ಮೇರಿ, ಮನೀಷಾ ಕ್ವಾರ್ಟರ್‌ ಫೈನಲ್‌ ಪ್ರವೇಶ


Team Udayavani, Nov 19, 2018, 10:43 AM IST

boxing.jpg

ಹೊಸದಿಲ್ಲಿ: ವಿಶ್ವ ವನಿತಾ ಬಾಕ್ಸಿಂಗ್‌ ಚಾಂಪಿಯನ್‌ಶಿಪ್‌ನಲ್ಲಿ ಭಾರತದ ಭರವಸೆಯ ಬಾಕ್ಸರ್‌ಗಳಾದ ಎಂ.ಸಿ. ಮೇರಿ ಕೋಮ್‌, ಮನೀಷಾ ಮೌನ್‌, ಲವ್ಲಿನಾ ಬೊರ್ಗೊಹೆನ್‌ ಹಾಗೂ ಭಾಗ್ಯವತಿ ಕಚಾರಿ ಕ್ವಾರ್ಟರ್‌ ಫೈನಲ್‌ ಪ್ರವೇಶಿಸಿದ್ದಾರೆ. 

ರವಿವಾರ ನಡೆದ 48 ಕೆಜಿ ವಿಭಾಗದ ಪ್ರಿ-ಕ್ವಾರ್ಟರ್‌ ಫೈನಲ್‌ ಪಂದ್ಯದಲ್ಲಿ ಮೇರಿ ಕೋಮ್‌ ಕಜಾಕ್‌ಸ್ಥಾನದ ಎ. ಕಸ್ಸೆನಯೇವಾ ವಿರುದ್ಧ 5-0 ಅಂಕಗಳಿಂದ ಜಯಿಸಿದರು. 5 ಬಾರಿಯ ವಿಶ್ವ ಚಾಂಪಿಯನ್‌ ಮೇರಿ ಕ್ವಾರ್ಟರ್‌ ಫೈನಲ್‌ನಲ್ಲಿ ಚೀನದ ವು ಯು ಅವರನ್ನು ಎದುರಿಸಲಿದ್ದಾರೆ. 

ಇದಕ್ಕೂ ಮುನ್ನ ನಡೆದ 54 ಕೆಜಿ ವಿಭಾಗ ಪಂದ್ಯದಲ್ಲಿ ಮನೀಷಾ ಮೌನ್‌ ಹಾಲಿ ವಿಶ್ವ ಚಾಂಪಿಯನ್‌, ಕಜಾಕ್‌ಸ್ಥಾನದ ದಿನಾ ಝಲಮನ್‌ ವಿರುದ್ಧ 5-0 ಅಂಕಗಳಿಂದ ಗೆದ್ದರು. ಇದು ಮನೀಷಾ ಪಾಲ್ಗೊಳ್ಳುತ್ತಿರುವ ಮೊದಲ ವಿಶ್ವ ಬಾಕ್ಸಿಂಗ್‌ ಚಾಂಪಿಯನ್‌ಶಿಪ್‌ ಆಗಿದ್ದು, ದಿನಾ ವಿರುದ್ಧ ಸಾಧಿಸಿದ 2ನೇ ಗೆಲುವಾಗಿದೆ. ಇದಕ್ಕೂ ಮುನ್ನ ಪೋಲೆಂಡ್‌ನ‌ಲ್ಲಿ ನಡೆದ ಸಿಲೆಸಿಯನ್‌ ವನಿತಾ ಬಾಕ್ಸಿಂಗ್‌ ಚಾಂಪಿಯನ್‌ಶಿಪ್‌ನಲ್ಲಿ ದಿನಾ ವಿರುದ್ಧ ಮನೀಷಾ ಗೆದ್ದಿದ್ದರು. ಕ್ವಾರ್ಟರ್‌ ಫೈನಲ್‌ನಲ್ಲಿ ಮನೀಷಾ 2016ರ ವಿಶ್ವ ಚಾಂಪಿಯನ್‌ ಬೆಳ್ಳಿ ಪದಕ ವಿಜೇತೆ ಬಲ್ಗೇರಿಯದ ಸ್ಟೋಯ್ಕ ಪೆಟ್ರೋವಾ ವಿರುದ್ಧ ಆಡಲಿದ್ದಾರೆ.

69 ಕೆಜಿ ವಿಭಾಗದ ಪಂದ್ಯದಲ್ಲಿ ಲವ್ಲಿನಾ ಬೊರ್ಗೊಹೆನ್‌ 2014ರ ವಿಶ್ವ ಚಾಂಪಿಯನ್‌ ಚಿನ್ನದ ಪದಕ ವಿಜೇತ ಪನಾಮದ ಅತ್ಯೆನಾ ಬೈಲೊನ್‌ ವಿರುದ್ಧ 5-0 ಅಂಕಗಳ ಅಂತರದಿಂದ ಗೆದ್ದರೆ, 81 ಕೆಜಿ ವಿಭಾಗದ ಪಂದ್ಯದಲ್ಲಿ ಭಾಗ್ಯಭತಿ ಕಚಾರಿ 4-1 ಅಂಕಗಳಿಂದ ಜರ್ಮನಿಯ  ಎರಿನಾ ನಿಕೊಲೆಟ್ಟಾ ಅವರನ್ನು ಸೋಲಿಸಿ ಕ್ವಾರ್ಟರ್‌ ಫೈನಲ್‌ಗೆ ಕಾಲಿಟ್ಟರು. ಲವ್ಲಿನಾ ಮುಂದಿನ ಪಂದ್ಯದಲ್ಲಿ ಆಸ್ಟ್ರೇಲಿಯದ ಸ್ಕಾಟ್‌ ಕೇ ಫ್ರಾನ್ಸೆಸ್‌ ವಿರುದ್ಧ ಆಡಲಿದ್ದಾರೆ.

ಹೊರಬಿದ್ದ ಸರಿತಾ: ಮಣಿಪುರದ ತಾರಾ ಆಟಗಾರ್ತಿ, 3 ಬಾರಿಯ ವಿಶ್ವ ಬಾಕ್ಸಿಂಗ್‌ ಪದಕ ವಿಜೇತೆ ಲೈಶ್ರಾಮ್‌ ಸರಿತಾದೇವಿ 60 ಕೆಜಿ ಲೈಟ್‌ವೇಟ್‌ ವಿಭಾಗದಲ್ಲಿ 2-3 ಅಂಕಗಳ ರೋಚಕ ಹೋರಾಟದಲ್ಲಿ ಐರ್ಲೆಂಡ್‌ನ‌ ಕೆಲ್ಲಿ ಅನ್ನೆ ವಿರುದ್ಧ ಸೋಲು ಅನುಭವಿಸಿದರು. ಸರಿತಾ 2006ರ ವಿಶ್ವ ಬಾಕ್ಸಿಂಗ್‌ ಚಾಂಪಿಯನ್‌ಶಿಪ್‌ನಲ್ಲಿ ಚಿನ್ನ, 2005 ಹಾಗೂ 2008ರ ವಿಶ್ವ ಕೂಟದಲ್ಲಿ ಕಂಚಿನ ಪದಕ ಗೆದ್ದಿದ್ದರು.

ಟಾಪ್ ನ್ಯೂಸ್

1-wqewq-eqw

Modi ಕೈ ಬಲಪಡಿಸಲು, ದ.ಕ. ಸಮಗ್ರ ಸುಧಾರಣೆಗಾಗಿ ಬಿಜೆಪಿಗೆ ಮತ ನೀಡಿ: ಚೌಟ

1-asasas

Naxal ಬಾಧಿತ ಮತಗಟ್ಟೆಗಳ ಭದ್ರತೆಗೆ ಹೆಚ್ಚುವರಿ ಆದ್ಯತೆ: ಮುಲ್ಲೈ ಮುಗಿಲನ್‌

D. K. Shivakumar: ಡೆತ್‌, ಬರ್ತ್‌ ಯಾವ ಟ್ಯಾಕ್ಸೂ ಇಲ್ಲ; ಡಿಕೆಶಿ

D. K. Shivakumar: ಡೆತ್‌, ಬರ್ತ್‌ ಯಾವ ಟ್ಯಾಕ್ಸೂ ಇಲ್ಲ; ಡಿಕೆಶಿ

KPCC: ಮೋದಿ, ರಾಜನಾಥ್‌ಸಿಂಗ್‌ ವಿರುದ್ಧ ಕ್ರಮಕ್ಕೆ ಕೆಪಿಸಿಸಿ ದೂರು

KPCC: ಮೋದಿ, ರಾಜನಾಥ್‌ಸಿಂಗ್‌ ವಿರುದ್ಧ ಕ್ರಮಕ್ಕೆ ಕೆಪಿಸಿಸಿ ದೂರು

1-rerwer

IPL; ಸನ್‌ರೈಸರ್ಸ್ ಹೈದರಾಬಾದ್ ವಿರುದ್ಧ ಜಯದ ನಗು ಬೀರಿದ ಆರ್ ಸಿಬಿ

MONEY (2)

Mysuru: ದಾಖಲೆ ಇಲ್ಲದೆ ಸಾಗಿಸುತ್ತಿದ್ದ 89 ಲಕ್ಷ ರೂ. ವಶಕ್ಕೆ

Crime: ತಾಯಿ ಆತ್ಮಹತ್ಯೆಗೆ ಕಾರಣನಾದ ತಂದೆಯನ್ನು ಕೊಂದ ಮಗ

Crime: ತಾಯಿ ಆತ್ಮಹತ್ಯೆಗೆ ಕಾರಣನಾದ ತಂದೆಯನ್ನು ಕೊಂದ ಮಗ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-rerwer

IPL; ಸನ್‌ರೈಸರ್ಸ್ ಹೈದರಾಬಾದ್ ವಿರುದ್ಧ ಜಯದ ನಗು ಬೀರಿದ ಆರ್ ಸಿಬಿ

28

Athletics: ಕಿರಿಯರ ಏಷ್ಯನ್‌ ಆ್ಯತ್ಲೆಟಿಕ್ಸ್‌  ಜಾವೆಲಿನ್‌ನಲ್ಲಿ ದೀಪಾಂಶುಗೆ ಬಂಗಾರ

Gukesh: ಚಾಂಪಿಯನ್‌ ಗುಕೇಶ್‌ಗೆ ಭವ್ಯ ಸ್ವಾಗತ

Gukesh: ಚಾಂಪಿಯನ್‌ ಗುಕೇಶ್‌ಗೆ ಭವ್ಯ ಸ್ವಾಗತ

IPL: ಎಲ್ಲೆ ಮೀರಿ ವಿಕೆಟ್‌ ಸಂಭ್ರಮಾಚರಣೆಡೆಲ್ಲಿ ವೇಗಿ ರಸಿಕ್‌ ಸಲಾಂಗೆ ಛೀಮಾರಿ

IPL: ಎಲ್ಲೆ ಮೀರಿ ವಿಕೆಟ್‌ ಸಂಭ್ರಮಾಚರಣೆಡೆಲ್ಲಿ ವೇಗಿ ರಸಿಕ್‌ ಸಲಾಂಗೆ ಛೀಮಾರಿ

IPL: ಇಂಪ್ಯಾಕ್ಟ್ ಪ್ಲೇಯರ್‌ ನಿಯಮಕ್ಕೆ ಅಕ್ಷರ್‌ ಪಟೇಲ್‌ ಕೂಡ ವಿರೋಧ

IPL: ಇಂಪ್ಯಾಕ್ಟ್ ಪ್ಲೇಯರ್‌ ನಿಯಮಕ್ಕೆ ಅಕ್ಷರ್‌ ಪಟೇಲ್‌ ಕೂಡ ವಿರೋಧ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-wqewq-eqw

Modi ಕೈ ಬಲಪಡಿಸಲು, ದ.ಕ. ಸಮಗ್ರ ಸುಧಾರಣೆಗಾಗಿ ಬಿಜೆಪಿಗೆ ಮತ ನೀಡಿ: ಚೌಟ

1-asasas

Naxal ಬಾಧಿತ ಮತಗಟ್ಟೆಗಳ ಭದ್ರತೆಗೆ ಹೆಚ್ಚುವರಿ ಆದ್ಯತೆ: ಮುಲ್ಲೈ ಮುಗಿಲನ್‌

1-MB

Note Ban ವೇಳೆ ಮಹಿಳೆಯರು ಮಂಗಳಸೂತ್ರ ಅಡವಿಟ್ಟಾಗ ಮೋದಿ ಮೌನ: ಭಂಡಾರಿ

Exam

Udupi; ಪಿಯುಸಿ ಪರೀಕ್ಷೆ-2 : ನಿಷೇಧಾಜ್ಞೆ ಜಾರಿ

IMD

Dakshina Kannada ಜಿಲ್ಲೆಯಲ್ಲಿ ಮುಂದುವರಿದ ಉರಿಬಿಸಿಲು:ಮಳೆಯ ಮುನ್ಸೂಚನೆ ಇಲ್ಲ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.