ಇಂಗ್ಲೆಂಡಿಗೆ ಗೆಲುವಿನ ಸಮಾಧಾನ


Team Udayavani, Feb 14, 2019, 12:30 AM IST

ap2132019000019b.jpg

ನಾರ್ತ್‌ ಸೌಂಡ್‌: ವೆಸ್ಟ್‌ ಇಂಡೀಸ್‌ ಎದುರಿನ ಮೂರನೇ ಹಾಗೂ ಅಂತಿಮ ಟೆಸ್ಟ್‌ ಪಂದ್ಯದಲ್ಲಿ 232 ರನ್‌ ಜಯಭೇರಿ ಮೊಳಗಿಸಿದ ಇಂಗ್ಲೆಂಡ್‌ ಸರಣಿ ಸೋಲಿನ ಅಂತರವನ್ನು 2-1ಕ್ಕೆ ಇಳಿಸಿಕೊಂಡು ಸಮಾಧಾನಪಟ್ಟಿದೆ. ಆದರೆ ಮೊದಲೆರಡು ಟೆಸ್ಟ್‌ ಪಂದ್ಯಗಳನ್ನು ಜಯಿಸಿದ ವಿಂಡೀಸ್‌ “ವಿಸ್ಡನ್‌ ಟ್ರೋಫಿ’ಯನ್ನು ಎತ್ತಿ ಹಿಡಿಯಿತು.

ಗೆಲುವಿಗೆ 485 ರನ್ನುಗಳ ಗುರಿ ಪಡೆದ ಆತಿಥೇಯ ವೆಸ್ಟ್‌ ಇಂಡೀಸ್‌ ಇನ್ನೂ ಒಂದು ದಿನದ ಆಟ ಬಾಕಿ ಇರುವಂತೆಯೆ 252ಕ್ಕೆ ಆಲೌಟ್‌ ಆಯಿತು. ಉತ್ತಮ ಬ್ಯಾಟಿಂಗ್‌ ಹೋರಾಟ ಸಂಘಟಿಸಿದ ರೋಸ್ಟನ್‌ ಚೇಸ್‌ 5ನೇ ಶತಕದೊಂದಿಗೆ ಮಿಂಚಿದರು. 31ಕ್ಕೆ 4, 76ಕ್ಕೆ 5 ವಿಕೆಟ್‌ ಉರುಳಿಸಿಕೊಂಡು ಪರದಾಡುತ್ತಿದ್ದ ವಿಂಡೀಸ್‌, ಚೇಸ್‌ ಅವರ ಅಜೇಯ 102 ರನ್‌ ಸಾಹಸದಿಂದ ಸೋಲಿನಲ್ಲೂ ಸಮಾಧಾನಪಟ್ಟಿತು. 191 ಎಸೆತ ನಿಭಾಯಿಸಿದ ಚೇಸ್‌ 12 ಬೌಂಡರಿ ಹಾಗೂ ಒಂದು ಸಿಕ್ಸರ್‌ ಬಾರಿಸಿದರು.
ಚೇಸ್‌ ಹೊರತುಪಡಿಸಿದರೆ 34 ರನ್‌ ಮಾಡಿದ ಕೆಳ ಕ್ರಮಾಂಕದ ಅಲ್ಜಾರಿ ಜೋಸೆಫ್ ಅವರದೇ ಹೆಚ್ಚಿನ ಗಳಿಕೆ. ಕೆಮರ್‌ ರೋಚ್‌ 29 ರನ್‌ ಹೊಡೆದರು. 

ವಿಂಡೀಸ್‌ ಪತನದಲ್ಲಿ ಪ್ರಮುಖ ಪಾತ್ರ ವಹಿಸಿದವರೆಂದರೆ ಆ್ಯಂಡರ್ಸನ್‌ ಮತ್ತು ಮೊಯಿನ್‌ ಅಲಿ. ಇಬ್ಬರೂ ತಲಾ 3 ವಿಕೆಟ್‌ ಕಿತ್ತರು. ಸ್ಟೋಕ್ಸ್‌ಗೆ 2 ವಿಕೆಟ್‌ ಲಭಿಸಿತು. ಮೊದಲ ಸರದಿಯಲ್ಲಿ 5 ವಿಕೆಟ್‌ ಕಬಳಿಸಿದ್ದ ಮಾರ್ಕ ವುಡ್‌ ಪಂದ್ಯಶ್ರೇಷ್ಠ ಗೌರವಕ್ಕೆ ಪಾತ್ರರಾದರು. ದ್ವಿತೀಯ ಇನ್ನಿಂಗ್ಸ್‌ನಲ್ಲಿ ವುಡ್‌ಗೆ ಲಭಿಸಿದ್ದು ಒಂದು ವಿಕೆಟ್‌ ಮಾತ್ರ. ಕೆಮರ್‌ ರೋಚ್‌ ಸರಣಿಶ್ರೇಷ್ಠರೆನಿಸಿದರು.

ಜೋ ರೂಟ್‌ ಶತಕ
ಇದಕ್ಕೂ ಮುನ್ನ ಇಂಗ್ಲೆಂಡ್‌ ತನ್ನ ದ್ವಿತೀಯ ಸರದಿಯಲ್ಲಿ 5ಕ್ಕೆ 361 ರನ್‌ ಗಳಿಸಿ ಡಿಕ್ಲೇರ್‌ ಮಾಡಿತು. ನಾಯಕ ಜೋ ರೂಟ್‌ 122 ರನ್ನಿಗೆ (225 ಎಸೆತ, 10 ಬೌಂಡರಿ) ಔಟಾದೊಡನೆ ವಿಂಡೀಸನ್ನು ಬ್ಯಾಟಿಂಗಿಗೆ ಆಹ್ವಾನಿಸಿದರು.

ಸಂಕ್ಷಿಪ್ತ ಸ್ಕೋರ್‌: ಇಂಗ್ಲೆಂಡ್‌-277 ಮತ್ತು 5 ವಿಕೆಟಿಗೆ 361 ಡಿಕ್ಲೇರ್‌ (ರೂಟ್‌ 122, ಡೆನ್ಲಿ 69, ಬಟ್ಲರ್‌ 56, ಗ್ಯಾಬ್ರಿಯಲ್‌ 95ಕ್ಕೆ 2). ವೆಸ್ಟ್‌ ಇಂಡೀಸ್‌-154 ಮತ್ತು 252 (ಚೇಸ್‌ ಔಟಾಗದೆ 102, ಜೋಸೆಫ್ 34, ರೋಚ್‌ 29, ಆ್ಯಂಡರ್ಸನ್‌ 27ಕ್ಕೆ 3, ಅಲಿ 99ಕ್ಕೆ 3). ಪಂದ್ಯಶ್ರೇಷ್ಠ: ಮಾರ್ಕ ವುಡ್‌. ಸರಣಿಶ್ರೇಷ್ಠ: ಕೆಮರ್‌ ರೋಚ್‌.

ಟಾಪ್ ನ್ಯೂಸ್

ಆನೆಗೊಂದಿ-ಕಡೆಬಾಗಿಲು ಚೆಕ್ ಪೋಸ್ಟ್ ಬಳಿ 32.95 ಲಕ್ಷ ರೂ.ದಾಖಲೆ ಇಲ್ಲದ ಹಣ ವಶಕ್ಕೆ

ಆನೆಗೊಂದಿ-ಕಡೆಬಾಗಿಲು ಚೆಕ್ ಪೋಸ್ಟ್ ಬಳಿ 32.95 ಲಕ್ಷ ರೂ.ದಾಖಲೆ ಇಲ್ಲದ ಹಣ ವಶಕ್ಕೆ

10-ramanagara

Ramanagara ಅಪಘಾತ; ವಿದ್ಯಾರ್ಥಿಗಳ ಪ್ರತಿಭಟನೆ

Telangana: ಜಾರ್ಖಂಡ್‌ ಗವರ್ನರ್‌ ಗೆ ಹೆಚ್ಚುವರಿ ಹೊಣೆಗಾರಿಕೆ, ತಮಿಳಿಸೈ ರಾಜೀನಾಮೆ ಅಂಗೀಕಾರ

Telangana: ಜಾರ್ಖಂಡ್‌ ಗವರ್ನರ್‌ ಗೆ ಹೆಚ್ಚುವರಿ ಹೊಣೆಗಾರಿಕೆ, ತಮಿಳಿಸೈ ರಾಜೀನಾಮೆ ಅಂಗೀಕಾರ

Road mishap: ಆಟೋ ರಿಕ್ಷಾ – ಕಂಟೇನರ್ ಅಪಘಾತ; ಓರ್ವ ಮೃತ್ಯು, ನಾಲ್ವರಿಗೆ ಗಾಯ

Road mishap: ಆಟೋ ರಿಕ್ಷಾ – ಕಂಟೇನರ್ ಅಪಘಾತ; ಓರ್ವ ಮೃತ್ಯು, ನಾಲ್ವರಿಗೆ ಗಾಯ

Lok Sabha Polls: ಮಾ. 21 ರಂದು ನನ್ನ ರಾಜಕೀಯ ನಡೆಯ ಬಗ್ಗೆ ನಿರ್ಧಾರ: ಸಂಸದ ಸಂಗಣ್ಣ ಕರಡಿ

Lok Sabha Polls: ಮಾ. 21 ರಂದು ನನ್ನ ರಾಜಕೀಯ ನಡೆಯ ಬಗ್ಗೆ ನಿರ್ಧಾರ: ಸಂಸದ ಸಂಗಣ್ಣ ಕರಡಿ

Sandalwood: ಪ್ರೇಮಲೋಕ-2 ಐವತ್ತಕ್ಕೂ ಹೆಚ್ಚು ಸೆಟ್‌ನಲ್ಲಿ ಶೂಟಿಂಗ್‌!

Sandalwood: ಪ್ರೇಮಲೋಕ-2 ಐವತ್ತಕ್ಕೂ ಹೆಚ್ಚು ಸೆಟ್‌ನಲ್ಲಿ ಶೂಟಿಂಗ್‌!

Patanjali Ads case:‌ಖುದ್ದು ಹಾಜರಾಗಿ- ಬಾಬಾ ರಾಮ್‌ ದೇವ್‌, ಬಾಲಕೃಷ್ಣಗೆ ಸುಪ್ರೀಂ ಸಮನ್ಸ್

Patanjali Ads case:‌ಖುದ್ದು ಹಾಜರಾಗಿ- ಬಾಬಾ ರಾಮ್‌ ದೇವ್‌, ಬಾಲಕೃಷ್ಣಗೆ ಸುಪ್ರೀಂ ಸಮನ್ಸ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

PSL ಗೆದ್ದ ಇಸ್ಲಾಮಾಬಾದ್ ಯುನೈಟೆಡ್: ಪಂದ್ಯದ ವೇಳೆ ಸಿಗರೇಟ್‌ ಸೇದಿದ ಆಟಗಾರನ ವಿಡಿಯೋ ವೈರಲ್

PSL ಗೆದ್ದ ಇಸ್ಲಾಮಾಬಾದ್ ಯುನೈಟೆಡ್: ಪಂದ್ಯದ ವೇಳೆ ಸಿಗರೇಟ್‌ ಸೇದಿದ ಆಟಗಾರನ ವಿಡಿಯೋ ವೈರಲ್

1-asaas

Mumbai Indians; ಹಾರ್ದಿಕ್‌ ಪಾಂಡ್ಯ, ಬೌಷರ್‌ ಮೌನ!

1-wewewqe

‘Bangaluru’: ಅನ್‌ಬಾಕ್ಸ್‌  ಸಮಾರಂಭದಲ್ಲಿ ಆರ್‌ಸಿಬಿ ವನಿತೆಯರು

1-saddas-aa-4

IPL:ರಾಹುಲ್‌ ಫಿಟ್‌; ಕೀಪಿಂಗ್‌ ಡೌಟ್‌

1-saddas-aa-3

IPL; ಬೆಂಗಳೂರಿನಲ್ಲಿ ಅಭ್ಯಾಸ ಆರಂಭಿಸಿದ ಕೊಹ್ಲಿ

MUST WATCH

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

udayavani youtube

ಇಲ್ಲಿ ಗ್ರಾಹಕರನ್ನ ನೋಡಿಕೊಳ್ಳುವ ರೀತಿಗೆ ಎಂಥಹವರೂ ಫಿದಾ ಆಗ್ತಾರೆ

udayavani youtube

ಶ್ರೀ ಪಣಿಯಾಡಿ ಅನಂತಪದ್ಮನಾಭ ದೇವಸ್ಥಾನ,ಪಣಿಯಾಡಿ|

udayavani youtube

Rameshwaram Cafe: ಹೇಗಾಯ್ತು ಸ್ಫೋಟ? ಭಯಾನಕ ಸಿಸಿಟಿವಿ ದೃಶ್ಯ ನೋಡಿ

udayavani youtube

ಅಯೋಧ್ಯೆ ಶ್ರೀ ರಾಮನ ಸೇವೆಯಲ್ಲಿ ಉಡುಪಿಯ ಬೆಳ್ಕಳೆ ಚಂಡೆ ಬಳಗ

ಹೊಸ ಸೇರ್ಪಡೆ

ಆನೆಗೊಂದಿ-ಕಡೆಬಾಗಿಲು ಚೆಕ್ ಪೋಸ್ಟ್ ಬಳಿ 32.95 ಲಕ್ಷ ರೂ.ದಾಖಲೆ ಇಲ್ಲದ ಹಣ ವಶಕ್ಕೆ

ಆನೆಗೊಂದಿ-ಕಡೆಬಾಗಿಲು ಚೆಕ್ ಪೋಸ್ಟ್ ಬಳಿ 32.95 ಲಕ್ಷ ರೂ.ದಾಖಲೆ ಇಲ್ಲದ ಹಣ ವಶಕ್ಕೆ

10-ramanagara

Ramanagara ಅಪಘಾತ; ವಿದ್ಯಾರ್ಥಿಗಳ ಪ್ರತಿಭಟನೆ

Telangana: ಜಾರ್ಖಂಡ್‌ ಗವರ್ನರ್‌ ಗೆ ಹೆಚ್ಚುವರಿ ಹೊಣೆಗಾರಿಕೆ, ತಮಿಳಿಸೈ ರಾಜೀನಾಮೆ ಅಂಗೀಕಾರ

Telangana: ಜಾರ್ಖಂಡ್‌ ಗವರ್ನರ್‌ ಗೆ ಹೆಚ್ಚುವರಿ ಹೊಣೆಗಾರಿಕೆ, ತಮಿಳಿಸೈ ರಾಜೀನಾಮೆ ಅಂಗೀಕಾರ

Road mishap: ಆಟೋ ರಿಕ್ಷಾ – ಕಂಟೇನರ್ ಅಪಘಾತ; ಓರ್ವ ಮೃತ್ಯು, ನಾಲ್ವರಿಗೆ ಗಾಯ

Road mishap: ಆಟೋ ರಿಕ್ಷಾ – ಕಂಟೇನರ್ ಅಪಘಾತ; ಓರ್ವ ಮೃತ್ಯು, ನಾಲ್ವರಿಗೆ ಗಾಯ

9-udupi

ಶ್ರೀ ನಿತ್ಯಾನಂದ ಸ್ವಾಮಿ ಮಂದಿರ ಮಠ; ಧ್ಯಾನ ಮಂದಿರ, ಭೋಜನ ಶಾಲೆ ನಿರ್ಮಾಣ ಕಾಮಗಾರಿಗೆ ಚಾಲನೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.