ಮಲೇಶ್ಯ ಮಾಸ್ಟರ್ ಬ್ಯಾಡ್ಮಿಂಟನ್: ಮರಿನ್ ವಿರುದ್ಧ ಮಂಕಾದ ಸೈನಾ
Team Udayavani, Jan 20, 2019, 1:30 AM IST
ಕೌಲಾಲಂಪುರ: ಭಾರತದ ತಾರಾ ಆಟಗಾರ್ತಿ ಸೈನಾ ನೆಹ್ವಾಲ್ “ಮಲೇಶ್ಯ ಮಾಸ್ಟರ್’ ಬ್ಯಾಡ್ಮಿಂಟನ್ ಕೂಟದ ಸೆಮಿಫೈನಲ್ನಲ್ಲಿ ಸೋಲನುಭವಿಸಿದ್ದಾರೆ. ಇದರೊಂದಿಗೆ ಈ ಪಂದ್ಯಾವಳಿಯಲ್ಲಿ ಭಾರತದ ಸವಾಲು ಅಂತ್ಯಗೊಂಡಿದೆ.
ಶನಿವಾರ ನಡೆದ ವನಿತಾ ಸಿಂಗಲ್ಸ್ ಸೆಮಿಫೈನಲ್ ಪಂದ್ಯದಲ್ಲಿ ಸೈನಾ ನೆಹ್ವಾಲ್ ಅವರನ್ನು ಸ್ಪೇನಿನ ಕ್ಯಾರೋಲಿನ್ ಮರಿನ್ 21-16, 21-13 ನೇರ ಗೇಮ್ಗಳಲ್ಲಿ ಹಿಮ್ಮೆಟ್ಟಿಸಿ ಪ್ರಶಸ್ತಿ ಸುತ್ತಿಗೆ ಲಗ್ಗೆ ಇರಿಸಿದರು. ಗೆದ್ದರೆ ಮರಿನ್ 2ನೇ ಸಲ ಇಲ್ಲಿ ಪ್ರಶಸ್ತಿ ಎತ್ತಲಿದ್ದಾರೆ.
ಸೈನಾ ತೀವ್ರ ಪೈಪೋಟಿ ನೀಡಿದ್ದು ಮೊದಲ ಗೇಮ್ನ ಆರಂಭದಲ್ಲಿ ಮಾತ್ರ. 5-2 ಅಂಕಗಳ ಮುನ್ನಡೆ ಸೈನಾ ಅವರದ್ದಾಗಿತ್ತು. ಇದಕ್ಕೆ ದಿಟ್ಟ ಪ್ರತ್ಯುತ್ತರ ನೀಡಿದ ಮರಿನ್ ಸತತ ಅಂಕಗಳನ್ನು ಸಂಪಾದಿಸಿ 11-9 ಮುನ್ನಡೆ ಸಾಧಿಸಿದರು. 14-14 ಅಂಕಗಳ ವರೆಗೆ ಸೈನಾ ಪ್ರತಿರೋಧ ಒಡ್ಡಿದರಾದರೂ ಮರಿನ್ ಸತತ 6 ಅಂಕಗಳನ್ನು ಗಳಿಸಿ ಮುನ್ನುಗ್ಗಿದರು. ಹೀಗೆ ಮೊದಲ ಗೇಮ್ ತಮ್ಮದಾಗಿಸಿಕೊಂಡರು.
2ನೇ ಗೇಮ್ನಲ್ಲಿ ಮರಿನ್ ಆರಂಭದಲ್ಲೇ ಆಕ್ರಮಣಕಾರಿ ಆಟವಾಡಿ 6-2 ಮುನ್ನಡೆ ಸಂಪಾದಿಸಿದರು. ಸೈನಾಗೆ ಅಂಕ ಗಳಿಸಲು ಹೆಚ್ಚಿನ ಅವಕಾಶವನ್ನೇ ನೀಡಲಿಲ್ಲ. ಸೈನಾ ತಪ್ಪುಗಳ ಲಾಭವೆತ್ತಿದ ಮರಿನ್ ಸುಲಭದಲ್ಲಿ ಅಂಕಗಳನ್ನು ಬಾಚುತ್ತ ಹೋದರು. ಸೈನಾ ಭಾರೀ ಅಂತರದಿಂದ ಸೋತರು.
ಇಂತಾನನ್ ಎದುರಾಳಿ
ರವಿವಾರದ ಪ್ರಶಸ್ತಿ ಕಾಳಗದಲ್ಲಿ ಕ್ಯಾರೋಲಿನಾ ಮರಿನ್ ಥಾಯ್ಲೆಂಡ್ನ ರಚನೋಕ್ ಇಂತಾನನ್ ವಿರುದ್ಧ ಸೆಣಸಲಿದ್ದಾರೆ. ಇನ್ನೊಂದು ಸೆಮಿಫೈನಲ್ನಲ್ಲಿ ಇಂತಾನನ್ ಮಲೇಶ್ಯದ ಗೋ ಜಿನ್ ವೀ ವಿರುದ್ಧ 21-16, 21-16 ಅಂತರದ ಗೆಲುವು ಒಲಿಸಿಕೊಂಡರು.
ಪುರುಷರ ಫೈನಲ್
ಪುರುಷರ ಸಿಂಗಲ್ಸ್ ಫೈನಲ್ನಲ್ಲಿ ಚೀನದ ಚೆನ್ ಲಾಂಗ್ ಮತ್ತು ಕೊರಿಯಾದ ಸನ್ ವಾನ್ ಹೊ ಪರಸ್ಪರ ಸೆಣಸಲಿದ್ದಾರೆ. ಸೆಮಿಫೈನಲ್ನಲ್ಲಿ ಮಲೇಶ್ಯದ ಲ್ಯೂ ಡ್ಯಾರನ್ ವಿರುದ್ಧ ಸನ್ ವಾ ಹೊ “ವಾಕ್ ಓವರ್’ ಪಡೆದರು. ಇನ್ನೊಂದು ಪಂದ್ಯದಲ್ಲಿ ಚೆನ್ ಲಾಂಗ್ ಡೆನ್ಮಾರ್ಕ್ನ ವಿಕ್ಟರ್ ಅಕ್ಸೆಲ್ಸೆನ್ ವಿರುದ್ಧ 21-13, 21-18 ಅಂತರದ ಗೆಲುವು ಸಾಧಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Wrestlers: ದುಬಾೖ ವಿಮಾನ ನಿಲ್ದಾಣದಲ್ಲಿ ಸಿಕ್ಕಿಬಿದ್ದ ಇಬ್ಬರು ಕುಸ್ತಿಪಟುಗಳು
LSG vs CSK: ಲಕ್ನೋದಲ್ಲೂ ಚೆನ್ನೈ ಫೇವರಿಟ್
IPL; ರೋಚಕ ಪಂದ್ಯದಲ್ಲಿ ಪಂಜಾಬ್ ಎದುರು 9 ರನ್ ಜಯ ಸಾಧಿಸಿದ ಮುಂಬೈ
Austria Marathon: ಭಾರತವನ್ನು ಪ್ರತಿನಿಧಿಸಲಿರುವ ಕೊಡಗಿನ ಅಪ್ಪಚಂಗಡ ಬೆಳ್ಯಪ್ಪ
ಮೊಣಕಾಲಿನ ಗಾಯಕ್ಕೆ ಶಸ್ತ್ರಚಿಕಿತ್ಸೆ ಅಗತ್ಯ ಒಲಿಂಪಿಕ್ಸ್ನಿಂದ ಹೊರಬಿದ್ದ ಶ್ರೀಶಂಕರ್
MUST WATCH
ಹೊಸ ಸೇರ್ಪಡೆ
Sirsi Festival: ನಾವು ಬಂದೇವ ಶಿರಸಿ ಜಾತ್ರೆ ನೋಡಲಿಕ್ಕೆ !
Kalaburagi; ಬಿಜೆಪಿ ತೊರೆದು ಮರಳಿ ಕಾಂಗ್ರೆಸ್ ಸೇರಿದ ಮಾಲೀಕಯ್ಯ ಗುತ್ತೇದಾರ
Tour: 9 ದಿನ 4,800 ಕಿ.ಮೀ ಪ್ರಯಾಣ-ಅಡ್ವೆಂಚರ್ ಬೈಕ್ನಲ್ಲಿ 64ರ ಹಿರಿಯರ ಸಾಹಸ ಯಾನ
Lok Sabha Election: ‘ಬಿವೈಆರ್ಗೆ 3 ಲಕ್ಷ ಮತ ಅಂತರದ ಗೆಲುವು ಖಚಿತ’
ಹಣ ಪಡೆದು ವರ್ಗಾವಣೆಯಾದ ಪೊಲೀಸರಿಂದ ಕಾನೂನು ವ್ಯವಸ್ಥೆ ನಿರೀಕ್ಷೆ ಸಾಧ್ಯವೇ?: ಜೋಶಿ ಪ್ರಶ್ನೆ