ಆಸ್ಟ್ರೇಲಿಯನ್‌ ಓಪನ್‌ ಟೆನಿಸ್‌: ವಾವ್ರಿಂಕ ಔಟ್‌ ಒಸಾಕಾ ಓಟ


Team Udayavani, Jan 18, 2019, 12:30 AM IST

ap1172019000022b.jpg

ಮೆಲ್ಬರ್ನ್: 2014ರ ಚಾಂಪಿಯನ್‌ ಸ್ಟಾನಿಸ್ಲಾಸ್‌ ವಾವ್ರಿಂಕ ಆಸ್ಟ್ರೇಲಿಯನ್‌ ಓಪನ್‌ ಪಂದ್ಯಾವಳಿಯಿಂದ ನಿರ್ಗಮಿಸಿದ್ದಾರೆ. ಇದು ಗುರುವಾರದ ಅಚ್ಚರಿಯ ಫ‌ಲಿತಾಂಶವಾಗಿ ದಾಖಲಾಗಿದೆ. ಕೆನಡಾದ ಮಿಲೋಸ್‌ ರಾನಿಕ್‌ ಭಾರೀ ಹೋರಾಟದ ಬಳಿಕ 6-7 (4), 7-6 (6), 7-6 (11), 7-6 (5) ಅಂತರದಿಂದ ವಾವ್ರಿಂಕ ಆಟಕ್ಕೆ ತೆರೆ ಎಳೆದರು.

16ನೇ ಶ್ರೇಯಾಂಕದ ಮಿಲೋಸ್‌ ರಾನಿಕ್‌ 3ನೇ ಸುತ್ತಿನಲ್ಲಿ ಫ್ರಾನ್ಸ್‌ನ ಪಿಯರೆ ಹ್ಯೂಸ್‌ ಹರ್ಬರ್ಟ್‌ ಅವರನ್ನು ಎದುರಿಸಲಿದ್ದಾರೆ. ಅವರು ಕಳೆದ ವರ್ಷದ ಸೆಮಿಫೈನಲಿಸ್ಟ್‌ ಚುಂಗ್‌ ಹಿಯೋನ್‌ ವಿರುದ್ಧ ಗೆದ್ದು ಬಂದರು.

ನಂ.1 ಆಟಗಾರ ನೊವಾಕ್‌ ಜೊಕೋವಿಕ್‌ ಫ್ರಾನ್ಸ್‌ನ ಬಲಿಷ್ಠ ಆಟಗಾರ ಜೋ ವಿಲ್‌ಫ್ರೆಂಡ್‌ ಸೋಂಗ ವಿರುದ್ಧ 6-3, 7-5,  —- ಅಂತರದಿಂದ ಗೆದ್ದು 3ನೇ ಸುತ್ತಿಗೆ ಮುನ್ನಡೆದಿದ್ದಾರೆ.

ಉಳಿದಂತೆ ವಿಲಿಯಮ್ಸ್‌ ಸೋದರಿಯರು, ನವೋಮಿ ಒಸಾಕಾ, ಕ್ಯಾರೋಲಿನಾ ಪ್ಲಿಸ್ಕೋವಾ ಅವರೆಲ್ಲ ವನಿತಾ ಸಿಂಗಲ್ಸ್‌ ವಿಭಾಗದಿಂದ ಮೂರನೇ ಸುತ್ತು ಪ್ರವೇಶಿಸುವಲ್ಲಿ ಯಶಸ್ವಿಯಾಗಿದ್ದಾರೆ.

ಸೆರೆನಾಗೆ ಸುಲಭ ಜಯ
ಗ್ರ್ಯಾನ್‌ಸ್ಲಾಮ್‌ ದಾಖಲೆ ಮೇಲೆ ಕಣ್ಣಿಟ್ಟಿರುವ ಸೆರೆನಾ ವಿಲಿಯಮ್ಸ್‌ ಕೆನಡಾದ ಯುಗೇನಿ ಬೌಶಾರ್ಡ್‌ ವಿರುದ್ಧ 6-2, 6-2 ಅಂತರದ ಸುಲಭ ಜಯ ದಾಖಲಿಸಿದರು. ಮುಂದಿನ ಎದುರಾಳಿ ಉಕ್ರೇನಿನ ಡಯಾನಾ ಯಾಸ್ಟ್ರೆಮ್‌ಸ್ಕಾ. ಈಗಾಗಲೇ ಸಮಂತಾ ಸ್ಟೋಸರ್‌, ಕಾರ್ಲಾ ಸೂರೆಜ್‌ ನವಾರೊ ಅವರನ್ನು ಸೋಲಿಸಿ ಸುದ್ದಿಯಾಗಿರುವ ಯಾಸ್ಟ್ರೆಮ್‌ಸ್ಕಾ ವಿರುದ್ಧ ಸೆರೆನಾ ಎಚ್ಚರಿಕೆಯ ಹೆಜ್ಜೆಗಳನ್ನಿಡಬೇಕಿದೆ.

ವೀನಸ್‌-ಹಾಲೆಪ್‌ ಮುಖಾಮುಖೀ
ಅಕ್ಕ ವೀನಸ್‌ ವಿಲಿಯಮ್ಸ್‌ 3 ಸೆಟ್‌ಗಳ ಹೋರಾಟದ ಬಳಿಕ ಫ್ರಾನ್ಸ್‌ನ ಅಲೈಜ್‌ ಕಾರ್ನೆಟ್‌ ಅವರನಜು° 6-3, 4-6, 6-0 ಅಂತರದಿಂದ ಮಣಿಸಿದರು. 3ನೇ ಸುತ್ತಿನಲ್ಲಿ ನಂಬರ್‌ ವನ್‌ ಹಾಗೂ ಕೂಟದ ನೆಚ್ಚಿನ ಆಟಗಾರ್ತಿಯರಲ್ಲಿ ಒಬ್ಬರಾದ ಸಿಮೋನಾ ಹಾಲೆಪ್‌ ವಿರುದ್ಧ ವೀನಸ್‌ ಸೆಣಸಲಿದ್ದಾರೆ.

ದಿನದ ಇನ್ನೊಂದು ಪಂದ್ಯದಲ್ಲಿ ರೊಮೇನಿಯಾದ ಸಿಮೋನಾ ಹಾಲೆಪ್‌ ಅಮೆರಿಕದ ಶ್ರೇಯಾಂಕ ರಹಿತ ಆಟಗಾರ್ತಿ ಸೋಫಿಯಾ ಕೆನಿನ್‌ ವಿರುದ್ಧ 6-3, 6-7 (5-7), 6-4 ಅಂತರದಿಂದ ಗೆದ್ದು ಬಂದರು. 20ರ ಹರೆಯದ ಕೆನಿನ್‌ ಸೋತರೂ ನಿರೀಕ್ಷೆಗೂ ಮೀರಿದ ಪ್ರದರ್ಶನದೊಂದಿಗೆ ಕ್ರೀಡಾಭಿಮಾನಿಗಳ ಹೃದಯ ಗೆಲ್ಲುವಲ್ಲಿ ಯಶಸ್ವಿಯಾದರು.

ಜಪಾನಿನ ಭರವಸೆಯ ಆಟಗಾರ್ತಿ ನವೋಮಿ ಒಸಾಕಾ ಸ್ಲೊವೇನಿಯಾದ ಶ್ರೇಯಾಂಕ ರಹಿತ ಆಟಗಾರ್ತಿ ಟಮಾರ ಜಿದಾನ್ಸೆಕ್‌ ವಿರುದ್ಧ 6-2, 6-4 ಅಂತರದ ಜಯ ಒಲಿಸಿಕೊಂಡರು. ಈ ಪಂದ್ಯಕ್ಕೆ ಮಳೆಯಿಂದ ಅಡ್ಡಿಯಾದ್ದರಿಂದ ಛಾವಣಿಯನ್ನು ಮುಚ್ಚಿ ಆಟ ಮುಂದುವರಿಸಲಾಯಿತು. ಒಸಾಕಾ ಅವರ ಮುಂದಿನ ಎದುರಾಳಿ ತೈವಾನ್‌ನ ಸೀ ಸು ವೀ.

7ನೇ ಶ್ರೇಯಾಂಕದ ಜೆಕ್‌ ಆಟಗಾರ್ತಿ ಕ್ಯಾರೋಲಿನಾ ಪ್ಲಿಸ್ಕೋವಾ ಅಮೆರಿಕದ ಮ್ಯಾಡಿಸನ್‌ ಬ್ರೆಂಗಲ್‌ ವಿರುದ್ಧ ಮೊದಲ ಸೆಟ್‌ ಕಳೆದುಕೊಂಡ ಬಳಿಕ ದಿಟ್ಟ ಹೋರಾಟ ಸಂಘಟಿಸಿ ಗೆದ್ದು ಬಂದರು. ಅಂತರ  4-6, 6-1, 6-0. ಈ ಪಂದ್ಯಕ್ಕೂ ಮಳೆ ಅಡಚಣೆಯೊಡ್ಡಿತ್ತು.

ಬೋಲ್ಟ್, ನಿಶಿಕೊರಿ ಭರ್ಜರಿ ಆಟ
ವೈಲ್ಡ್‌ಕಾರ್ಡ್‌ ಮೂಲಕ ಪ್ರವೇಶ ಪಡೆದ ಆಸ್ಟ್ರೇಲಿಯದ ಅಲೆಕ್ಸ್‌ ಬೋಲ್ಟ್ ಭರ್ಜರಿ ಪ್ರದರ್ಶನವೊಂದನ್ನು ನೀಡಿ ತವರಿನ ಅಭಿಮಾನಿಗಳನ್ನು ರಂಜಿಸಿದ್ದಾರೆ. ಅವರು 29ನೇ ಶ್ರೇಯಾಂಕದ ಗಿಲ್ಲೆಸ್‌ ಸಿಮೋನ್‌ಗೆ 2-6, 6-4, 4-6, 7-6 (10-8), 6-4 ಅಂತರದ ಸೋಲುಣಿಸಿ ಮೆರೆದರು.ಜಪಾನಿನ ಕೀ ನಿಶಿಕೊರಿ ಕ್ರೊವೇಶಿಯಾದ ಐವೋ ಕಾರ್ಲೋವಿಕ್‌ ವಿರುದ್ಧ ಭಾರೀ ಹೋರಾಟ ನಡೆಸಿ 6-3, 7-6 (8-6), 5-7, 5-7, 7-6 (10-7) ಅಂತರದಿಂದ ಗೆದ್ದು ನಿಟ್ಟುಸಿರೆಳೆದರು.

ಫ್ರೆಂಚ್‌ ಓಪನ್‌ ಫೈನಲಿಸ್ಟ್‌ ಡೊಮಿನಿಕ್‌ ಥೀಮ್‌ ಪಂದ್ಯದ ನಡುವೆ ಅನಾರೋಗ್ಯಕ್ಕೊಳಗಾಗಿ ಹೊರನಡೆದರು. ಆಸ್ಟ್ರೇಲಿಯದ ಅಲೆಕ್ಸಿ ಪೊಪಿರಿನ್‌ ವಿರುದ್ಧ ಸೆಣಸುತ್ತಿದ್ದ ಅವರು 7-5, 6-4, 2-0 ಹಿನ್ನಡೆಯಲ್ಲಿದ್ದರು.

ಟಾಪ್ ನ್ಯೂಸ್

Eletion: ತೀರ್ಥಹಳ್ಳಿಯಲ್ಲಿ ಪ್ರಚಾರದ ವೇಳೆ ತಮಿಳಿನಲ್ಲೆ ಮಾತನಾಡಿದ ನಟ ಶಿವರಾಜ್ ಕುಮಾರ್

Eletion: ತೀರ್ಥಹಳ್ಳಿಯಲ್ಲಿ ಪ್ರಚಾರದ ವೇಳೆ ತಮಿಳಿನಲ್ಲೆ ಮಾತನಾಡಿದ ನಟ ಶಿವರಾಜ್ ಕುಮಾರ್

Chitradurga: ಹೃದಯಾಘಾತದಿಂದ ಚುನಾವಣಾ ಕರ್ತವ್ಯದಲ್ಲಿದ್ದ ಶಿಕ್ಷಕಿ ಮೃತ್ಯು…

Chitradurga: ಚುನಾವಣಾ ಕರ್ತವ್ಯದಲ್ಲಿದ್ದಾಗಲೇ ಹೃದಯಾಘಾತಗೊಂಡು ಶಿಕ್ಷಕಿ ಮೃತ್ಯು…

Lok Sabha Polls: ಉಡುಪಿ: ಕುಟುಂಬ ಸಮೇತರಾಗಿ ಬಂದು ಮತದಾನ ಮಾಡಿದ ನಟ ರಕ್ಷಿತ್ ಶೆಟ್ಟಿ

Lok Sabha Polls: ಉಡುಪಿ: ಕುಟುಂಬ ಸಮೇತರಾಗಿ ಬಂದು ಮತದಾನ ಮಾಡಿದ ನಟ ರಕ್ಷಿತ್ ಶೆಟ್ಟಿ

Kadaba: ಬಿಳಿನೆಲೆ ಮತದಾನ ಕೇಂದ್ರದಲ್ಲಿ ಕಾಂಗ್ರೆಸ್-ಬಿಜೆಪಿ ಕಾರ್ಯಕರ್ತರ ಮಾತಿನ ಚಕಮಕಿ

Kadaba: ಬಿಳಿನೆಲೆ ಮತದಾನ ಕೇಂದ್ರದಲ್ಲಿ ಕಾಂಗ್ರೆಸ್-ಬಿಜೆಪಿ ಕಾರ್ಯಕರ್ತರ ಮಾತಿನ ಚಕಮಕಿ

EVM, VVPAT ಮತಗಳ ಹೋಲಿಕೆ- ಎಲ್ಲಾ ಅರ್ಜಿ ವಜಾಗೊಳಿಸಿದ ಸುಪ್ರೀಂ…ಆದರೆ…

EVM, VVPAT ಮತಗಳ ಹೋಲಿಕೆ- ಎಲ್ಲಾ ಅರ್ಜಿ ವಜಾಗೊಳಿಸಿದ ಸುಪ್ರೀಂಕೋರ್ಟ್…ಆದರೆ…

Belthangady: ದಿಬ್ಬಣದಲ್ಲೇ ಮತಗಟ್ಟೆಗೆ ಬಂದು ಮತ ಚಲಾಯಿಸಿದ ವಧು

Belthangady: ದಿಬ್ಬಣದಲ್ಲೇ ಮತಗಟ್ಟೆಗೆ ಬಂದು ಮತ ಚಲಾಯಿಸಿದ ವಧು

LS Polls: ಚಿಕ್ಕಮಗಳೂರು… ವಿದೇಶದಿಂದ ಬಂದು ಮತದಾನ ಮಾಡಿ ಮಾದರಿಯಾದ ದಂಪತಿ…

LS Polls: ಚಿಕ್ಕಮಗಳೂರು… ವಿದೇಶದಿಂದ ಬಂದು ಮತದಾನ ಮಾಡಿ ಮಾದರಿಯಾದ ದಂಪತಿ…


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

IPL 2024: ಗೆಲುವಿನ ವಿಶ್ವಾಸದಲ್ಲಿ ಕೆಕೆಆರ್‌

IPL 2024: ಗೆಲುವಿನ ವಿಶ್ವಾಸದಲ್ಲಿ ಕೆಕೆಆರ್‌

17

Team India: ಟಿ20 ವಿಶ್ವಕಪ್‌ ತಂಡ ರಾಹುಲ್‌ಗೆ ಚಾನ್ಸ್‌, ಹಾರ್ದಿಕ್‌ ಪಾಂಡ್ಯಗೆ ಕೊಕ್‌?

Chess: ವಿಶ್ವ ಚೆಸ್‌ ಚಾಂಪಿಯನ್‌ಶಿಪ್‌: ಆತಿಥ್ಯ ಹಕ್ಕಿಗಾಗಿ ಭಾರತ ಬಿಡ್‌

Chess: ವಿಶ್ವ ಚೆಸ್‌ ಚಾಂಪಿಯನ್‌ಶಿಪ್‌: ಆತಿಥ್ಯ ಹಕ್ಕಿಗಾಗಿ ಭಾರತ ಬಿಡ್‌

Archery World Cup: ಆರ್ಚರಿ ವಿಶ್ವಕಪ್‌ ರಿಕರ್ವ್‌ ವಿಭಾಗದಲ್ಲೂ ಭಾರತ ಫೈನಲ್‌ಗೆ

Archery World Cup: ಆರ್ಚರಿ ವಿಶ್ವಕಪ್‌ ರಿಕರ್ವ್‌ ವಿಭಾಗದಲ್ಲೂ ಭಾರತ ಫೈನಲ್‌ಗೆ

1-rerwer

IPL; ಸನ್‌ರೈಸರ್ಸ್ ಹೈದರಾಬಾದ್ ವಿರುದ್ಧ ಜಯದ ನಗು ಬೀರಿದ ಆರ್ ಸಿಬಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Eletion: ತೀರ್ಥಹಳ್ಳಿಯಲ್ಲಿ ಪ್ರಚಾರದ ವೇಳೆ ತಮಿಳಿನಲ್ಲೆ ಮಾತನಾಡಿದ ನಟ ಶಿವರಾಜ್ ಕುಮಾರ್

Eletion: ತೀರ್ಥಹಳ್ಳಿಯಲ್ಲಿ ಪ್ರಚಾರದ ವೇಳೆ ತಮಿಳಿನಲ್ಲೆ ಮಾತನಾಡಿದ ನಟ ಶಿವರಾಜ್ ಕುಮಾರ್

LS Polls: ರಾಜ್ಯದಲ್ಲಿ ಕಾಂಗ್ರೆಸ್‌ ವಿರೋಧಿ ಅಲೆ: ರಾಘವೇಂದ್ರ

LS Polls: ರಾಜ್ಯದಲ್ಲಿ ಕಾಂಗ್ರೆಸ್‌ ವಿರೋಧಿ ಅಲೆ: ರಾಘವೇಂದ್ರ

Lok Sabha Election: ಮೋದಿಗೆ ಪರ್ಯಾಯ ನಾಯಕ ಮತ್ತೊಬ್ಬರಿಲ್ಲ… ಗಾಯಿತ್ರಿ ಸಿದ್ದೇಶ್ವರ

Lok Sabha Election: ಮೋದಿಗೆ ಪರ್ಯಾಯ ನಾಯಕ ಮತ್ತೊಬ್ಬರಿಲ್ಲ… ಗಾಯಿತ್ರಿ ಸಿದ್ದೇಶ್ವರ

Chitradurga: ಹೃದಯಾಘಾತದಿಂದ ಚುನಾವಣಾ ಕರ್ತವ್ಯದಲ್ಲಿದ್ದ ಶಿಕ್ಷಕಿ ಮೃತ್ಯು…

Chitradurga: ಚುನಾವಣಾ ಕರ್ತವ್ಯದಲ್ಲಿದ್ದಾಗಲೇ ಹೃದಯಾಘಾತಗೊಂಡು ಶಿಕ್ಷಕಿ ಮೃತ್ಯು…

Lok Sabha Polls: ಉಡುಪಿ: ಕುಟುಂಬ ಸಮೇತರಾಗಿ ಬಂದು ಮತದಾನ ಮಾಡಿದ ನಟ ರಕ್ಷಿತ್ ಶೆಟ್ಟಿ

Lok Sabha Polls: ಉಡುಪಿ: ಕುಟುಂಬ ಸಮೇತರಾಗಿ ಬಂದು ಮತದಾನ ಮಾಡಿದ ನಟ ರಕ್ಷಿತ್ ಶೆಟ್ಟಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.