ರಣಜಿ ಕ್ರಿಕೆಟ್‌ :ಇಂದಿನಿಂದ ಕರ್ನಾಟಕ-ವಿದರ್ಭ ಸೆಣಸು


Team Udayavani, Nov 12, 2018, 6:15 AM IST

karnataka-vinay-kumar.jpg

ನಾಗ್ಪುರ: ಈ ಬಾರಿ ರಣಜಿ ಕ್ರಿಕೆಟ್‌ ಋತುವಿನಲ್ಲಿ ತನ್ನ ಮೊದಲ ಪಂದ್ಯವಾಡಲು ಕರ್ನಾಟಕ ತಂಡ ಸಜ್ಜಾಗಿದೆ. ಸೋಮವಾರದಿಂದ ಗುರುವಾರದವರೆಗೆ ರಾಜ್ಯ ತಂಡ ಹಾಲಿ ಚಾಂಪಿಯನ್‌ ವಿದರ್ಭ ವಿರುದ್ಧ ಅದರದ್ದೇ ನೆಲದಲ್ಲಿ ಸೆಣಸಲಿದೆ. 

ಕರ್ನಾಟಕ ತನ್ನ ಮೊದಲ ಪಂದ್ಯವನ್ನೇ ಹಾಲಿ ಚಾಂಪಿಯನ್ನರ ವಿರುದ್ಧ ಆಡಲು ಸಿದ್ಧವಾಗಿರುವುದು ಒಂದು ವಿಶೇಷವಾದರೆ, ಒಂದು ಕಾಲದಲ್ಲಿ ಕರ್ನಾಟಕದ ಪ್ರತಿಭಾವಂತ ಬ್ಯಾಟ್ಸ್‌ಮನ್‌ ಎನಿಸಿಕೊಂಡಿದ್ದ ಗಣೇಶ್‌ ಸತೀಶ್‌ ವಿದರ್ಭ ಪರ ಆಡುತ್ತಿರುವುದು ಇನ್ನೊಂದು ವಿಶೇಷ.

ಎರಡೂ ತಂಡಗಳು ಪ್ರಬಲವಾಗಿವೆ. ಕಳೆದ ರಣಜಿ ಋತುವಿನಲ್ಲಿ ರಣಜಿ ಚಾಂಪಿಯನ್‌ ಆಗಿರುವ ವಿದರ್ಭದಲ್ಲಿ ಅತ್ಯುತ್ತಮ ಬ್ಯಾಟಿಂಗ್‌ ಪಡೆಯಿದೆ. ಇನ್ನೊಂದು ಕಡೆ ಕೆ.ಎಲ್‌.ರಾಹುಲ್‌, ಮನೀಶ್‌ ಪಾಂಡೆ ಅನುಪಸ್ಥಿತಿಯಲ್ಲೂ ಕರ್ನಾಟಕದಲ್ಲಿ ಪ್ರಬಲ ಬ್ಯಾಟಿಂಗ್‌ ಮತ್ತು ಬೌಲಿಂಗ್‌ ಪಡೆಯಿದೆ. ಈ ಋತುವಿನಲ್ಲಿ ಕರ್ನಾಟಕಕ್ಕೆ ಇದು ಮೊದಲ ಪಂದ್ಯ. ವಿದರ್ಭಕ್ಕೆ ಇದು 2ನೆ ಪಂದ್ಯ.

ವಿದರ್ಭ ಮೊದಲ ಪಂದ್ಯದಲ್ಲಿ ಉತ್ತಮ ಆಟವನ್ನೇ ಆಡಿದೆ. ಮಹಾರಾಷ್ಟ್ರ ವಿರುದ್ಧ ಅದು ಮೊದಲ ಇನಿಂಗ್ಸ್‌ನಲ್ಲಿ ಕಳಪೆ ಮೊತ್ತಕ್ಕೆ ಕುಸಿದರೂ 2ನೇ ಇನಿಂಗ್ಸ್‌ನಲ್ಲಿ ಭಾರೀ ಮೊತ್ತ ಪೇರಿಸಿ ಪಂದ್ಯವನ್ನು ಡ್ರಾ ಮಾಡಿಕೊಂಡಿದೆ. ನಾಯಕ ಫೈಜ್‌ ಫ‌ಜಲ್‌, ಅಕ್ಷಯ್‌ ವಡ್ಕರ್‌ ಮೊದಲ ಪಂದ್ಯದಲ್ಲಿ ಶತಕ ಬಾರಿಸಿದ ಉತ್ಸಾಹದಲ್ಲಿದ್ದಾರೆ. ಆದಿತ್ಯ ಸರ್ವಟೆ ಮೊದಲ ಪಂದ್ಯದಲ್ಲಿ ಬೌಲಿಂಗ್‌ ಮತ್ತು ಬ್ಯಾಟಿಂಗ್‌ ಎರಡೂ ವಿಭಾಗದಲ್ಲಿ ಮಿಂಚಿದೆ.

ಇನ್ನು ಕರ್ನಾಟಕ ತಂಡದಲ್ಲಿ ಕರುಣ್‌ ನಾಯರ್‌, ರವಿಕುಮಾರ್‌ ಸಮರ್ಥ್, ಪವನ್‌ ದೇಶಪಾಂಡೆಯಂತಹ ಖ್ಯಾತ ಬ್ಯಾಟ್ಸ್‌ಮನ್‌ಗಳಿದ್ದಾರೆ. ಅಷ್ಟು ಮಾತ್ರವಲ್ಲ ಈ ತಂಡ ಸ್ಟುವರ್ಟ್‌ ಬಿನ್ನಿ, ಶ್ರೇಯಸ್‌ ಗೋಪಾಲ್‌, ವಿನಯ್‌ ಕುಮಾರ್‌ರಂತಹ ಪ್ರಬಲ ಆಲ್‌ರೌಂಡರ್‌ಗಳನ್ನು ಹೊಂದಿದೆ. ಅಭಿಮನ್ಯುಮಿಥುನ್‌, ಪ್ರಸಿದ್ಧ್ ಕೃಷ್ಣ ಇರುವ ಬೌಲಿಂಗ್‌ ಪಡೆಯೂ ಬಲಿಷ್ಠವಾಗಿದೆ. ಇದು ಮೈದಾನದಲ್ಲಿ ಹೇಗೆ ಪರಿಣಾಮ ಬೀರುತ್ತದೆ ಎನ್ನುವುದನ್ನು ಕಾದು ನೋಡಬೇಕು.

8 ಕಿರೀಟ ಗೆದ್ದಿರುವ ಕರ್ನಾಟಕ
ದೇಶೀಯ ಕ್ರಿಕೆಟ್‌ನಲ್ಲಿ ಕರ್ನಾಟಕ ಅತಿಬಲಿಷ್ಠ ತಂಡಗಳಲ್ಲೊಂದು. ಅದು ಈವರೆಗೆ 8 ಬಾರಿ ರಣಜಿ ಗೆದ್ದಿದ್ದರೆ, 6 ಬಾರಿ ರನ್ನರ್‌ ಅಪ್‌ ಎನಿಸಿಕೊಂಡಿದೆ. ಈ ಬಾರಿಯೂ ಟ್ರೋಫಿ ಗೆಲ್ಲುವುದಕ್ಕೆ ಬೇಕಾದ ಎಲ್ಲ ಸಾಮರ್ಥ್ಯವೂ ತಂಡದಲ್ಲಿದೆ. ಇದಕ್ಕೆ ಹೋಲಿಸಿದರೆ ವಿದರ್ಭ ಅನನುಭವಿ ತಂಡ ಅದು ಪ್ರಶಸ್ತಿ ಗೆದ್ದಿರುವುದು ಒಮ್ಮೆ ಮಾತ್ರ.

ಕರ್ನಾಟಕ ತಂಡ
ವಿನಯ್‌ ಕುಮಾರ್‌ (ನಾಯಕ), ಕರುಣ್‌ ನಾಯರ್‌, ರವಿಕುಮಾರ್‌ ಸಮರ್ಥ್, ಕೃಷ್ಣಮೂರ್ತಿ ಸಿದ್ಧಾರ್ಥ್, ಡಿ.ನಿಶ್ಚಲ್‌, ಶ್ರೇಯಸ್‌ ಗೋಪಾಲ್‌, ಸ್ಟುವರ್ಟ್‌ ಬಿನ್ನಿ, ಪವನ್‌ ದೇಶಪಾಂಡೆ, ಜಗದೀಶ ಸುಚಿತ್‌, ಪ್ರಸಿದ್ಧ್ ಕೃಷ್ಣ, ಶಿಶಿರ್‌ ಭವಾನೆ, ರೋನಿತ್‌ ಮೋರೆ, ಅಭಿಮನ್ಯು ಮಿಥುನ್‌, ಬಿ.ಆರ್‌.ಶರತ್‌, ಶ್ರೀನಿವಾಸ್‌ ಶರತ್‌.

ವಿದರ್ಭ ತಂಡ
ಫೈಜ್‌ ಫ‌ಜಲ್‌ (ನಾಯಕ), ಗಣೇಶ್‌ ಸತೀಶ್‌, ರಜನೀಶ್‌ ಗುರ್ಬಾನಿ, ವಾಸಿಮ್‌ ಜಾಫ‌ರ್‌, ಅಕ್ಷಯ್‌ ಕರ್ಣೇವರ್‌, ಲಲಿತ್‌ ಎಂ.ಯಾದವ್‌, ಸಂಜಯ್‌ ರಾಮಸ್ವಾಮಿ, ಆದಿತ್ಯ ಸರ್ವಟೆ, ಅಥರ್ವ ತೈದೆ, ಆದಿತ್ಯ ಥಾಕರೆ, ಅಕ್ಷಯ್‌ ವಡ್ಕರ್‌, ಶ್ರೀಕಾಂತ್‌ ವಾಗ್‌Ø, ಅಕ್ಷಯ್‌ ವಖಾರೆ, ಅಪೂರ್ವ್‌ ವಾಂಖಡೆ, ಸಿದ್ಧೇಶ್‌ ವಥ್‌, ದರ್ಶನ್‌ ನಲ್ಕಂಡೆ.

ಟಾಪ್ ನ್ಯೂಸ್

Boat Capsizes In Odisha’s Mahanadi River

Mahanadi River Tragedy: ಮಗುಚಿದ 50 ಜನರಿದ್ದ ದೋಣಿ; ಇಬ್ಬರು ಸಾವು; ಎಂಟು ಮಂದಿ ನಾಪತ್ತೆ

Tamil Nadu BJP chief Annamalai demands re-poll due to missing voter names

Loksabha Election; ತಮಿಳುನಾಡಿನಲ್ಲಿ ಮರು ಮತದಾನಕ್ಕೆ ಬಿಜೆಪಿ ಅಧ್ಯಕ್ಷ ಅಣ್ಣಾಮಲೈ ಆಗ್ರಹ

3-blthngady

ತಾಲೂಕಿನೆಲ್ಲೆಡೆ ಮುಂಜಾನೆ ಭಾರಿ ಮಳೆ;ಕೆಸರುಮಯ ರಾಷ್ಟ್ರೀಯ ಹೆದ್ದಾರಿಯಾಗಿಸಿದ ಗುತ್ತಿಗೆದಾರರು

MSD ಎಂಟ್ರಿ ಶಬ್ಧಕ್ಕೆ ಕಿವುಡುತನ ಸಾಧ್ಯತೆ; ವೈರಲ್ ಆಯ್ತು ಡಿಕಾಕ್ ಪತ್ನಿಯ ಇನ್ಸ್ಟಾ ಪೋಸ್ಟ್

MSD ಎಂಟ್ರಿ ಶಬ್ಧಕ್ಕೆ ಕಿವುಡುತನ ಸಾಧ್ಯತೆ; ವೈರಲ್ ಆಯ್ತು ಡಿಕಾಕ್ ಪತ್ನಿಯ ಇನ್ಸ್ಟಾ ಪೋಸ್ಟ್

UCC; ದೇಶವು ಶರಿಯಾ ಕಾನೂನಿನಲ್ಲಿ ನಡೆಯಬೇಕೆ?: ಯುಸಿಸಿ ಜಾರಿ ಬಗ್ಗೆ ಅಮಿತ್ ಶಾ ಖಡಕ್ ಮಾತು

UCC; ದೇಶವು ಶರಿಯಾ ಕಾನೂನಿನಲ್ಲಿ ನಡೆಯಬೇಕೆ?: ಯುಸಿಸಿ ಜಾರಿ ಬಗ್ಗೆ ಅಮಿತ್ ಶಾ ಖಡಕ್ ಮಾತು

2-rain

Rain: ಉಡುಪಿ ಜಿಲ್ಲೆಗೆ ತಂಪೆರೆದ ಮಳೆರಾಯ, ಜಿಲ್ಲಾದ್ಯಂತ ಗುಡುಗು ಸಹಿತ ಧಾರಾಕಾರ ಮಳೆ

1-24-saturday

Daily Horoscope: ಉದ್ಯೋಗ ಸ್ಥಾನದಲ್ಲಿ ನೆಮ್ಮದಿಯ ವಾತಾವರಣ, ಅಕಸ್ಮಾತ್‌ ಧನಪ್ರಾಪ್ತಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

MSD ಎಂಟ್ರಿ ಶಬ್ಧಕ್ಕೆ ಕಿವುಡುತನ ಸಾಧ್ಯತೆ; ವೈರಲ್ ಆಯ್ತು ಡಿಕಾಕ್ ಪತ್ನಿಯ ಇನ್ಸ್ಟಾ ಪೋಸ್ಟ್

MSD ಎಂಟ್ರಿ ಶಬ್ಧಕ್ಕೆ ಕಿವುಡುತನ ಸಾಧ್ಯತೆ; ವೈರಲ್ ಆಯ್ತು ಡಿಕಾಕ್ ಪತ್ನಿಯ ಇನ್ಸ್ಟಾ ಪೋಸ್ಟ್

1-aqweq

Delhi ತವರಿಗೆ ಮರಳಿದ ಖುಷಿಯಲ್ಲಿ: ಕೋಟ್ಲಾದಲ್ಲಿ ಹೈದರಾಬಾದ್‌ ವಿರುದ್ಧ ಮುಖಾಮುಖಿ

1-RCB

RCB ; ರವಿವಾರ ಕೆಕೆಆರ್‌ ವಿರುದ್ಧ ಈಡನ್‌ನಲ್ಲಿ ಗೋ ಗ್ರೀನ್‌ ಗೇಮ್‌

1-ewqe

Olympics ಅರ್ಹತೆ ತಪ್ಪುವ ಭೀತಿಯಲ್ಲಿ ದೀಪಕ್‌, ಸುಜೀತ್‌

1-wqewqewq

Doping: ಶಾಲು ಚೌಧರಿ ದೋಷಮುಕ್ತ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

Boat Capsizes In Odisha’s Mahanadi River

Mahanadi River Tragedy: ಮಗುಚಿದ 50 ಜನರಿದ್ದ ದೋಣಿ; ಇಬ್ಬರು ಸಾವು; ಎಂಟು ಮಂದಿ ನಾಪತ್ತೆ

Tamil Nadu BJP chief Annamalai demands re-poll due to missing voter names

Loksabha Election; ತಮಿಳುನಾಡಿನಲ್ಲಿ ಮರು ಮತದಾನಕ್ಕೆ ಬಿಜೆಪಿ ಅಧ್ಯಕ್ಷ ಅಣ್ಣಾಮಲೈ ಆಗ್ರಹ

3-blthngady

ತಾಲೂಕಿನೆಲ್ಲೆಡೆ ಮುಂಜಾನೆ ಭಾರಿ ಮಳೆ;ಕೆಸರುಮಯ ರಾಷ್ಟ್ರೀಯ ಹೆದ್ದಾರಿಯಾಗಿಸಿದ ಗುತ್ತಿಗೆದಾರರು

MSD ಎಂಟ್ರಿ ಶಬ್ಧಕ್ಕೆ ಕಿವುಡುತನ ಸಾಧ್ಯತೆ; ವೈರಲ್ ಆಯ್ತು ಡಿಕಾಕ್ ಪತ್ನಿಯ ಇನ್ಸ್ಟಾ ಪೋಸ್ಟ್

MSD ಎಂಟ್ರಿ ಶಬ್ಧಕ್ಕೆ ಕಿವುಡುತನ ಸಾಧ್ಯತೆ; ವೈರಲ್ ಆಯ್ತು ಡಿಕಾಕ್ ಪತ್ನಿಯ ಇನ್ಸ್ಟಾ ಪೋಸ್ಟ್

UCC; ದೇಶವು ಶರಿಯಾ ಕಾನೂನಿನಲ್ಲಿ ನಡೆಯಬೇಕೆ?: ಯುಸಿಸಿ ಜಾರಿ ಬಗ್ಗೆ ಅಮಿತ್ ಶಾ ಖಡಕ್ ಮಾತು

UCC; ದೇಶವು ಶರಿಯಾ ಕಾನೂನಿನಲ್ಲಿ ನಡೆಯಬೇಕೆ?: ಯುಸಿಸಿ ಜಾರಿ ಬಗ್ಗೆ ಅಮಿತ್ ಶಾ ಖಡಕ್ ಮಾತು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.