮ ಬೌಲಿಂಗ್ ನಲ್ಲಿ ನಿಯಂತ್ರಣ ಸಾಧಿಸಲು ಸಾಧ್ಯವಾಗಿಲ್ಲ.  

ಇದುವರೆಗೆ ಕೇವಲ ಮೂರು ಅಂತರಾಷ್ಟ್ರೀಯ  ಪಂದ್ಯಗಳ ಅನುಭವವಿರುವ ಖಲೀಲ್ ಅಹಮದ್ ವಿಶ್ವಕಪ್ ಟಿಕೆಟ್ ಪಡೆಯುವ ವಿಶ್ವಾಸದಲ್ಲಿದ್ದಾರೆ. ಇದಕ್ಕೆ ಮುಖ್ಯ ಕಾರಣ ಖಲೀಲ್ ಓರ್ವ ಎಡಗೈ ವೇಗಿ. ಮೂರು ಪಂದ್ಯಗಳಲ್ಲಿ 5.23 ರ ಸರಾಸರಿಯಲ್ಲಿ 5 ವಿಕೆಟ್ ಪಡೆದಿದ್ದಾರೆ. ಇಂಗ್ಲೆಂಡ್ ಪಿಚ್ ಎಡಗೈ ವೇಗಿಗಳಿಗೆ ಹೆಚ್ಚು ನೆರವು ನೀಡುವುದರ ಜೊತೆಗೆ ಭಾರತದಲ್ಲಿ ಮತ್ತೊರ್ವ ಗಮನಾರ್ಹ ಎಡಗೈ ವೇಗಿ ಇಲ್ಲ ಎನ್ನುವುದು ಖಲೀಲ್ ಪಾಲಿಗೆ ವರವಾಗಬಹುದು.  

ಭುವನೇಶ್ವರ್ ಕುಮಾರ್ ಅಥವಾ ಬುಮ್ರಾಹ್ ರಲ್ಲಿ ಯಾರಾದರೊಬ್ಬರು ವಿಶ್ವಕಪ್ ವೇಳೆಗೆ ಗಾಯಗೊಂಡರೆ ಭಾರತದ ವೇಗದ ಬೌಲಿಂಗ್ ಗೆ ಮತ್ತಷ್ಟು ಸಂಕಷ್ಟ ತಪ್ಪಿದ್ದಲ್ಲ. ಯಾಕೆಂದರೆ ವಿಶ್ವಕಪ್ ಗಿಂತ ಮೊದಲು ಸುದೀರ್ಘ ಎರಡು ತಿಂಗಳು ಐಪಿಎಲ್ ಟೂರ್ನಿ ನಡೆಯಲಿದೆ. ಈ ವೇಳೆಗೆ ಫಿಟ್ನೆಸ್ ಕಾಯ್ದುಕೊಳ್ಳುವುದು ಅಷ್ಟೇ ಮುಖ್ಯವಾಗುತ್ತದೆ.

ಒಟ್ಟಾರೆ ವಿಶ್ವಕಪ್ ಗೆ ಈಗಾಗಲೇ ತಯಾರಿ ಆರಂಭವಾಗಿರುವುದರಿಂದ ಟೀಂ ಇಂಡಿಯಾ ತನ್ನ ಮೂರನೇ ವೇಗಿಯನ್ನು ಆದಷ್ಟು ಬೇಗ ತಯಾರು ಮಾಡಬೇಕಾದ ಅನಿವಾರ್ಯತೆ ಇದೆ. ವಿಶ್ವಕಪ್ ಕಿರೀಟದ ಮೇಲೆ ಕಣ್ಣಿಟ್ಟಿರುವ ನಾಯಕ ಕೊಹ್ಲಿಗೆ ಇದು ನಿಜಕ್ಕೂ ಒಂದು ಸವಾಲು. ಇಲ್ಲದೇ ಇದ್ದರೆ 300 ರನ್ ಹೊಡೆದರೂ ಪಂದ್ಯ ಉಳಿಸಿಕೊಳ್ಳುವುದು ಕಷ್ಟ.  

ಕೀರ್ತನ್ ಶೆಟ್ಟಿ

ಟಾಪ್ ನ್ಯೂಸ್

15

ಶರ್ಟ್‌ ಒಳಗೆ ಕಂತೆ ಕಂತೆ ನೋಟುಗಳನ್ನು ಬಚ್ಚಿಟ್ಟು ಅಧಿಕಾರಿಗಳ ಕೈಗೆ ಸಿಕ್ಕಿಬಿದ್ದ ವ್ಯಕ್ತಿ!

ಮಹಿಳೆ ವಿವಸ್ತ್ರಗೊಳಿಸಿ ಹಲ್ಲೆ: ಜೈಲಿನಿಂದ ಬಿಡುಗಡೆಯಾದ ಆರೋಪಿಗಳಿಗೆ ಹೂಮಾಲೆ ಹಾಕಿ ಸ್ವಾಗತ

ಮಹಿಳೆ ವಿವಸ್ತ್ರಗೊಳಿಸಿ ಹಲ್ಲೆ: ಜೈಲಿನಿಂದ ಬಿಡುಗಡೆಯಾದ ಆರೋಪಿಗಳಿಗೆ ಹೂಮಾಲೆ ಹಾಕಿ ಸ್ವಾಗತ

Lok Sabha Election: ಏಪ್ರಿಲ್ 28 ರಂದು ಬೆಳಗಾವಿಗೆ ಪ್ರಧಾನಿ ಮೋದಿ

Lok Sabha Election: ಏಪ್ರಿಲ್ 28 ರಂದು ಬೆಳಗಾವಿಗೆ ಪ್ರಧಾನಿ ಮೋದಿ

Editorial: ಗುಕೇಶ್‌ ಗೆಲುವು- ಭಾರತದ ಯುವಶಕ್ತಿಯ ಸಂಕೇತ

Editorial: ಗುಕೇಶ್‌ ಗೆಲುವು- ಭಾರತದ ಯುವಶಕ್ತಿಯ ಸಂಕೇತ

AMU: ಇತಿಹಾಸದಲ್ಲೇ ಮೊದಲು… ಅಲಿಘರ್ ಮುಸ್ಲಿಂ ವಿಶ್ವವಿದ್ಯಾಲಯಕ್ಕೆ ಮಹಿಳಾ ಉಪಕುಲಪತಿ ನೇಮಕ

AMU: ಇತಿಹಾಸದಲ್ಲೇ ಮೊದಲು… ಅಲಿಘರ್ ಮುಸ್ಲಿಂ ವಿಶ್ವವಿದ್ಯಾಲಯಕ್ಕೆ ಮಹಿಳಾ ಉಪಕುಲಪತಿ ನೇಮಕ

Mandya LokSabha Constituency:ಸಕ್ಕರೆ ನಾಡಿನ ಪಾರುಪತ್ಯಕ್ಕೆ ಸಾಂಪ್ರದಾಯಿಕ ಜಿದ್ದಾಜಿದ್ದಿ

Mandya LokSabha Constituency:ಸಕ್ಕರೆ ನಾಡಿನ ಪಾರುಪತ್ಯಕ್ಕೆ ಸಾಂಪ್ರದಾಯಿಕ ಜಿದ್ದಾಜಿದ್ದಿ

Tragedy: ಕುಂದಾಪುರದಿಂದ ನೆಂಟರ ಮನೆಗೆ ಬಂದಿದ್ದ ಇಬ್ಬರು ಬಾಲಕರು ನೀರು ಪಾಲು

Tragedy: ಕುಂದಾಪುರದಿಂದ ನೆಂಟರ ಮನೆಗೆ ಬಂದಿದ್ದ ಇಬ್ಬರು ಬಾಲಕರು ನೀರು ಪಾಲು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

kambalaHigh-tech touch for Kambala race

Kambala ಓಟಕ್ಕೆ ಹೈಟೆಕ್ ಸ್ಪರ್ಶ; ಗೇಟ್ ತೆರೆದ ಕೂಡಲೇ ಓಟ ಶುರು; ಇಲ್ಲಿದೆ ಸಮಗ್ರ ಮಾಹಿತಿ

JIO SPACE FIBER 1

JioSpace Fiber: ಭಾರತದಲ್ಲಿ ಮತ್ತೊಂದು ಇಂಟರ್ನೆಟ್ ಕ್ರಾಂತಿಗೆ ಜಿಯೋ ಮುನ್ನುಡಿ… ಏನಿದು.?

thumb news web exclusive uv (2) (1)

“ಈ ಕಾಯಿಲೆ” ಇರುವವರು ಅರಿಶಿನ ಹಾಕಿದ ಹಾಲು ಸೇವಿಸಬಾರದು…

thumb web ex (1) (1) (1) (1) (1) (1) copy (1)

ನೀವು ಮುಖಕ್ಕೆ ಅರಿಶಿನ ಹಚ್ತೀರಾ..? ಹಾಗಾದ್ರೆ ಈ ತಪ್ಪುಗಳನ್ನು ಮಾಡಿರೋದು ಪಕ್ಕಾ!

web exclusive keer

ಒಂದು ಜಾಹೀರಾತು ದೇಶಕ್ಕೆ ಬೆಂಕಿ ಹಚ್ಚಿತ್ತು.. ಏನಿದು ಪೆಪ್ಸಿಯ ನಂಬರ್ ಫೀವರ್

MUST WATCH

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

ಹೊಸ ಸೇರ್ಪಡೆ

1-gadaga

Gadaga: ಸೈಕ್ಲಿಸ್ಟ್ ಪವಿತ್ರಾ ಕುರ್ತಕೋಟಿ ಸೈಕ್ಲಿಂಗ್ ರಾಷ್ಟ್ರೀಯ ತರಬೇತಿ ಶಿಬಿರಕ್ಕೆ ಆಯ್ಕೆ

15

ಶರ್ಟ್‌ ಒಳಗೆ ಕಂತೆ ಕಂತೆ ನೋಟುಗಳನ್ನು ಬಚ್ಚಿಟ್ಟು ಅಧಿಕಾರಿಗಳ ಕೈಗೆ ಸಿಕ್ಕಿಬಿದ್ದ ವ್ಯಕ್ತಿ!

ಮಹಿಳೆ ವಿವಸ್ತ್ರಗೊಳಿಸಿ ಹಲ್ಲೆ: ಜೈಲಿನಿಂದ ಬಿಡುಗಡೆಯಾದ ಆರೋಪಿಗಳಿಗೆ ಹೂಮಾಲೆ ಹಾಕಿ ಸ್ವಾಗತ

ಮಹಿಳೆ ವಿವಸ್ತ್ರಗೊಳಿಸಿ ಹಲ್ಲೆ: ಜೈಲಿನಿಂದ ಬಿಡುಗಡೆಯಾದ ಆರೋಪಿಗಳಿಗೆ ಹೂಮಾಲೆ ಹಾಕಿ ಸ್ವಾಗತ

Lok Sabha Election: ಏಪ್ರಿಲ್ 28 ರಂದು ಬೆಳಗಾವಿಗೆ ಪ್ರಧಾನಿ ಮೋದಿ

Lok Sabha Election: ಏಪ್ರಿಲ್ 28 ರಂದು ಬೆಳಗಾವಿಗೆ ಪ್ರಧಾನಿ ಮೋದಿ

Editorial: ಗುಕೇಶ್‌ ಗೆಲುವು- ಭಾರತದ ಯುವಶಕ್ತಿಯ ಸಂಕೇತ

Editorial: ಗುಕೇಶ್‌ ಗೆಲುವು- ಭಾರತದ ಯುವಶಕ್ತಿಯ ಸಂಕೇತ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.