ಇರಾನಿ ಟ್ರೋಫಿ: ಶೇಷ ಭಾರತ ಕೈಹಿಡಿದ ಮಯಾಂಕ್, ವಿಹಾರಿ


Team Udayavani, Feb 12, 2019, 11:34 AM IST

hanuma.jpg

ನಾಗ್ಪುರ: ರಣಜಿ ವಿಜೇತ ವಿದರ್ಭ ವಿರುದ್ಧ ಇರಾನಿ ಕಪ್ ಆಡಲಿಳಿದ ಅಜಿಂಕ್ಯ ರಹಾನೆ ನೇತೃತ್ವದ ಶೇಷ ಭಾರತ ತಂಡ ಮೊದಲ ದಿನದ ಆಟದ ಕೊನೆಯ ಓವರ್ ನಲ್ಲಿ ಕೊನೆಯ ವಿಕೆಟ್ ಕಳೆದುಕೊಳ್ಳುವುದರ ಮೂಲಕ 330 ಗೆ ಆಲ್ ಔಟ್ ಆಯಿತು. ಹನುಮ ವಿಹಾರಿ ಶತಕ ಸಿಡಿಸಿ ಮಿಂಚಿದರೆ, ಕನ್ನಡಿಗ ಮಯಾಂಕ್ ಅಗರ್ವಾಲ್ 95 ರನ್ ಗೆ ಔಟ್ ಆಗಿ ಶತಕ ವಂಚಿತರಾದರು. 

ಟಾಸ್ ಗೆದ್ದು ಬ್ಯಾಟಿಂಗ್ ಆಯ್ಕೆ ಮಾಡಿದ ಶೇಷ ಭಾರತ ಸಾಧಾರಣ ಆರಂಭ ಪಡೆಯಿತು. ತಂಡದ ಮೊತ್ತ 46 ರನ್ ಆಗುವಷ್ಟರಲ್ಲಿ ಆರಂಭಿಕ ಆಟಗಾರ ಅನ್ಮೋಲ್ ಪ್ರೀತ್ ಸಿಂಗ್ ವಿಕೆಟ್ ಕಳೆದುಕೊಂಡಿತು. ಅನ್ಮೋಲ್ ಗಳಿಕೆ ಕೇವಲ 15. 

ಎರಡನೇ ವಿಕೆಟ್ ಗೆ ಜೊತೆಯಾದ ಮಯಾಂಕ್ ಮತ್ತು ಹನುಮ ವಿಹಾರಿ 125 ರನ್ ಗಳ ಜೊತೆಯಾಟವಾಡಿ ತಂಡಕ್ಕೆ ಉತ್ತಮ ಅಡಿಪಾಯ ಹಾಕಿದರು. ನಾಯಕ ಅಜಿಂಕ್ಯ ರಹಾನೆ (13), ಶ್ರೇಯಸ್ ಅಯ್ಯರ್( 19) ದೊಡ್ಡ ಮೊತ್ತವನ್ನು ಕಲೆಹಾಕಲು ವಿಫಲರಾದರು. ವಿಕೆಟ್ ಕೀಪರ್ ಇಶಾನ್ ಕಿಶನ್ (2) ಕರ್ನಾಟಕದ ಆಲ್ ರೌಂಡರ್ ಕೃಷ್ಣಪ್ಪ ಗೌತಮ್ (7 ) ಸಂಪೂರ್ಣ ವಿಫಲರಾದರು.  ಎಂಟನೇ ವಿಕೆಟ್ ರೂಪದಲ್ಲಿ ಔಟ್ ಆದ ಹನುಮ ವಿಹಾರಿ 211 ಎಸೆತ ಎದುರಿಸಿ 114 ರನ್ ಗಳಿಸಿ ಸರ್ವಾಟೆಗೆ ವಿಕೆಟ್ ಒಪ್ಪಿಸಿದರು. 

ವಿದರ್ಭ ಪರ ರಣಜಿ ಫೈನಲ್ ಪಂದ್ಯದ ಹೀರೋ ಆದಿತ್ಯ ಸರ್ವಾಟೆ ಮತ್ತು  ಅಕ್ಷಯ್ ವಾಖರೆ ತಲಾ 3 ವಿಕೆಟ್ ಪಡೆದರೆ, ರಜನೀಶ್ ಗುರಬಾನಿ ಎರಡು ವಿಕೆಟ್ ಪಡೆದರು. 

ಶೇಷ ಭಾರತ ತಂಡ ಈ ಸಾಲಿನ ರಣಜಿ ಋತುವಿನ ಯಶಸ್ವಿ ಆಟಗಾರರಾದ ಸ್ನೆಲ್ ಪಟೇಲ್ ಮತ್ತು ರೋನಿತ್ ಮೋರೆಯನ್ನು ಬೆಂಚ್ ಕಾಯಿಸಿದರೆ ವಿದರ್ಭ ತಂಡ ದೇಶಿ ಕ್ರಿಕೆಟ್ ನ ಚಾಂಪಿಯನ್ ಆಟಗಾರ ವಸೀಂ ಜಾಫರ್ ರನ್ನು ಆಡುವ ಬಳಗದಿಂದ ಕೈ ಬಿಟ್ಟಿತು. 

ಟಾಪ್ ನ್ಯೂಸ್

1-wqewq-eqw

Modi ಕೈ ಬಲಪಡಿಸಲು, ದ.ಕ. ಸಮಗ್ರ ಸುಧಾರಣೆಗಾಗಿ ಬಿಜೆಪಿಗೆ ಮತ ನೀಡಿ: ಚೌಟ

1-asasas

Naxal ಬಾಧಿತ ಮತಗಟ್ಟೆಗಳ ಭದ್ರತೆಗೆ ಹೆಚ್ಚುವರಿ ಆದ್ಯತೆ: ಮುಲ್ಲೈ ಮುಗಿಲನ್‌

D. K. Shivakumar: ಡೆತ್‌, ಬರ್ತ್‌ ಯಾವ ಟ್ಯಾಕ್ಸೂ ಇಲ್ಲ; ಡಿಕೆಶಿ

D. K. Shivakumar: ಡೆತ್‌, ಬರ್ತ್‌ ಯಾವ ಟ್ಯಾಕ್ಸೂ ಇಲ್ಲ; ಡಿಕೆಶಿ

KPCC: ಮೋದಿ, ರಾಜನಾಥ್‌ಸಿಂಗ್‌ ವಿರುದ್ಧ ಕ್ರಮಕ್ಕೆ ಕೆಪಿಸಿಸಿ ದೂರು

KPCC: ಮೋದಿ, ರಾಜನಾಥ್‌ಸಿಂಗ್‌ ವಿರುದ್ಧ ಕ್ರಮಕ್ಕೆ ಕೆಪಿಸಿಸಿ ದೂರು

1-rerwer

IPL; ಸನ್‌ರೈಸರ್ಸ್ ಹೈದರಾಬಾದ್ ವಿರುದ್ಧ ಜಯದ ನಗು ಬೀರಿದ ಆರ್ ಸಿಬಿ

MONEY (2)

Mysuru: ದಾಖಲೆ ಇಲ್ಲದೆ ಸಾಗಿಸುತ್ತಿದ್ದ 89 ಲಕ್ಷ ರೂ. ವಶಕ್ಕೆ

Crime: ತಾಯಿ ಆತ್ಮಹತ್ಯೆಗೆ ಕಾರಣನಾದ ತಂದೆಯನ್ನು ಕೊಂದ ಮಗ

Crime: ತಾಯಿ ಆತ್ಮಹತ್ಯೆಗೆ ಕಾರಣನಾದ ತಂದೆಯನ್ನು ಕೊಂದ ಮಗ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-rerwer

IPL; ಸನ್‌ರೈಸರ್ಸ್ ಹೈದರಾಬಾದ್ ವಿರುದ್ಧ ಜಯದ ನಗು ಬೀರಿದ ಆರ್ ಸಿಬಿ

28

Athletics: ಕಿರಿಯರ ಏಷ್ಯನ್‌ ಆ್ಯತ್ಲೆಟಿಕ್ಸ್‌  ಜಾವೆಲಿನ್‌ನಲ್ಲಿ ದೀಪಾಂಶುಗೆ ಬಂಗಾರ

Gukesh: ಚಾಂಪಿಯನ್‌ ಗುಕೇಶ್‌ಗೆ ಭವ್ಯ ಸ್ವಾಗತ

Gukesh: ಚಾಂಪಿಯನ್‌ ಗುಕೇಶ್‌ಗೆ ಭವ್ಯ ಸ್ವಾಗತ

IPL: ಎಲ್ಲೆ ಮೀರಿ ವಿಕೆಟ್‌ ಸಂಭ್ರಮಾಚರಣೆಡೆಲ್ಲಿ ವೇಗಿ ರಸಿಕ್‌ ಸಲಾಂಗೆ ಛೀಮಾರಿ

IPL: ಎಲ್ಲೆ ಮೀರಿ ವಿಕೆಟ್‌ ಸಂಭ್ರಮಾಚರಣೆಡೆಲ್ಲಿ ವೇಗಿ ರಸಿಕ್‌ ಸಲಾಂಗೆ ಛೀಮಾರಿ

IPL: ಇಂಪ್ಯಾಕ್ಟ್ ಪ್ಲೇಯರ್‌ ನಿಯಮಕ್ಕೆ ಅಕ್ಷರ್‌ ಪಟೇಲ್‌ ಕೂಡ ವಿರೋಧ

IPL: ಇಂಪ್ಯಾಕ್ಟ್ ಪ್ಲೇಯರ್‌ ನಿಯಮಕ್ಕೆ ಅಕ್ಷರ್‌ ಪಟೇಲ್‌ ಕೂಡ ವಿರೋಧ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-wqewq-eqw

Modi ಕೈ ಬಲಪಡಿಸಲು, ದ.ಕ. ಸಮಗ್ರ ಸುಧಾರಣೆಗಾಗಿ ಬಿಜೆಪಿಗೆ ಮತ ನೀಡಿ: ಚೌಟ

1-asasas

Naxal ಬಾಧಿತ ಮತಗಟ್ಟೆಗಳ ಭದ್ರತೆಗೆ ಹೆಚ್ಚುವರಿ ಆದ್ಯತೆ: ಮುಲ್ಲೈ ಮುಗಿಲನ್‌

1-MB

Note Ban ವೇಳೆ ಮಹಿಳೆಯರು ಮಂಗಳಸೂತ್ರ ಅಡವಿಟ್ಟಾಗ ಮೋದಿ ಮೌನ: ಭಂಡಾರಿ

Exam

Udupi; ಪಿಯುಸಿ ಪರೀಕ್ಷೆ-2 : ನಿಷೇಧಾಜ್ಞೆ ಜಾರಿ

IMD

Dakshina Kannada ಜಿಲ್ಲೆಯಲ್ಲಿ ಮುಂದುವರಿದ ಉರಿಬಿಸಿಲು:ಮಳೆಯ ಮುನ್ಸೂಚನೆ ಇಲ್ಲ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.