ಬೆಲ್ಜಿಯಂ-ನೆದರ್ಲೆಂಡ್‌ ಪ್ರಶಸ್ತಿ ಪೈಪೋಟಿ


Team Udayavani, Dec 16, 2018, 6:00 AM IST

pti12152018000148b.jpg

ಭುವನೇಶ್ವರ: ರವಿವಾರ ನಡೆಯಲಿರುವ ವಿಶ್ವಕಪ್‌ ಹಾಕಿ ಪಂದ್ಯಾವಳಿಯ ಪ್ರಶಸ್ತಿ ಸಮರದಲ್ಲಿ ಬೆಲ್ಜಿಯಂ ಮತ್ತು ನೆದರ್ಲೆಂಡ್‌ ಪರಸ್ಪರ ಎದುರಾಗಲಿವೆ. ಸೆಮಿಪೈನಲ್‌ನಲ್ಲಿ ಸೋತ ಇಂಗ್ಲೆಂಡ್‌ ಮತ್ತು ಆಸ್ಟ್ರೇಲಿಯ ಕಂಚಿನ ಪದಕಕ್ಕಾಗಿ ಸ್ಪರ್ಧಿಸಲಿವೆ.

ಶನಿವಾರದ ಮೊದಲ ಸೆಮಿಫೈನಲ್‌ ಏಕಪಕ್ಷೀಯವಾಗಿ ನಡೆಯಿತು. ಈ ಮುಖಾಮುಖೀಯಲ್ಲಿ ರಿಯೋ ಒಲಿಂಪಿಕ್‌ ಬೆಳ್ಳಿ ಪದಕ ವಿಜೇತ ಬೆಲ್ಜಿಯಂ 6-0 ಭರ್ಜರಿ ಅಂತರದಿಂದ ಇಂಗ್ಲೆಂಡಿಗೆ ಆಘಾತವಿಕ್ಕಿತು. ಇದು ಬೆಲ್ಜಿಯಂ ಕಾಣುತ್ತಿರುವ ಮೊದಲ ವಿಶ್ವಕಪ್‌ ಫೈನಲ್‌ ಎಂಬುದು ವಿಶೇಷ.

ಶೂಟೌಟ್‌ನಲ್ಲಿ ಡಚ್ಚರ ಜಯಭೇರಿ
ಆಸ್ಟ್ರೇಲಿಯ ಮತ್ತು ನೆದರ್ಲೆಂಡ್‌ ನಡುವಿನ 2ನೇ ಸೆಮಿಫೈನಲ್‌ ತೀವ್ರ ಪೈಪೋಟಿಯಿಂದ ಕೂಡಿತ್ತು. ಪೂರ್ಣಾವಧಿಯಲ್ಲಿ ಎರಡೂ ತಂಡಗಳು 2-2 ಸಮಬಲ ಸಾಧಿಸಿದ್ದರಿಂದ ಪಂದ್ಯದ ಫ‌ಲಿತಾಂಶವನ್ನು ಶೂಟೌಟ್‌ನಲ್ಲಿ ನಿರ್ಧರಿಸಲಾಯಿತು. ಇಲ್ಲಿ ನೆದರ್ಲೆಂಡ್‌ 4-3 ಗೋಲುಗಳಿಂದ ಕಳೆದೆರಡು ಬಾರಿಯ ಚಾಂಪಿಯನ್‌ ಆಸ್ಟ್ರೇಲಿಯವನ್ನು ಮಣಿಸಿತು. ಕಾಂಗರೂಗಳ ಹ್ಯಾಟ್ರಿಕ್‌ ಪ್ರಶಸ್ತಿಯ ಕನಸು ಕಮರಿ ಹೋಯಿತು.ಈ ಪಂದ್ಯವನ್ನು ನೆದರ್ಲೆಂಡ್‌ ನಿಗದಿತ ಅವಧಿಯಲ್ಲೇ ಗೆಲ್ಲುವ ಎಲ್ಲ ಸಾಧ್ಯತೆ ಇತ್ತು. ಆದರೆ ಅಂತಿಮ ನಿಮಿಷದಲ್ಲಿ ಎಡ್ಡಿ ಒಕೆಂಡೆನ್‌ ಡಚ್ಚರ ಕೋಟೆಯನ್ನು ಭೇದಿಸಿ ಆಕರ್ಷಕ ಫೀಲ್ಡ್‌ ಗೋಲ್‌ ಒಂದನ್ನು ಬಾರಿಸುವ ಮೂಲಕ ಪಂದ್ಯವನ್ನು ಸಮಬಲಕ್ಕೆ ತಂದರು.

ತಲಾ 5 ಅವಕಾಶಗಳ ಮೊದಲ ಶೂಟೌಟ್‌ನಲ್ಲಿ 3-3 ಸಮಬಲ ದಾಖಲಾದ್ದರಿಂದ ಇನ್ನೊಂದು ಅವಕಾಶ ಕಲ್ಪಿಸಲಾಯಿತು. ಇಲ್ಲಿ ನೆದರ್ಲೆಂಡ್‌ ಗೋಲು ಹೊಡೆದರೆ, ಆಸ್ಟ್ರೇಲಿಯ ವಿಫ‌ಲವಾಯಿತು. ಈ ರೀತಿಯಾಗಿ ಕಳೆದ ಸಲ ತವರಿನ ಹೇಗ್‌ನಲ್ಲಿ ನಡೆದ ಫೈನಲ್‌ನಲ್ಲಿ ಆಸ್ಟ್ರೇಲಿಯ ವಿರುದ್ಧ ಅನುಭವಿಸಿದ 1-6 ಅಂತರದ ಸೋಲಿಗೆ ನೆದರ್ಲೆಂಡ್‌ ಸೇಡು ತೀರಿಸಿಕೊಂಡಿತು.

ರೆಡ್‌ ಲಯನ್ಸ್‌ ಪ್ರಾಬಲ್ಯ
ಅಚ್ಚರಿಯ ಸೆಮಿಫೈನಲಿಸ್ಟ್‌ ಇಂಗ್ಲೆಂಡ್‌ ವಿರುದ್ಧ “ರೆಡ್‌ ಲಯನ್ಸ್‌’ ಬೆಲ್ಜಿಯಂ ಸಂಪೂರ್ಣ ಪ್ರಾಬಲ್ಯ ಮೆರೆಯಿತು. ಅಲೆಕ್ಸಾಂಡರ್‌ ಹೆಂಡ್ರಿಕ್ಸ್‌ (45ನೇ, 50ನೇ ನಿಮಿಷ), ಟಾಮ್‌ ಬೂನ್‌ (8ನೇ ನಿಮಿಷ), ಸೈಮನ್‌ ಗೌಗ್ನರ್ಡ್‌ (19ನೇ ನಿಮಿಷ), ಸೆಡ್ರಿಕ್‌ ಚಾರ್ಲಿಯರ್‌ (42ನೇ ನಿಮಿಷ) ಮತ್ತು ಸೆಬಾಸ್ಟಿಯನ್‌ ಡೋಕಿಯರ್‌ (53ನೇ ನಿಮಿಷ) ಗೋಲುಗಳ ರೂವಾರಿ ಎನಿಸಿದರು. ಬೆಲ್ಜಿಯಂ 2014ರ ಆವೃತ್ತಿಯಲ್ಲಿ 5ನೇ ಸ್ಥಾನಕ್ಕೆ ಕುಸಿದಿತ್ತು.

ಪಂದ್ಯದ ಕೆಲವೇ ನಿಮಿಷಗಳ ಮೊದಲು ತಂಡದ ಆಟಗಾರ ಸೈಮನ್‌ ಗೌಗ್ನರ್ಡ್‌ ಅವರ ತಂದೆ ನಿಧನರಾದ್ದರಿಂದ ಬೆಲ್ಜಿಯಂ ಆಟಗಾರರೆಲ್ಲ ಕಪುrಪಟ್ಟಿ ಧರಿಸಿ ಆಡಲಿಳಿದಿದ್ದರು.

ಟಾಪ್ ನ್ಯೂಸ್

WhatsApp ಭಾರತದಲ್ಲಿ ಸ್ಥಗಿತಗೊಳಿಸ್ತೇವೆ; ಹೈಕೋರ್ಟ್‌ ಮೆಟ್ಟಿಲೇರಿದ ಪ್ರಕರಣ, ಏನಿದು?

WhatsApp ಭಾರತದಲ್ಲಿ ಸ್ಥಗಿತಗೊಳಿಸ್ತೇವೆ; ಹೈಕೋರ್ಟ್‌ ಮೆಟ್ಟಿಲೇರಿದ ಪ್ರಕರಣ, ಏನಿದು?

Eletion: ತೀರ್ಥಹಳ್ಳಿಯಲ್ಲಿ ಪ್ರಚಾರದ ವೇಳೆ ತಮಿಳಿನಲ್ಲೆ ಮಾತನಾಡಿದ ನಟ ಶಿವರಾಜ್ ಕುಮಾರ್

Eletion: ತೀರ್ಥಹಳ್ಳಿಯಲ್ಲಿ ಪ್ರಚಾರದ ವೇಳೆ ತಮಿಳಿನಲ್ಲೆ ಮಾತನಾಡಿದ ನಟ ಶಿವರಾಜ್ ಕುಮಾರ್

Chitradurga: ಹೃದಯಾಘಾತದಿಂದ ಚುನಾವಣಾ ಕರ್ತವ್ಯದಲ್ಲಿದ್ದ ಶಿಕ್ಷಕಿ ಮೃತ್ಯು…

Chitradurga: ಚುನಾವಣಾ ಕರ್ತವ್ಯದಲ್ಲಿದ್ದಾಗಲೇ ಹೃದಯಾಘಾತಗೊಂಡು ಶಿಕ್ಷಕಿ ಮೃತ್ಯು…

Lok Sabha Polls: ಉಡುಪಿ: ಕುಟುಂಬ ಸಮೇತರಾಗಿ ಬಂದು ಮತದಾನ ಮಾಡಿದ ನಟ ರಕ್ಷಿತ್ ಶೆಟ್ಟಿ

Lok Sabha Polls: ಉಡುಪಿ: ಕುಟುಂಬ ಸಮೇತರಾಗಿ ಬಂದು ಮತದಾನ ಮಾಡಿದ ನಟ ರಕ್ಷಿತ್ ಶೆಟ್ಟಿ

Kadaba: ಬಿಳಿನೆಲೆ ಮತದಾನ ಕೇಂದ್ರದಲ್ಲಿ ಕಾಂಗ್ರೆಸ್-ಬಿಜೆಪಿ ಕಾರ್ಯಕರ್ತರ ಮಾತಿನ ಚಕಮಕಿ

Kadaba: ಬಿಳಿನೆಲೆ ಮತದಾನ ಕೇಂದ್ರದಲ್ಲಿ ಕಾಂಗ್ರೆಸ್-ಬಿಜೆಪಿ ಕಾರ್ಯಕರ್ತರ ಮಾತಿನ ಚಕಮಕಿ

EVM, VVPAT ಮತಗಳ ಹೋಲಿಕೆ- ಎಲ್ಲಾ ಅರ್ಜಿ ವಜಾಗೊಳಿಸಿದ ಸುಪ್ರೀಂ…ಆದರೆ…

EVM, VVPAT ಮತಗಳ ಹೋಲಿಕೆ- ಎಲ್ಲಾ ಅರ್ಜಿ ವಜಾಗೊಳಿಸಿದ ಸುಪ್ರೀಂಕೋರ್ಟ್…ಆದರೆ…

Belthangady: ದಿಬ್ಬಣದಲ್ಲೇ ಮತಗಟ್ಟೆಗೆ ಬಂದು ಮತ ಚಲಾಯಿಸಿದ ವಧು

Belthangady: ದಿಬ್ಬಣದಲ್ಲೇ ಮತಗಟ್ಟೆಗೆ ಬಂದು ಮತ ಚಲಾಯಿಸಿದ ವಧು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

IPL 2024: ಗೆಲುವಿನ ವಿಶ್ವಾಸದಲ್ಲಿ ಕೆಕೆಆರ್‌

IPL 2024: ಗೆಲುವಿನ ವಿಶ್ವಾಸದಲ್ಲಿ ಕೆಕೆಆರ್‌

17

Team India: ಟಿ20 ವಿಶ್ವಕಪ್‌ ತಂಡ ರಾಹುಲ್‌ಗೆ ಚಾನ್ಸ್‌, ಹಾರ್ದಿಕ್‌ ಪಾಂಡ್ಯಗೆ ಕೊಕ್‌?

Chess: ವಿಶ್ವ ಚೆಸ್‌ ಚಾಂಪಿಯನ್‌ಶಿಪ್‌: ಆತಿಥ್ಯ ಹಕ್ಕಿಗಾಗಿ ಭಾರತ ಬಿಡ್‌

Chess: ವಿಶ್ವ ಚೆಸ್‌ ಚಾಂಪಿಯನ್‌ಶಿಪ್‌: ಆತಿಥ್ಯ ಹಕ್ಕಿಗಾಗಿ ಭಾರತ ಬಿಡ್‌

Archery World Cup: ಆರ್ಚರಿ ವಿಶ್ವಕಪ್‌ ರಿಕರ್ವ್‌ ವಿಭಾಗದಲ್ಲೂ ಭಾರತ ಫೈನಲ್‌ಗೆ

Archery World Cup: ಆರ್ಚರಿ ವಿಶ್ವಕಪ್‌ ರಿಕರ್ವ್‌ ವಿಭಾಗದಲ್ಲೂ ಭಾರತ ಫೈನಲ್‌ಗೆ

1-rerwer

IPL; ಸನ್‌ರೈಸರ್ಸ್ ಹೈದರಾಬಾದ್ ವಿರುದ್ಧ ಜಯದ ನಗು ಬೀರಿದ ಆರ್ ಸಿಬಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

WhatsApp ಭಾರತದಲ್ಲಿ ಸ್ಥಗಿತಗೊಳಿಸ್ತೇವೆ; ಹೈಕೋರ್ಟ್‌ ಮೆಟ್ಟಿಲೇರಿದ ಪ್ರಕರಣ, ಏನಿದು?

WhatsApp ಭಾರತದಲ್ಲಿ ಸ್ಥಗಿತಗೊಳಿಸ್ತೇವೆ; ಹೈಕೋರ್ಟ್‌ ಮೆಟ್ಟಿಲೇರಿದ ಪ್ರಕರಣ, ಏನಿದು?

ಜ.26ರಂದು 2ನೇ ಹಂತದ ಚುನಾವಣೆ;ರಾಹುಲ್‌, ತರೂರ್‌, ಹೇಮಾ ಮಾಲಿನಿ ಹಲವು ಘಟಾನುಘಟಿಗಳು ಕಣದಲ್ಲಿ

ಏ.26ರಂದು 2ನೇ ಹಂತದ ಚುನಾವಣೆ;ರಾಹುಲ್‌, ತರೂರ್‌, ಹೇಮಾ ಮಾಲಿನಿ ಹಲವು ಘಟಾನುಘಟಿಗಳು ಕಣದಲ್ಲಿ

Eletion: ತೀರ್ಥಹಳ್ಳಿಯಲ್ಲಿ ಪ್ರಚಾರದ ವೇಳೆ ತಮಿಳಿನಲ್ಲೆ ಮಾತನಾಡಿದ ನಟ ಶಿವರಾಜ್ ಕುಮಾರ್

Eletion: ತೀರ್ಥಹಳ್ಳಿಯಲ್ಲಿ ಪ್ರಚಾರದ ವೇಳೆ ತಮಿಳಿನಲ್ಲೆ ಮಾತನಾಡಿದ ನಟ ಶಿವರಾಜ್ ಕುಮಾರ್

LS Polls: ರಾಜ್ಯದಲ್ಲಿ ಕಾಂಗ್ರೆಸ್‌ ವಿರೋಧಿ ಅಲೆ: ರಾಘವೇಂದ್ರ

LS Polls: ರಾಜ್ಯದಲ್ಲಿ ಕಾಂಗ್ರೆಸ್‌ ವಿರೋಧಿ ಅಲೆ: ರಾಘವೇಂದ್ರ

Lok Sabha Election: ಮೋದಿಗೆ ಪರ್ಯಾಯ ನಾಯಕ ಮತ್ತೊಬ್ಬರಿಲ್ಲ… ಗಾಯಿತ್ರಿ ಸಿದ್ದೇಶ್ವರ

Lok Sabha Election: ಮೋದಿಗೆ ಪರ್ಯಾಯ ನಾಯಕ ಮತ್ತೊಬ್ಬರಿಲ್ಲ… ಗಾಯಿತ್ರಿ ಸಿದ್ದೇಶ್ವರ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.