ನಾಯರ್‌, ಪಾಂಡೆ ಪರಾಕ್ರಮ: ಸೆಮಿಫೈನಲ್‌ಗೆ ನೆಗೆದ ಕರ್ನಾಟಕ


Team Udayavani, Jan 19, 2019, 12:30 AM IST

vinay-kumar-karnataka.jpg

ಬೆಂಗಳೂರು: ಗೆಲ್ಲುವ ಬಗ್ಗೆ ಆತ್ಮವಿಶ್ವಾಸಕ್ಕಿಂತ ಆತಂಕವನ್ನೇ ಹೆಚ್ಚಾಗಿ ಹೊಂದಿದ್ದ ಕರ್ನಾಟಕ ತಂಡ, ಶುಕ್ರವಾರ ಅದ್ಭುತವಾಗಿ ಆಡಿ ರಾಜಸ್ಥಾನ ವಿರುದ್ಧದ 6 ವಿಕೆಟ್‌ ಜಯ ಸಾಧಿಸಿ ರಣಜಿ ಟ್ರೋಫಿ ಪಂದ್ಯಾವಳಿಯ ಸೆಮಿಫೈನಲ್‌ಗೆ ನೆಗೆದಿದೆ.

ಗೆಲ್ಲಲು 184 ರನ್‌ ಗಳಿಸುವ ಗುರಿ ಪಡೆದಿದ್ದ ಕರ್ನಾಟಕ ತಂಡ, ಗುರುವಾರ 45 ರನ್‌ ಆಗುವಷ್ಟರಲ್ಲಿ 3 ವಿಕೆಟ್‌ ಕಳೆದುಕೊಂಡು ಆತಂಕಕ್ಕೊಳಗಾಗಿತ್ತು. ಹಿಂದಿನ ಮೂರೂ ದಿನಗಳಲ್ಲಿ ಚಿನ್ನಸ್ವಾಮಿ ಅಂಕಣ ವರ್ತಿಸಿದ್ದ ರೀತಿ ಕಂಡಾಗ ಶುಕ್ರವಾರ ಕರ್ನಾಟಕದ ಸ್ಥಿತಿ ಕಷ್ಟವಿದೆ ಎಂದೇ ಭಾವಿಸಲಾಗಿತ್ತು. 4ನೇ ದಿನದಾರಂಭದಲ್ಲೇ ರೋನಿತ್‌ ಮೋರೆ ಔಟಾಗಿದ್ದರು. ಇದು ರಾಜ್ಯಕ್ಕೆ ಭೀತಿ ಹುಟ್ಟಿಸಿತ್ತು.

ಅಜೇಯ 129 ರನ್‌ ಜತೆಯಾಟ
ಈ ಆತಂಕವನ್ನು ದೂರ ಮಾಡಿದ್ದು ಖ್ಯಾತ ಆಟಗಾರ ಕರುಣ್‌ ನಾಯರ್‌ ಹಾಗೂ ನಾಯಕ ಮನೀಷ್‌ ಪಾಂಡೆ. ಇಬ್ಬರೂ ಕೂಡಿಕೊಂಡು 5ನೇ ವಿಕೆಟಿಗೆ 129 ರನ್‌ ಜತೆಯಾಟ ನಡೆಸಿ ತಂಡವನ್ನು ಸುರಕ್ಷಿತವಾಗಿ ದಡ ಮುಟ್ಟಿಸಿದರು. ಈ ತಾಳ್ಮೆಯ ಆಟದ ವೇಳೆ ಕರುಣ್‌ ನಾಯರ್‌ 129 ಎಸೆತ ಎದುರಿಸಿ 6 ಬೌಂಡರಿ ಸಹಿತ 61 ರನ್‌ ಮಾಡಿದರು.

ನಾಯಕ ಮನೀಷ್‌ ಪಾಂಡೆ ಇದಕ್ಕೆ ವ್ಯತಿರಿಕ್ತವಾಗಿ ಬ್ಯಾಟ್‌ ಬೀಸಿದರು. ಆಕ್ರಮಣಕಾರಿಯಾಗಿ ಆಡಿದ ಅವರು 87 ರನ್‌ ಬಾರಿಸಿದರು. ಇದಕ್ಕಾಗಿ ಎದುರಿಸಿದ್ದು ಕೇವಲ 75 ಎಸೆತ. ಈ ವೇಳೆ 14 ಬೌಂಡರಿ, 2 ಸಿಕ್ಸರ್‌ ಚಚ್ಚಿದರು. ಒಂದು ಕಡೆ ಕರುಣ್‌ ತಾಳ್ಮೆಯ ಆಟ, ಮತ್ತೂಂದು ಕಡೆ ಮನೀಷ್‌ ಸ್ಫೋಟಕ ಬ್ಯಾಟಿಂಗ್‌ ರಾಜ್ಯದ ಇನ್ನಿಂಗ್ಸ್‌ಗೆ ಸಮತೋಲನ ತಂದಿತ್ತಿತು. ರಾಜಸ್ಥಾನ ಬೌಲರ್‌ಗಳು ಹಿಡಿತ ಕಳೆದುಕೊಳ್ಳಲು ಇಷ್ಟು ಸಾಕಾಯಿತು.

ರಾಜಸ್ಥಾನ ಪರ ಅನಿಕೇತ್‌ ಚೌಧರಿ 32 ರನ್‌ ನೀಡಿ 2 ವಿಕೆಟ್‌ ಉರುಸಿದರು. ಕರ್ನಾಟಕದ ಮಾಜಿ ನಾಯಕ ವಿನಯ್‌ ಕುಮಾರ್‌ ಮೊದಲ ಇನ್ನಿಂಗ್ಸ್‌ನಲ್ಲಿ ತೋರಿದ ಅಮೋಘ ಬ್ಯಾಟಿಂಗ್‌ ಸಾಧನೆಗಾಗಿ ಪಂದ್ಯಶ್ರೇಷ್ಠ ಗೌರವ ಪಡೆದರು.

ಸಂಕ್ಷಿಪ್ತ ಸ್ಕೋರ್‌: ರಾಜಸ್ಥಾನ-224 ಮತ್ತು 222. ಕರ್ನಾಟಕ-263 ಮತ್ತು 4 ವಿಕೆಟಿಗೆ 185 (ಪಾಂಡೆ ಅಜೇಯ 87, ನಾಯರ್‌ ಅಜೇಯ 61).
ಪಂದ್ಯಶ್ರೇಷ್ಠ: ವಿನಯ್‌ ಕುಮಾರ್‌.

ಎದುರಾಳಿ ಇಂದು ಇತ್ಯರ್ಥ
ಕೇರಳ ಈಗಾಗಲೇ ಸೆಮಿಫೈನಲ್‌ ಪ್ರವೇಶಿಸಿ ಇತಿಹಾಸ ನಿರ್ಮಿಸಿದೆ. ಕರ್ನಾಟಕ ಉಪಾಂತ್ಯ ತಲುಪಿದ 2ನೇ ತಂಡವಾಗಿದೆ. ಈ ತಂಡಗಳ ಎದುರಾಳಿ ಯಾರೆಂಬುದು ಶನಿವಾರ ಇತ್ಯರ್ಥವಾಗಲಿದೆ.

ನಾಗಪುರದಲ್ಲಿ ವಿದರ್ಭ ವಿರುದ್ಧ ಉತ್ತರಖಂಡ್‌ ಇನ್ನಿಂಗ್ಸ್‌ ಸೋಲಿನ ಸುಳಿಗೆ ಸಿಲುಕಿದೆ. ಉಳಿದ 5 ವಿಕೆಟ್‌ಗಳಿಂದ ಇನ್ನೂ 122 ರನ್‌ ಮಾಡಬೇಕಾದ ಒತ್ತಡದಲ್ಲಿದೆ. ಹೀಗಾಗಿ ವಿದರ್ಭ ಸೆಮಿಫೈನಲ್‌ ಪ್ರವೇಶಿಸುವುದರಲ್ಲಿ ಯಾವುದೇ ಅನುಮಾನವಿಲ್ಲ.

ಲಕ್ನೋದಲ್ಲಿ ಉತ್ತರಪ್ರದೇಶ-ಸೌರಾಷ್ಟ್ರ ಪಂದ್ಯ ರೋಚಕ ಘಟ್ಟ ತಲುಪಿದೆ. ಗೆಲುವಿಗೆ 372 ರನ್‌ ಸವಾಲು ಪಡೆದಿರುವ ಸೌರಾಷ್ಟ್ರ 2 ವಿಕೆಟಿಗೆ 195 ರನ್‌ ಗಳಿಸಿ ಹೋರಾಟ ಜಾರಿಯಲ್ಲಿರಿದೆ. ಸೆಮಿಗೆ ಏರಬೇಕಾದರೆ ಸೌರಾಷ್ಟ್ರಕ್ಕೆ ಗೆಲುವು ಅನಿವಾರ್ಯ. ಅಕಸ್ಮಾತ್‌ ಪಂದ್ಯ ಡ್ರಾಗೊಂಡರೆ ಇನ್ನಿಂಗ್ಸ್‌ ಮುನ್ನಡೆ ಸಾಧಿಸಿರುವ ಯುಪಿಗೆ ಈ ಅವಕಾಶ ಲಭಿಸಲಿದೆ.

ಟಾಪ್ ನ್ಯೂಸ್

ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್‌ ಬ್ರಿಜೇಶ್‌ ಚೌಟ

ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್‌ ಬ್ರಿಜೇಶ್‌ ಚೌಟ

ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್‌ ಬೆಂಬಲಿಸಿ: ಪದ್ಮರಾಜ್‌ ಪೂಜಾರಿ

ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್‌ ಬೆಂಬಲಿಸಿ: ಪದ್ಮರಾಜ್‌ ಪೂಜಾರಿ

ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ

ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ

ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ

ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ

Kodagu: ಕಾನೂನು ಸುವ್ಯವಸ್ಥೆಗೆ 1,600 ಪೊಲೀಸರ ನಿಯೋಜನೆ

Kodagu: ಕಾನೂನು ಸುವ್ಯವಸ್ಥೆಗೆ 1,600 ಪೊಲೀಸರ ನಿಯೋಜನೆ

Veerappa Moily ಬಿಜೆಪಿ ವಿರುದ್ಧ ಅಸಮಾಧಾನ ಜ್ವಾಲಾಮುಖಿ ಸ್ಫೋಟ

Veerappa Moily ಬಿಜೆಪಿ ವಿರುದ್ಧ ಅಸಮಾಧಾನ ಜ್ವಾಲಾಮುಖಿ ಸ್ಫೋಟ

ಮತದಾರರ ಚೀಟಿಯಲ್ಲಿ ಕ್ಯುಆರ್‌ ಕೋಡ್‌! ಮಂಗಳೂರು ದಕ್ಷಿಣ-ಉತ್ತರದಲ್ಲಿ ಅನುಷ್ಠಾನ

ಮತದಾರರ ಚೀಟಿಯಲ್ಲಿ ಕ್ಯುಆರ್‌ ಕೋಡ್‌! ಮಂಗಳೂರು ದಕ್ಷಿಣ-ಉತ್ತರದಲ್ಲಿ ಅನುಷ್ಠಾನ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-asdasdas

IPL; ಸ್ಟಾಯಿನಿಸ್‌ ಏಟಿಗೆ ತವರಲ್ಲೆ ಚಾಂಪಿಯನ್‌ ಚೆನ್ನೈ ಠುಸ್‌!

DCvsGT; ಪಂತ್‌ ನಾಯಕತ್ವಕ್ಕೆ ಅಗ್ನಿಪರೀಕ್ಷೆ:  ತವರಿನ “ಕೋಟ್ಲಾ’ದಲ್ಲಿ ಗುಜರಾತ್‌ ಎದುರಾಳಿ

DCvsGT; ಪಂತ್‌ ನಾಯಕತ್ವಕ್ಕೆ ಅಗ್ನಿಪರೀಕ್ಷೆ:  ತವರಿನ “ಕೋಟ್ಲಾ’ದಲ್ಲಿ ಗುಜರಾತ್‌ ಎದುರಾಳಿ

IPL 2024; Chahal’s 200-wicket haul; First bowler to achieve this feat

IPL 2024; ಚಹಲ್‌ 200 ವಿಕೆಟ್‌ಗಳ ಕಮಾಲ್‌; ಈ ಸಾಧನೆಗೈದ ಮೊದಲ ಬೌಲರ್‌

CSKvsLSG: ಶತಕ ಸಿಡಿಸಿದ ಚೆನ್ನೈನ ಮೊದಲ ನಾಯಕ ಗಾಯಕ್ವಾಡ್‌

CSKvsLSG: ಶತಕ ಸಿಡಿಸಿದ ಚೆನ್ನೈನ ಮೊದಲ ನಾಯಕ ಗಾಯಕ್ವಾಡ್‌

Rajastan Royals; ಪ್ಲೇ ಆಫ್ ಮೊದಲ ಗುರಿ: ಸಂಜು ಸ್ಯಾಮ್ಸನ್‌

Rajastan Royals; ಪ್ಲೇ ಆಫ್ ಮೊದಲ ಗುರಿ: ಸಂಜು ಸ್ಯಾಮ್ಸನ್‌

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್‌ ಬ್ರಿಜೇಶ್‌ ಚೌಟ

ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್‌ ಬ್ರಿಜೇಶ್‌ ಚೌಟ

ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್‌ ಬೆಂಬಲಿಸಿ: ಪದ್ಮರಾಜ್‌ ಪೂಜಾರಿ

ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್‌ ಬೆಂಬಲಿಸಿ: ಪದ್ಮರಾಜ್‌ ಪೂಜಾರಿ

ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ

ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ

ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ

ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ

Kodagu: ಕಾನೂನು ಸುವ್ಯವಸ್ಥೆಗೆ 1,600 ಪೊಲೀಸರ ನಿಯೋಜನೆ

Kodagu: ಕಾನೂನು ಸುವ್ಯವಸ್ಥೆಗೆ 1,600 ಪೊಲೀಸರ ನಿಯೋಜನೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.