ನೇಪಾಲದೆದುರು ಮುಗ್ಗರಿಸಿದ ಭಾರತ


Team Udayavani, Feb 13, 2019, 12:30 AM IST

b-15.jpg

ಭುವನೇಶ್ವರ: “ಗೋಲ್ಡ್‌ ಕಪ್‌’ ಕೂಟದಲ್ಲಿ ಗೆಲುವಿನೊಂದಿಗೆ ತನ್ನ ಅಭಿಯಾನ ಆರಂಭಿಸಿದ ಭಾರತೀಯ ವನಿತಾ ಫ‌ುಟ್‌ಬಾಲ್‌ ತಂಡ ಸೋಮವಾರ ರಾತ್ರಿ ನಡೆದ ಎರಡನೇ ಪಂದ್ಯದಲ್ಲಿ ನೇಪಾಲ ವಿರುದ್ಧ ಸೋಲನುಭವಿಸಿದೆ. ಇಲ್ಲಿನ ಕಳಿಂಗ ಕ್ರೀಡಾಂಗಣದಲ್ಲಿ ನಡೆದ ಈ ಪಂದ್ಯದಲ್ಲಿ ನೇಪಾಲ  2-1 ಗೋಲುಗಳ ಅಂತರದಿಂದ ಭಾರತವನ್ನು ಪರಾಭವಗೊಳಿಸಿದೆ. ನೇಪಾಲ ತಂಡದ ಸಬಿತ್ರಾ 2 ಗೋಲು ಬಾರಿಸಿ ಗೆಲುವಿಗೆ ಕಾರಣರಾದರು.  ಭಾರತ ಪರ ರತ್ನಬಾಲಾ ದೇವಿ ಏಕೈಕ ಗೋಲು ಹೊಡೆದರು. ಮೊದಲ ಪಂದ್ಯದಲ್ಲಿ ಭಾರತ 1-0 ಗೋಲಿನಿಂದ ಜಪಾನ್‌ ತಂಡವನ್ನು ಮಣಿಸಿತ್ತು. ಆದರೆ 2ನೇ ಪಂದ್ಯದಲ್ಲಿ ಎಡವಿದ ಭಾರತೀಯ ವನಿತೆಯರು ಶರಣಾಗಿದ್ದಾರೆ.

4ನೇ ನಿಮಿಷದಲ್ಲಿ ಮೊದಲ ಗೋಲು 
ಪಂದ್ಯ ಆರಂಭವಾದ 4ನೇ ನಿಮಿಷದಲ್ಲಿ ಸಬಿತ್ರಾ ಗೋಲು ಬಾರಿಸಿ ನೇಪಾಲಕ್ಕೆ ಮುನ್ನಡೆ ತಂದುಕೊಟ್ಟರು. 2 ನಿಮಿಷ ಕಳೆಯುವಷ್ಟರ‌ಲ್ಲಿ ಮತ್ತೂಂದು ಗೋಲು ಹೊಡೆದ ಸಬಿತ್ರಾ ಮುನ್ನಡೆಯನ್ನು 2-0ಕ್ಕೇರಿಸಿದರು. ಆ ಬಳಿಕ ರಕ್ಷಣಾತ್ಮಕವಾಗಿ ಆಡಿದ ನೇಪಾಲ ತಂಡ ಭಾರತಕ್ಕೆ ಗೋಲು ಬಾರಿಸುವ ಅವಕಾಶಕ್ಕೆ ತಡೆಯೊಡ್ಡುವಲ್ಲಿ ನಿರತವಾಯಿತು. ಈ ವೇಳೆ ಗೋಲು ಬಾರಿಸಲು ಭಾರತ ಮಾಡಿದ ಹೆಚ್ಚಿನ ಎಲ್ಲ ಪ್ರಯತ್ನಗಳೆಲ್ಲವೂ ವಿಫ‌ಲವಾದವು. ಪಂದ್ಯ ಮುಗಿಯುವ ಹಂತದಲ್ಲಿ (83ನೇ ನಿಮಿಷ) ರತ್ನಬಾಲಾ ಗೋಲು ಹೊಡೆಯಲು ಯಶಸ್ವಿಯಾದರು. ಆಬಳಿಕ ಸಮಬಲ ಸಾಧಿಸಲು ಭಾರತೀಯ ವನಿತೆಯರು ಶಕ್ತಿಮೀರಿ ಪ್ರಯತ್ನಿಸಿದರೂ ಯಶಸ್ಸು ಒಲಿಯಲಿಲ್ಲ.

ಗೋಲ್ಡ್‌  ಕಪ್‌ ಕೂಟ
ಭಾರತ, ಮ್ಯಾನ್ಮಾರ್‌, ನೇಪಾಲ ಹಾಗೂ ಇರಾನ್‌ ದೇಶಗಳನ್ನೊಳಗೊಂಡ “ಗೋಲ್ಡ್‌ ಕಪ್‌’ ಕೂಟವನ್ನು ಇದೇ ಮೊದಲ ಬಾರಿಗೆ ಆಯೋಜಿಸಲಾಗಿದೆ. ಈ ಕೂಟವನ್ನು ಎಎಫ್ಸಿ 2020 ಒಲಿಂಪಿಕ್‌ ಕೂಟದ ಅರ್ಹತಾ ಕೂಟಕ್ಕೆ ತಯಾರಿಯಾಗಿ ಆಡಲಾಗುತ್ತಿದೆ. ಈಗಾಗಲೇ 6 ಅಂಕಗಳನ್ನು ಗಳಿಸಿರುವ ಮ್ಯಾನ್ಮಾರ್‌ ಗುಂಪಿನಲ್ಲಿ ಅಗ್ರಸ್ಥಾನದಲ್ಲಿದೆ. ಭಾರತ ಹಾಗೂ ನೇಪಾಲ ತಂಡಗಳೆರಡೂ 3 ಅಂಕಗಳೊಂದಿಗೆ ಅನುಕ್ರಮವಾಗಿ 2 ಮತ್ತು 3ನೇ ಸ್ಥಾನದಲ್ಲಿವೆ. ಇರಾನ್‌ ಇನ್ನಷ್ಟೇ ಖಾತೆ ತೆರೆಯಬೇಕಾಗಿದೆ. ಅಗ್ರ 2 ತಂಡಗಳು ಫೈನಲ್‌ಗೆ ಪ್ರವೇಶಿಸಲಿವೆ. ಲೀಗ್‌ ಹಂತದಲ್ಲಿ ಭಾರತ ತನ್ನ ಕೊನೆಯ ಪಂದ್ಯವನ್ನು ಮ್ಯಾನ್ಮಾರ್‌ ವಿರುದ್ಧ ಆಡಲಿದೆ. ಈ ಪಂದ್ಯ ಬುಧವಾರ ನಡೆಯಲಿದೆ. ದಿನದ ಇನ್ನೊಂದು ಪಂದ್ಯದಲ್ಲಿ ಇರಾನ್‌-ನೇಪಾಲ ಮುಖಾಮುಖೀಯಾಗಲಿವೆ.

ಟಾಪ್ ನ್ಯೂಸ್

10-ramanagara

Ramanagara ಅಪಘಾತ; ವಿದ್ಯಾರ್ಥಿಗಳ ಪ್ರತಿಭಟನೆ

Telangana: ಜಾರ್ಖಂಡ್‌ ಗವರ್ನರ್‌ ಗೆ ಹೆಚ್ಚುವರಿ ಹೊಣೆಗಾರಿಕೆ, ತಮಿಳಿಸೈ ರಾಜೀನಾಮೆ ಅಂಗೀಕಾರ

Telangana: ಜಾರ್ಖಂಡ್‌ ಗವರ್ನರ್‌ ಗೆ ಹೆಚ್ಚುವರಿ ಹೊಣೆಗಾರಿಕೆ, ತಮಿಳಿಸೈ ರಾಜೀನಾಮೆ ಅಂಗೀಕಾರ

Road mishap: ಆಟೋ ರಿಕ್ಷಾ – ಕಂಟೇನರ್ ಅಪಘಾತ; ಓರ್ವ ಮೃತ್ಯು, ನಾಲ್ವರಿಗೆ ಗಾಯ

Road mishap: ಆಟೋ ರಿಕ್ಷಾ – ಕಂಟೇನರ್ ಅಪಘಾತ; ಓರ್ವ ಮೃತ್ಯು, ನಾಲ್ವರಿಗೆ ಗಾಯ

Lok Sabha Polls: ಮಾ. 21 ರಂದು ನನ್ನ ರಾಜಕೀಯ ನಡೆಯ ಬಗ್ಗೆ ನಿರ್ಧಾರ: ಸಂಸದ ಸಂಗಣ್ಣ ಕರಡಿ

Lok Sabha Polls: ಮಾ. 21 ರಂದು ನನ್ನ ರಾಜಕೀಯ ನಡೆಯ ಬಗ್ಗೆ ನಿರ್ಧಾರ: ಸಂಸದ ಸಂಗಣ್ಣ ಕರಡಿ

Sandalwood: ಪ್ರೇಮಲೋಕ-2 ಐವತ್ತಕ್ಕೂ ಹೆಚ್ಚು ಸೆಟ್‌ನಲ್ಲಿ ಶೂಟಿಂಗ್‌!

Sandalwood: ಪ್ರೇಮಲೋಕ-2 ಐವತ್ತಕ್ಕೂ ಹೆಚ್ಚು ಸೆಟ್‌ನಲ್ಲಿ ಶೂಟಿಂಗ್‌!

Patanjali Ads case:‌ಖುದ್ದು ಹಾಜರಾಗಿ- ಬಾಬಾ ರಾಮ್‌ ದೇವ್‌, ಬಾಲಕೃಷ್ಣಗೆ ಸುಪ್ರೀಂ ಸಮನ್ಸ್

Patanjali Ads case:‌ಖುದ್ದು ಹಾಜರಾಗಿ- ಬಾಬಾ ರಾಮ್‌ ದೇವ್‌, ಬಾಲಕೃಷ್ಣಗೆ ಸುಪ್ರೀಂ ಸಮನ್ಸ್

Vande Bharat: 1.5 ವರ್ಷದಲ್ಲಿ ವಂದೇ ಭಾರತ್‌ಗೆ 50 ಬಾರಿ ಕಲ್ಲೆಸೆತ

Vande Bharat: 1.5 ವರ್ಷದಲ್ಲಿ ವಂದೇ ಭಾರತ್‌ಗೆ 50 ಬಾರಿ ಕಲ್ಲೆಸೆತ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

PSL ಗೆದ್ದ ಇಸ್ಲಾಮಾಬಾದ್ ಯುನೈಟೆಡ್: ಪಂದ್ಯದ ವೇಳೆ ಸಿಗರೇಟ್‌ ಸೇದಿದ ಆಟಗಾರನ ವಿಡಿಯೋ ವೈರಲ್

PSL ಗೆದ್ದ ಇಸ್ಲಾಮಾಬಾದ್ ಯುನೈಟೆಡ್: ಪಂದ್ಯದ ವೇಳೆ ಸಿಗರೇಟ್‌ ಸೇದಿದ ಆಟಗಾರನ ವಿಡಿಯೋ ವೈರಲ್

1-asaas

Mumbai Indians; ಹಾರ್ದಿಕ್‌ ಪಾಂಡ್ಯ, ಬೌಷರ್‌ ಮೌನ!

1-wewewqe

‘Bangaluru’: ಅನ್‌ಬಾಕ್ಸ್‌  ಸಮಾರಂಭದಲ್ಲಿ ಆರ್‌ಸಿಬಿ ವನಿತೆಯರು

1-saddas-aa-4

IPL:ರಾಹುಲ್‌ ಫಿಟ್‌; ಕೀಪಿಂಗ್‌ ಡೌಟ್‌

1-saddas-aa-3

IPL; ಬೆಂಗಳೂರಿನಲ್ಲಿ ಅಭ್ಯಾಸ ಆರಂಭಿಸಿದ ಕೊಹ್ಲಿ

MUST WATCH

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

udayavani youtube

ಇಲ್ಲಿ ಗ್ರಾಹಕರನ್ನ ನೋಡಿಕೊಳ್ಳುವ ರೀತಿಗೆ ಎಂಥಹವರೂ ಫಿದಾ ಆಗ್ತಾರೆ

udayavani youtube

ಶ್ರೀ ಪಣಿಯಾಡಿ ಅನಂತಪದ್ಮನಾಭ ದೇವಸ್ಥಾನ,ಪಣಿಯಾಡಿ|

udayavani youtube

Rameshwaram Cafe: ಹೇಗಾಯ್ತು ಸ್ಫೋಟ? ಭಯಾನಕ ಸಿಸಿಟಿವಿ ದೃಶ್ಯ ನೋಡಿ

udayavani youtube

ಅಯೋಧ್ಯೆ ಶ್ರೀ ರಾಮನ ಸೇವೆಯಲ್ಲಿ ಉಡುಪಿಯ ಬೆಳ್ಕಳೆ ಚಂಡೆ ಬಳಗ

ಹೊಸ ಸೇರ್ಪಡೆ

10-ramanagara

Ramanagara ಅಪಘಾತ; ವಿದ್ಯಾರ್ಥಿಗಳ ಪ್ರತಿಭಟನೆ

Telangana: ಜಾರ್ಖಂಡ್‌ ಗವರ್ನರ್‌ ಗೆ ಹೆಚ್ಚುವರಿ ಹೊಣೆಗಾರಿಕೆ, ತಮಿಳಿಸೈ ರಾಜೀನಾಮೆ ಅಂಗೀಕಾರ

Telangana: ಜಾರ್ಖಂಡ್‌ ಗವರ್ನರ್‌ ಗೆ ಹೆಚ್ಚುವರಿ ಹೊಣೆಗಾರಿಕೆ, ತಮಿಳಿಸೈ ರಾಜೀನಾಮೆ ಅಂಗೀಕಾರ

Road mishap: ಆಟೋ ರಿಕ್ಷಾ – ಕಂಟೇನರ್ ಅಪಘಾತ; ಓರ್ವ ಮೃತ್ಯು, ನಾಲ್ವರಿಗೆ ಗಾಯ

Road mishap: ಆಟೋ ರಿಕ್ಷಾ – ಕಂಟೇನರ್ ಅಪಘಾತ; ಓರ್ವ ಮೃತ್ಯು, ನಾಲ್ವರಿಗೆ ಗಾಯ

9-udupi

ಶ್ರೀ ನಿತ್ಯಾನಂದ ಸ್ವಾಮಿ ಮಂದಿರ ಮಠ; ಧ್ಯಾನ ಮಂದಿರ, ಭೋಜನ ಶಾಲೆ ನಿರ್ಮಾಣ ಕಾಮಗಾರಿಗೆ ಚಾಲನೆ

Lok Sabha Polls: ಮಾ. 21 ರಂದು ನನ್ನ ರಾಜಕೀಯ ನಡೆಯ ಬಗ್ಗೆ ನಿರ್ಧಾರ: ಸಂಸದ ಸಂಗಣ್ಣ ಕರಡಿ

Lok Sabha Polls: ಮಾ. 21 ರಂದು ನನ್ನ ರಾಜಕೀಯ ನಡೆಯ ಬಗ್ಗೆ ನಿರ್ಧಾರ: ಸಂಸದ ಸಂಗಣ್ಣ ಕರಡಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.