ವಿಚಾರಣಾಧಿಕಾರಿ ನೇಮಕಕ್ಕೆ ಸುಪ್ರೀಂಗೆ ಮನವಿ
Team Udayavani, Jan 18, 2019, 12:30 AM IST
ಹೊಸದಿಲ್ಲಿ: “ಕಾಫಿ ವಿತ್ ಕರಣ್’ ಕಾರ್ಯಕ್ರಮದಲ್ಲಿ ಮಹಿಳೆಯರ ವಿರುದ್ಧ ಅಸಭ್ಯ ಹೇಳಿಕೆಗಳನ್ನು ನೀಡಿ ಭಾರತ ಕ್ರಿಕೆಟ್ ತಂಡದಿಂದ ಅಮಾನತುಗೊಂಡಿರುವ ಹಾರ್ದಿಕ್ ಪಾಂಡ್ಯ, ಕೆ.ಎಲ್. ರಾಹುಲ್ ಅವರ ಭವಿಷ್ಯ ಅತಂತ್ರಗೊಂಡಿದೆ. ಇಬ್ಬರೂ ಆಟಗಾರರು ಬೇಷರತ್ ಕ್ಷಮೆಯಾಚನೆ ಮಾಡಿದರೂ ಬಿಸಿಸಿಐ ಆಡಳಿತಾಧಿಕಾರಿಗಳು ವಿಶೇಷ ತನಿಖಾಧಿಕಾರಿಯನ್ನು ನೇಮಕ ಮಾಡಲು ಸರ್ವೋಚ್ಚ ನ್ಯಾಯಾಲಯಕ್ಕೆ ಮನವಿ ಮಾಡಿದ್ದಾರೆ!
ನ್ಯಾಯಾಲಯ ವಿಚಾರಣೆಯನ್ನು ಮುಂದಿನ ವಾರಕ್ಕೆ ಮುಂದೂಡಿದೆ. ಇದರ ಪರಿಣಾಮ ಜ. 23ರಿಂದ ಆರಂಭವಾಗುವ ನ್ಯೂಜಿಲ್ಯಾಂಡ್ ಸರಣಿಯನ್ನೂ ಈ ಇಬ್ಬರು ಆಟಗಾರರು ಕಳೆದುಕೊಳ್ಳಲಿದ್ದಾರೆ.
ಪ್ರಸ್ತುತ ಪ್ರಕರಣದಲ್ಲಿ ತಾವು ಮಾಡಿದ್ದು ತಪ್ಪಾಗಿದೆ ಎಂದು ಇಬ್ಬರೂ ಸ್ಪಷ್ಟವಾಗಿ ಹೇಳಿದ್ದರೂ, ಸರ್ವೋಚ್ಚ ನ್ಯಾಯಾಲಯ ನಿಯೋಜಿತ ಬಿಸಿಸಿಐ ಆಡಳಿತಾಧಿಕಾರಿಗಳು ಪ್ರಕರಣವನ್ನು ಎಳೆದಾಡುತ್ತಿರುವುದಕ್ಕೆ ಹಲವು ಮೂಲೆಗಳಿಂದ ಆಕ್ಷೇಪ ವ್ಯಕ್ತವಾಗಿದೆ.
ಪ್ರಕರಣವನ್ನು ಅತಿಯಾಗಿ ಎಳೆದಾಡಲಾಗುತ್ತಿದೆ ಎಂದು ವಿಶ್ಲೇಷಿಸಲಾಗಿದೆ. ಮುಂದಿನ ವಾರ ಬಿಸಿಸಿಐ ವಿಚಾರಣಾಧಿಕಾರಿಯನ್ನು ನೇಮಕ ಮಾಡಲಿದೆ. ಈ ವಿಚಾರಣೆ ಮುಗಿದು ಫಲಿತಾಂಶ ಹೊರಬರಲು ಇನ್ನೆಷ್ಟು ಸಮಯ ತೆಗೆದುಕೊಳ್ಳಲಿದೆ ಎನ್ನುವುದು ಖಚಿತವಾಗಿಲ್ಲ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
IPL 2024: ಗೆಲುವಿನ ವಿಶ್ವಾಸದಲ್ಲಿ ಕೆಕೆಆರ್
Team India: ಟಿ20 ವಿಶ್ವಕಪ್ ತಂಡ ರಾಹುಲ್ಗೆ ಚಾನ್ಸ್, ಹಾರ್ದಿಕ್ ಪಾಂಡ್ಯಗೆ ಕೊಕ್?
Chess: ವಿಶ್ವ ಚೆಸ್ ಚಾಂಪಿಯನ್ಶಿಪ್: ಆತಿಥ್ಯ ಹಕ್ಕಿಗಾಗಿ ಭಾರತ ಬಿಡ್
Archery World Cup: ಆರ್ಚರಿ ವಿಶ್ವಕಪ್ ರಿಕರ್ವ್ ವಿಭಾಗದಲ್ಲೂ ಭಾರತ ಫೈನಲ್ಗೆ
IPL; ಸನ್ರೈಸರ್ಸ್ ಹೈದರಾಬಾದ್ ವಿರುದ್ಧ ಜಯದ ನಗು ಬೀರಿದ ಆರ್ ಸಿಬಿ
MUST WATCH
ಹೊಸ ಸೇರ್ಪಡೆ
LS Polls: ಚಿಕ್ಕಮಗಳೂರು… ವಿದೇಶದಿಂದ ಬಂದು ಮತದಾನ ಮಾಡಿ ಮಾದರಿಯಾದ ದಂಪತಿ…
Lok Sabha Election: ಉಡುಪಿ ಚಿಕ್ಕಮಗಳೂರಿನಲ್ಲಿ 29.03 % ಮತದಾನ…
Anti Israel ಪ್ರತಿಭಟನೆ-ಭಾರತೀಯ ಮೂಲದ ಪ್ರಿನ್ಸ್ ಟನ್ ವಿವಿ ವಿದ್ಯಾರ್ಥಿನಿ ಬಂಧನ
ಸುಳ್ಳು ಹೇಳುವುದರಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ನಿಸ್ಸೀಮರು: ಸಚಿವ ಪ್ರಹ್ಲಾದ್ ಜೋಶಿ
Kalaburagi: ಸೋಲುವ ಭೀತಿಯಿಂದ ಪ್ರಧಾನಿಯಿಂದ ಕೀಳು ಮಟ್ಟದ ಹೇಳಿಕೆ: ಡಾ. ಅಜಯಸಿಂಗ್