ಟಿ20 ಸರಣಿ ಗೆದ್ದ ಭಾರತ


Team Udayavani, Nov 8, 2018, 6:10 AM IST

win-ind-t-20.jpg

ಲಕ್ನೋ: ಸತತ 2ನೇ ಟಿ20 ಪಂದ್ಯದಲ್ಲಿ ಎದುರಾಳಿ ವೆಸ್ಟ್‌ ಇಂಡೀಸ್‌ ತಂಡವನ್ನು ಸೋಲಿಸಿದ ರೋಹಿತ್‌ ಶರ್ಮ ನಾಯಕತ್ವದ ಭಾರತೀಯ ತಂಡ ಸರಣಿಯನ್ನು ಇನ್ನೊಂದು ಪಂದ್ಯ ಬಾಕಿಯಿರುವಂತೆಯೇ ಗೆದ್ದಿದೆ. 11ನೇ ತಾರೀಖೀನಂದು ಚೆನ್ನೈನಲ್ಲಿ ನಡೆಯುವ 3ನೇ ಪಂದ್ಯ ಔಪಚಾರಿಕವಾಗಿದೆ. ರೋಹಿತ್‌ ಅಬ್ಬರಕ್ಕೆ ನಡುಗಿದ ವಿಂಡೀಸ್‌ ಸೊಲ್ಲೆತ್ತದೆ 71 ರನ್‌ಗಳಿಂದ ಶರಣಾಗಿದೆ. ವೆಸ್ಟ್‌ ಇಂಡೀಸ್‌ ಬ್ಯಾಟಿಂಗ್‌ ಮತ್ತು ಬೌಲಿಂಗ್‌ನಲ್ಲಿ ತನ್ನ ವೈಫ‌ಲ್ಯವನ್ನು ಮುಂದುವರಿಸಿದೆ.

ಏಕದಿನ ಸರಣಿಯಲ್ಲಿ ಬ್ಯಾಟಿಂಗ್‌ನಲ್ಲಿ ಮೆರೆದಿದ್ದ ವಿಂಡೀಸ್‌ ಕಡೆಕಡೆಗೆ ವೈಫ‌ಲ್ಯ ಅನುಭವಿಸಿತ್ತು. ಅದನ್ನು ಟಿ20ಯಲ್ಲೂ ಮುಂದುವರಿಸಿದೆ. ಟಾಸ್‌ ಸೋತು ಕ್ಷೇತ್ರರಕ್ಷಣೆ ಆಯ್ದುಕೊಂಡರೂ ಅದರ ಹಣೆಬರಹವೇನು ಬದಲಾಗಲಿಲ್ಲ. ಅವಕಾಶವನ್ನು ಚೆನ್ನಾಗಿ ಉಪಯೋಗಿಸಿಕೊಂಡ ರೋಹಿತ್‌ ಬರೀ 61 ಎಸೆತಗಳಲ್ಲಿ 8 ಬೌಂಡರಿ, 7 ಸಿಕ್ಸರ್‌ ನೆರವಿನಿಂದ 111 ರನ್‌ ಬಾರಿಸಿ ಹಲವು ದಾಖಲೆಗಳೊಂದಿಗೆ ಸಿಂಗಾರಗೊಂಡರು. ಧವನ್‌ ನಿಧಾನಗತಿಯಲ್ಲಿ 43 ರನ್‌ ಬಾರಿಸಿದರೆ, ರಾಹುಲ್‌ ಸ್ಫೋಟಕ 26 ರನ್‌ ಚಚ್ಚಿದರು. ಭಾರತ 20 ಓವರ್‌ಗಳಲ್ಲಿ 2 ವಿಕೆಟ್‌ಗೆ 195 ರನ್‌ ಗಳಿಸಿತು.

196 ರನ್‌ ಗುರಿಯಿಟ್ಟುಕೊಂಡು ಮುನ್ನುಗ್ಗಿದ ವಿಂಡೀಸ್‌ 9 ವಿಕೆಟ್‌ ಕಳೆದುಕೊಂಡು ಗಳಿಸಿದ್ದು 124 ರನ್‌ ಮಾತ್ರ. ಆ ತಂಡದ ಪರ ಡ್ಯಾರೆನ್‌ ಬ್ರಾವೊ ಗಳಿಸಿದ 23 ರನ್ನೇ ಗರಿಷ್ಠ ಸಾಧನೆ. ಭಾರತದ ಪರ ಬೌಲರ್‌ಗಳು ಸಂಘಟಿತ ಯಶಸ್ಸು ಸಾಧಿಸಿದರು. ಭುವಿ, ಖಲೀಲ್‌, ಬುಮ್ರಾ, ಕುಲದೀಪ್‌ ತಲಾ 2 ವಿಕೆಟ್‌ ಗಳಿಸಿದರು.

ಎಕ್ಸ್‌ಟ್ರಾ ಇನ್ನಿಂಗ್ಸ್‌
ಭಾರತ-ವೆಸ್ಟ್‌ಇಂಡೀಸ್‌

* ರೋಹಿತ್‌ ಶರ್ಮ ಟ್ವೆಂಟಿ20 ಅಂತಾರಾಷ್ಟ್ರೀಯ ಪಂದ್ಯದಲ್ಲಿ ನಾಲ್ಕು ಶತಕ ಸಿಡಿಸಿದ ಮೊದಲ ಬ್ಯಾಟ್ಸ್‌ಮನ್‌ ಎನಿಸಿಕೊಂಡಿದ್ದಾರೆ. ಮೂರು ಶತಕ ಹೊಡೆದಿರುವ ಕಾಲಿನ್‌ ಮುನ್ರೊ ಎರಡನೇ ಸ್ಥಾನದಲ್ಲಿದ್ದಾರೆ. ಇತರ ಯಾವುದೇ ಆಟಗಾರ ಎರಡಕ್ಕಿಂತ ಹೆಚ್ಚಿನ ಶತಕ ಹೊಡೆದಿಲ್ಲ.
* ಟಿ20ಯಲ್ಲಿ ಇದು ರೋಹಿತ್‌ ಅವರ ಆರನೇ ಶತಕವಾಗಿದೆ. ಕೇವಲ ನಾಲ್ಕು ಆಟಗಾರರು ಗರಿಷ್ಠ ಶತಕ ಹೊಡೆದಿದ್ದಾರೆ. 21 ಶತಕ ಹೊಡೆದಿರುವ ಕ್ರಿಸ್‌ ಗೇಲ್‌ ಅಗ್ರಸ್ಥಾನದಲ್ಲಿದ್ದಾರೆ. ಬ್ರೆಂಡನ್‌ ಮೆಕಲಮ್‌, ಲ್ಯೂಕ್‌ ರೈಟ್‌ ಮತ್ತು ಮೈಕಲ್‌ ಕ್ಲಿಂಗರ್‌ ತಲಾ ಏಳು ಶತಕ ಹೊಡೆದಿದ್ದಾರೆ. ನಾಲ್ಕು ಅಂತಾರಾಷ್ಟ್ರೀಯ ಶತಕ ಸಹಿತ ಇನ್ನೆರಡು ಶತಕಗಳು ಸಯ್ಯದ್‌ ಮುಷ್ತಾಕ್‌ ಅಲಿ ಟ್ರೋಫಿ ಮತ್ತು ಐಪಿಎಲ್‌ನಲ್ಲಿ ಬಂದಿವೆ.
* ಟ್ವೆಂಟಿ20ರಲ್ಲಿ ರೋಹಿತ್‌ 50 ಅಥವಾ ಅದಕ್ಕಿಂತ ಹೆಚ್ಚಿನ ಮೊತ್ತವನ್ನು 19 ಬಾರಿ ದಾಖಲಿಸಿದ್ದಾರೆ. ಈ ಸಾಧನೆಯಲ್ಲಿ ಅವರು ಕೊಹ್ಲಿ (18 ಸಲ) ಅವರನ್ನು ಹಿಂದಿಕ್ಕಿದ್ದಾರೆ.
* ಟ್ವೆಂಟಿ20 ಅಂತಾರಾಷ್ಟ್ರೀಯ ಪಂದ್ಯದಲ್ಲಿ ರೋಹಿತ್‌ 2203 ರನ್‌ ಪೇರಿಸಿ ಕೊಹ್ಲಿ, ಮೆಕಲಮ್‌ ಮತ್ತು ಶೋಯಿಬ್‌ ಮಲಿಕ್‌ ಅವರನ್ನು ಹಿಂದಿಕ್ಕಿದ್ದಾರೆ.
* ರೋಹಿತ್‌ 2018ರಲ್ಲಿ ಅಂತಾರಾಷ್ಟ್ರೀಯ ಪಂದ್ಯಗಳಲ್ಲಿ ಒಟ್ಟಾರೆ 69 ಸಿಕ್ಸರ್‌ ಬಾರಿಸಿದ್ದಾರೆ. ಒಂದು ಕ್ಯಾಲೆಂಡರ್‌ ವರ್ಷದಲ್ಲಿ ಇದು ಬ್ಯಾಟ್ಸ್‌ಮನ್‌ ಓರ್ವರ ಗರಿಷ್ಠ ಸಾಧನೆಯಾಗಿದೆ. ರೋಹಿತ್‌ ಕಳೆದ ವರ್ಷ 65 ಸಿಕ್ಸರ್‌ ಬಾರಿಸಿದ್ದು ಈ ಬಾರಿ ಅದನ್ನು ಮುರಿದಿದ್ದಾರೆ. ರೋಹಿತ್‌ ಈ ವರ್ಷ ಏಕದಿನದಲ್ಲಿ 39, ಟ್ವೆಂಟಿ20ಯಲ್ಲಿ 29 ಮತ್ತು ಟೆಸ್ಟ್‌ನಲ್ಲಿ ಒಂದು ಸಿಕ್ಸರ್‌ ಬಾರಿಸಿದ್ದಾರೆ.
* ಟ್ವೆಂಟಿ20 ಅಂತಾರಾಷ್ಟ್ರೀಯ ಪಂದ್ಯದಲ್ಲಿ ರೋಹಿತ್‌ ಮತ್ತು ಧವನ್‌ ಜತೆಯಾಗಿ 1268 ರನ್‌ ಹೊಡೆದಿದ್ದಾರೆ. ಇದು ಜೋಡಿಯಾಗಿ ಗರಿಷ್ಠ ಸಾಧನೆಯಾಗಿದೆ. ಈ ಮೂಲಕ ಡೇವಿಡ್‌ ವಾರ್ನರ್‌ ಮತ್ತು ಶೇನ್‌ ವಾಟ್ಸನ್‌ ಜತೆಯಾಗಿ 1154 ರನ್‌ ಪೇರಿಸಿದ ಸಾಧನೆಯನ್ನು ಹಿಂದಿಕ್ಕಿದರು.

ಟಾಪ್ ನ್ಯೂಸ್

1-WQEWQEWQ

Eshwarappa ಅವರಿಂದ ನಾನೇನು ಕಲಿಯಬೇಕಾಗಿಲ್ಲ: ಗೀತಾ ಶಿವರಾಜ್ ಕುಮಾರ್

Vijayendra (2)

PM ಮೋದಿಯವರಿಂದ ಏ.28 ಮತ್ತು 29 ರಂದು 5 ಕಡೆ ಪ್ರಚಾರ: ವಿಜಯೇಂದ್ರ ಮಾಹಿತಿ

Lokayukta

Bellary; ಲೋಕಾಯುಕ್ತ ಬಲೆಗೆ ಬಿದ್ದ 6 ಮಂದಿ ಭ್ರಷ್ಟ ಅಧಿಕಾರಿಗಳು: ಲಕ್ಷ ಲಕ್ಷ ರೂ. ಲಂಚ!

Lok Sabha Election: ಮೋದಿಗೆ ಮತ ಕೇಳುವ ಹಕ್ಕಿಲ್ಲ: ಸಿದ್ದರಾಮಯ್ಯ

Lok Sabha Election: ಮೋದಿಗೆ ಮತ ಕೇಳುವ ಹಕ್ಕಿಲ್ಲ: ಸಿದ್ದರಾಮಯ್ಯ

1-asaa

Heart beats; ಭಾರತದ ಹೃದಯ ಪಾಕಿಸ್ಥಾನದ ಯುವತಿಗೆ ಹೊಸ ಜೀವನ ನೀಡಿತು..

who will be the Indian fast bowlers for t20 world cup

T20 World Cup; ಯಾರಿಲ್ಲ.. ಯಾರಿಲ್ಲ.. ವಿಶ್ವಕಪ್ ಗೆ ವೇಗದ ಬೌಲರ್ ಗಳು ಯಾರೆಲ್ಲಾ?

ಸಿನಿಮಾದಲ್ಲಿ ಖ್ಯಾತಿ, ಭಾರತೀಯರ ಪ್ರೀತಿಗಳಿಸಿದರೂ ಈ ಸೆಲೆಬ್ರಿಟಿಗಳು ಮತದಾನ ಮಾಡುವ ಹಾಗಿಲ್ಲ

ಸಿನಿಮಾದಲ್ಲಿ ಖ್ಯಾತಿ, ಭಾರತೀಯರ ಪ್ರೀತಿಗಳಿಸಿದರೂ ಈ ಸೆಲೆಬ್ರಿಟಿಗಳು ಮತದಾನ ಹಕ್ಕು ಹೊಂದಿಲ್ಲ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-qwqwewqe

IPL ಅಕ್ರಮ ಪ್ರಸಾರ ಕೇಸ್; ನಟಿ ತಮನ್ನಾಗೆ ಸಂಕಷ್ಟ: ಸೈಬರ್ ಸೆಲ್ ನೋಟಿಸ್

Anil Kumble Reveals His IPL Bid 2008

IPL: ಆರ್ ಸಿಬಿ ತಂಡಕ್ಕಾಗಿ ಮಲ್ಯ ಅಂದು…..: ವಿಶೇಷ ಘಟನೆ ನೆನೆದ ಅನಿಲ್ ಕುಂಬ್ಳೆ

Ipl: ಡೆಲ್ಲಿ ಗೆಲುವಿಗೆ ಪಂತ್‌, ಪಟೇಲ್‌ ನೆರವು

Ipl: ಡೆಲ್ಲಿ ಗೆಲುವಿಗೆ ಪಂತ್‌, ಪಟೇಲ್‌ ನೆರವು

IPL: ಮತ್ತೂಂದು ದೊಡ್ಡ ಮೊತ್ತಕ್ಕೆ ಎಸ್‌ಆರ್‌ಎಚ್‌ ಸ್ಕೆಚ್‌

IPL: ಮತ್ತೂಂದು ದೊಡ್ಡ ಮೊತ್ತಕ್ಕೆ ಎಸ್‌ಆರ್‌ಎಚ್‌ ಸ್ಕೆಚ್‌

1-asdasdas

IPL; ಸ್ಟಾಯಿನಿಸ್‌ ಏಟಿಗೆ ತವರಲ್ಲೆ ಚಾಂಪಿಯನ್‌ ಚೆನ್ನೈ ಠುಸ್‌!

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Shimoga: ಈಶ್ವರಪ್ಪ ಪರ ಪ್ರಚಾರ ನಡೆಸಿದ್ದ ಮಹಿಳೆ ಮೇಲೆ ಹಲ್ಲೆ- ದೂರು1

Shimoga: ಈಶ್ವರಪ್ಪ ಪರ ಪ್ರಚಾರ ನಡೆಸಿದ್ದ ಮಹಿಳೆ ಮೇಲೆ ಹಲ್ಲೆ- ದೂರು

Bramavara: “ನನ್ನನ್ನು ಕ್ಷಮಿಸಿ’ ಎಂದು ಹೇಳಿ ನಾಪತ್ತೆ

Bramavara: “ನನ್ನನ್ನು ಕ್ಷಮಿಸಿ’ ಎಂದು ಹೇಳಿ ನಾಪತ್ತೆ

Bird flu: ಕೇರಳದಲ್ಲಿ ಹಕ್ಕಿಜ್ವರ ಭೀತಿ; ಚೆಕ್‌ಪೋಸ್ಟ್‌ಗಳಲ್ಲಿ ತಪಾಸಣೆ

Bird flu: ಕೇರಳದಲ್ಲಿ ಹಕ್ಕಿಜ್ವರ ಭೀತಿ; ಚೆಕ್‌ಪೋಸ್ಟ್‌ಗಳಲ್ಲಿ ತಪಾಸಣೆ

Delhi LG: ಕೇರಳ ಚರ್ಚುಗಳಿಗೆ ದಿಲ್ಲಿ ಗೌರ್ನರ್‌ ಭೇಟಿ; ಆಯೋಗಕ್ಕೆ “ಕೈ’ ದೂರು

Delhi LG: ಕೇರಳ ಚರ್ಚುಗಳಿಗೆ ದಿಲ್ಲಿ ಗೌರ್ನರ್‌ ಭೇಟಿ; ಆಯೋಗಕ್ಕೆ “ಕೈ’ ದೂರು

Transfer order: ರಾಜ್ಯದ 388 ನ್ಯಾಯಾಧೀಶರ ವರ್ಗಾವಣೆ ಮಾಡಿ ಆದೇಶ

Transfer order: ರಾಜ್ಯದ 388 ನ್ಯಾಯಾಧೀಶರ ವರ್ಗಾವಣೆ ಮಾಡಿ ಆದೇಶ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.