ಧೋನಿ ಬಗ್ಗೆ ಮಾತಾನಾಡಿದ ಯುವಿ: ಸಿಕ್ಸರ್ ಸಿಂಗ್ ಹೇಳಿದ್ದೇನು ಗೊತ್ತಾ ?
Team Udayavani, Feb 9, 2019, 6:45 AM IST
ಮುಂಬೈ: ಟೀಮ್ ಇಂಡಿಯಾ ಮಾಜಿ ನಾಯಕ ಮಹೇಂದ್ರ ಸಿಂಗ್ ಧೋನಿ ಮತ್ತು ವಿಶ್ವಕಪ್ ಹೀರೋ, ಸಿಕ್ಸರ್ ಕಿಂಗ್ ಯುವರಾಜ್ ಸಿಂಗ್ ಜೊತೆಯಾಗಿ ಬ್ಯಾಟ್ ಹಿಡಿದರೆ ಸಾಕು, ಎದುರಾಳಿ ಬೌಲರ್ ಜಂಘಾಬಲವೇ ಉಡುಗಿ ಹೋಗುತ್ತದೆ. ಸದ್ಯ ಯುವರಾಜ್ ಸಿಂಗ್ ಟೀಮ್ ಇಂಡಿಯಾದಲ್ಲಿ ಸ್ಥಾನ ಪಡೆದಿಲ್ಲ. ಅದಕ್ಕೆ ಕಾರಣ ಧೋನಿ ಎಂಬ ಮಾತುಗಳೂ ಇವೆ. ಹೀಗಿರುವಾಗ ಯುವರಾಜ್ ಧೋನಿ ಬಗ್ಗೆ ಮಾತಾಡಿದ್ದಾರೆ.
‘ ಧೋನಿ ಕ್ರಿಕೆಟ್ ನಡೆಗಳಲ್ಲಿ ಬಹಳ ಜಾಣ. ವಿಶ್ವ ದರ್ಜೆಯ ವಿಕೆಟ್ ಕೀಪರ್ ಧೋನಿ ವಿಕೆಟ್ ಹಿಂದೆ ನಿಂತು ತಂಡವನ್ನು ನಿಯಂತ್ರಿಸಬಲ್ಲ ಆಟಗಾರ. ಧೋನಿ ಒಬ್ಬ ಅದ್ಭುತ ನಾಯಕ. ವಿಶ್ವಕಪ್ ತಂಡದಲ್ಲಿ ಧೋನಿ ಇದ್ದರೆ ಇದರಿಂದ ವಿರಾಟ್ ಕೊಹ್ಲಿಗೆ ತುಂಬಾ ಸಹಾಯವಾಗುತ್ತದೆ ಎಂದು ಯುವರಾಜ್ ಮಾತನಾಡಿದ್ದಾರೆ.
ವಿಶ್ವಕಪ್ ತಂಡದಲ್ಲಿ ಧೋನಿ ಇರಬೇಕೇ ಎಂಬ ಕೆಲವು ಪ್ರಶ್ನೆಗಳು ಸಾರ್ವಜನಿಕ ವಲಯದಲ್ಲಿ ಕೇಳುತ್ತಿರುವುದರಿಂದ ಯುವರಾಜ್ ಈ ಮಾತುಗಳು ಮಹತ್ವ ಪಡೆದಿದೆ. ನಿಗದಿತ ಓವರ್ ಕ್ರಿಕೆಟ್ ನಲ್ಲಿ ಧೋನಿಯ ರನ್ ಗಳಿಸುವ ವೇಗ ಕಡಿಮೆಯಾಗಿದೆ ಹಾಗಾಗಿ ಧೋನಿ ಬದಲಿಗೆ ಯುವ ಆಟಗಾರರಿಗೆ ಅವಕಾಶ ನಿಡಬೇಕು ಎಂದು ಹಲವು ಮಾಜಿ ಆಟಗಾರರು ಅಭಿಪ್ರಾಯ ವ್ಯಕ್ತಪಡಿಸುತ್ತಿದ್ದಾರೆ.
ವಿಶ್ವಕಪ್ ನಲ್ಲಿ ತಂಡದ ಮಹತ್ವದ ನಿರ್ಧಾರ ತೆಗೆದುಕೊಳ್ಳುವಾಗ ಧೋನಿ ಪಾತ್ರ ಮಹತ್ವವಾಗುತ್ತದೆ. ಇತ್ತೀಚೆಗೆ ನಡೆದ ಆಸೀಸ್ ವಿರುದ್ಧದ ಧೋನಿ ಉತ್ತಮವಾಗಿ ಆಡಿದರು. ವಿಶ್ವಕಪ್ ಗಾಗಿ ನಾನು ಅವರಿಗೆ ಶುಭ ಹಾರೈಸುತ್ತೇನೆ ಎಂದು 37 ರ ಹರೆಯದ ಎಡಗೈ ಆಟಗಾರ ಹೇಳಿದರು.
ಐಪಿಎಲ್ ನಲ್ಲಿ ಮುಂಬೈ ಇಂಡಿಯನ್ಸ್ ತಂಡಕ್ಕೆ ಆಯ್ಕೆಯಾಗಿರುವ ಯುವಿ, ನಾನು ಮಧ್ಯಮ ಕ್ರಮಾಂಕದಲ್ಲಿ ತಂಡಕ್ಕೆ ನೆರವಾಗಬಲ್ಲೆ. ಇದರಿಂದಾಗಿ ನಾಯಕ ರೋಹಿತ್ ಶರ್ಮಾಗೆ ಅನುಕೂಲವಾಗಬಹುದು ಮತ್ತು ಶರ್ಮಾ ಯಾವುದೇ ಒತ್ತಡವಿಲ್ಲದೆ ತನ್ನ ನೈಜ ಆಟ ಆಡಬಹುದು ಎಂದಿದ್ದಾರೆ.
2015 ರ ವಿಶ್ವಕಪ್ ನ ಸೆಮಿ ಫೈನಲ್ ನಲ್ಲಿ ಸೋಲುಂಡಿದ್ದ ಭಾರತ ಇದೇ ಬರುವ ಮೇ ಅಂತ್ಯದಲ್ಲಿ ಇಂಗ್ಲೆಂಡ್ ನಲ್ಲಿ ನಡೆಯಲಿರುವ ವಿಶ್ವಕಪ್ ಮೇಲೆ ಕಣ್ಣಿಟ್ಟಿದೆ. 2011ರ ವಿಶ್ವಕಪ್ ಹೀರೋ ಯುವರಾಜ್ ಸಿಂಗ್ ಮಾತ್ರ ತಂಡಕ್ಕೆ ಆಯ್ಕೆಯಾಗುವುದು ಅನುಮಾನ ಎನ್ನಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
RCB; ಸುಮ್ಮನೆ ಒಪ್ಪಂದಕ್ಕೆ ಸಹಿ ಹಾಕು…: ವಿರಾಟ್ ಜತೆಗಿನ ಮಾತುಕತೆ ನೆನೆದ ಕೆ.ಎಲ್ ರಾಹುಲ್
Wrestlers: ದುಬಾೖ ವಿಮಾನ ನಿಲ್ದಾಣದಲ್ಲಿ ಸಿಕ್ಕಿಬಿದ್ದ ಇಬ್ಬರು ಕುಸ್ತಿಪಟುಗಳು
LSG vs CSK: ಲಕ್ನೋದಲ್ಲೂ ಚೆನ್ನೈ ಫೇವರಿಟ್
IPL; ರೋಚಕ ಪಂದ್ಯದಲ್ಲಿ ಪಂಜಾಬ್ ಎದುರು 9 ರನ್ ಜಯ ಸಾಧಿಸಿದ ಮುಂಬೈ
Austria Marathon: ಭಾರತವನ್ನು ಪ್ರತಿನಿಧಿಸಲಿರುವ ಕೊಡಗಿನ ಅಪ್ಪಚಂಗಡ ಬೆಳ್ಯಪ್ಪ
MUST WATCH
ಹೊಸ ಸೇರ್ಪಡೆ
Mangaluru; ಪೆಟ್ರೋಲ್ ಬದಲು ಡೀಸೆಲ್ ತುಂಬಿಸಿದ ಆರೋಪ: ಕೋರ್ಟ್ಗೆ ಮೊರೆ
RCB; ಸುಮ್ಮನೆ ಒಪ್ಪಂದಕ್ಕೆ ಸಹಿ ಹಾಕು…: ವಿರಾಟ್ ಜತೆಗಿನ ಮಾತುಕತೆ ನೆನೆದ ಕೆ.ಎಲ್ ರಾಹುಲ್
Davanagere; ಮುಖ್ಯಮಂತ್ರಿ ಜವಾಬ್ದಾರಿಯಿಂದ ಹೇಳಿಕೆ ನೀಡಬೇಕು: ಎಂ.ಪಿ. ರೇಣುಕಾಚಾರ್ಯ
ತಂತ್ರಜ್ಞಾನದಿಂದ ಮಾನವ ಜೀವನ ಸುಲಭ: ಸ್ಮಾರ್ಟ್ ಸಿಟಿ ಅಧಿಕಾರಿ ಶ್ರೀನಿವಾಸ
Vijayapura; ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಕುಸಿದಿದೆ : ಸಂಸದ ಜಿಗಜಿಣಗಿ