ಚುನಾವಣೆಗೆ ಮಣಿಕಾ ಬಾತ್ರಾ ರಾಯಭಾರಿ
Team Udayavani, Jan 17, 2019, 12:30 AM IST
ಹೊಸದಿಲ್ಲಿ: ಮುಂಬರುವ ಲೋಕಸಭಾ ಚುನಾವಣೆಗಾಗಿ ಹೊಸದಿಲ್ಲಿ ಸುತ್ತಮುತ್ತ ಜಾಗೃತಿ ಮೂಡಿಸುವ ಸಲುವಾಗಿ ಟೇಬಲ್ ಟೆನಿಸ್ ಆಟಗಾರ್ತಿ ಹಾಗೂ ಕಾಮನ್ವೆಲ್ತ್ ಗೇಮ್ಸ್ ಪದಕ ವಿಜೇತೆ ಮಣಿಕಾ ಬಾತ್ರಾ ಅವರನ್ನು ಚುನಾವಣಾ ಆಯೋಗ ರಾಯಭಾರಿಯನ್ನಾಗಿ ನೇಮಕ ಮಾಡಿದೆ.
ಜಾಗೃತಿ ಮೂಡಿಸುವ ಸಲುವಾಗಿ ಹೊಸದಿಲ್ಲಿಯ ಮುಖ್ಯ ಚುನಾವಣಾ ಅಧಿಕಾರಿ (ಸಿಇಒ) ಮತದಾರರ ಜಾಗೃತಿ ವೇದಿಕೆ (ವಿಎಎಫ್) ಹಾಗೂ ಚರ್ಚೆ ಹಾಗೂ ಚುನಾವಣಾ ಪ್ರಕ್ರಿಯೆ ಕುರಿತಾದ ಜಾಗೃತಿಗಾಗಿ ಮಾಹಿತಿ ಕೇಂದ್ರಗಳನ್ನು ಆರಂಭಿಸಿದ್ದಾರೆ.
“ಇತ್ತೀಚೆಗೆ ಮತದಾನ ಯಂತ್ರಗಳ (ಇವಿಎಂ) ಕುರಿತು ಜನರಲ್ಲಿ ಜಾಗೃತಿ ಮೂಡಿಸಲು ಕಾರ್ಯಕ್ರಮಗಳನ್ನು ರೂಪಿಸಿದ್ದು, ನಗರದ 300 ಸ್ಥಳಗಳಲ್ಲಿ ಜಾಗೃತಿ ವೇದಿಕಗಳನ್ನು ಸ್ಥಾಪಿಸಲಾಗಿದೆ. ಜನರಲ್ಲಿ ಚುನಾವಣೆ ಕುರಿತು ಅರಿವು ಮೂಡಿಸುವ ಸಲುವಾಗಿ ಪ್ರಮುಖ ವ್ಯಕ್ತಿಗಳನ್ನು ಆಯ್ಕೆ ಮಾಡಿಕೊಂಡಿದ್ದೇವೆ. ಟಿಟಿ ಆಟಗಾರ್ತಿ ಮಣಿಕಾ ಬಾತ್ರಾ ಈ ಕಾರ್ಯಕ್ರಮಕ್ಕೆ ರಾಯಭಾರಿಯಾಗಲು ಒಪ್ಪಿಗೆ ಸೂಚಿಸಿದ್ದಾರೆ’ ಎಂದು ದಿಲ್ಲಿಯ ಮುಖ್ಯ ಚುನಾವಣಾ ಅಧಿಕಾರಿ ರಣ್ಬೀರ್ ಸಿಂಗ್ ತಿಳಿಸಿದ್ದಾರೆ.
“ಮಣಿಕಾ ಬಾತ್ರಾ ಅವರೊಂದಿಗೆ ಒಲಿಂಪಿಕ್ಸ್ ಪದಕ ವಿಜೇತ ಕುಸ್ತಿಪಟು ಸುಶೀಲ್ ಕುಮಾರ್ ಹಾಗೂ ಕ್ರಿಕೆಟಿಗ ರಿಷಬ್ ಪಂತ್ ಅವರನ್ನು ಕೂಡಾ ಜಾಗೃತಿ ಕಾರ್ಯಕ್ಕೆ ಆಹ್ವಾನಿಸಲಾಗಿದೆ’ ಎಂದು ಸಿಇಒನ ಹಿರಿಯ ಅಧಿಕಾರಿಗಳೊಬ್ಬರು ತಿಳಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
IPL 2024: ಗೆಲುವಿನ ವಿಶ್ವಾಸದಲ್ಲಿ ಕೆಕೆಆರ್
Team India: ಟಿ20 ವಿಶ್ವಕಪ್ ತಂಡ ರಾಹುಲ್ಗೆ ಚಾನ್ಸ್, ಹಾರ್ದಿಕ್ ಪಾಂಡ್ಯಗೆ ಕೊಕ್?
Chess: ವಿಶ್ವ ಚೆಸ್ ಚಾಂಪಿಯನ್ಶಿಪ್: ಆತಿಥ್ಯ ಹಕ್ಕಿಗಾಗಿ ಭಾರತ ಬಿಡ್
Archery World Cup: ಆರ್ಚರಿ ವಿಶ್ವಕಪ್ ರಿಕರ್ವ್ ವಿಭಾಗದಲ್ಲೂ ಭಾರತ ಫೈನಲ್ಗೆ
IPL; ಸನ್ರೈಸರ್ಸ್ ಹೈದರಾಬಾದ್ ವಿರುದ್ಧ ಜಯದ ನಗು ಬೀರಿದ ಆರ್ ಸಿಬಿ
MUST WATCH
ಹೊಸ ಸೇರ್ಪಡೆ
Anti Israel ಪ್ರತಿಭಟನೆ-ಭಾರತೀಯ ಮೂಲದ ಪ್ರಿನ್ಸ್ ಟನ್ ವಿವಿ ವಿದ್ಯಾರ್ಥಿನಿ ಬಂಧನ
ಸುಳ್ಳು ಹೇಳುವುದರಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ನಿಸ್ಸಿಮರು: ಸಚಿವ ಪ್ರಹ್ಲಾದ್ ಜೋಶಿ
Kalaburagi: ಸೋಲುವ ಭೀತಿಯಿಂದ ಪ್ರಧಾನಿಯಿಂದ ಕೀಳು ಮಟ್ಟದ ಹೇಳಿಕೆ: ಡಾ. ಅಜಯಸಿಂಗ್
Dakshina kannada: ದ.ಕ.: 18,18,127 ಮತದಾರರ ಕೈಯಲ್ಲಿ 9 ಅಭ್ಯರ್ಥಿಗಳ ಭವಿಷ್ಯ
ಹಣ ಹಂಚಿ ಚುನಾವಣೆ ನಡೆಸಲು ಅವಕಾಶ ಮಾಡಿಕೊಡಿ… ಚುನಾವಣಾ ಆಯೋಗದ ವಿರುದ್ಧ HDK ಕಿಡಿ