ಇಂಗ್ಲೆಂಡಿಗೆ ಗೆಲುವಿನ ಸಮಾಧಾನ


Team Udayavani, Feb 14, 2019, 12:30 AM IST

ap2132019000019b.jpg

ನಾರ್ತ್‌ ಸೌಂಡ್‌: ವೆಸ್ಟ್‌ ಇಂಡೀಸ್‌ ಎದುರಿನ ಮೂರನೇ ಹಾಗೂ ಅಂತಿಮ ಟೆಸ್ಟ್‌ ಪಂದ್ಯದಲ್ಲಿ 232 ರನ್‌ ಜಯಭೇರಿ ಮೊಳಗಿಸಿದ ಇಂಗ್ಲೆಂಡ್‌ ಸರಣಿ ಸೋಲಿನ ಅಂತರವನ್ನು 2-1ಕ್ಕೆ ಇಳಿಸಿಕೊಂಡು ಸಮಾಧಾನಪಟ್ಟಿದೆ. ಆದರೆ ಮೊದಲೆರಡು ಟೆಸ್ಟ್‌ ಪಂದ್ಯಗಳನ್ನು ಜಯಿಸಿದ ವಿಂಡೀಸ್‌ “ವಿಸ್ಡನ್‌ ಟ್ರೋಫಿ’ಯನ್ನು ಎತ್ತಿ ಹಿಡಿಯಿತು.

ಗೆಲುವಿಗೆ 485 ರನ್ನುಗಳ ಗುರಿ ಪಡೆದ ಆತಿಥೇಯ ವೆಸ್ಟ್‌ ಇಂಡೀಸ್‌ ಇನ್ನೂ ಒಂದು ದಿನದ ಆಟ ಬಾಕಿ ಇರುವಂತೆಯೆ 252ಕ್ಕೆ ಆಲೌಟ್‌ ಆಯಿತು. ಉತ್ತಮ ಬ್ಯಾಟಿಂಗ್‌ ಹೋರಾಟ ಸಂಘಟಿಸಿದ ರೋಸ್ಟನ್‌ ಚೇಸ್‌ 5ನೇ ಶತಕದೊಂದಿಗೆ ಮಿಂಚಿದರು. 31ಕ್ಕೆ 4, 76ಕ್ಕೆ 5 ವಿಕೆಟ್‌ ಉರುಳಿಸಿಕೊಂಡು ಪರದಾಡುತ್ತಿದ್ದ ವಿಂಡೀಸ್‌, ಚೇಸ್‌ ಅವರ ಅಜೇಯ 102 ರನ್‌ ಸಾಹಸದಿಂದ ಸೋಲಿನಲ್ಲೂ ಸಮಾಧಾನಪಟ್ಟಿತು. 191 ಎಸೆತ ನಿಭಾಯಿಸಿದ ಚೇಸ್‌ 12 ಬೌಂಡರಿ ಹಾಗೂ ಒಂದು ಸಿಕ್ಸರ್‌ ಬಾರಿಸಿದರು.
ಚೇಸ್‌ ಹೊರತುಪಡಿಸಿದರೆ 34 ರನ್‌ ಮಾಡಿದ ಕೆಳ ಕ್ರಮಾಂಕದ ಅಲ್ಜಾರಿ ಜೋಸೆಫ್ ಅವರದೇ ಹೆಚ್ಚಿನ ಗಳಿಕೆ. ಕೆಮರ್‌ ರೋಚ್‌ 29 ರನ್‌ ಹೊಡೆದರು. 

ವಿಂಡೀಸ್‌ ಪತನದಲ್ಲಿ ಪ್ರಮುಖ ಪಾತ್ರ ವಹಿಸಿದವರೆಂದರೆ ಆ್ಯಂಡರ್ಸನ್‌ ಮತ್ತು ಮೊಯಿನ್‌ ಅಲಿ. ಇಬ್ಬರೂ ತಲಾ 3 ವಿಕೆಟ್‌ ಕಿತ್ತರು. ಸ್ಟೋಕ್ಸ್‌ಗೆ 2 ವಿಕೆಟ್‌ ಲಭಿಸಿತು. ಮೊದಲ ಸರದಿಯಲ್ಲಿ 5 ವಿಕೆಟ್‌ ಕಬಳಿಸಿದ್ದ ಮಾರ್ಕ ವುಡ್‌ ಪಂದ್ಯಶ್ರೇಷ್ಠ ಗೌರವಕ್ಕೆ ಪಾತ್ರರಾದರು. ದ್ವಿತೀಯ ಇನ್ನಿಂಗ್ಸ್‌ನಲ್ಲಿ ವುಡ್‌ಗೆ ಲಭಿಸಿದ್ದು ಒಂದು ವಿಕೆಟ್‌ ಮಾತ್ರ. ಕೆಮರ್‌ ರೋಚ್‌ ಸರಣಿಶ್ರೇಷ್ಠರೆನಿಸಿದರು.

ಜೋ ರೂಟ್‌ ಶತಕ
ಇದಕ್ಕೂ ಮುನ್ನ ಇಂಗ್ಲೆಂಡ್‌ ತನ್ನ ದ್ವಿತೀಯ ಸರದಿಯಲ್ಲಿ 5ಕ್ಕೆ 361 ರನ್‌ ಗಳಿಸಿ ಡಿಕ್ಲೇರ್‌ ಮಾಡಿತು. ನಾಯಕ ಜೋ ರೂಟ್‌ 122 ರನ್ನಿಗೆ (225 ಎಸೆತ, 10 ಬೌಂಡರಿ) ಔಟಾದೊಡನೆ ವಿಂಡೀಸನ್ನು ಬ್ಯಾಟಿಂಗಿಗೆ ಆಹ್ವಾನಿಸಿದರು.

ಸಂಕ್ಷಿಪ್ತ ಸ್ಕೋರ್‌: ಇಂಗ್ಲೆಂಡ್‌-277 ಮತ್ತು 5 ವಿಕೆಟಿಗೆ 361 ಡಿಕ್ಲೇರ್‌ (ರೂಟ್‌ 122, ಡೆನ್ಲಿ 69, ಬಟ್ಲರ್‌ 56, ಗ್ಯಾಬ್ರಿಯಲ್‌ 95ಕ್ಕೆ 2). ವೆಸ್ಟ್‌ ಇಂಡೀಸ್‌-154 ಮತ್ತು 252 (ಚೇಸ್‌ ಔಟಾಗದೆ 102, ಜೋಸೆಫ್ 34, ರೋಚ್‌ 29, ಆ್ಯಂಡರ್ಸನ್‌ 27ಕ್ಕೆ 3, ಅಲಿ 99ಕ್ಕೆ 3). ಪಂದ್ಯಶ್ರೇಷ್ಠ: ಮಾರ್ಕ ವುಡ್‌. ಸರಣಿಶ್ರೇಷ್ಠ: ಕೆಮರ್‌ ರೋಚ್‌.

ಟಾಪ್ ನ್ಯೂಸ್

Thirthahalli; ಬಿಜೆಪಿಯಿಂದ ಶ್ರೀಮಂತರ ಓಲೈಕೆ ; ಕಿಮ್ಮ‌ನೆ ರತ್ನಾಕರ್

Thirthahalli; ಬಿಜೆಪಿಯಿಂದ ಶ್ರೀಮಂತರ ಓಲೈಕೆ ; ಕಿಮ್ಮ‌ನೆ ರತ್ನಾಕರ್

1-aaaaaa

BJP ಮೋದಿ ಮಾಡೆಲ್ ಹೆಸರಿನಲ್ಲಿ ಚೊಂಬಿನ ಮಾಡೆಲ್ ನೀಡಿದೆ: ಸುರ್ಜೇವಾಲ

1-weqwewqe

Davangere: 10 ರೂ.ಗಳ ನಾಣ್ಯ ರೂಪದಲ್ಲಿ 25 ಸಾವಿರ ರೂ. ಠೇವಣಿ ಕಟ್ಟಿದ ಅಭ್ಯರ್ಥಿ!

Exam

CET ಸುಗಮವಾಗಿ ನಡೆದಿದೆ: ಆಕ್ಷೇಪಣೆ ಸಲ್ಲಿಕೆಗೆ ಏ.27ರವರೆಗೆ ಅವಕಾಶ

1-wwqwqe

BJP ಶ್ರೀರಾಮುಲು, ಗಾಯತ್ರಿ ಸಿದ್ದೇಶ್ವರ್ ಈಗಾಗಲೇ ಗೆದ್ದಿದ್ದಾರೆ: ಜನಾರ್ದನ ರೆಡ್ಡಿ

Outrage over mistakes in CET exam question paper; Request for mercy marks

CET ಪರೀಕ್ಷೆ ಪ್ರಶ್ನೆಪತ್ರಿಕೆಯಲ್ಲಿ ಲೋಪಕ್ಕೆ ಆಕ್ರೋಶ; ಕೃಪಾಂಕಕ್ಕೆ ಆಗ್ರಹ

1-qweeweq

Viral video; ಯಾರಿವರು ಇಶಾ ಅರೋರಾ? ಮತದಾನದ ದಿನ ಭಾರಿ ಸುದ್ದಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

RCB; ಸುಮ್ಮನೆ ಒಪ್ಪಂದಕ್ಕೆ ಸಹಿ ಹಾಕು…: ವಿರಾಟ್ ಜತೆಗಿನ ಮಾತುಕತೆ ನೆನೆದ ಕೆ.ಎಲ್ ರಾಹುಲ್

RCB; ಸುಮ್ಮನೆ ಒಪ್ಪಂದಕ್ಕೆ ಸಹಿ ಹಾಕು…: ವಿರಾಟ್ ಜತೆಗಿನ ಮಾತುಕತೆ ನೆನೆದ ಕೆ.ಎಲ್ ರಾಹುಲ್

Wrestlers: ದುಬಾೖ ವಿಮಾನ ನಿಲ್ದಾಣದಲ್ಲಿ ಸಿಕ್ಕಿಬಿದ್ದ ಇಬ್ಬರು ಕುಸ್ತಿಪಟುಗಳು

Wrestlers: ದುಬಾೖ ವಿಮಾನ ನಿಲ್ದಾಣದಲ್ಲಿ ಸಿಕ್ಕಿಬಿದ್ದ ಇಬ್ಬರು ಕುಸ್ತಿಪಟುಗಳು

LSG vs CSK: ಲಕ್ನೋದಲ್ಲೂ ಚೆನ್ನೈ  ಫೇವರಿಟ್‌

LSG vs CSK: ಲಕ್ನೋದಲ್ಲೂ ಚೆನ್ನೈ  ಫೇವರಿಟ್‌

1-wewq-eqwe

IPL; ರೋಚಕ ಪಂದ್ಯದಲ್ಲಿ ಪಂಜಾಬ್‌ ಎದುರು 9 ರನ್ ಜಯ ಸಾಧಿಸಿದ ಮುಂಬೈ

1aaa

Austria Marathon: ಭಾರತವನ್ನು ಪ್ರತಿನಿಧಿಸಲಿರುವ ಕೊಡಗಿನ ಅಪ್ಪಚಂಗಡ ಬೆಳ್ಯಪ್ಪ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

Thirthahalli; ಬಿಜೆಪಿಯಿಂದ ಶ್ರೀಮಂತರ ಓಲೈಕೆ ; ಕಿಮ್ಮ‌ನೆ ರತ್ನಾಕರ್

Thirthahalli; ಬಿಜೆಪಿಯಿಂದ ಶ್ರೀಮಂತರ ಓಲೈಕೆ ; ಕಿಮ್ಮ‌ನೆ ರತ್ನಾಕರ್

1-aaaaaa

BJP ಮೋದಿ ಮಾಡೆಲ್ ಹೆಸರಿನಲ್ಲಿ ಚೊಂಬಿನ ಮಾಡೆಲ್ ನೀಡಿದೆ: ಸುರ್ಜೇವಾಲ

1-weqwewqe

Davangere: 10 ರೂ.ಗಳ ನಾಣ್ಯ ರೂಪದಲ್ಲಿ 25 ಸಾವಿರ ರೂ. ಠೇವಣಿ ಕಟ್ಟಿದ ಅಭ್ಯರ್ಥಿ!

Minchu

Bidar; ಬಿರುಗಾಳಿ‌ ಸಹಿತ ಭಾರಿ ಮಳೆ :ಸಿಡಿಲು ಬಡಿದು‌ ರೈತ ಸಾವು

1-wewqewqe

Kalaburgi: ಮಹಿಳೆಯ ಬಾತ್ ರೂಮ್ ವಿಡಿಯೋ ರೆಕಾರ್ಡ್ ಮಾಡಿದ ಸೆಕ್ಯೂರಿಟಿ ಗಾರ್ಡ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.