ಭಾರತ-ಆಸ್ಟ್ರೇಲಿಯಾ ಅಂತಿಮ ಕದನ : ಭಾರತದ ಬಿಗು ದಾಳಿ
Team Udayavani, Jan 18, 2019, 4:06 AM IST
ಮೆಲ್ಬೋರ್ನ್: ಸುದೀರ್ಘ ಆಸ್ಟ್ರೇಲಿಯಾ ಸರಣಿಯ ಕೊನೆಯ ಪಂದ್ಯವನ್ನು ಆಡಲಿಳಿದ ಭಾರತ ತಂಡ ಟಾಸ್ ಗೆದ್ದು ಫೀಲ್ಡಿಂಗ್ ಆಯ್ಕೆ ಮಾಡಿದೆ. ಈ ಏಕದಿನ ಸರಣಿಯಲ್ಲಿ ಇದೇ ಮೊದಲ ಬಾರಿಗೆ ಟಾಸ್ ಗೆದ್ದ ಕೊಹ್ಲಿ ಪಂದ್ಯ ಗೆದ್ದು ಇತಿಹಾಸ ನಿರ್ಮಿಸುವ ತವಕದಲ್ಲಿದ್ದಾರೆ.
ಪಂದ್ಯದ ಆರಂಭಕ್ಕೆ ಮಳೆ ಅಡ್ಡಿಯಾದ ಕಾರಣ ಸ್ವಲ್ಪ ತಡವಾಗಿ ಪಂದ್ಯ ಆರಂಭವಾಯಿತು. ಆದರೆ ಯಾವುದೇ ಓವರ್ ಗಳನ್ನು ಕಡಿತಗೊಳಿಸಿಲ್ಲ. ಬ್ಯಾಟಿಂಗ್ ಆರಂಭಿಸಿದ ಆಸೀಸ್ 30 ಓವರ್ ಮುಗಿದ ವೇಳೆ 124 ರನ್ ಗೆ 5 ವಿಕೆಟ್ ಕಳೆದುಕೊಂಡಿದೆ. ಚಾಹಲ್ 3 ಮತ್ತು ಭುವನೇಶ್ವರ್ ಕುಮಾರ್ 2 ವಿಕೆಟ್ ಪಡೆಯು ಉತ್ತಮ ದಾಳಿ ಸಂಘಟಿಸಿದ್ದಾರೆ
ಭಾರತ ಈ ಪಂದ್ಯಕ್ಕೆ ಮೂರು ಬದಲಾವಣೆ ಮಾಡಿಕೊಂಡಿದೆ. ಕಳಪೆ ಫಾರ್ಮ್ನಲ್ಲಿರುವ ಅಂಬಾಟಿ ರಾಯುಡು ಬದಲಿಗೆ ಕೇದಾರ್ ಜಾದವ್ ಸ್ಥಾನ ಪಡೆದಿದ್ದಾರೆ. ಕಳೆದ ಪಂದ್ಯದಲ್ಲಿ ದುಬಾರಿಯಾಗಿದ್ದ ಕುಲದೀಪ್ ಯಾದವ್ ಮತ್ತು ಮೊಹಮ್ಮದ್ ಸಿರಾಜ್ ಬದಲಿಗೆ ಯುಜುವೇಂದ್ರ ಚಾಹಲ್ ಹಾಗೂ ವಿಜಯ್ ಶಂಕರ್ ಅಂತಿಮ ಪಟ್ಟಿಯಲ್ಲಿ ಕಾಣಿಸಿಕೊಂಡಿದ್ದಾರೆ.