ಪಾಂಡೆ ಶತಕ; ಭಾರತ “ಎ’ ಸರಣಿ ಜಯಭೇರಿ


Team Udayavani, Dec 10, 2018, 9:35 AM IST

cricket.jpg

ಮೌಂಟ್‌ ಮೌಂಗನುಯಿ: ಕರ್ನಾಟಕದ ಭರವಸೆಯ ಬ್ಯಾಟ್ಸ್‌ಮನ್‌ ಮನೀಷ್‌ ಪಾಂಡೆ ಸಿಡಿಸಿದ ಅಮೋಘ ಶತಕದ ನೆರವಿನಿಂದ ಭಾರತ “ಎ’ ತಂಡ ಆತಿಥೇಯ ನ್ಯೂಜಿಲ್ಯಾಂಡ್‌ “ಎ’ ವಿರುದ್ಧದ 2ನೇ ಏಕದಿನ ಪಂದ್ಯವನ್ನೂ ಗೆದ್ದು ಸರಣಿ ವಶಪಡಿಸಿಕೊಂಡಿದೆ.

ರವಿವಾರ ಇಲ್ಲಿ ನಡೆದ ದೊಡ್ಡ ಮೊತ್ತದ ಮೇಲಾಟದಲ್ಲಿ ಮೊದಲು ಬ್ಯಾಟಿಂಗ್‌ ನಡೆಸಿದ ನ್ಯೂಜಿಲ್ಯಾಂಡ್‌ “ಎ’ 50 ಓವರ್‌ಗಳಲ್ಲಿ 9 ವಿಕೆಟಿಗೆ 299 ರನ್‌ ಪೇರಿಸಿ ಸವಾಲೊಡ್ಡಿತು. ಈ ಮೊತ್ತವನ್ನು ಬೆನ್ನಟ್ಟಿದ ಭಾರತ “ಎ’ 49 ಓವರ್‌ಗಳಲ್ಲಿ ಐದೇ ವಿಕೆಟಿಗೆ 300 ರನ್‌ ಪೇರಿಸಿ ಜಯ ಸಾಧಿಸಿತು. 3 ಪಂದ್ಯಗಳ ಸರಣಿಯಲ್ಲೀಗ ಭಾರತ 2-0 ಮುನ್ನಡೆಯಲ್ಲಿದೆ. 

ಆರಂಭಿಕರಾದ ಶುಭಮನ್‌ ಗಿಲ್‌ (25), ಮಾಯಾಂಕ್‌ ಅಗರ್ವಾಲ್‌ (25), ವನ್‌ಡೌನ್‌ ಬ್ಯಾಟ್ಸ್‌ಮನ್‌ ಶ್ರೇಯಸ್‌ ಅಯ್ಯರ್‌ (59) ಅವರ ಜವಾಬ್ದಾರಿಯುತ ಬ್ಯಾಟಿಂಗ್‌ ಬಳಿಕ ಕಪ್ತಾನನ ಆಟವಾಡಿದ ಮನೀಷ್‌ ಪಾಂಡೆ ಅಜೇಯ 111 ರನ್‌ ಬಾರಿಸಿ ತಂಡವನ್ನು ದಡ ತಲುಪಿಸಿದರು. ಮೊದಲ ಪಂದ್ಯದಲ್ಲಿ ಮಿಂಚಿದ ಆಲ್‌ರೌಂಡರ್‌ ವಿಜಯ್‌ ಶಂಕರ್‌ 59 ರನ್‌ ಕೊಡುಗೆ ಸಲ್ಲಿಸಿದರು. ಪಾಂಡೆ-ಶಂಕರ್‌ 4ನೇ ವಿಕೆಟ್‌ ಜತೆಯಾಟದಲ್ಲಿ 123 ರನ್‌ ಒಟ್ಟುಗೂಡಿತು. 
ಮನೀಷ್‌ ಪಾಂಡೆ 109 ಎಸೆತಗಳನ್ನೆದುರಿಸಿ ಸೊಗಸಾದ ಇನ್ನಿಂಗ್ಸ್‌ ಕಟ್ಟಿದರು. ಇದರಲ್ಲಿ 5 ಬೌಂಡರಿ, 3 ಸಿಕ್ಸರ್‌ ಒಳಗೊಂಡಿತ್ತು. 

ವಿಲ್‌ ಯಂಗ್‌ ಸೆಂಚುರಿ
ನ್ಯೂಜಿಲ್ಯಾಂಡ್‌ “ಎ’ ಸರದಿಯಲ್ಲೂ ಶತಕವೊಂದು ದಾಖಲಾಗಿತ್ತು. ವನ್‌ಡೌನ್‌ ಬ್ಯಾಟ್ಸ್‌ಮನ್‌ ವಿಲ್‌ ಯಂಗ್‌ 102 ರನ್‌ ಬಾರಿಸಿ ತಂಡದ ದೊಡ್ಡ ಮೊತ್ತಕ್ಕೆ ಕಾರಣರಾದರು (106 ಎಸೆತ, 6 ಬೌಂಡರಿ, 3 ಸಿಕ್ಸರ್‌). ಆರಂಭಕಾರ ಜಾರ್ಜ್‌ ವರ್ಕರ್‌ ಕೇವಲ ಒಂದು ರನ್ನಿನಿಂದ ಶತಕ ತಪ್ಪಿಸಿಕೊಳ್ಳಬೇಕಾಯಿತು.

ಭಾರತ “ಎ’ ಪರ ಖಲೀಲ್‌ ಅಹ್ಮದ್‌ ಮತ್ತು ನಮದೀಪ್‌ ಸೈನಿ ತಲಾ 2 ವಿಕೆಟ್‌ ಕಿತ್ತರು. ಮೊದಲ ಪಂದ್ಯದಲ್ಲಿ ಭಾರತ 300 ಪ್ಲಸ್‌ ರನ್‌ ಬೆನ್ನಟ್ಟಿ ಜಯಶಾಲಿಯಾಗಿತ್ತು. ಸರಣಿಯ 3ನೇ ಹಾಗೂ ಅಂತಿಮ ಪಂದ್ಯ ಮಂಗಳವಾರ ಇದೇ ಅಂಗಳದಲ್ಲಿ ನಡೆಯಲಿದೆ.

ಟಾಪ್ ನ್ಯೂಸ್

1-sadasd

Yadgir BJP ಬೃಹತ್ ರೋಡ್ ಶೋ; ದೇಶದ ರಕ್ಷಣೆಗಾಗಿ ಮತ್ತೆ ಬೆಂಬಲಿಸಿ: ನಡ್ಡಾ

1-wqeqqwe

Vote; ಕರ್ನಾಟಕ ಮೊದಲ ಹಂತ: ಶೇಕಡಾವಾರು ಮತದಾನದ ವಿವರ

voter

Chamarajanagar; ಮತದಾನ ಮಾಡಬೇಕೋ ಬೇಡವೋ ಎಂದು EVM ಗಳೇ ಧ್ವಂಸ !

1-wqeqewqe

EVM ಕುರಿತು ಸುಪ್ರೀಂ ತೀರ್ಪು ಪ್ರತಿಪಕ್ಷಗಳಿಗೆ ಕಪಾಳ ಮೋಕ್ಷ: ಪ್ರಧಾನಿ ಮೋದಿ

militry

Baramulla ಗುಂಡಿನ ಚಕಮಕಿಯಲ್ಲಿ ಉಗ್ರರಿಬ್ಬರ ಹತ್ಯೆ; ಇಬ್ಬರು ಸೇನಾ ಸಿಬಂದಿಗೆ ಗಾಯ

shettar

Minority ತುಷ್ಟೀಕರಣದಿಂದ ನೇಹಾಳ ಹತ್ಯೆಯಾಗಿದೆ :ಜಗದೀಶ್ ಶೆಟ್ಟರ್

1-adasdsad

Davanagere; ಪ್ರಧಾನಿ ಮೋದಿ ರ್‍ಯಾಲಿಗೆ ಅನುಮತಿ ನೀಡಬಾರದು:ಕಾಂಗ್ರೆಸ್ ಮನವಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

IPL 2024: ಗೆಲುವಿನ ವಿಶ್ವಾಸದಲ್ಲಿ ಕೆಕೆಆರ್‌

IPL 2024: ಗೆಲುವಿನ ವಿಶ್ವಾಸದಲ್ಲಿ ಕೆಕೆಆರ್‌

17

Team India: ಟಿ20 ವಿಶ್ವಕಪ್‌ ತಂಡ ರಾಹುಲ್‌ಗೆ ಚಾನ್ಸ್‌, ಹಾರ್ದಿಕ್‌ ಪಾಂಡ್ಯಗೆ ಕೊಕ್‌?

Chess: ವಿಶ್ವ ಚೆಸ್‌ ಚಾಂಪಿಯನ್‌ಶಿಪ್‌: ಆತಿಥ್ಯ ಹಕ್ಕಿಗಾಗಿ ಭಾರತ ಬಿಡ್‌

Chess: ವಿಶ್ವ ಚೆಸ್‌ ಚಾಂಪಿಯನ್‌ಶಿಪ್‌: ಆತಿಥ್ಯ ಹಕ್ಕಿಗಾಗಿ ಭಾರತ ಬಿಡ್‌

Archery World Cup: ಆರ್ಚರಿ ವಿಶ್ವಕಪ್‌ ರಿಕರ್ವ್‌ ವಿಭಾಗದಲ್ಲೂ ಭಾರತ ಫೈನಲ್‌ಗೆ

Archery World Cup: ಆರ್ಚರಿ ವಿಶ್ವಕಪ್‌ ರಿಕರ್ವ್‌ ವಿಭಾಗದಲ್ಲೂ ಭಾರತ ಫೈನಲ್‌ಗೆ

1-rerwer

IPL; ಸನ್‌ರೈಸರ್ಸ್ ಹೈದರಾಬಾದ್ ವಿರುದ್ಧ ಜಯದ ನಗು ಬೀರಿದ ಆರ್ ಸಿಬಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-sadasd

Yadgir BJP ಬೃಹತ್ ರೋಡ್ ಶೋ; ದೇಶದ ರಕ್ಷಣೆಗಾಗಿ ಮತ್ತೆ ಬೆಂಬಲಿಸಿ: ನಡ್ಡಾ

1-wqeqqwe

Vote; ಕರ್ನಾಟಕ ಮೊದಲ ಹಂತ: ಶೇಕಡಾವಾರು ಮತದಾನದ ವಿವರ

voter

Chamarajanagar; ಮತದಾನ ಮಾಡಬೇಕೋ ಬೇಡವೋ ಎಂದು EVM ಗಳೇ ಧ್ವಂಸ !

1-wqeqewqe

EVM ಕುರಿತು ಸುಪ್ರೀಂ ತೀರ್ಪು ಪ್ರತಿಪಕ್ಷಗಳಿಗೆ ಕಪಾಳ ಮೋಕ್ಷ: ಪ್ರಧಾನಿ ಮೋದಿ

militry

Baramulla ಗುಂಡಿನ ಚಕಮಕಿಯಲ್ಲಿ ಉಗ್ರರಿಬ್ಬರ ಹತ್ಯೆ; ಇಬ್ಬರು ಸೇನಾ ಸಿಬಂದಿಗೆ ಗಾಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.