ರಣಜಿ: ಕರ್ನಾಟಕ-ಗುಜರಾತ್‌ ಪಂದ್ಯ ಡ್ರಾ


Team Udayavani, Dec 18, 2018, 6:00 AM IST

vinaya-kar.jpg

ಸೂರತ್‌: ಪ್ರಸಕ್ತ ರಣಜಿ ಕ್ರಿಕೆಟ್‌ ಕೂಟದ ಕರ್ನಾಟಕ-ಗುಜರಾತ್‌ ನಡುವಿನ ಪಂದ್ಯ ನೀರಸ ಡ್ರಾದಲ್ಲಿ ಅಂತ್ಯಗೊಂಡಿದೆ. ಮೊದಲ ಇನಿಂಗ್ಸ್‌ ಮುನ್ನಡೆ ಪಡೆದ ರಾಜ್ಯ ತಂಡ 3 ಅಂಕ, ಆತಿಥೇಯ ಗುಜರಾತ್‌ 1 ಅಂಕ ಪಡೆದುಕೊಂಡಿತು.

ರಾಜ್ಯಕ್ಕೆ ಒಟ್ಟಾರೆ 3ನೇ ಡ್ರಾ. ಡ್ರಾಗೊಂಡ 3 ಪಂದ್ಯಗಳಲ್ಲೂ ವಿನಯ್‌ ಪಡೆ ಮೊದಲ ಇನಿಂಗ್ಸ್‌ ಮುನ್ನಡೆ ಅಂಕ ಸಂಪಾದಿಸಿಕೊಂಡಿದೆ. ಮಹಾರಾಷ್ಟ್ರ ವಿರುದ್ಧ ಗೆಲುವು, ಸೌರಾಷ್ಟ್ರ ವಿರುದ್ಧ ಸೋಲು ಅನುಭವಿಸಿತ್ತು. ಮುಂದೆ ಶಿವಮೊಗ್ಗದಲ್ಲಿ ಡಿ.22ರಿಂದ ಆರಂಭವಾಗುವ ಪಂದ್ಯದಲ್ಲಿ ರೈಲ್ವೇಸ್‌ ಸವಾಲನ್ನು ಕರ್ನಾಟಕ ಎದುರಿಸಲಿದೆ.

ರಾಜ್ಯಕ್ಕೆ 173 ರನ್‌ ಗುರಿ: ಗುಜರಾತ್‌ 2ನೇ ಇನಿಂಗ್ಸ್‌ನಲ್ಲಿ 345 ರನ್‌ಗಳಿಸಿ ಆಲೌಟಾಯಿತು. 2ನೇ ಇನಿಂಗ್ಸ್‌ನಲ್ಲಿ ರಾಜ್ಯದ ಗೆಲುವಿಗೆ ಒಟ್ಟು 173 ರನ್‌ ಗುರಿ ಸಿಕ್ಕಿತ್ತು. ಇದನ್ನು ಬೆನ್ನಟ್ಟಿದ ರಾಜ್ಯಕ್ಕೆ ಆರಂಭಿಕ ಬ್ಯಾಟ್ಸ್‌ಮೆನ್‌ ಮಾಯಾಂಕ್‌ ಅಗರ್ವಾಲ್‌ (53 ರನ್‌) ಅರ್ಧಶತಕ ಸಿಡಿಸಿ ನೆರವಾಗಿದ್ದು ತಂಡದ ಪರ ದಾಖಲಾದ ವೈಯಕ್ತಿಕ ಶ್ರೇಷ್ಠ ರನ್‌. 2ನೇ ವಿಕೆಟ್‌ಗೆ ಬಂದ ಆರ್‌.ಸಮರ್ಥ್ (33 ರನ್‌) ಸ್ವಲ್ಪ ಗಮನ ಸೆಳೆದರು. ಇವರಿಬ್ಬರೂ ವಿಕೆಟ್‌ ಕಳೆದುಕೊಂಡ ಬಳಿಕ ರಾಜ್ಯದ ರನ್‌ ವೇಗ ಕುಸಿಯಿತು. ಒಟ್ಟಾರೆ 107 ರನ್‌ಗಳಿಸುವಷ್ಟರಲ್ಲಿ ರಾಜ್ಯ ತಂಡದ ಪ್ರಮುಖ 4 ವಿಕೆಟ್‌ ಪತನಗೊಂಡಿದ್ದವು. ದೇವದತ್‌ ಪಡೀಕ್ಕಲ್‌ ಶೂನ್ಯಕ್ಕೆ ಔಟಾಗಿ ನಿರಾಸೆ ಮೂಡಿಸಿದರೆ ಶ್ರೇಯಸ್‌ ಗೋಪಾಲ್‌ ಕೇವಲ 3 ರನ್‌ಗೆ ಪೆವಿಲಿಯನ್‌ಗೆ ನಡೆದರು. ಕೊನೆಯ ಹಂತದಲ್ಲಿ ರಾಜ್ಯ ಆಟಗಾರರಿಗೆ ಬ್ಯಾಟಿಂಗ್‌ನಲ್ಲಿ ಜಾದೂ ಮಾಡಲು ಸಾಧ್ಯವಾಗಲಿಲ್ಲ. ಗುಜರಾತ್‌ ಪರ ಅಕ್ಷರ್‌ ಪಟೇಲ್‌ (45ಕ್ಕೆ3) ವಿಕೆಟ್‌ ಕಬಳಿಸಿ ರಾಜ್ಯದ ಓಟಕ್ಕೆ ಬ್ರೇಕ್‌ ಹಾಕಿದರು. ಕೆ.ವಿ.ಸಿದ್ಧಾರ್ಥ್ (10 ರನ್‌) ಹಾಗೂ ಡಿ.ನಿಶ್ಚಲ್‌ (1 ರನ್‌) ಅಜೇಯರಾಗಿ ಉಳಿದರು.

ಶತಕ ವಂಚಿತ ಮನ್‌ಪ್ರೀತ್‌, ರುಜುಲ್‌: ಇದಕ್ಕೂ ಮೊದಲು ಅಂತಿಮ ದಿನ 2ನೇ ಇನಿಂಗ್ಸ್‌ 3 ವಿಕೆಟ್‌ಗೆ 187 ರನ್‌ನಿಂದ ಬ್ಯಾಟಿಂಗ್‌ ಮುಂದುವರಿಸಿದ ಗುಜರಾತ್‌ ತೀವ್ರ ಆಘಾತ ಅನುಭವಿಸಿತು. 3ನೇ ದಿನ ಅಜೇಯ 82 ರನ್‌ಗಳಿಸಿ ಕ್ರೀಸ್‌ನಲ್ಲಿದ್ದ ರುಜುಲ್‌ ಭಾನುವಾರದ ರನ್‌ಗೆ ಕೇವಲ 9 ರನ್‌ಗಳಿಸಿ ಔಟಾದರು. 9 ರನ್‌ಗಳಿಂದ ಶತಕವನ್ನೂ ತಪ್ಪಿಸಿಕೊಂಡರು. ಆಗ ತಂಡದ ಮೊತ್ತ 4 ವಿಕೆಟ್‌ಗೆ 214 ರನ್‌ ಆಗಿತ್ತು. ಅಂತಿಮ ದಿನ ಮನ್‌ಪ್ರೀತ್‌ ಜುನೇಜ (98 ರನ್‌) ಹಾಗೂ ಧ್ರುವ್‌ ರಾವಲ್‌ (30 ರನ್‌) ತಂಡದ ಮೊತ್ತವನ್ನು ಹೆಚ್ಚಿಸಿದರು. ಆದರೆ ಮನ್‌ಪ್ರೀತ್‌ 98 ರನ್‌ಗಳಿಸಿದ್ದಾಗ ಗೌತಮ್‌ ಎಸೆತದಲ್ಲಿ ಬೌಲ್ಡ್‌ ಆದರು. 2 ರನ್‌ ಅಂತರದಿಂದ ಶತಕ ತಪ್ಪಿಸಿಕೊಂಡು ನಿರಾಸೆ ಅನುಭವಿಸಿದರು. ಗುಜರಾತ್‌ ಪರ ಅಂತಿಮ ದಿನ ಎರಡು ಶತಕಗಳು ಕೈತಪ್ಪಿದ್ದು ಹೈಲೈಟ್ಸ್‌.

ಟಾಪ್ ನ್ಯೂಸ್

Lok Sabha Election: ಉಡುಪಿ ಚಿಕ್ಕಮಗಳೂರಿನಲ್ಲಿ 29.03 % ಮತದಾನ…

Lok Sabha Election: ಉಡುಪಿ ಚಿಕ್ಕಮಗಳೂರಿನಲ್ಲಿ 29.03 % ಮತದಾನ…

Anti Israel ಪ್ರತಿಭಟನೆ-ಭಾರತೀಯ ಮೂಲದ ಪ್ರಿನ್ಸ್‌ ಟನ್‌ ವಿವಿ ವಿದ್ಯಾರ್ಥಿನಿ ಬಂಧನ

Anti Israel ಪ್ರತಿಭಟನೆ-ಭಾರತೀಯ ಮೂಲದ ಪ್ರಿನ್ಸ್‌ ಟನ್‌ ವಿವಿ ವಿದ್ಯಾರ್ಥಿನಿ ಬಂಧನ

ಸುಳ್ಳು ಹೇಳುವುದರಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ನಿಸ್ಸಿಮರು: ಸಚಿವ ಪ್ರಹ್ಲಾದ್ ಜೋಶಿ

ಸುಳ್ಳು ಹೇಳುವುದರಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ನಿಸ್ಸಿಮರು: ಸಚಿವ ಪ್ರಹ್ಲಾದ್ ಜೋಶಿ

Kalaburagi: ಸೋಲುವ ಭೀತಿಯಿಂದ ಪ್ರಧಾನಿಯಿಂದ ಕೀಳು ಮಟ್ಟದ ಹೇಳಿಕೆ: ಡಾ. ಅಜಯಸಿಂಗ್

Kalaburagi: ಸೋಲುವ ಭೀತಿಯಿಂದ ಪ್ರಧಾನಿಯಿಂದ ಕೀಳು ಮಟ್ಟದ ಹೇಳಿಕೆ: ಡಾ. ಅಜಯಸಿಂಗ್

Dakshina kannada: ದ.ಕ.: 18,18,127 ಮತದಾರರ ಕೈಯಲ್ಲಿ 9 ಅಭ್ಯರ್ಥಿಗಳ ಭವಿಷ್ಯ

Dakshina kannada: ದ.ಕ.: 18,18,127 ಮತದಾರರ ಕೈಯಲ್ಲಿ 9 ಅಭ್ಯರ್ಥಿಗಳ ಭವಿಷ್ಯ

ಹಣ ಹಂಚಿ ಚುನಾವಣೆ ನಡೆಸಲು ಅವಕಾಶ ಮಾಡಿಕೊಡಿ… ಚುನಾವಣಾ ಆಯೋಗದ ವಿರುದ್ಧ HDK ಕಿಡಿ

ಹಣ ಹಂಚಿ ಚುನಾವಣೆ ನಡೆಸಲು ಅವಕಾಶ ಮಾಡಿಕೊಡಿ… ಚುನಾವಣಾ ಆಯೋಗದ ವಿರುದ್ಧ HDK ಕಿಡಿ

Bantwal: ಮತದಾನ ಮಾಡಿ ಮದುವೆ ಮುಹೂರ್ತಕ್ಕೆ ಅಣಿಯಾದ ನವವಧು

Bantwal: ಮದುವೆ ಮುಹೂರ್ತಕ್ಕೂ ಮೊದಲೇ ಮತದಾನ ಹಕ್ಕು ಚಲಾಯಿಸಿದ ನವವಧು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

IPL 2024: ಗೆಲುವಿನ ವಿಶ್ವಾಸದಲ್ಲಿ ಕೆಕೆಆರ್‌

IPL 2024: ಗೆಲುವಿನ ವಿಶ್ವಾಸದಲ್ಲಿ ಕೆಕೆಆರ್‌

17

Team India: ಟಿ20 ವಿಶ್ವಕಪ್‌ ತಂಡ ರಾಹುಲ್‌ಗೆ ಚಾನ್ಸ್‌, ಹಾರ್ದಿಕ್‌ ಪಾಂಡ್ಯಗೆ ಕೊಕ್‌?

Chess: ವಿಶ್ವ ಚೆಸ್‌ ಚಾಂಪಿಯನ್‌ಶಿಪ್‌: ಆತಿಥ್ಯ ಹಕ್ಕಿಗಾಗಿ ಭಾರತ ಬಿಡ್‌

Chess: ವಿಶ್ವ ಚೆಸ್‌ ಚಾಂಪಿಯನ್‌ಶಿಪ್‌: ಆತಿಥ್ಯ ಹಕ್ಕಿಗಾಗಿ ಭಾರತ ಬಿಡ್‌

Archery World Cup: ಆರ್ಚರಿ ವಿಶ್ವಕಪ್‌ ರಿಕರ್ವ್‌ ವಿಭಾಗದಲ್ಲೂ ಭಾರತ ಫೈನಲ್‌ಗೆ

Archery World Cup: ಆರ್ಚರಿ ವಿಶ್ವಕಪ್‌ ರಿಕರ್ವ್‌ ವಿಭಾಗದಲ್ಲೂ ಭಾರತ ಫೈನಲ್‌ಗೆ

1-rerwer

IPL; ಸನ್‌ರೈಸರ್ಸ್ ಹೈದರಾಬಾದ್ ವಿರುದ್ಧ ಜಯದ ನಗು ಬೀರಿದ ಆರ್ ಸಿಬಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Lok Sabha Election: ಉಡುಪಿ ಚಿಕ್ಕಮಗಳೂರಿನಲ್ಲಿ 29.03 % ಮತದಾನ…

Lok Sabha Election: ಉಡುಪಿ ಚಿಕ್ಕಮಗಳೂರಿನಲ್ಲಿ 29.03 % ಮತದಾನ…

Anti Israel ಪ್ರತಿಭಟನೆ-ಭಾರತೀಯ ಮೂಲದ ಪ್ರಿನ್ಸ್‌ ಟನ್‌ ವಿವಿ ವಿದ್ಯಾರ್ಥಿನಿ ಬಂಧನ

Anti Israel ಪ್ರತಿಭಟನೆ-ಭಾರತೀಯ ಮೂಲದ ಪ್ರಿನ್ಸ್‌ ಟನ್‌ ವಿವಿ ವಿದ್ಯಾರ್ಥಿನಿ ಬಂಧನ

ಸುಳ್ಳು ಹೇಳುವುದರಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ನಿಸ್ಸಿಮರು: ಸಚಿವ ಪ್ರಹ್ಲಾದ್ ಜೋಶಿ

ಸುಳ್ಳು ಹೇಳುವುದರಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ನಿಸ್ಸಿಮರು: ಸಚಿವ ಪ್ರಹ್ಲಾದ್ ಜೋಶಿ

Kalaburagi: ಸೋಲುವ ಭೀತಿಯಿಂದ ಪ್ರಧಾನಿಯಿಂದ ಕೀಳು ಮಟ್ಟದ ಹೇಳಿಕೆ: ಡಾ. ಅಜಯಸಿಂಗ್

Kalaburagi: ಸೋಲುವ ಭೀತಿಯಿಂದ ಪ್ರಧಾನಿಯಿಂದ ಕೀಳು ಮಟ್ಟದ ಹೇಳಿಕೆ: ಡಾ. ಅಜಯಸಿಂಗ್

Dakshina kannada: ದ.ಕ.: 18,18,127 ಮತದಾರರ ಕೈಯಲ್ಲಿ 9 ಅಭ್ಯರ್ಥಿಗಳ ಭವಿಷ್ಯ

Dakshina kannada: ದ.ಕ.: 18,18,127 ಮತದಾರರ ಕೈಯಲ್ಲಿ 9 ಅಭ್ಯರ್ಥಿಗಳ ಭವಿಷ್ಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.