ಆಸ್ಟ್ರೇಲಿಯ ಸರಣಿಗೆ ತಯಾರಾಗಲು ಅವಕಾಶ: ರಾಹುಲ್ ದ್ರಾವಿಡ್
Team Udayavani, Nov 14, 2018, 8:23 AM IST
ಹೊಸದಿಲ್ಲಿ: ಭಾರತ “ಎ’ ತಂಡದ ಮುಂಬರುವ ನ್ಯೂಜಿಲ್ಯಾಂಡ್ ಪ್ರವಾಸ ಹಿರಿಯ ಆಟಗಾರರಿಗೆ ಆಸ್ಟ್ರೇಲಿಯದ ವಿರುದ್ಧದ ಕಠಿನ ಸರಣಿಗೆ ಸಿದ್ಧರಾಗಲು ದೊರಕಿರುವ ಒಂದು ಉತ್ತಮ ಅವಕಾಶ ಎಂದು ಮಾಜಿ ನಾಯಕ ಹಾಗೂ ಸದ್ಯ ಭಾರತ “ಎ’ ತಂಡದ ಕೋಚ್ ರಾಹುಲ್ ದ್ರಾವಿಡ್ ಅಭಿಪ್ರಾಯಪಟ್ಟಿದ್ದಾರೆ.
ನವೆಂಬರ್ 16ರಂದ ಆರಂಭವಾಗಲಿರುವ ನ್ಯೂಜಿಲ್ಯಾಂಡ್ ವಿರುದ್ಧದ ಸರಣಿ ಯಲ್ಲಿ ಮುರಳಿ ವಿಜಯ್, ಪೃಥ್ವಿ ಶಾ, ಹನುಮ ವಿಹಾರಿ, ರೋಹಿತ್ ಶರ್ಮ ಹಾಗೂ ಅಜಿಂಕ್ಯ ರಹಾನೆ ಭಾರತ “ಎ’ ತಂಡದಲ್ಲಿ ಆಡಲಿದ್ದಾರೆ. “ಭಾರತ ತಂಡ ವಿದೇಶಿ ಸರಣಿಗೆ ತೆರಳುವ ಮುನ್ನ ಇಂತಹ ಪ್ರವಾಸವನ್ನಿಡುವುದು ಉತ್ತಮ ವಿಚಾರ. ಕೆಲವೊಂದು ಆಟಗಾರರು ಹಿರಿಯ ಆಟಗಾರರ ನಿರ್ವಹಣ ಮಂಡಳಿ ಬಳಿ ಬಂದು ಭಾರತ “ಎ’ ತಂಡದಲ್ಲಿ ಆಡಲು ಮನವಿ ಸಲ್ಲಿಸಿರುವುದರಿಂದ ಇದು ಅವರಿಗೆ ಸಿಕ್ಕಿರುವ ಒಂದು ಉತ್ತಮ ಅವಕಾಶವಾಗಿದೆ. ಆಸ್ಟ್ರೇಲಿಯ ಹಾಗೂ ನ್ಯೂಜಿಲ್ಯಾಂಡ್ನಲ್ಲಿ ಒಂದೇ ರೀತಿಯ ವಾತಾವರಣವಿಲ್ಲದಿದ್ದರೂ, ಸರಣಿಗೂ ಮುನ್ನ ಹೆಚ್ಚಿನ ಅನುಭವ ಪಡೆಯಲು ನೆರವಾಗಬಹುದು’ ಎಂದು ದ್ರಾವಿಡ್ ತಿಳಿಸಿದ್ದಾರೆ.
ಭಾರತ “ಎ’ ತಂಡ ನ್ಯೂಜಿಲ್ಯಾಂಡ್ ವಿರುದ್ಧ 3 ಏಕದಿನ ಹಾಗೂ 4 ದಿನಗಳ ಟೆಸ್ಟ್ ಪಂದ್ಯಗಳನ್ನು ಆಡಲಿದೆ. ಮೊದಲ ಟೆಸ್ಟ್ ಪಂದ್ಯವನ್ನು ಭಾರತ ತಂಡದ ಉಪ ನಾಯಕ ಅಜಿಂಕ್ಯ ರಹಾನೆ ಹಾಗೂ ಕೆಲವೊಂದು ಟೆಸ್ಟ್ ಪಂದ್ಯದ ನಾಯಕತ್ವವನ್ನು ಕರುಣ್ ನಾಯರ್ ನಿರ್ವಹಿಸಲಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Team India; ಹಾರ್ದಿಕ್ ಅಲ್ಲ; ಟೀಂ ಇಂಡಿಯಾದ ಮುಂದಿನ ಟಿ20 ನಾಯಕನ ಹೆಸರು ಸೂಚಿಸಿದ ಭಜ್ಜಿ
IPL; ಲಕ್ನೋ ಸೂಪರ್ ಜೈಂಟ್ಸ್ ಎದುರಾಳಿ:ಚೆನ್ನೈಗೆ ಇದು ಸೇಡಿನ ಪಂದ್ಯ
IPL; ಆಸ್ಟ್ರೇಲಿಯನ್ ಆಲ್ರೌಂಡರ್ ಮಾರ್ಷ್ ಔಟ್
IPL ನಾಯಕರಿಗೆ ದಂಡ, ಕೊಹ್ಲಿಗೂ ದಂಡ ; 29 ಸಲ 200 ರನ್ ನೀಡಿದ ಆರ್ಸಿಬಿ!
IPL; ಮುಂಬೈ ಎದುರು ರಾಜಸ್ಥಾನ್ ಯಶಸ್ವಿ ಗೆಲುವಿನ ಓಟ: ಜೈಸ್ವಾಲ್ ಅಮೋಘ ಶತಕ
MUST WATCH
ಹೊಸ ಸೇರ್ಪಡೆ
Vijayapura; ಯತ್ನಾಳ್ ವಿರುದ್ಧ ಚುನಾವಣಾ ಆಯೋಗಕ್ಕೆ ದೂರು: ಶಿವಾನಂದ ಪಾಟೀಲ
Reliance Jio Profit; ರಿಲಯನ್ಸ್ ಜಿಯೊ ನಿವ್ವಳ ಲಾಭ ಶೇ 13ರಷ್ಟು ಹೆಚ್ಚಳ
Vijayapura; ಚುನಾವಣಾ ಬಾಂಡ್ ತನಿಖೆಯಾದರೆ ಮೋದಿ ಜೈಲಿಗೆ: ಎಂ.ಬಿ. ಪಾಟೀಲ್
Dharwad; ಕಾಂಗ್ರೆಸ್ ಬಂದ ಮೇಲೆ ಅಪರಾಧ ಪ್ರಕರಣಗಳ ಸಂಖ್ಯೆ ಹೆಚ್ಚಳ: ಸಚಿವ ಜೋಶಿ ಗಂಭೀರ ಆರೋಪ
Bridge Collapse: 8 ವರ್ಷಗಳಿಂದ ನಿರ್ಮಾಣವಾಗುತ್ತಿದ್ದ ಸೇತುವೆ ಕುಸಿತ… ತಪ್ಪಿದ ದುರಂತ