ಸಿಂಧು, ಶ್ರೀಕಾಂತ್‌ ಕ್ವಾರ್ಟರ್‌ ಫೈನಲ್‌ಗೆ


Team Udayavani, Nov 9, 2018, 1:21 PM IST

sindhu.jpg

ಫ್ಯೂಜು (ಚೀನ): ಭಾರತದ ಅನುಭವಿ ಶಟ್ಲರ್‌ಗಳಾದ ಪಿ.ವಿ. ಸಿಂಧು ಹಾಗೂ ಕೆ. ಶ್ರೀಕಾಂತ್‌ “ಚೀನ ಓಪನ್‌ ಬ್ಯಾಡ್ಮಿಂಟನ್‌’ ಟೂರ್ನಿಯ ಕ್ವಾರ್ಟರ್‌ ಫೈನಲ್‌ ಪ್ರವೇಶಿಸಿದ್ದಾರೆ. 

ಪುರುಷರ ಸಿಂಗಲ್ಸ್‌ ವಿಭಾಗ ಪ್ರಿ-ಕ್ವಾರ್ಟರ್‌ ಫೈನಲ್‌ನಲ್ಲಿ ಶ್ರೀಕಾಂತ್‌ ಇಂಡೋನೇಶ್ಯದ ಟಾಮಿ ಸುಗಿ ಯಾರ್ಟೊ ವಿರುದ್ಧ 10-21, 21-9, 21-9 ಗೇಮ್‌ಗಳಿಂದ ಗೆದ್ದರು. ಮೊದಲ ಗೇಮ್‌ನಲ್ಲಿ ಹಿನ್ನಡೆ ಅನುಭವಿಸಿದ ಶ್ರೀಕಾಂತ್‌ ಬಳಿಕ ಉತ್ತಮ ಪ್ರದರ್ಶನ ತೋರಿ ಹಿಡಿತ ಸಾಧಿಸಿದರು.

ಶ್ರೀಕಾಂತ್‌ 2014ರಲ್ಲಿ  ಚೀನ ಓಪನ್‌ ಚಾಂಪಿಯನ್‌ ಪಟ್ಟ ಅಲಂಕರಿಸಿದ್ದರು. ಸ್ನಾಯು ಸೆಳೆತದಿಂದಾಗಿ ಕಳೆದ ಸಲ ಭಾಗವಹಿಸಿರಲಿಲ್ಲ. ಶ್ರೀಕಾಂತ್‌ ಅವರ ಕ್ವಾ.ಪೈನಲ್‌ ಎದುರಾಳಿ ಚೈನೀಸ್‌ ತೈಪೆಯ ಚುಹು ಟಿನ್‌ ಚೆನ್‌ ವಿರುದ್ಧ ಆಡಲಿದ್ದಾರೆ. ಟಿನ್‌ ಚೆನ್‌ ಜಕಾರ್ತಾ ಏಶ್ಯನ್‌ ಗೇಮ್ಸ್‌ ನಲ್ಲಿ ಬೆಳ್ಳಿ ಪದಕ ಜಯಿಸಿದ್ದರು. ಕಳೆದ ಮೂರು ವರ್ಷಗಳಲ್ಲಿ 2 ಬಾರಿ ಟಿನ್‌ ಚೆನ್‌ ಹಾಗೂ ಶ್ರೀಕಾಂತ್‌ ಮುಖಾಮುಖೀಯಾಗಿದ್ದು, ಟಿನ್‌ ಚೆನ್‌ ಎರಡರಲ್ಲೂ ಗೆದ್ದು ಮೇಲುಗೈ ಸಾಧಿಸಿದ್ದಾರೆ. ಇದಕ್ಕೂ ಮುನ್ನ ಶ್ರೀಕಾಂತ್‌ 2014 ಹಾಂಕಾಂಗ್‌ ಓಪನ್‌ನಲ್ಲಿ ಟಿನ್‌ ಚೆನ್‌ ಅವರನ್ನು ಸೋಲಿಸಿದ್ದರು.

ಸಿಂಧು ಸುಲಭ ಗೆಲುವು
ವನಿತಾ ಸಿಂಗಲ್ಸ್‌ ವಿಭಾಗದ ಸ್ಪರ್ಧೆಯಲ್ಲಿ ಸಿಂಧು ಥಾಯ್ಲೆಂಡ್‌ನ‌ ಬುಸನಾನ್‌ ಆನ್‌ಗ್ಬಮ್ರುಂಗಫಾನ್‌ ಅವರನ್ನು 21-12, 21-15 ನೇರ ಗೇಮ್‌ಗಳಿಂದ ಸೋಲಿಸಿದರು. ಥಾಯ್ಲೆಂಡ್‌ ಆಟಗಾರ್ತಿ ಹೆಚ್ಚಿನ ಫೈಪೋ ಟಿ ನೀಡದ ಕಾರಣ ಸಿಂಧುಗೆ ಸುಲ» ಜಯ ಒಲಿಯಿತು. 

2016ರಲ್ಲಿ ಚೀನ ಪ್ರಶಸ್ತಿ ಗೆದ್ದಿರುವ ಸಿಂಧು ಮುಂದಿನ ಪಂದ್ಯದಲ್ಲಿ ಆತಿಥೇಯ ನಾಡಿನ ಹೀ ಬಿಂಗ್‌ಜಾವೊ ಅವರನ್ನು ಎದುರಿಸಲಿದ್ದಾರೆ. ವಿಶ್ವದ 7ನೇ  ಶ್ರೇಯಾಂಕಿತೆ ಬಿಂಗ್‌ಜಾವೊ ಅವರನ್ನು ಎರಡು ಸಲ ಎದುರಿಸಿರುವ ಸಿಂಧು ಎರಡರಲ್ಲೂ ಸೋಲನುಭವಿಸಿದ್ದಾರೆ.

ಡಬಲ್ಸ್‌ನಲ್ಲೂ ಜಯ
ಪುರುಷರ ಡಬಲ್ಸ್‌ನಲ್ಲಿ ಭಾರತದ ಸಾತ್ವಿಕ್‌ ಸಾಯಿರಾಜ್‌-ಚಿರಾಗ್‌ ಶೆಟ್ಟಿ ಇಂಡೋನೇಶ್ಯದ ವಹ್ಯು ನಾಯಕ ಅರ್ಯ ಪಂಗಾರ್ಯನಿರ-ಅದೆ ಯೂ ಸುಫ್ ಸ್ಯಾಂಟೊಸೊ ವಿರುದ್ಧ 16-21, 21-14, 21-15 ಅಂತರದಿಂದ ಗೆದ್ದು ಕ್ವಾ ಫೈನಲ್‌ ಪ್ರವೇಶಿಸಿದರು.

ಟಾಪ್ ನ್ಯೂಸ್

Kharge (2)

Kalaburagi; ಸತ್ತಾಗ ಮಣ್ಣಿಗಾದರೂ ಬನ್ನಿ: ಭಾವನಾತ್ಮಕವಾಗಿ ಮತಯಾಚಿಸಿದ ಖರ್ಗೆ

voter

Vote ಚಲಾಯಿಸಲು ಭಾರೀ ಸಂಖ್ಯೆಯಲ್ಲಿ ಬರುತ್ತಿರುವ ಕೇರಳ ಎನ್‌ಆರ್‌ಐಗಳು

ತಂಗಿಯ ಸಮಾಧಿ ಸ್ಥಳಕ್ಕೆ  ಭೇಟಿ ನೀಡುವುದನ್ನು ವ್ಲಾಗ್‌ ವಿಡಿಯೋ ಮಾಡಿದ ಯೂಟ್ಯೂಬರ್: ಆಕ್ರೋಶ

ತಂಗಿಯ ಸಮಾಧಿ ಸ್ಥಳಕ್ಕೆ ಭೇಟಿ ನೀಡುವುದನ್ನು ವ್ಲಾಗ್‌ ವಿಡಿಯೋ ಮಾಡಿದ ಯೂಟ್ಯೂಬರ್: ಆಕ್ರೋಶ

ಹಳದಿ ಶಾಸ್ತ್ರದ ವೇಳೆ ವರನಿಗೆ ವಿದ್ಯುತ್ ಸ್ಪರ್ಶ… ಆಸ್ಪತ್ರೆ ದಾರಿಯಲ್ಲಿ ಕೊನೆಯುಸಿರು

ಹಳದಿ ಶಾಸ್ತ್ರದ ವೇಳೆ ವಿದ್ಯುತ್ ಸ್ಪರ್ಶ… ಆಸ್ಪತ್ರೆ ದಾರಿ ಮಧ್ಯೆ ಕೊನೆಯುಸಿರೆಳೆದ ವರ

Inheritance Tax:  ಸ್ಯಾಮ್‌ ಪಿತ್ರೋಡಾ ಹೇಳಿದ್ದೇನು-ಏನಿದು ಪಿತ್ರಾರ್ಜಿತ ತೆರಿಗೆ ಜಟಾಪಟಿ!

Inheritance Tax:  ಸ್ಯಾಮ್‌ ಪಿತ್ರೋಡಾ ಹೇಳಿದ್ದೇನು-ಏನಿದು ಪಿತ್ರಾರ್ಜಿತ ತೆರಿಗೆ ಜಟಾಪಟಿ!

Rahul Gandhi 3

U-turn ಹೊಡೆದ ರಾಹುಲ್: ಸಂಪತ್ತು ಹಂಚಿಕೆ ಬಗ್ಗೆ ಹೇಳಿಲ್ಲ,ಅನ್ಯಾಯ…

ತಂಗಿ ಮದುವೆಗೆ ಟಿವಿ ಗಿಫ್ಟ್‌ ಕೊಟ್ಟದ್ದಕ್ಕೆ ಅಸಮಾಧಾನ: ಪತಿಯನ್ನು ಥಳಿಸಿ ಕೊಲ್ಲಿಸಿದ ಪತ್ನಿ

ತಂಗಿ ಮದುವೆಗೆ ಟಿವಿ ಗಿಫ್ಟ್‌ ಕೊಟ್ಟದ್ದಕ್ಕೆ ಅಸಮಾಧಾನ: ಪತಿಯನ್ನು ಥಳಿಸಿ ಕೊಲ್ಲಿಸಿದ ಪತ್ನಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-asdasdas

IPL; ಸ್ಟಾಯಿನಿಸ್‌ ಏಟಿಗೆ ತವರಲ್ಲೆ ಚಾಂಪಿಯನ್‌ ಚೆನ್ನೈ ಠುಸ್‌!

DCvsGT; ಪಂತ್‌ ನಾಯಕತ್ವಕ್ಕೆ ಅಗ್ನಿಪರೀಕ್ಷೆ:  ತವರಿನ “ಕೋಟ್ಲಾ’ದಲ್ಲಿ ಗುಜರಾತ್‌ ಎದುರಾಳಿ

DCvsGT; ಪಂತ್‌ ನಾಯಕತ್ವಕ್ಕೆ ಅಗ್ನಿಪರೀಕ್ಷೆ:  ತವರಿನ “ಕೋಟ್ಲಾ’ದಲ್ಲಿ ಗುಜರಾತ್‌ ಎದುರಾಳಿ

IPL 2024; Chahal’s 200-wicket haul; First bowler to achieve this feat

IPL 2024; ಚಹಲ್‌ 200 ವಿಕೆಟ್‌ಗಳ ಕಮಾಲ್‌; ಈ ಸಾಧನೆಗೈದ ಮೊದಲ ಬೌಲರ್‌

CSKvsLSG: ಶತಕ ಸಿಡಿಸಿದ ಚೆನ್ನೈನ ಮೊದಲ ನಾಯಕ ಗಾಯಕ್ವಾಡ್‌

CSKvsLSG: ಶತಕ ಸಿಡಿಸಿದ ಚೆನ್ನೈನ ಮೊದಲ ನಾಯಕ ಗಾಯಕ್ವಾಡ್‌

Rajastan Royals; ಪ್ಲೇ ಆಫ್ ಮೊದಲ ಗುರಿ: ಸಂಜು ಸ್ಯಾಮ್ಸನ್‌

Rajastan Royals; ಪ್ಲೇ ಆಫ್ ಮೊದಲ ಗುರಿ: ಸಂಜು ಸ್ಯಾಮ್ಸನ್‌

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

11-mallige

Bappanadu Durgaparameshwari: ಮಲ್ಲಿಗೆ ಪ್ರಿಯೆ ದೇವಿಗೆ ಲಕ್ಷ ಮಲ್ಲಿಗೆ ಶಯನೋತ್ಸವ

Kharge (2)

Kalaburagi; ಸತ್ತಾಗ ಮಣ್ಣಿಗಾದರೂ ಬನ್ನಿ: ಭಾವನಾತ್ಮಕವಾಗಿ ಮತಯಾಚಿಸಿದ ಖರ್ಗೆ

10-uv-fusion

Theater: ಅಳಿವು ಉಳಿವಿನ ದವಡೆಯಲ್ಲಿ ರಂಗಭೂಮಿ

voter

Vote ಚಲಾಯಿಸಲು ಭಾರೀ ಸಂಖ್ಯೆಯಲ್ಲಿ ಬರುತ್ತಿರುವ ಕೇರಳ ಎನ್‌ಆರ್‌ಐಗಳು

9-fusion

Friendship: ಕೈಜಾರದಿರಲಿ ಗೆಳೆತನವೆಂಬ ಆಪ್ತ ನಿಧಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.